Homeಮುಖಪುಟಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

ಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

- Advertisement -
- Advertisement -

ಕಥಕ್ ದಂತಕಥೆ 83 ವರ್ಷದ ಪಂಡಿತ್ ಬಿರ್ಜು ಮಹಾರಾಜ್ ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ಭಾರತದ ಅತ್ಯುತ್ತಮ ಕಲಾವಿದರಲ್ಲಿ ಒಬ್ಬರಾಗಿದ್ದ ಮತ್ತು  ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಪಡೆದವರು ಪಂಡಿತ್ ಬಿರ್ಜು ಮಹಾರಾಜ್. ಅವರ ಶಿಷ್ಯರು ಮತ್ತು ಅನುಯಾಯಿಗಳು ಅವರನ್ನು ಪ್ರೀತಿಯಿಂದ ಪಂಡಿತ್-ಜಿ ಅಥವಾ ಮಹಾರಾಜ್-ಜಿ ಎಂದು ಕರೆಯುತ್ತಿದ್ದರು.

ವರದಿಗಳ ಪ್ರಕಾರ, ಭಾನುವಾರ ತಡರಾತ್ರಿ ಬಿರ್ಜು ಮಹಾರಾಜ್ ತನ್ನ ಮೊಮ್ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅವರ ಆರೋಗ್ಯ ಹದಗೆಟ್ಟು ಅವರು ಪ್ರಜ್ಞಾಹೀನರಾದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ  ಸಂಭವಿಸಿದಾಗ ಅವರು ನಮ್ಮೊಂದಿಗಿದ್ದರು. ಅವರು ಸಂಗೀತ ಪ್ರಿಯರಾಗಿದ್ದರಿಂದ ಭೋಜನ ಮಾಡಿದ ನಂತರ ಅವರು  ಮತ್ತು ನಾವು ‘ಅಂತಕ್ಷರಿ’ ನಡೆಸುತ್ತಿದ್ದೆವು. ಅವರು ಮಲಗಿದ್ದರು ತದನಂತರ ಇದ್ದಕ್ಕಿದ್ದಂತೆ ಅವರ ಉಸಿರಾಟವು ಏರಿಳಿತವಾಯಿತು. ಅವರು ಹೃದ್ರೋಗಿಯೂ ಆಗಿದ್ದರಿಂದ ಇದು ಹೃದಯ ಸ್ತಂಭನ ಎಂದು ನಾವು ಭಾವಿಸುತ್ತೇವೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

“ಇದು ಮಧ್ಯರಾತ್ರಿ 12.15 ರಿಂದ 12.30 ರ ನಡುವೆ ಸಂಭವಿಸಿದೆ. ನಾವು ಆಸ್ಪತ್ರೆಗೆ ದಾಖಲಿಸಿದೆವು ಆದರೆ ದುರದೃಷ್ಟವಶಾತ್, ನಮಗೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯನ್ನು ತಲುಪುವ ಮೊದಲೇ ಅವರು ಸಾವನ್ನಪ್ಪಿದರು. ಈ ಘಟನೆ ಸಂಭವಿಸಿದಾಗ ಅವರ ಇಬ್ಬರು ಶಿಷ್ಯರು ಮತ್ತು ಅವರ ಇಬ್ಬರು ಮೊಮ್ಮಕ್ಕಳು, ನನ್ನ ತಂಗಿ ಯಶಸ್ವಿನಿ ಮತ್ತು ನಾನು ಅವರೊಂದಿಗೆ ಇದ್ದೆವು, ಅವರು ತಮ್ಮ ಕೊನೆಯ ಕ್ಷಣಗಳಲ್ಲಿ ನಗುತ್ತಿದ್ದರು” ಎಂದು ಸ್ವತಃ ಕಥಕ್ ನೃತ್ಯಗಾರ್ತಿ ಬಿರ್ಜು ಮಹಾರಾಜ್ ಅವರ ಮೊಮ್ಮಗಳು ರಾಗಿಣಿ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಅಂದಹಾಗೆ ಬಿರ್ಜು ಮಹಾರಾಜ ಅವರ ದೇಹ ಪಾಶ್ಚಾತ್ಯ ನೃತ್ಯಪಟುಗಳಂತೆ ತೆಳ್ಳಗೆ ಸಪೂರವಾಗಿರಲಿಲ್ಲ. ತಮ್ಮನ್ನು ತಾವು ಖಾತೆಪೀತೆ ಘರ್ ಕಾ ಎಂದು ಕರೆದುಕೊಳ್ಳುತ್ತಿದ್ದ ಅವರು ಚೆನ್ನಾಗಿ ತಿಂದು ದುಂಡದುಂಡಗೆ ಇದ್ದರು. ಒಂದು ಸಲ ವಿದೇಶದಲ್ಲಿ ಕಾರ್ಯಕ್ರಮ ನೀಡಬೇಕಾಗಿತ್ತು. ಆಗ ಅಲ್ಲಿಯ ಭದ್ರತಾ ಸಿಬ್ಬಂದಿ, ಬಿರ್ಜು ಮಹಾರಾಜ ಅವರ ತಂಡದವರಿಗೆ ಒಳಗೇ ಬಿಡಲಿಲ್ಲ. ಇಲ್ಲ, ನಾವೇ ನೃತ್ಯಪಟುಗಳು, ಈಗ ಕಾರ್ಯಕ್ರಮ ನೀಡಬೇಕಾಗಿದ್ದು ನಾವೇ ಎಂದು ಪದೇಪದೇ ವಿನಂತಿಸಿಕೊಂಡರೂ ಬಿಡಲಿಲ್ಲ. ಕೊನೆಗೆ ಇವರ ಮನವಿಗೆ ಸೋತು, ಆ ಭದ್ರತಾ ಸಿಬ್ಬಂದಿ ಕೊನೆಗೂ ತಂಡದವರನ್ನು ಒಳಗೆ ಬಿಡಲು ಒಪ್ಪಿದ. ಆದರೆ ಯಾವ ಆಂಗಲ್ ನಲ್ಲೂ ನೃತ್ಯ ಮಾಡುವವನಂತೆ ಕಾಣದ ಈ ಒಬ್ಬ ವ್ಯಕ್ತಿಯನ್ನು, ಮಾತ್ರ ಒಳಗೆ ಬಿಡಲು ಒಪ್ಪಲಿಲ್ಲ. ಆ ವ್ಯಕ್ತಿಯೇ ಬಿರ್ಜು ಮಹಾರಾಜ. ಇದನ್ನು ತಾವೇ ಒಂದು ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು ಬಿರ್ಜು ಮಹಾರಾಜ ಅವರು.

ಅವರ ನಿಧನದ ಸುದ್ದಿ ಬರುತ್ತಿದ್ದಂತೆ ಸಾಗರೋಪಾದಿಯಲ್ಲಿ ಸಂತಾಪಗಳು ಹರಿದು ಬಂದಿವೆ.

“ಲೆಜೆಂಟರಿ ಪಂಡಿತ್ ಬಿರ್ಜು ಮಹಾರಾಜ್ ಅವರ ನಿಧನವು ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಇದು ಭಾರತೀಯ ಸಂಗೀತ ಮತ್ತು ಸಾಂಸ್ಕೃತಿಕ ಜಾಗದಲ್ಲಿ ಆಳವಾದ ಶೂನ್ಯವನ್ನು ಉಂಟುಮಾಡುತ್ತದೆ. ಅವರು ಕಥಕ್ ಅನ್ನು ಜಾಗತಿಕವಾಗಿ ಜನಪ್ರಿಯಗೊಳಿಸಲು ಅಪ್ರತಿಮ ಕೊಡುಗೆಯನ್ನು ನೀಡುವ ಮೂಲಕ ಐಕಾನ್ ಆದವರು ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಟ್ವೀಟ್ ಮೂಲಕ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಾಂತ್ವನ ಹೇಳಿದ್ದಾರೆ.

“ಭಾರತೀಯ ನೃತ್ಯಕ್ಕೆ ವಿಶ್ವದಾದ್ಯಂತ ವಿಶೇಷ ಮನ್ನಣೆ ನೀಡಿದ ಪಂಡಿತ್ ಬಿರ್ಜು ಮಹಾರಾಜ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲಿಕೆ ಇಡೀ ಕಲಾ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪ” ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಸಂಸ್ಕೃತ ಬೇಡ, ಕನ್ನಡ ಬೇಕು: ಗೋಕಾಕ್ ಚಳವಳಿ ಕುರಿತು ಚಂಪಾರವರ ಸಂದರ್ಶನದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...