Homeಅಂಕಣಗಳುಥೂತ್ತೇರಿ | ಯಾಹೂಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಜುಮ್ಮಿ ಮನೆಗೆ ಬಂದ ವಾಟಿಸ್ಸೆ.”
“ಇದೆನಕ್ಕ ರಂಗೋಲೆಲಿ ಗಾಡಿ ಚಕ್ರನೆ ಬರೆದಿದ್ದಿ” ಎಂದ.
“ಇಲ್ಲಿಗಂಟ ಬರಬ್ಯಾಡ ಅದರ್ವಳಗೆ ಕುತಗಂಡು ಮಾತಾಡು. ಅದ್ಕು ಮದ್ಲು ಅಲ್ಲಿ ಮಡಗಿರೊ ನೀರಲ್ಲಿ ಕೈ ಕಾಲು ತ್ವಳಕಂಡು ಬಾ. ಅಮ್ಯಾಲೆ ಆ ಬಾಯಿಕಟ್ಟ ಸರಿಯಾಗಾಯ್ಕೊ ಕೆಮ್ಮು ಬಂದ್ರೆ ಸೀನಿದ್ರೆ ಮುಸುರಿ ಮುಚಗಂಡು ಅಮ್ಯಾಲೆ ಕೈಯುಜ್ಜಕೊ” ಎಂದು ಜುಮ್ಮಿ ಹೇಳುತ್ತಿರುವಾಗ.
“ಭೇಷ್ ಕಣಕ್ಕ. ಎಷ್ಟೇ ಆಗ್ಲಿ ಜನಪತಿನಿಧಿ ನೀನು. ನಮ್ಮೂರ ಪಿಣರಾಯಿ ಕಣಕ್ಕ” ಎಂದ.
“ಪಿಣತೆರಾಯ ಅಂದ್ರೇನ್ಲ.”
“ಅವುನು ಕೇರಳದ ಚಿಪ್ ಮಿನಿಷ್ಟ್ರು ಕಣಕ್ಕ. ಕೊರೋನ ಯಂಗೆ ಕಂಟ್ರೊಲ್ ಮಾಡ್ಯವುನೆ ಅಂದ್ರೇ ಥೇಟ್ ನಿನ್ನ ತರನೆ ಮಾಡ್ಯವುನೆ ಕಣಕ್ಕ.”
“ಎಜ್ಜಾಟ್ಳಿ ಕರಟ್ ಕಣೊ ಉಗ್ರಿ. ಎಜುಕೇಟೆಡ್ ಪರಸನ್ ಅಂದ್ರೆ ಅವುನು. ಅವುನೇನಾರ ಪ್ರಧಾನಿಯಾಗಿದ್ರೆ ದೀಪ ಹಚ್ಚಿ ಜಾಗಟೆ ಬಡಿರಿ ಅಂತಿರಲಿಲ್ಲ. ಕರೋನ ಕಡಿಮೆ ಮಾಡಕ್ಕೆ ಏನು ಮಾಡಬೇಕು ಅದ್ ಮಾಡಿ ಅನ್ನೊನು.”
“ಮೋದಿ ದೀಪ ಹಚ್ಚಿ ಅಂದ ಮ್ಯಾಲೆ ಕಡಿಮ್ಯಾಗಬೇಕಿತ್ತಲವೆ” ಎಂದಳು ಜುಮ್ಮಿ.
“ದೀಪ ಹಚ್ಚಿದ್ರೆ ಕರೋನ ಕಡಿಮೆಯಾಯ್ತದೆ ಅಂತ ಅವುನೆಲ್ಲ ಹೇಳಿದ್ನಕ್ಕ. ದೀಪ ಹಚ್ಚಿ ಅಂದ ಅಷ್ಟೆಯ ಅದ್ಕೆ ನಮ್ಮೂರ ಮೇಷ್ಟ್ರು ಐದು ದೀಪ ಹಚ್ಚಿದ್ನಂತೆ.”
“ಅವುನ್ಯಾಕೆ ಐದು ದೀಪ ಹಚ್ಚಿದಾ.”
“ಅದು ಮದ್ಲೆ ಕಪಿ ಮುಂಡೆದಲವಾ. ಮೋದಿ ಹೇಳಿದ್ದು ತಲಿಗೊಂದು ದೀಪ ಅಂತ ತಿಳಕಂಡು ಅವುನು ಅವುನೆಂಡ್ತಿ ಮೂರು ಹೆಣ್ ಮಕ್ಕಳು ಸೇರಿ ತಲಿಗೊಂದು ದೀಪ ಹಚ್ಚಿದನಂತೆ.”
“ಮಕ್ಕಳಿಗೆ ಪಾಟ ಹೇಳೊ ಮುಂಡೆ ಮಗನೆ ಹಿಂಗಾದ್ರೆ ಇನ್ನ ದೇಸದ ಜನಗಳ ಕತಿಯೇನೂ.”
“ಇಂಥೊರಿಂದ್ಲೆಯ ಹಿಂದೂಗಳು ಸಾಬರು ಅಂತ ಬ್ಯಾರೆ ಬ್ಯಾರೆ ಆಯ್ತಾಯಿರದು.”
“ಅದೇನ್ಲ ಸಾಬರು ಗಲಾಟೆ” ಎಂದಳು ಜುಮ್ಮಿ.
“ಸಾಬರ ಕತೆ ಮುಗಿತು ಮುಗಿತು ಬುಡಕ್ಕ” ಎಂದ ವಾಟಿಸ್ಸೆ.
“ಅದ್ಯಾಕ್ಲ ಅಂಗಂತಿ.”
“ಇನ್ನೆನಕ್ಕ ಕೊರೋನ ಆದೊರಿಗೆ ಅವುಸ್ಥಿಕೊಡಕೋದೊರಿಗೆ ವಡುದು ಕಲ್ಲು ಬಿರತವೆ ಅಂದ್ರೆ ಅವು ಕತಿಯೇನೂ.”
“ಅವುಕೇನು ಮಲ್ಲಾಗ್ರು ಬಂದದ್ಲ.”
“ಬುದ್ದಿ ಕಡಿವೆಯಿದ್ದೊರಿಗೆ ಅಲವೆ ಮಲ್ಲಾಗ್ರು ಬರದು.”
“ಅದೇನಾರ ಆಗ್ಲಿ ಆ ಬಿಜೆಪಿಗಳಾಡದ್ಕೂ ಇವು ಮಾಡದ್ಕೂ ಸರಿಯಾಗ್ಯದೆ.”
“ನಿಜ ಕಣೊ ಉಗ್ರಿ ಈಗಾಗ್ಲೆ ಡೆಲ್ಲಿ ಮಸೀದಿ ವಳಗಿಂದ ತಂದು ಕರೋನ ಹರಡತ ಅವುರೆ ಸಾಬ್ರು ಊರಿಗೆ ಸೇರಸಬ್ಯಾಡಿ ಅಂತ ಬಿಜೆಪಿ ಬಡ್ಡೆತ್ತವು ಹೇಳಿಕೊಂಡು ತಿರುಗ್ತಾ ಅವೆ. ಅವುರಂಗೇಳಕ್ಕೂ ಇವುರಿಂಗೆ ಮಾಡಕ್ಕೂ ಸರಿಯಾಗ್ಯದೆ ಬುಡು.”
“ಮುಂದೆ ಕತಿಯೇನಯ್ಯಾ.”
“ಮುಂದೇನು ಅವುರ ಅಂಗೆಯ ಈ ಸಾಬರು ಅಂಗೆಯ ಅನ್ನಂಗಾಗಿ ಸಾಬರ ಪರ ಮಾತಡಕ್ಕೆ ಯಾರು ಇಲ್ದಂಗಾಯ್ತದೆ.”
“ನಾವು ಮಮನುಸರಾಗಿರತಿವಿ ಸಾಬರು ಮಾತ್ರ ಸಾಬರಾಗೆ ಇರತರೆ. ಅವನೋಡಂಗೆಯ, ಹೆಂಗಸರ್ಯಲ್ಲ ಬುರುಖಾ ಹಾಯ್ಕಂಡು. ಗಂಡಸರ್ಯಲ್ಲ ಗಡ್ಡ ಬುಟಗಂಡು ಕಣಕಾಲಗಾಟ ಪೈಜಾಮಕಂಡು ಟೋಪಿ ಹಾಯ್ಕಂಡು ನೋಡಿದೇಟಿಗೆ ಪಕ್ಕಾ ಸಾಬಿ ಅನ್ನಂಗೆ ಕಾಣ್ತರಪ್ಪ.”
“ಮದ್ಲಂಗಿರಲಿಲ್ಲ ಅಲವೆ.”
“ಊಕಣಕ್ಕ ಬಾಬ್ರಿ ಮಸೀದಿ ಬಿದ್ದಮ್ಯಾಲೆ ವಳಗಿರೊ ಮೌಲವಿಗಳು ಸಾಬರ ಕೈಗೆ ತಗಂಡು ಅಂಗೆ ಮಾಡ್ಯವುರೆ. ನೀವ್ಯಲ್ಲ ಧರಮ ಪಾಲಿಸಿಯಲ್ಲಿ ವಗ್ಗಟ್ಟಾಗಿರಿ. ಧರಮ ಅಂತ ಹೇಳಿ ಕಳುಸ್ತನೆ. ಇವು ಬಂದು ಕಲ್ಲು ಬೀರ್ತವೆ. ಅಂತೂ ಈ ಸಾಬ್ರು ಆರೆಸ್ಸೆಸ್‍ಗಳಿಂದ ನಮಗೆ ನೆಮ್ಮದಿಯಿವಲ್ಲ ಹೇಳು.”
“ಹಿಂಗಾದ್ರೆ ಸಾಬ್ರು ಕತೆ ಮುಗಿತು ಬುಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...