Homeಅಂಕಣಗಳುಕಟ್ಟೆಪುರಾಣ: ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ

ಕಟ್ಟೆಪುರಾಣ: ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ

“ಅದೆ ಕಂಡ್ಳ ನಾನೇಳಿದ್ದು, ಊರಲ್ಲಿ ಪ್ರಾಯಕ್ಕೆ ಬಂದೆದ್ದೆ ಯಲ್ಲ ಹುಡುಗ್ರು ಬೆಂಗಳೂರು ಸೇರಿಕಂಡಿದ್ರು. ನೋಡೀಗ ಯಲ್ಲ ಬಂದವೆ ಯವಸಾಯ ಮಾಡ್ತ ಅವೆ ಊರಿಗೇ ಒಂದು ಕಳೆ ಬಂದದೆ.”

- Advertisement -
- Advertisement -

ವಾಟಿಸ್ಸೆ ಬಂದ ಕೂಡಲೆ ಜುಮ್ಮಿ ಏನೋ ಹೊಳೆದಂತೆ.

“ಲೇ ವಾಟಿಸ್ಸೆ ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ” ಎಂದಳು.

“ನಿನಿಗೇನಾಯ್ತಕ್ಕ ಇಂತ ಮಾತಾಡ್ತೀ.”

“ಪ್ರಪಂಚನೆ ಹೆದರಿಕಂಡು ಕುಂತದೆ ಇವುಳಿಗೆ ವಳ್ಳೆದಾಯ್ತಂತೆ ಇದಕೇನೇಳ್ತಿಯಪ್ಪ” ಎಂದ ಉಗ್ರಿ.

“ಅಕ್ಕನೆ ಹೇಳ್ತಳೆ ಬುಡು. ಅದೇನೇಳಕ್ಕ.”

“ನಮ್ಮೂರು ಮಂದ್ಲಿದ್ದಂಗಾಯ್ತು ಕಂಡ್ಳ.”

“ಯಂಗೇ ಅಂತ.”

“ಹೆಚ್ಚುಕಮ್ಮಿ ಇಪ್ಪತ್ತು ಮನೆ ಬಾಗಲಾಕಿದ್ದೊ ಕಂಡ್ಳ, ಅವುರ್ಯಲ್ಲ ಬೆಂಗಳೂರು ಸೇರಿಕಂಡಿದ್ರು. ಈಗ್ಯಲ್ಲ ಬಂದು ಬಾಗಲತಗದವುರೆ ಕತ್ಲೆ ಮನೆ ಬೆಳಕಾದೊ.”

“ಓಟರ್‍ಲಿಸ್ಟು ಪಿಲಪ್ಪಾದ ರಾಜಕಾರಣಿಯಂಗೆ ಖುಷಿಯಾಗಿದ್ದಿಯಲ್ಲಕ್ಕ. ಜನಕೆ ಇದ್ದ ಜಾಗದಲ್ಲಿ ಕ್ಯಲಸಿರಲಿಲ್ಲ. ಯಲ್ಲ ಬೆಂಗಳೂರಿಗೋಗಿದ್ರು, ಕರೋನಾ ಕಾಯಿಲಗೆ ಹೆದರಿ ತಿರಗ ಊರಿಗೆ ಬಂದವುರೆ ಅಷ್ಟೆಯ.”

“ಅದೆ ಕಂಡ್ಳ ನಾನೇಳಿದ್ದು, ಊರಲ್ಲಿ ಪ್ರಾಯಕ್ಕೆ ಬಂದೆದ್ದೆ ಯಲ್ಲ ಹುಡುಗ್ರು ಬೆಂಗಳೂರು ಸೇರಿಕಂಡಿದ್ರು. ನೋಡೀಗ ಯಲ್ಲ ಬಂದವೆ ಯವಸಾಯ ಮಾಡ್ತ ಅವೆ ಊರಿಗೇ ಒಂದು ಕಳೆ ಬಂದದೆ.”

“ಊರಿಗೆ ಕಳೆ ಬರದು ದುಡಿಯೋಕೈಗೆ ಕ್ಯಲಸಿದ್ದಾಗ ಕಣಕ್ಕ. ಕ್ಯಲಸಿಲ್ದೊರ ಮಕ ನೋಡಕ್ಕಾದತೆ?”

“ಅಲ್ಲಾ ಕಣೊ ವಾಟಿಸ್ಸೆ ರಾಜಕಾರಣಿಗಳಿಗ್ಯಾವ ಕ್ಯಲಸದೊ ಆದ್ರು ಅವುರ ಮಕ ನೋಡು ಯಂಗೆ ಲಕಲಕ ಅಂತ ವಳಿತದೆ” ಎಂದ ಉಗ್ರಿ.

“ಅದೇನೊ ನಿಜ ಆ ಸಿ.ಟಿ ರವಿ ಅನ್ನೊ ಮಿನಿಸ್ಟ್ರಿಗೆ ಪಾಪ ಏನೂ ಕ್ಯಲಸಿಲ್ಲ ಅದ್ಕೆ ಲೇಖನ ಬರಿತ ಕುಂತವುನೆ.”

“ಏನು ಬರದವುನೆ.”

“ನಾವು ಚೀಣಾ ದೇಸದ ಪದಾರ್ಥ ಬಳಸಬಾರ್ದು ನಾವೇ ತಯಾರು ಮಾಡಿಕಬೇಕು ಅಂತ ಬರದವುನೆ.”

“ಅಲ್ಲಾ ಕಣೊ ವಾಟಿಸ್ಸೆ ಅವುನ ಮನೆಲಿರೊ ಅರ್ದಕ್ಕರ್ದ ಪದಾರ್ಥ ಚೀಣಾ ದೇಸದ ಪದಾರ್ಥ. ಅಂತದ್ರಲ್ಲಿ ಲೇಖನ ಬರಿತನೆ ಅಂದ್ರೆ, ಅವುನ ಮನೆಲಿರೊ ಚೀಣಾ ದೇಸದ ಪದಾರ್ಥವ ವರಿಕಾಕಿ ಬೆಂಕಿ ಹಚ್ಚಿ ಅಮ್ಯಾಲೆ ಲೇಖನ ಪಾಕನ ಬರಿಬೇಕಲವೇನೊ.”

“ಬಿಜೆಪಿಗಳೇ ಅಂಗಲವೇನೊ, ಹೇಳದೊಂದು ಮಾಡದೊಂದು. ಯಲ್ಲಾನು ನಾವೇ ತಯಾರು ಮಾಡಿಕಬೇಕು ಅಂದ್ರೆ ಈ ಚೆಡ್ಡಿಗಳ ಕೈಲಿ ಏನಾಯ್ತದಪ್ಪಾ ಅಂದ್ರೇ, ಅವು ಕುಂಕುಮ ಗಂಧವ ಅವೇ ತಯಾರಿಸತ್ತವೆ? ಮಡಿ ಪಂಚೆ, ಟವಲ್ಲು, ಗಂಟೆ, ಮಂಗಳಾರತಿ ತಟ್ಟೆ ಕರ್ಪೂರನು ಬೇಕಾದ್ರೆ ಮಾಡಿಕತ್ತವೆ. ಇನ್ನುಳದಂಗೆ ಪೂಜಾರಿ ಕೈಲಿರೊ ಮೊಬೈಲು, ಗಡಿಯಾರ, ಮಂಗಳಾರತಿ ತಟ್ಟಿಗೆ ಬಿದ್ದ ಕಾಸಿನ ಲೆಕ್ಕ ಬರಿಯೋ ಪೆನ್ನೂ ಕೂಡ ಚೀಣಾ ದೇಸದ್ದೆಯಪ್ಪ ಅಂತದರಲ್ಲಿ ಚೀಣಾ ದೇಸದಿಂದ ಬರೋ ಪದಾರ್ಥವ ತಾವೇ ತಯಾರಿಸಿಕೊಳಕ್ಕಾದತೆ.”

“ಸಿ.ಟಿ ರವಿ ಅಂದ್ರೆ ಅವುನ್ಯಾರ್ಲ.”

“ಇದೇನಕ್ಕ ಹಿಂಕೇಳ್ತಿ ಅವುನು ಚಿಕ್ಕಮಗಳೂರು ಕಡೆ ರಾಜಕಾರಣಿ. ಬಾಬಾಬುಡನ್‍ಗಿರಿಯ ದತ್ತಪೀಠ ಮಾಡಕ್ಕೊಗಿ ಗಲಾಟೆ ಎಬ್ಬಿಸಿ ಎಮ್ಮೆಲ್ಲೆ ಆದೋನು. ಈಗ ಮಂತ್ರಿಯಾಗ್ಯವುನೆ, ಕರೋನಾ ಕಾಯ್ಲದ ಕಾರಣಕ್ಕೆ ಕ್ಯಲಸಕ್ಕೆ ಬಾರದೋನಂಗಾಗ್ಯವುನೆ.”

“ಅದ್ಯಾಕಂಗಾದ.”

“ಅವುನೊಬ್ಬನೆ ಅಂಗಾಗಿಲ್ಲ ಕಣಕ್ಕ ಇಡೀ ಎಡೂರಪ್ಪನ ಸಂಪುಟವೇ ಅಂಗಾಗ್ಯದೆ. ಮಂತ್ರಿಗಳಾಗಿ ಮ್ಯರಿತ ಸನ್ಮಾನ ಮ್ಯರವಣಿಗೆ ದೇಸಭಕ್ತಿ ಬಾಸಣ ಮಾಡಿಕಂಡು ಮೋದಿ ಹೊಗಳಿಕಂಡು ಮ್ಯರಿಯನ ಅಂತ ಇದ್ದೊರಿಗೆ ಶನಿ ವಕ್ರಿಸಿದಂಗೆ ಕರೋನಾ ವಕ್ರಿಸಿಬುಡ್ತು ಹಂಗಾಗಿ ಯಲ್ಲ ಡಲ್ಲಾಗ್ಯವುರೆ.”

“ಎಡೂರಪ್ಪನೆ ಡಲ್ಲಾಗ್ಯವುರೆ.”

“ಅವುನ್ಯಾವತ್ತು ಲವುಲವಿಕೆ ಆಗಿದ್ನೊ ಪಾಪ ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಪೈಲ್ಸ್ ತರ ಶೋಭಾ ಕಾಡಿದ್ಲು, ಈಗ ಕರೋನಾ ಕಾಡ್ತಾ ಅದೆ. ಮುಖ್ಯಮಂತ್ರಿ ಪದವಿಯ ಎಂಜಾಯ್ ಮಾಡಕ್ಕೆ ಆಗಲಿಲ್ಲ.”

“ಮುಖ್ಯಮಂತ್ರಿ ಪದವಿಯ ಎಂಜಾಯ್ ಮಾಡಿದೋರು ಅಂದ್ರೆ ಸಿದ್ದರಾಮಯ್ಯ, ಕುಮಾರಣ್ಣ ಕಣೊ.”

“ಸಿದ್ದರಾಮಯ್ಯನಿಗಿಂತ ಕುಮಾರಣ್ಣ ಕಣೊ ಎಂಜಾಯ್ ಮಾಡಿದ್ದು.”

“ಅದ್ಯಂಗ್ಲಾ ಎಂದಳು ಜುಮ್ಮಿ.”

“ಕುಮಾರಣ್ಣ ಕ್ಯಲಸದ ಒತ್ತಡ ಜಾಸ್ತಿಯಾಯ್ತು ಅಂದ್ರೆ ರಾಧಿಕನ ಮನೆಗೋಗಿ ಮನಗಿಬುಡತಿದ್ದ. ಆಗ ಎಂ.ಪಿ ಪ್ರಕಾಸಿದ್ರು ಯಲ್ಲನು ನೋಡಿಕಳರು. ಈಗ ಹೋಟ್ಳಲ್ಲಿದ್ದ ಕಣಕ್ಕ ಮುಖ್ಯಮಂತ್ರಿಯಾದೊನು ಹೋಟ್ಳಲ್ಲಿರತರೇನಕ್ಕ ಅದ್ಕೆ ಪವರ್ ಕಳಕಂಡ.”

“ಆ ಹೋಟ್ಳು ರೂಮು ದೆಸೆರೂಮಂತೆ ಕಣೊ. ಅದರಲ್ಲಿದ್ದಾಗ ಮುಖ್ಯಮಂತ್ರಿಯಾದೆ ಅದಕೆ ಅದರೊಳಗಿದ್ದಿನಿ ಅಂದಿದ್ದ.”

“ಸರಿಯಪ್ಪ ಆ ರೂಮಲ್ಲೆ ಇದ್ದಾಗ ಮುಖ್ಯಮಂತ್ರಿಗಿರಿ ಕಳಕಂಡನಲ್ಲ ಅದಕೇನೇಳ್ತನೆ.”

“ಅದನ್ನ ತಗದು ಶಾಸಕರ ಮ್ಯಾಲಾಕ್ತನೆ. ಏನೇ ಆಗ್ಲಿ ಕುಮಾರಣ್ಣ ಅವುರ್ಯಲ್ಲ ಈ ಬಿಜೆಪಿಗಳಷ್ಟು ಕ್ಯಟ್ಟೊರಲ್ಲ ಕಣೊ ಈ ಮುಂಡೆ ಮಕ್ಕಳು ಭ್ಯಳೆಮ್ಯಾಲೆ ಎರಗತಾಯಿರೋ ಮಿಡತೆ ದಂಡಿದ್ದಂಗೆ. ಯಲ್ಲನು ವಕ್ಕತಿಂದ ಸರ್ವನಾಶ ಮಾಡ್ತರೆ ನೋಡ್ತಾಯಿರು.”

“ !?


ಇದನ್ನು ಓದಿ:

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....