Homeಅಂಕಣಗಳುಥೂತ್ತೇರಿ | ಯಾಹೂಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಜುಮ್ಮಿ ಮನೆಗೆ ಬಂದ ವಾಟಿಸ್ಸೆ.”
“ಇದೆನಕ್ಕ ರಂಗೋಲೆಲಿ ಗಾಡಿ ಚಕ್ರನೆ ಬರೆದಿದ್ದಿ” ಎಂದ.
“ಇಲ್ಲಿಗಂಟ ಬರಬ್ಯಾಡ ಅದರ್ವಳಗೆ ಕುತಗಂಡು ಮಾತಾಡು. ಅದ್ಕು ಮದ್ಲು ಅಲ್ಲಿ ಮಡಗಿರೊ ನೀರಲ್ಲಿ ಕೈ ಕಾಲು ತ್ವಳಕಂಡು ಬಾ. ಅಮ್ಯಾಲೆ ಆ ಬಾಯಿಕಟ್ಟ ಸರಿಯಾಗಾಯ್ಕೊ ಕೆಮ್ಮು ಬಂದ್ರೆ ಸೀನಿದ್ರೆ ಮುಸುರಿ ಮುಚಗಂಡು ಅಮ್ಯಾಲೆ ಕೈಯುಜ್ಜಕೊ” ಎಂದು ಜುಮ್ಮಿ ಹೇಳುತ್ತಿರುವಾಗ.
“ಭೇಷ್ ಕಣಕ್ಕ. ಎಷ್ಟೇ ಆಗ್ಲಿ ಜನಪತಿನಿಧಿ ನೀನು. ನಮ್ಮೂರ ಪಿಣರಾಯಿ ಕಣಕ್ಕ” ಎಂದ.
“ಪಿಣತೆರಾಯ ಅಂದ್ರೇನ್ಲ.”
“ಅವುನು ಕೇರಳದ ಚಿಪ್ ಮಿನಿಷ್ಟ್ರು ಕಣಕ್ಕ. ಕೊರೋನ ಯಂಗೆ ಕಂಟ್ರೊಲ್ ಮಾಡ್ಯವುನೆ ಅಂದ್ರೇ ಥೇಟ್ ನಿನ್ನ ತರನೆ ಮಾಡ್ಯವುನೆ ಕಣಕ್ಕ.”
“ಎಜ್ಜಾಟ್ಳಿ ಕರಟ್ ಕಣೊ ಉಗ್ರಿ. ಎಜುಕೇಟೆಡ್ ಪರಸನ್ ಅಂದ್ರೆ ಅವುನು. ಅವುನೇನಾರ ಪ್ರಧಾನಿಯಾಗಿದ್ರೆ ದೀಪ ಹಚ್ಚಿ ಜಾಗಟೆ ಬಡಿರಿ ಅಂತಿರಲಿಲ್ಲ. ಕರೋನ ಕಡಿಮೆ ಮಾಡಕ್ಕೆ ಏನು ಮಾಡಬೇಕು ಅದ್ ಮಾಡಿ ಅನ್ನೊನು.”
“ಮೋದಿ ದೀಪ ಹಚ್ಚಿ ಅಂದ ಮ್ಯಾಲೆ ಕಡಿಮ್ಯಾಗಬೇಕಿತ್ತಲವೆ” ಎಂದಳು ಜುಮ್ಮಿ.
“ದೀಪ ಹಚ್ಚಿದ್ರೆ ಕರೋನ ಕಡಿಮೆಯಾಯ್ತದೆ ಅಂತ ಅವುನೆಲ್ಲ ಹೇಳಿದ್ನಕ್ಕ. ದೀಪ ಹಚ್ಚಿ ಅಂದ ಅಷ್ಟೆಯ ಅದ್ಕೆ ನಮ್ಮೂರ ಮೇಷ್ಟ್ರು ಐದು ದೀಪ ಹಚ್ಚಿದ್ನಂತೆ.”
“ಅವುನ್ಯಾಕೆ ಐದು ದೀಪ ಹಚ್ಚಿದಾ.”
“ಅದು ಮದ್ಲೆ ಕಪಿ ಮುಂಡೆದಲವಾ. ಮೋದಿ ಹೇಳಿದ್ದು ತಲಿಗೊಂದು ದೀಪ ಅಂತ ತಿಳಕಂಡು ಅವುನು ಅವುನೆಂಡ್ತಿ ಮೂರು ಹೆಣ್ ಮಕ್ಕಳು ಸೇರಿ ತಲಿಗೊಂದು ದೀಪ ಹಚ್ಚಿದನಂತೆ.”
“ಮಕ್ಕಳಿಗೆ ಪಾಟ ಹೇಳೊ ಮುಂಡೆ ಮಗನೆ ಹಿಂಗಾದ್ರೆ ಇನ್ನ ದೇಸದ ಜನಗಳ ಕತಿಯೇನೂ.”
“ಇಂಥೊರಿಂದ್ಲೆಯ ಹಿಂದೂಗಳು ಸಾಬರು ಅಂತ ಬ್ಯಾರೆ ಬ್ಯಾರೆ ಆಯ್ತಾಯಿರದು.”
“ಅದೇನ್ಲ ಸಾಬರು ಗಲಾಟೆ” ಎಂದಳು ಜುಮ್ಮಿ.
“ಸಾಬರ ಕತೆ ಮುಗಿತು ಮುಗಿತು ಬುಡಕ್ಕ” ಎಂದ ವಾಟಿಸ್ಸೆ.
“ಅದ್ಯಾಕ್ಲ ಅಂಗಂತಿ.”
“ಇನ್ನೆನಕ್ಕ ಕೊರೋನ ಆದೊರಿಗೆ ಅವುಸ್ಥಿಕೊಡಕೋದೊರಿಗೆ ವಡುದು ಕಲ್ಲು ಬಿರತವೆ ಅಂದ್ರೆ ಅವು ಕತಿಯೇನೂ.”
“ಅವುಕೇನು ಮಲ್ಲಾಗ್ರು ಬಂದದ್ಲ.”
“ಬುದ್ದಿ ಕಡಿವೆಯಿದ್ದೊರಿಗೆ ಅಲವೆ ಮಲ್ಲಾಗ್ರು ಬರದು.”
“ಅದೇನಾರ ಆಗ್ಲಿ ಆ ಬಿಜೆಪಿಗಳಾಡದ್ಕೂ ಇವು ಮಾಡದ್ಕೂ ಸರಿಯಾಗ್ಯದೆ.”
“ನಿಜ ಕಣೊ ಉಗ್ರಿ ಈಗಾಗ್ಲೆ ಡೆಲ್ಲಿ ಮಸೀದಿ ವಳಗಿಂದ ತಂದು ಕರೋನ ಹರಡತ ಅವುರೆ ಸಾಬ್ರು ಊರಿಗೆ ಸೇರಸಬ್ಯಾಡಿ ಅಂತ ಬಿಜೆಪಿ ಬಡ್ಡೆತ್ತವು ಹೇಳಿಕೊಂಡು ತಿರುಗ್ತಾ ಅವೆ. ಅವುರಂಗೇಳಕ್ಕೂ ಇವುರಿಂಗೆ ಮಾಡಕ್ಕೂ ಸರಿಯಾಗ್ಯದೆ ಬುಡು.”
“ಮುಂದೆ ಕತಿಯೇನಯ್ಯಾ.”
“ಮುಂದೇನು ಅವುರ ಅಂಗೆಯ ಈ ಸಾಬರು ಅಂಗೆಯ ಅನ್ನಂಗಾಗಿ ಸಾಬರ ಪರ ಮಾತಡಕ್ಕೆ ಯಾರು ಇಲ್ದಂಗಾಯ್ತದೆ.”
“ನಾವು ಮಮನುಸರಾಗಿರತಿವಿ ಸಾಬರು ಮಾತ್ರ ಸಾಬರಾಗೆ ಇರತರೆ. ಅವನೋಡಂಗೆಯ, ಹೆಂಗಸರ್ಯಲ್ಲ ಬುರುಖಾ ಹಾಯ್ಕಂಡು. ಗಂಡಸರ್ಯಲ್ಲ ಗಡ್ಡ ಬುಟಗಂಡು ಕಣಕಾಲಗಾಟ ಪೈಜಾಮಕಂಡು ಟೋಪಿ ಹಾಯ್ಕಂಡು ನೋಡಿದೇಟಿಗೆ ಪಕ್ಕಾ ಸಾಬಿ ಅನ್ನಂಗೆ ಕಾಣ್ತರಪ್ಪ.”
“ಮದ್ಲಂಗಿರಲಿಲ್ಲ ಅಲವೆ.”
“ಊಕಣಕ್ಕ ಬಾಬ್ರಿ ಮಸೀದಿ ಬಿದ್ದಮ್ಯಾಲೆ ವಳಗಿರೊ ಮೌಲವಿಗಳು ಸಾಬರ ಕೈಗೆ ತಗಂಡು ಅಂಗೆ ಮಾಡ್ಯವುರೆ. ನೀವ್ಯಲ್ಲ ಧರಮ ಪಾಲಿಸಿಯಲ್ಲಿ ವಗ್ಗಟ್ಟಾಗಿರಿ. ಧರಮ ಅಂತ ಹೇಳಿ ಕಳುಸ್ತನೆ. ಇವು ಬಂದು ಕಲ್ಲು ಬೀರ್ತವೆ. ಅಂತೂ ಈ ಸಾಬ್ರು ಆರೆಸ್ಸೆಸ್‍ಗಳಿಂದ ನಮಗೆ ನೆಮ್ಮದಿಯಿವಲ್ಲ ಹೇಳು.”
“ಹಿಂಗಾದ್ರೆ ಸಾಬ್ರು ಕತೆ ಮುಗಿತು ಬುಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...