Homeಅಂಕಣಗಳುಥೂತ್ತೇರಿ | ಯಾಹೂಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಜುಮ್ಮಿ ಮನೆಗೆ ಬಂದ ವಾಟಿಸ್ಸೆ.”
“ಇದೆನಕ್ಕ ರಂಗೋಲೆಲಿ ಗಾಡಿ ಚಕ್ರನೆ ಬರೆದಿದ್ದಿ” ಎಂದ.
“ಇಲ್ಲಿಗಂಟ ಬರಬ್ಯಾಡ ಅದರ್ವಳಗೆ ಕುತಗಂಡು ಮಾತಾಡು. ಅದ್ಕು ಮದ್ಲು ಅಲ್ಲಿ ಮಡಗಿರೊ ನೀರಲ್ಲಿ ಕೈ ಕಾಲು ತ್ವಳಕಂಡು ಬಾ. ಅಮ್ಯಾಲೆ ಆ ಬಾಯಿಕಟ್ಟ ಸರಿಯಾಗಾಯ್ಕೊ ಕೆಮ್ಮು ಬಂದ್ರೆ ಸೀನಿದ್ರೆ ಮುಸುರಿ ಮುಚಗಂಡು ಅಮ್ಯಾಲೆ ಕೈಯುಜ್ಜಕೊ” ಎಂದು ಜುಮ್ಮಿ ಹೇಳುತ್ತಿರುವಾಗ.
“ಭೇಷ್ ಕಣಕ್ಕ. ಎಷ್ಟೇ ಆಗ್ಲಿ ಜನಪತಿನಿಧಿ ನೀನು. ನಮ್ಮೂರ ಪಿಣರಾಯಿ ಕಣಕ್ಕ” ಎಂದ.
“ಪಿಣತೆರಾಯ ಅಂದ್ರೇನ್ಲ.”
“ಅವುನು ಕೇರಳದ ಚಿಪ್ ಮಿನಿಷ್ಟ್ರು ಕಣಕ್ಕ. ಕೊರೋನ ಯಂಗೆ ಕಂಟ್ರೊಲ್ ಮಾಡ್ಯವುನೆ ಅಂದ್ರೇ ಥೇಟ್ ನಿನ್ನ ತರನೆ ಮಾಡ್ಯವುನೆ ಕಣಕ್ಕ.”
“ಎಜ್ಜಾಟ್ಳಿ ಕರಟ್ ಕಣೊ ಉಗ್ರಿ. ಎಜುಕೇಟೆಡ್ ಪರಸನ್ ಅಂದ್ರೆ ಅವುನು. ಅವುನೇನಾರ ಪ್ರಧಾನಿಯಾಗಿದ್ರೆ ದೀಪ ಹಚ್ಚಿ ಜಾಗಟೆ ಬಡಿರಿ ಅಂತಿರಲಿಲ್ಲ. ಕರೋನ ಕಡಿಮೆ ಮಾಡಕ್ಕೆ ಏನು ಮಾಡಬೇಕು ಅದ್ ಮಾಡಿ ಅನ್ನೊನು.”
“ಮೋದಿ ದೀಪ ಹಚ್ಚಿ ಅಂದ ಮ್ಯಾಲೆ ಕಡಿಮ್ಯಾಗಬೇಕಿತ್ತಲವೆ” ಎಂದಳು ಜುಮ್ಮಿ.
“ದೀಪ ಹಚ್ಚಿದ್ರೆ ಕರೋನ ಕಡಿಮೆಯಾಯ್ತದೆ ಅಂತ ಅವುನೆಲ್ಲ ಹೇಳಿದ್ನಕ್ಕ. ದೀಪ ಹಚ್ಚಿ ಅಂದ ಅಷ್ಟೆಯ ಅದ್ಕೆ ನಮ್ಮೂರ ಮೇಷ್ಟ್ರು ಐದು ದೀಪ ಹಚ್ಚಿದ್ನಂತೆ.”
“ಅವುನ್ಯಾಕೆ ಐದು ದೀಪ ಹಚ್ಚಿದಾ.”
“ಅದು ಮದ್ಲೆ ಕಪಿ ಮುಂಡೆದಲವಾ. ಮೋದಿ ಹೇಳಿದ್ದು ತಲಿಗೊಂದು ದೀಪ ಅಂತ ತಿಳಕಂಡು ಅವುನು ಅವುನೆಂಡ್ತಿ ಮೂರು ಹೆಣ್ ಮಕ್ಕಳು ಸೇರಿ ತಲಿಗೊಂದು ದೀಪ ಹಚ್ಚಿದನಂತೆ.”
“ಮಕ್ಕಳಿಗೆ ಪಾಟ ಹೇಳೊ ಮುಂಡೆ ಮಗನೆ ಹಿಂಗಾದ್ರೆ ಇನ್ನ ದೇಸದ ಜನಗಳ ಕತಿಯೇನೂ.”
“ಇಂಥೊರಿಂದ್ಲೆಯ ಹಿಂದೂಗಳು ಸಾಬರು ಅಂತ ಬ್ಯಾರೆ ಬ್ಯಾರೆ ಆಯ್ತಾಯಿರದು.”
“ಅದೇನ್ಲ ಸಾಬರು ಗಲಾಟೆ” ಎಂದಳು ಜುಮ್ಮಿ.
“ಸಾಬರ ಕತೆ ಮುಗಿತು ಮುಗಿತು ಬುಡಕ್ಕ” ಎಂದ ವಾಟಿಸ್ಸೆ.
“ಅದ್ಯಾಕ್ಲ ಅಂಗಂತಿ.”
“ಇನ್ನೆನಕ್ಕ ಕೊರೋನ ಆದೊರಿಗೆ ಅವುಸ್ಥಿಕೊಡಕೋದೊರಿಗೆ ವಡುದು ಕಲ್ಲು ಬಿರತವೆ ಅಂದ್ರೆ ಅವು ಕತಿಯೇನೂ.”
“ಅವುಕೇನು ಮಲ್ಲಾಗ್ರು ಬಂದದ್ಲ.”
“ಬುದ್ದಿ ಕಡಿವೆಯಿದ್ದೊರಿಗೆ ಅಲವೆ ಮಲ್ಲಾಗ್ರು ಬರದು.”
“ಅದೇನಾರ ಆಗ್ಲಿ ಆ ಬಿಜೆಪಿಗಳಾಡದ್ಕೂ ಇವು ಮಾಡದ್ಕೂ ಸರಿಯಾಗ್ಯದೆ.”
“ನಿಜ ಕಣೊ ಉಗ್ರಿ ಈಗಾಗ್ಲೆ ಡೆಲ್ಲಿ ಮಸೀದಿ ವಳಗಿಂದ ತಂದು ಕರೋನ ಹರಡತ ಅವುರೆ ಸಾಬ್ರು ಊರಿಗೆ ಸೇರಸಬ್ಯಾಡಿ ಅಂತ ಬಿಜೆಪಿ ಬಡ್ಡೆತ್ತವು ಹೇಳಿಕೊಂಡು ತಿರುಗ್ತಾ ಅವೆ. ಅವುರಂಗೇಳಕ್ಕೂ ಇವುರಿಂಗೆ ಮಾಡಕ್ಕೂ ಸರಿಯಾಗ್ಯದೆ ಬುಡು.”
“ಮುಂದೆ ಕತಿಯೇನಯ್ಯಾ.”
“ಮುಂದೇನು ಅವುರ ಅಂಗೆಯ ಈ ಸಾಬರು ಅಂಗೆಯ ಅನ್ನಂಗಾಗಿ ಸಾಬರ ಪರ ಮಾತಡಕ್ಕೆ ಯಾರು ಇಲ್ದಂಗಾಯ್ತದೆ.”
“ನಾವು ಮಮನುಸರಾಗಿರತಿವಿ ಸಾಬರು ಮಾತ್ರ ಸಾಬರಾಗೆ ಇರತರೆ. ಅವನೋಡಂಗೆಯ, ಹೆಂಗಸರ್ಯಲ್ಲ ಬುರುಖಾ ಹಾಯ್ಕಂಡು. ಗಂಡಸರ್ಯಲ್ಲ ಗಡ್ಡ ಬುಟಗಂಡು ಕಣಕಾಲಗಾಟ ಪೈಜಾಮಕಂಡು ಟೋಪಿ ಹಾಯ್ಕಂಡು ನೋಡಿದೇಟಿಗೆ ಪಕ್ಕಾ ಸಾಬಿ ಅನ್ನಂಗೆ ಕಾಣ್ತರಪ್ಪ.”
“ಮದ್ಲಂಗಿರಲಿಲ್ಲ ಅಲವೆ.”
“ಊಕಣಕ್ಕ ಬಾಬ್ರಿ ಮಸೀದಿ ಬಿದ್ದಮ್ಯಾಲೆ ವಳಗಿರೊ ಮೌಲವಿಗಳು ಸಾಬರ ಕೈಗೆ ತಗಂಡು ಅಂಗೆ ಮಾಡ್ಯವುರೆ. ನೀವ್ಯಲ್ಲ ಧರಮ ಪಾಲಿಸಿಯಲ್ಲಿ ವಗ್ಗಟ್ಟಾಗಿರಿ. ಧರಮ ಅಂತ ಹೇಳಿ ಕಳುಸ್ತನೆ. ಇವು ಬಂದು ಕಲ್ಲು ಬೀರ್ತವೆ. ಅಂತೂ ಈ ಸಾಬ್ರು ಆರೆಸ್ಸೆಸ್‍ಗಳಿಂದ ನಮಗೆ ನೆಮ್ಮದಿಯಿವಲ್ಲ ಹೇಳು.”
“ಹಿಂಗಾದ್ರೆ ಸಾಬ್ರು ಕತೆ ಮುಗಿತು ಬುಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...