Homeಅಂಕಣಗಳುಥೂತ್ತೇರಿ | ಯಾಹೂಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಜುಮ್ಮಿ ಮನೆಗೆ ಬಂದ ವಾಟಿಸ್ಸೆ.”
“ಇದೆನಕ್ಕ ರಂಗೋಲೆಲಿ ಗಾಡಿ ಚಕ್ರನೆ ಬರೆದಿದ್ದಿ” ಎಂದ.
“ಇಲ್ಲಿಗಂಟ ಬರಬ್ಯಾಡ ಅದರ್ವಳಗೆ ಕುತಗಂಡು ಮಾತಾಡು. ಅದ್ಕು ಮದ್ಲು ಅಲ್ಲಿ ಮಡಗಿರೊ ನೀರಲ್ಲಿ ಕೈ ಕಾಲು ತ್ವಳಕಂಡು ಬಾ. ಅಮ್ಯಾಲೆ ಆ ಬಾಯಿಕಟ್ಟ ಸರಿಯಾಗಾಯ್ಕೊ ಕೆಮ್ಮು ಬಂದ್ರೆ ಸೀನಿದ್ರೆ ಮುಸುರಿ ಮುಚಗಂಡು ಅಮ್ಯಾಲೆ ಕೈಯುಜ್ಜಕೊ” ಎಂದು ಜುಮ್ಮಿ ಹೇಳುತ್ತಿರುವಾಗ.
“ಭೇಷ್ ಕಣಕ್ಕ. ಎಷ್ಟೇ ಆಗ್ಲಿ ಜನಪತಿನಿಧಿ ನೀನು. ನಮ್ಮೂರ ಪಿಣರಾಯಿ ಕಣಕ್ಕ” ಎಂದ.
“ಪಿಣತೆರಾಯ ಅಂದ್ರೇನ್ಲ.”
“ಅವುನು ಕೇರಳದ ಚಿಪ್ ಮಿನಿಷ್ಟ್ರು ಕಣಕ್ಕ. ಕೊರೋನ ಯಂಗೆ ಕಂಟ್ರೊಲ್ ಮಾಡ್ಯವುನೆ ಅಂದ್ರೇ ಥೇಟ್ ನಿನ್ನ ತರನೆ ಮಾಡ್ಯವುನೆ ಕಣಕ್ಕ.”
“ಎಜ್ಜಾಟ್ಳಿ ಕರಟ್ ಕಣೊ ಉಗ್ರಿ. ಎಜುಕೇಟೆಡ್ ಪರಸನ್ ಅಂದ್ರೆ ಅವುನು. ಅವುನೇನಾರ ಪ್ರಧಾನಿಯಾಗಿದ್ರೆ ದೀಪ ಹಚ್ಚಿ ಜಾಗಟೆ ಬಡಿರಿ ಅಂತಿರಲಿಲ್ಲ. ಕರೋನ ಕಡಿಮೆ ಮಾಡಕ್ಕೆ ಏನು ಮಾಡಬೇಕು ಅದ್ ಮಾಡಿ ಅನ್ನೊನು.”
“ಮೋದಿ ದೀಪ ಹಚ್ಚಿ ಅಂದ ಮ್ಯಾಲೆ ಕಡಿಮ್ಯಾಗಬೇಕಿತ್ತಲವೆ” ಎಂದಳು ಜುಮ್ಮಿ.
“ದೀಪ ಹಚ್ಚಿದ್ರೆ ಕರೋನ ಕಡಿಮೆಯಾಯ್ತದೆ ಅಂತ ಅವುನೆಲ್ಲ ಹೇಳಿದ್ನಕ್ಕ. ದೀಪ ಹಚ್ಚಿ ಅಂದ ಅಷ್ಟೆಯ ಅದ್ಕೆ ನಮ್ಮೂರ ಮೇಷ್ಟ್ರು ಐದು ದೀಪ ಹಚ್ಚಿದ್ನಂತೆ.”
“ಅವುನ್ಯಾಕೆ ಐದು ದೀಪ ಹಚ್ಚಿದಾ.”
“ಅದು ಮದ್ಲೆ ಕಪಿ ಮುಂಡೆದಲವಾ. ಮೋದಿ ಹೇಳಿದ್ದು ತಲಿಗೊಂದು ದೀಪ ಅಂತ ತಿಳಕಂಡು ಅವುನು ಅವುನೆಂಡ್ತಿ ಮೂರು ಹೆಣ್ ಮಕ್ಕಳು ಸೇರಿ ತಲಿಗೊಂದು ದೀಪ ಹಚ್ಚಿದನಂತೆ.”
“ಮಕ್ಕಳಿಗೆ ಪಾಟ ಹೇಳೊ ಮುಂಡೆ ಮಗನೆ ಹಿಂಗಾದ್ರೆ ಇನ್ನ ದೇಸದ ಜನಗಳ ಕತಿಯೇನೂ.”
“ಇಂಥೊರಿಂದ್ಲೆಯ ಹಿಂದೂಗಳು ಸಾಬರು ಅಂತ ಬ್ಯಾರೆ ಬ್ಯಾರೆ ಆಯ್ತಾಯಿರದು.”
“ಅದೇನ್ಲ ಸಾಬರು ಗಲಾಟೆ” ಎಂದಳು ಜುಮ್ಮಿ.
“ಸಾಬರ ಕತೆ ಮುಗಿತು ಮುಗಿತು ಬುಡಕ್ಕ” ಎಂದ ವಾಟಿಸ್ಸೆ.
“ಅದ್ಯಾಕ್ಲ ಅಂಗಂತಿ.”
“ಇನ್ನೆನಕ್ಕ ಕೊರೋನ ಆದೊರಿಗೆ ಅವುಸ್ಥಿಕೊಡಕೋದೊರಿಗೆ ವಡುದು ಕಲ್ಲು ಬಿರತವೆ ಅಂದ್ರೆ ಅವು ಕತಿಯೇನೂ.”
“ಅವುಕೇನು ಮಲ್ಲಾಗ್ರು ಬಂದದ್ಲ.”
“ಬುದ್ದಿ ಕಡಿವೆಯಿದ್ದೊರಿಗೆ ಅಲವೆ ಮಲ್ಲಾಗ್ರು ಬರದು.”
“ಅದೇನಾರ ಆಗ್ಲಿ ಆ ಬಿಜೆಪಿಗಳಾಡದ್ಕೂ ಇವು ಮಾಡದ್ಕೂ ಸರಿಯಾಗ್ಯದೆ.”
“ನಿಜ ಕಣೊ ಉಗ್ರಿ ಈಗಾಗ್ಲೆ ಡೆಲ್ಲಿ ಮಸೀದಿ ವಳಗಿಂದ ತಂದು ಕರೋನ ಹರಡತ ಅವುರೆ ಸಾಬ್ರು ಊರಿಗೆ ಸೇರಸಬ್ಯಾಡಿ ಅಂತ ಬಿಜೆಪಿ ಬಡ್ಡೆತ್ತವು ಹೇಳಿಕೊಂಡು ತಿರುಗ್ತಾ ಅವೆ. ಅವುರಂಗೇಳಕ್ಕೂ ಇವುರಿಂಗೆ ಮಾಡಕ್ಕೂ ಸರಿಯಾಗ್ಯದೆ ಬುಡು.”
“ಮುಂದೆ ಕತಿಯೇನಯ್ಯಾ.”
“ಮುಂದೇನು ಅವುರ ಅಂಗೆಯ ಈ ಸಾಬರು ಅಂಗೆಯ ಅನ್ನಂಗಾಗಿ ಸಾಬರ ಪರ ಮಾತಡಕ್ಕೆ ಯಾರು ಇಲ್ದಂಗಾಯ್ತದೆ.”
“ನಾವು ಮಮನುಸರಾಗಿರತಿವಿ ಸಾಬರು ಮಾತ್ರ ಸಾಬರಾಗೆ ಇರತರೆ. ಅವನೋಡಂಗೆಯ, ಹೆಂಗಸರ್ಯಲ್ಲ ಬುರುಖಾ ಹಾಯ್ಕಂಡು. ಗಂಡಸರ್ಯಲ್ಲ ಗಡ್ಡ ಬುಟಗಂಡು ಕಣಕಾಲಗಾಟ ಪೈಜಾಮಕಂಡು ಟೋಪಿ ಹಾಯ್ಕಂಡು ನೋಡಿದೇಟಿಗೆ ಪಕ್ಕಾ ಸಾಬಿ ಅನ್ನಂಗೆ ಕಾಣ್ತರಪ್ಪ.”
“ಮದ್ಲಂಗಿರಲಿಲ್ಲ ಅಲವೆ.”
“ಊಕಣಕ್ಕ ಬಾಬ್ರಿ ಮಸೀದಿ ಬಿದ್ದಮ್ಯಾಲೆ ವಳಗಿರೊ ಮೌಲವಿಗಳು ಸಾಬರ ಕೈಗೆ ತಗಂಡು ಅಂಗೆ ಮಾಡ್ಯವುರೆ. ನೀವ್ಯಲ್ಲ ಧರಮ ಪಾಲಿಸಿಯಲ್ಲಿ ವಗ್ಗಟ್ಟಾಗಿರಿ. ಧರಮ ಅಂತ ಹೇಳಿ ಕಳುಸ್ತನೆ. ಇವು ಬಂದು ಕಲ್ಲು ಬೀರ್ತವೆ. ಅಂತೂ ಈ ಸಾಬ್ರು ಆರೆಸ್ಸೆಸ್‍ಗಳಿಂದ ನಮಗೆ ನೆಮ್ಮದಿಯಿವಲ್ಲ ಹೇಳು.”
“ಹಿಂಗಾದ್ರೆ ಸಾಬ್ರು ಕತೆ ಮುಗಿತು ಬುಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...