Homeಮುಖಪುಟಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

ಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

- Advertisement -
- Advertisement -

ಕಥಕ್ ದಂತಕಥೆ 83 ವರ್ಷದ ಪಂಡಿತ್ ಬಿರ್ಜು ಮಹಾರಾಜ್ ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ಭಾರತದ ಅತ್ಯುತ್ತಮ ಕಲಾವಿದರಲ್ಲಿ ಒಬ್ಬರಾಗಿದ್ದ ಮತ್ತು  ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಪಡೆದವರು ಪಂಡಿತ್ ಬಿರ್ಜು ಮಹಾರಾಜ್. ಅವರ ಶಿಷ್ಯರು ಮತ್ತು ಅನುಯಾಯಿಗಳು ಅವರನ್ನು ಪ್ರೀತಿಯಿಂದ ಪಂಡಿತ್-ಜಿ ಅಥವಾ ಮಹಾರಾಜ್-ಜಿ ಎಂದು ಕರೆಯುತ್ತಿದ್ದರು.

ವರದಿಗಳ ಪ್ರಕಾರ, ಭಾನುವಾರ ತಡರಾತ್ರಿ ಬಿರ್ಜು ಮಹಾರಾಜ್ ತನ್ನ ಮೊಮ್ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅವರ ಆರೋಗ್ಯ ಹದಗೆಟ್ಟು ಅವರು ಪ್ರಜ್ಞಾಹೀನರಾದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ  ಸಂಭವಿಸಿದಾಗ ಅವರು ನಮ್ಮೊಂದಿಗಿದ್ದರು. ಅವರು ಸಂಗೀತ ಪ್ರಿಯರಾಗಿದ್ದರಿಂದ ಭೋಜನ ಮಾಡಿದ ನಂತರ ಅವರು  ಮತ್ತು ನಾವು ‘ಅಂತಕ್ಷರಿ’ ನಡೆಸುತ್ತಿದ್ದೆವು. ಅವರು ಮಲಗಿದ್ದರು ತದನಂತರ ಇದ್ದಕ್ಕಿದ್ದಂತೆ ಅವರ ಉಸಿರಾಟವು ಏರಿಳಿತವಾಯಿತು. ಅವರು ಹೃದ್ರೋಗಿಯೂ ಆಗಿದ್ದರಿಂದ ಇದು ಹೃದಯ ಸ್ತಂಭನ ಎಂದು ನಾವು ಭಾವಿಸುತ್ತೇವೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

“ಇದು ಮಧ್ಯರಾತ್ರಿ 12.15 ರಿಂದ 12.30 ರ ನಡುವೆ ಸಂಭವಿಸಿದೆ. ನಾವು ಆಸ್ಪತ್ರೆಗೆ ದಾಖಲಿಸಿದೆವು ಆದರೆ ದುರದೃಷ್ಟವಶಾತ್, ನಮಗೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯನ್ನು ತಲುಪುವ ಮೊದಲೇ ಅವರು ಸಾವನ್ನಪ್ಪಿದರು. ಈ ಘಟನೆ ಸಂಭವಿಸಿದಾಗ ಅವರ ಇಬ್ಬರು ಶಿಷ್ಯರು ಮತ್ತು ಅವರ ಇಬ್ಬರು ಮೊಮ್ಮಕ್ಕಳು, ನನ್ನ ತಂಗಿ ಯಶಸ್ವಿನಿ ಮತ್ತು ನಾನು ಅವರೊಂದಿಗೆ ಇದ್ದೆವು, ಅವರು ತಮ್ಮ ಕೊನೆಯ ಕ್ಷಣಗಳಲ್ಲಿ ನಗುತ್ತಿದ್ದರು” ಎಂದು ಸ್ವತಃ ಕಥಕ್ ನೃತ್ಯಗಾರ್ತಿ ಬಿರ್ಜು ಮಹಾರಾಜ್ ಅವರ ಮೊಮ್ಮಗಳು ರಾಗಿಣಿ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಅಂದಹಾಗೆ ಬಿರ್ಜು ಮಹಾರಾಜ ಅವರ ದೇಹ ಪಾಶ್ಚಾತ್ಯ ನೃತ್ಯಪಟುಗಳಂತೆ ತೆಳ್ಳಗೆ ಸಪೂರವಾಗಿರಲಿಲ್ಲ. ತಮ್ಮನ್ನು ತಾವು ಖಾತೆಪೀತೆ ಘರ್ ಕಾ ಎಂದು ಕರೆದುಕೊಳ್ಳುತ್ತಿದ್ದ ಅವರು ಚೆನ್ನಾಗಿ ತಿಂದು ದುಂಡದುಂಡಗೆ ಇದ್ದರು. ಒಂದು ಸಲ ವಿದೇಶದಲ್ಲಿ ಕಾರ್ಯಕ್ರಮ ನೀಡಬೇಕಾಗಿತ್ತು. ಆಗ ಅಲ್ಲಿಯ ಭದ್ರತಾ ಸಿಬ್ಬಂದಿ, ಬಿರ್ಜು ಮಹಾರಾಜ ಅವರ ತಂಡದವರಿಗೆ ಒಳಗೇ ಬಿಡಲಿಲ್ಲ. ಇಲ್ಲ, ನಾವೇ ನೃತ್ಯಪಟುಗಳು, ಈಗ ಕಾರ್ಯಕ್ರಮ ನೀಡಬೇಕಾಗಿದ್ದು ನಾವೇ ಎಂದು ಪದೇಪದೇ ವಿನಂತಿಸಿಕೊಂಡರೂ ಬಿಡಲಿಲ್ಲ. ಕೊನೆಗೆ ಇವರ ಮನವಿಗೆ ಸೋತು, ಆ ಭದ್ರತಾ ಸಿಬ್ಬಂದಿ ಕೊನೆಗೂ ತಂಡದವರನ್ನು ಒಳಗೆ ಬಿಡಲು ಒಪ್ಪಿದ. ಆದರೆ ಯಾವ ಆಂಗಲ್ ನಲ್ಲೂ ನೃತ್ಯ ಮಾಡುವವನಂತೆ ಕಾಣದ ಈ ಒಬ್ಬ ವ್ಯಕ್ತಿಯನ್ನು, ಮಾತ್ರ ಒಳಗೆ ಬಿಡಲು ಒಪ್ಪಲಿಲ್ಲ. ಆ ವ್ಯಕ್ತಿಯೇ ಬಿರ್ಜು ಮಹಾರಾಜ. ಇದನ್ನು ತಾವೇ ಒಂದು ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು ಬಿರ್ಜು ಮಹಾರಾಜ ಅವರು.

ಅವರ ನಿಧನದ ಸುದ್ದಿ ಬರುತ್ತಿದ್ದಂತೆ ಸಾಗರೋಪಾದಿಯಲ್ಲಿ ಸಂತಾಪಗಳು ಹರಿದು ಬಂದಿವೆ.

“ಲೆಜೆಂಟರಿ ಪಂಡಿತ್ ಬಿರ್ಜು ಮಹಾರಾಜ್ ಅವರ ನಿಧನವು ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಇದು ಭಾರತೀಯ ಸಂಗೀತ ಮತ್ತು ಸಾಂಸ್ಕೃತಿಕ ಜಾಗದಲ್ಲಿ ಆಳವಾದ ಶೂನ್ಯವನ್ನು ಉಂಟುಮಾಡುತ್ತದೆ. ಅವರು ಕಥಕ್ ಅನ್ನು ಜಾಗತಿಕವಾಗಿ ಜನಪ್ರಿಯಗೊಳಿಸಲು ಅಪ್ರತಿಮ ಕೊಡುಗೆಯನ್ನು ನೀಡುವ ಮೂಲಕ ಐಕಾನ್ ಆದವರು ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಟ್ವೀಟ್ ಮೂಲಕ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಾಂತ್ವನ ಹೇಳಿದ್ದಾರೆ.

“ಭಾರತೀಯ ನೃತ್ಯಕ್ಕೆ ವಿಶ್ವದಾದ್ಯಂತ ವಿಶೇಷ ಮನ್ನಣೆ ನೀಡಿದ ಪಂಡಿತ್ ಬಿರ್ಜು ಮಹಾರಾಜ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲಿಕೆ ಇಡೀ ಕಲಾ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪ” ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಸಂಸ್ಕೃತ ಬೇಡ, ಕನ್ನಡ ಬೇಕು: ಗೋಕಾಕ್ ಚಳವಳಿ ಕುರಿತು ಚಂಪಾರವರ ಸಂದರ್ಶನದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...