Homeಅಂಕಣಗಳುಥೂತ್ತೇರಿ | ಯಾಹೂಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಜುಮ್ಮಿ ಮನೆಗೆ ಬಂದ ವಾಟಿಸ್ಸೆ.”
“ಇದೆನಕ್ಕ ರಂಗೋಲೆಲಿ ಗಾಡಿ ಚಕ್ರನೆ ಬರೆದಿದ್ದಿ” ಎಂದ.
“ಇಲ್ಲಿಗಂಟ ಬರಬ್ಯಾಡ ಅದರ್ವಳಗೆ ಕುತಗಂಡು ಮಾತಾಡು. ಅದ್ಕು ಮದ್ಲು ಅಲ್ಲಿ ಮಡಗಿರೊ ನೀರಲ್ಲಿ ಕೈ ಕಾಲು ತ್ವಳಕಂಡು ಬಾ. ಅಮ್ಯಾಲೆ ಆ ಬಾಯಿಕಟ್ಟ ಸರಿಯಾಗಾಯ್ಕೊ ಕೆಮ್ಮು ಬಂದ್ರೆ ಸೀನಿದ್ರೆ ಮುಸುರಿ ಮುಚಗಂಡು ಅಮ್ಯಾಲೆ ಕೈಯುಜ್ಜಕೊ” ಎಂದು ಜುಮ್ಮಿ ಹೇಳುತ್ತಿರುವಾಗ.
“ಭೇಷ್ ಕಣಕ್ಕ. ಎಷ್ಟೇ ಆಗ್ಲಿ ಜನಪತಿನಿಧಿ ನೀನು. ನಮ್ಮೂರ ಪಿಣರಾಯಿ ಕಣಕ್ಕ” ಎಂದ.
“ಪಿಣತೆರಾಯ ಅಂದ್ರೇನ್ಲ.”
“ಅವುನು ಕೇರಳದ ಚಿಪ್ ಮಿನಿಷ್ಟ್ರು ಕಣಕ್ಕ. ಕೊರೋನ ಯಂಗೆ ಕಂಟ್ರೊಲ್ ಮಾಡ್ಯವುನೆ ಅಂದ್ರೇ ಥೇಟ್ ನಿನ್ನ ತರನೆ ಮಾಡ್ಯವುನೆ ಕಣಕ್ಕ.”
“ಎಜ್ಜಾಟ್ಳಿ ಕರಟ್ ಕಣೊ ಉಗ್ರಿ. ಎಜುಕೇಟೆಡ್ ಪರಸನ್ ಅಂದ್ರೆ ಅವುನು. ಅವುನೇನಾರ ಪ್ರಧಾನಿಯಾಗಿದ್ರೆ ದೀಪ ಹಚ್ಚಿ ಜಾಗಟೆ ಬಡಿರಿ ಅಂತಿರಲಿಲ್ಲ. ಕರೋನ ಕಡಿಮೆ ಮಾಡಕ್ಕೆ ಏನು ಮಾಡಬೇಕು ಅದ್ ಮಾಡಿ ಅನ್ನೊನು.”
“ಮೋದಿ ದೀಪ ಹಚ್ಚಿ ಅಂದ ಮ್ಯಾಲೆ ಕಡಿಮ್ಯಾಗಬೇಕಿತ್ತಲವೆ” ಎಂದಳು ಜುಮ್ಮಿ.
“ದೀಪ ಹಚ್ಚಿದ್ರೆ ಕರೋನ ಕಡಿಮೆಯಾಯ್ತದೆ ಅಂತ ಅವುನೆಲ್ಲ ಹೇಳಿದ್ನಕ್ಕ. ದೀಪ ಹಚ್ಚಿ ಅಂದ ಅಷ್ಟೆಯ ಅದ್ಕೆ ನಮ್ಮೂರ ಮೇಷ್ಟ್ರು ಐದು ದೀಪ ಹಚ್ಚಿದ್ನಂತೆ.”
“ಅವುನ್ಯಾಕೆ ಐದು ದೀಪ ಹಚ್ಚಿದಾ.”
“ಅದು ಮದ್ಲೆ ಕಪಿ ಮುಂಡೆದಲವಾ. ಮೋದಿ ಹೇಳಿದ್ದು ತಲಿಗೊಂದು ದೀಪ ಅಂತ ತಿಳಕಂಡು ಅವುನು ಅವುನೆಂಡ್ತಿ ಮೂರು ಹೆಣ್ ಮಕ್ಕಳು ಸೇರಿ ತಲಿಗೊಂದು ದೀಪ ಹಚ್ಚಿದನಂತೆ.”
“ಮಕ್ಕಳಿಗೆ ಪಾಟ ಹೇಳೊ ಮುಂಡೆ ಮಗನೆ ಹಿಂಗಾದ್ರೆ ಇನ್ನ ದೇಸದ ಜನಗಳ ಕತಿಯೇನೂ.”
“ಇಂಥೊರಿಂದ್ಲೆಯ ಹಿಂದೂಗಳು ಸಾಬರು ಅಂತ ಬ್ಯಾರೆ ಬ್ಯಾರೆ ಆಯ್ತಾಯಿರದು.”
“ಅದೇನ್ಲ ಸಾಬರು ಗಲಾಟೆ” ಎಂದಳು ಜುಮ್ಮಿ.
“ಸಾಬರ ಕತೆ ಮುಗಿತು ಮುಗಿತು ಬುಡಕ್ಕ” ಎಂದ ವಾಟಿಸ್ಸೆ.
“ಅದ್ಯಾಕ್ಲ ಅಂಗಂತಿ.”
“ಇನ್ನೆನಕ್ಕ ಕೊರೋನ ಆದೊರಿಗೆ ಅವುಸ್ಥಿಕೊಡಕೋದೊರಿಗೆ ವಡುದು ಕಲ್ಲು ಬಿರತವೆ ಅಂದ್ರೆ ಅವು ಕತಿಯೇನೂ.”
“ಅವುಕೇನು ಮಲ್ಲಾಗ್ರು ಬಂದದ್ಲ.”
“ಬುದ್ದಿ ಕಡಿವೆಯಿದ್ದೊರಿಗೆ ಅಲವೆ ಮಲ್ಲಾಗ್ರು ಬರದು.”
“ಅದೇನಾರ ಆಗ್ಲಿ ಆ ಬಿಜೆಪಿಗಳಾಡದ್ಕೂ ಇವು ಮಾಡದ್ಕೂ ಸರಿಯಾಗ್ಯದೆ.”
“ನಿಜ ಕಣೊ ಉಗ್ರಿ ಈಗಾಗ್ಲೆ ಡೆಲ್ಲಿ ಮಸೀದಿ ವಳಗಿಂದ ತಂದು ಕರೋನ ಹರಡತ ಅವುರೆ ಸಾಬ್ರು ಊರಿಗೆ ಸೇರಸಬ್ಯಾಡಿ ಅಂತ ಬಿಜೆಪಿ ಬಡ್ಡೆತ್ತವು ಹೇಳಿಕೊಂಡು ತಿರುಗ್ತಾ ಅವೆ. ಅವುರಂಗೇಳಕ್ಕೂ ಇವುರಿಂಗೆ ಮಾಡಕ್ಕೂ ಸರಿಯಾಗ್ಯದೆ ಬುಡು.”
“ಮುಂದೆ ಕತಿಯೇನಯ್ಯಾ.”
“ಮುಂದೇನು ಅವುರ ಅಂಗೆಯ ಈ ಸಾಬರು ಅಂಗೆಯ ಅನ್ನಂಗಾಗಿ ಸಾಬರ ಪರ ಮಾತಡಕ್ಕೆ ಯಾರು ಇಲ್ದಂಗಾಯ್ತದೆ.”
“ನಾವು ಮಮನುಸರಾಗಿರತಿವಿ ಸಾಬರು ಮಾತ್ರ ಸಾಬರಾಗೆ ಇರತರೆ. ಅವನೋಡಂಗೆಯ, ಹೆಂಗಸರ್ಯಲ್ಲ ಬುರುಖಾ ಹಾಯ್ಕಂಡು. ಗಂಡಸರ್ಯಲ್ಲ ಗಡ್ಡ ಬುಟಗಂಡು ಕಣಕಾಲಗಾಟ ಪೈಜಾಮಕಂಡು ಟೋಪಿ ಹಾಯ್ಕಂಡು ನೋಡಿದೇಟಿಗೆ ಪಕ್ಕಾ ಸಾಬಿ ಅನ್ನಂಗೆ ಕಾಣ್ತರಪ್ಪ.”
“ಮದ್ಲಂಗಿರಲಿಲ್ಲ ಅಲವೆ.”
“ಊಕಣಕ್ಕ ಬಾಬ್ರಿ ಮಸೀದಿ ಬಿದ್ದಮ್ಯಾಲೆ ವಳಗಿರೊ ಮೌಲವಿಗಳು ಸಾಬರ ಕೈಗೆ ತಗಂಡು ಅಂಗೆ ಮಾಡ್ಯವುರೆ. ನೀವ್ಯಲ್ಲ ಧರಮ ಪಾಲಿಸಿಯಲ್ಲಿ ವಗ್ಗಟ್ಟಾಗಿರಿ. ಧರಮ ಅಂತ ಹೇಳಿ ಕಳುಸ್ತನೆ. ಇವು ಬಂದು ಕಲ್ಲು ಬೀರ್ತವೆ. ಅಂತೂ ಈ ಸಾಬ್ರು ಆರೆಸ್ಸೆಸ್‍ಗಳಿಂದ ನಮಗೆ ನೆಮ್ಮದಿಯಿವಲ್ಲ ಹೇಳು.”
“ಹಿಂಗಾದ್ರೆ ಸಾಬ್ರು ಕತೆ ಮುಗಿತು ಬುಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...