Homeಅಂಕಣಗಳುಥೂತ್ತೇರಿ | ಯಾಹೂಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಜುಮ್ಮಿ ಮನೆಗೆ ಬಂದ ವಾಟಿಸ್ಸೆ.”
“ಇದೆನಕ್ಕ ರಂಗೋಲೆಲಿ ಗಾಡಿ ಚಕ್ರನೆ ಬರೆದಿದ್ದಿ” ಎಂದ.
“ಇಲ್ಲಿಗಂಟ ಬರಬ್ಯಾಡ ಅದರ್ವಳಗೆ ಕುತಗಂಡು ಮಾತಾಡು. ಅದ್ಕು ಮದ್ಲು ಅಲ್ಲಿ ಮಡಗಿರೊ ನೀರಲ್ಲಿ ಕೈ ಕಾಲು ತ್ವಳಕಂಡು ಬಾ. ಅಮ್ಯಾಲೆ ಆ ಬಾಯಿಕಟ್ಟ ಸರಿಯಾಗಾಯ್ಕೊ ಕೆಮ್ಮು ಬಂದ್ರೆ ಸೀನಿದ್ರೆ ಮುಸುರಿ ಮುಚಗಂಡು ಅಮ್ಯಾಲೆ ಕೈಯುಜ್ಜಕೊ” ಎಂದು ಜುಮ್ಮಿ ಹೇಳುತ್ತಿರುವಾಗ.
“ಭೇಷ್ ಕಣಕ್ಕ. ಎಷ್ಟೇ ಆಗ್ಲಿ ಜನಪತಿನಿಧಿ ನೀನು. ನಮ್ಮೂರ ಪಿಣರಾಯಿ ಕಣಕ್ಕ” ಎಂದ.
“ಪಿಣತೆರಾಯ ಅಂದ್ರೇನ್ಲ.”
“ಅವುನು ಕೇರಳದ ಚಿಪ್ ಮಿನಿಷ್ಟ್ರು ಕಣಕ್ಕ. ಕೊರೋನ ಯಂಗೆ ಕಂಟ್ರೊಲ್ ಮಾಡ್ಯವುನೆ ಅಂದ್ರೇ ಥೇಟ್ ನಿನ್ನ ತರನೆ ಮಾಡ್ಯವುನೆ ಕಣಕ್ಕ.”
“ಎಜ್ಜಾಟ್ಳಿ ಕರಟ್ ಕಣೊ ಉಗ್ರಿ. ಎಜುಕೇಟೆಡ್ ಪರಸನ್ ಅಂದ್ರೆ ಅವುನು. ಅವುನೇನಾರ ಪ್ರಧಾನಿಯಾಗಿದ್ರೆ ದೀಪ ಹಚ್ಚಿ ಜಾಗಟೆ ಬಡಿರಿ ಅಂತಿರಲಿಲ್ಲ. ಕರೋನ ಕಡಿಮೆ ಮಾಡಕ್ಕೆ ಏನು ಮಾಡಬೇಕು ಅದ್ ಮಾಡಿ ಅನ್ನೊನು.”
“ಮೋದಿ ದೀಪ ಹಚ್ಚಿ ಅಂದ ಮ್ಯಾಲೆ ಕಡಿಮ್ಯಾಗಬೇಕಿತ್ತಲವೆ” ಎಂದಳು ಜುಮ್ಮಿ.
“ದೀಪ ಹಚ್ಚಿದ್ರೆ ಕರೋನ ಕಡಿಮೆಯಾಯ್ತದೆ ಅಂತ ಅವುನೆಲ್ಲ ಹೇಳಿದ್ನಕ್ಕ. ದೀಪ ಹಚ್ಚಿ ಅಂದ ಅಷ್ಟೆಯ ಅದ್ಕೆ ನಮ್ಮೂರ ಮೇಷ್ಟ್ರು ಐದು ದೀಪ ಹಚ್ಚಿದ್ನಂತೆ.”
“ಅವುನ್ಯಾಕೆ ಐದು ದೀಪ ಹಚ್ಚಿದಾ.”
“ಅದು ಮದ್ಲೆ ಕಪಿ ಮುಂಡೆದಲವಾ. ಮೋದಿ ಹೇಳಿದ್ದು ತಲಿಗೊಂದು ದೀಪ ಅಂತ ತಿಳಕಂಡು ಅವುನು ಅವುನೆಂಡ್ತಿ ಮೂರು ಹೆಣ್ ಮಕ್ಕಳು ಸೇರಿ ತಲಿಗೊಂದು ದೀಪ ಹಚ್ಚಿದನಂತೆ.”
“ಮಕ್ಕಳಿಗೆ ಪಾಟ ಹೇಳೊ ಮುಂಡೆ ಮಗನೆ ಹಿಂಗಾದ್ರೆ ಇನ್ನ ದೇಸದ ಜನಗಳ ಕತಿಯೇನೂ.”
“ಇಂಥೊರಿಂದ್ಲೆಯ ಹಿಂದೂಗಳು ಸಾಬರು ಅಂತ ಬ್ಯಾರೆ ಬ್ಯಾರೆ ಆಯ್ತಾಯಿರದು.”
“ಅದೇನ್ಲ ಸಾಬರು ಗಲಾಟೆ” ಎಂದಳು ಜುಮ್ಮಿ.
“ಸಾಬರ ಕತೆ ಮುಗಿತು ಮುಗಿತು ಬುಡಕ್ಕ” ಎಂದ ವಾಟಿಸ್ಸೆ.
“ಅದ್ಯಾಕ್ಲ ಅಂಗಂತಿ.”
“ಇನ್ನೆನಕ್ಕ ಕೊರೋನ ಆದೊರಿಗೆ ಅವುಸ್ಥಿಕೊಡಕೋದೊರಿಗೆ ವಡುದು ಕಲ್ಲು ಬಿರತವೆ ಅಂದ್ರೆ ಅವು ಕತಿಯೇನೂ.”
“ಅವುಕೇನು ಮಲ್ಲಾಗ್ರು ಬಂದದ್ಲ.”
“ಬುದ್ದಿ ಕಡಿವೆಯಿದ್ದೊರಿಗೆ ಅಲವೆ ಮಲ್ಲಾಗ್ರು ಬರದು.”
“ಅದೇನಾರ ಆಗ್ಲಿ ಆ ಬಿಜೆಪಿಗಳಾಡದ್ಕೂ ಇವು ಮಾಡದ್ಕೂ ಸರಿಯಾಗ್ಯದೆ.”
“ನಿಜ ಕಣೊ ಉಗ್ರಿ ಈಗಾಗ್ಲೆ ಡೆಲ್ಲಿ ಮಸೀದಿ ವಳಗಿಂದ ತಂದು ಕರೋನ ಹರಡತ ಅವುರೆ ಸಾಬ್ರು ಊರಿಗೆ ಸೇರಸಬ್ಯಾಡಿ ಅಂತ ಬಿಜೆಪಿ ಬಡ್ಡೆತ್ತವು ಹೇಳಿಕೊಂಡು ತಿರುಗ್ತಾ ಅವೆ. ಅವುರಂಗೇಳಕ್ಕೂ ಇವುರಿಂಗೆ ಮಾಡಕ್ಕೂ ಸರಿಯಾಗ್ಯದೆ ಬುಡು.”
“ಮುಂದೆ ಕತಿಯೇನಯ್ಯಾ.”
“ಮುಂದೇನು ಅವುರ ಅಂಗೆಯ ಈ ಸಾಬರು ಅಂಗೆಯ ಅನ್ನಂಗಾಗಿ ಸಾಬರ ಪರ ಮಾತಡಕ್ಕೆ ಯಾರು ಇಲ್ದಂಗಾಯ್ತದೆ.”
“ನಾವು ಮಮನುಸರಾಗಿರತಿವಿ ಸಾಬರು ಮಾತ್ರ ಸಾಬರಾಗೆ ಇರತರೆ. ಅವನೋಡಂಗೆಯ, ಹೆಂಗಸರ್ಯಲ್ಲ ಬುರುಖಾ ಹಾಯ್ಕಂಡು. ಗಂಡಸರ್ಯಲ್ಲ ಗಡ್ಡ ಬುಟಗಂಡು ಕಣಕಾಲಗಾಟ ಪೈಜಾಮಕಂಡು ಟೋಪಿ ಹಾಯ್ಕಂಡು ನೋಡಿದೇಟಿಗೆ ಪಕ್ಕಾ ಸಾಬಿ ಅನ್ನಂಗೆ ಕಾಣ್ತರಪ್ಪ.”
“ಮದ್ಲಂಗಿರಲಿಲ್ಲ ಅಲವೆ.”
“ಊಕಣಕ್ಕ ಬಾಬ್ರಿ ಮಸೀದಿ ಬಿದ್ದಮ್ಯಾಲೆ ವಳಗಿರೊ ಮೌಲವಿಗಳು ಸಾಬರ ಕೈಗೆ ತಗಂಡು ಅಂಗೆ ಮಾಡ್ಯವುರೆ. ನೀವ್ಯಲ್ಲ ಧರಮ ಪಾಲಿಸಿಯಲ್ಲಿ ವಗ್ಗಟ್ಟಾಗಿರಿ. ಧರಮ ಅಂತ ಹೇಳಿ ಕಳುಸ್ತನೆ. ಇವು ಬಂದು ಕಲ್ಲು ಬೀರ್ತವೆ. ಅಂತೂ ಈ ಸಾಬ್ರು ಆರೆಸ್ಸೆಸ್‍ಗಳಿಂದ ನಮಗೆ ನೆಮ್ಮದಿಯಿವಲ್ಲ ಹೇಳು.”
“ಹಿಂಗಾದ್ರೆ ಸಾಬ್ರು ಕತೆ ಮುಗಿತು ಬುಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...