Homeಅಂಕಣಗಳುಕಟ್ಟೆಪುರಾಣ: ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ

ಕಟ್ಟೆಪುರಾಣ: ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ

“ಅದೆ ಕಂಡ್ಳ ನಾನೇಳಿದ್ದು, ಊರಲ್ಲಿ ಪ್ರಾಯಕ್ಕೆ ಬಂದೆದ್ದೆ ಯಲ್ಲ ಹುಡುಗ್ರು ಬೆಂಗಳೂರು ಸೇರಿಕಂಡಿದ್ರು. ನೋಡೀಗ ಯಲ್ಲ ಬಂದವೆ ಯವಸಾಯ ಮಾಡ್ತ ಅವೆ ಊರಿಗೇ ಒಂದು ಕಳೆ ಬಂದದೆ.”

- Advertisement -
- Advertisement -

ವಾಟಿಸ್ಸೆ ಬಂದ ಕೂಡಲೆ ಜುಮ್ಮಿ ಏನೋ ಹೊಳೆದಂತೆ.

“ಲೇ ವಾಟಿಸ್ಸೆ ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ” ಎಂದಳು.

“ನಿನಿಗೇನಾಯ್ತಕ್ಕ ಇಂತ ಮಾತಾಡ್ತೀ.”

“ಪ್ರಪಂಚನೆ ಹೆದರಿಕಂಡು ಕುಂತದೆ ಇವುಳಿಗೆ ವಳ್ಳೆದಾಯ್ತಂತೆ ಇದಕೇನೇಳ್ತಿಯಪ್ಪ” ಎಂದ ಉಗ್ರಿ.

“ಅಕ್ಕನೆ ಹೇಳ್ತಳೆ ಬುಡು. ಅದೇನೇಳಕ್ಕ.”

“ನಮ್ಮೂರು ಮಂದ್ಲಿದ್ದಂಗಾಯ್ತು ಕಂಡ್ಳ.”

“ಯಂಗೇ ಅಂತ.”

“ಹೆಚ್ಚುಕಮ್ಮಿ ಇಪ್ಪತ್ತು ಮನೆ ಬಾಗಲಾಕಿದ್ದೊ ಕಂಡ್ಳ, ಅವುರ್ಯಲ್ಲ ಬೆಂಗಳೂರು ಸೇರಿಕಂಡಿದ್ರು. ಈಗ್ಯಲ್ಲ ಬಂದು ಬಾಗಲತಗದವುರೆ ಕತ್ಲೆ ಮನೆ ಬೆಳಕಾದೊ.”

“ಓಟರ್‍ಲಿಸ್ಟು ಪಿಲಪ್ಪಾದ ರಾಜಕಾರಣಿಯಂಗೆ ಖುಷಿಯಾಗಿದ್ದಿಯಲ್ಲಕ್ಕ. ಜನಕೆ ಇದ್ದ ಜಾಗದಲ್ಲಿ ಕ್ಯಲಸಿರಲಿಲ್ಲ. ಯಲ್ಲ ಬೆಂಗಳೂರಿಗೋಗಿದ್ರು, ಕರೋನಾ ಕಾಯಿಲಗೆ ಹೆದರಿ ತಿರಗ ಊರಿಗೆ ಬಂದವುರೆ ಅಷ್ಟೆಯ.”

“ಅದೆ ಕಂಡ್ಳ ನಾನೇಳಿದ್ದು, ಊರಲ್ಲಿ ಪ್ರಾಯಕ್ಕೆ ಬಂದೆದ್ದೆ ಯಲ್ಲ ಹುಡುಗ್ರು ಬೆಂಗಳೂರು ಸೇರಿಕಂಡಿದ್ರು. ನೋಡೀಗ ಯಲ್ಲ ಬಂದವೆ ಯವಸಾಯ ಮಾಡ್ತ ಅವೆ ಊರಿಗೇ ಒಂದು ಕಳೆ ಬಂದದೆ.”

“ಊರಿಗೆ ಕಳೆ ಬರದು ದುಡಿಯೋಕೈಗೆ ಕ್ಯಲಸಿದ್ದಾಗ ಕಣಕ್ಕ. ಕ್ಯಲಸಿಲ್ದೊರ ಮಕ ನೋಡಕ್ಕಾದತೆ?”

“ಅಲ್ಲಾ ಕಣೊ ವಾಟಿಸ್ಸೆ ರಾಜಕಾರಣಿಗಳಿಗ್ಯಾವ ಕ್ಯಲಸದೊ ಆದ್ರು ಅವುರ ಮಕ ನೋಡು ಯಂಗೆ ಲಕಲಕ ಅಂತ ವಳಿತದೆ” ಎಂದ ಉಗ್ರಿ.

“ಅದೇನೊ ನಿಜ ಆ ಸಿ.ಟಿ ರವಿ ಅನ್ನೊ ಮಿನಿಸ್ಟ್ರಿಗೆ ಪಾಪ ಏನೂ ಕ್ಯಲಸಿಲ್ಲ ಅದ್ಕೆ ಲೇಖನ ಬರಿತ ಕುಂತವುನೆ.”

“ಏನು ಬರದವುನೆ.”

“ನಾವು ಚೀಣಾ ದೇಸದ ಪದಾರ್ಥ ಬಳಸಬಾರ್ದು ನಾವೇ ತಯಾರು ಮಾಡಿಕಬೇಕು ಅಂತ ಬರದವುನೆ.”

“ಅಲ್ಲಾ ಕಣೊ ವಾಟಿಸ್ಸೆ ಅವುನ ಮನೆಲಿರೊ ಅರ್ದಕ್ಕರ್ದ ಪದಾರ್ಥ ಚೀಣಾ ದೇಸದ ಪದಾರ್ಥ. ಅಂತದ್ರಲ್ಲಿ ಲೇಖನ ಬರಿತನೆ ಅಂದ್ರೆ, ಅವುನ ಮನೆಲಿರೊ ಚೀಣಾ ದೇಸದ ಪದಾರ್ಥವ ವರಿಕಾಕಿ ಬೆಂಕಿ ಹಚ್ಚಿ ಅಮ್ಯಾಲೆ ಲೇಖನ ಪಾಕನ ಬರಿಬೇಕಲವೇನೊ.”

“ಬಿಜೆಪಿಗಳೇ ಅಂಗಲವೇನೊ, ಹೇಳದೊಂದು ಮಾಡದೊಂದು. ಯಲ್ಲಾನು ನಾವೇ ತಯಾರು ಮಾಡಿಕಬೇಕು ಅಂದ್ರೆ ಈ ಚೆಡ್ಡಿಗಳ ಕೈಲಿ ಏನಾಯ್ತದಪ್ಪಾ ಅಂದ್ರೇ, ಅವು ಕುಂಕುಮ ಗಂಧವ ಅವೇ ತಯಾರಿಸತ್ತವೆ? ಮಡಿ ಪಂಚೆ, ಟವಲ್ಲು, ಗಂಟೆ, ಮಂಗಳಾರತಿ ತಟ್ಟೆ ಕರ್ಪೂರನು ಬೇಕಾದ್ರೆ ಮಾಡಿಕತ್ತವೆ. ಇನ್ನುಳದಂಗೆ ಪೂಜಾರಿ ಕೈಲಿರೊ ಮೊಬೈಲು, ಗಡಿಯಾರ, ಮಂಗಳಾರತಿ ತಟ್ಟಿಗೆ ಬಿದ್ದ ಕಾಸಿನ ಲೆಕ್ಕ ಬರಿಯೋ ಪೆನ್ನೂ ಕೂಡ ಚೀಣಾ ದೇಸದ್ದೆಯಪ್ಪ ಅಂತದರಲ್ಲಿ ಚೀಣಾ ದೇಸದಿಂದ ಬರೋ ಪದಾರ್ಥವ ತಾವೇ ತಯಾರಿಸಿಕೊಳಕ್ಕಾದತೆ.”

“ಸಿ.ಟಿ ರವಿ ಅಂದ್ರೆ ಅವುನ್ಯಾರ್ಲ.”

“ಇದೇನಕ್ಕ ಹಿಂಕೇಳ್ತಿ ಅವುನು ಚಿಕ್ಕಮಗಳೂರು ಕಡೆ ರಾಜಕಾರಣಿ. ಬಾಬಾಬುಡನ್‍ಗಿರಿಯ ದತ್ತಪೀಠ ಮಾಡಕ್ಕೊಗಿ ಗಲಾಟೆ ಎಬ್ಬಿಸಿ ಎಮ್ಮೆಲ್ಲೆ ಆದೋನು. ಈಗ ಮಂತ್ರಿಯಾಗ್ಯವುನೆ, ಕರೋನಾ ಕಾಯ್ಲದ ಕಾರಣಕ್ಕೆ ಕ್ಯಲಸಕ್ಕೆ ಬಾರದೋನಂಗಾಗ್ಯವುನೆ.”

“ಅದ್ಯಾಕಂಗಾದ.”

“ಅವುನೊಬ್ಬನೆ ಅಂಗಾಗಿಲ್ಲ ಕಣಕ್ಕ ಇಡೀ ಎಡೂರಪ್ಪನ ಸಂಪುಟವೇ ಅಂಗಾಗ್ಯದೆ. ಮಂತ್ರಿಗಳಾಗಿ ಮ್ಯರಿತ ಸನ್ಮಾನ ಮ್ಯರವಣಿಗೆ ದೇಸಭಕ್ತಿ ಬಾಸಣ ಮಾಡಿಕಂಡು ಮೋದಿ ಹೊಗಳಿಕಂಡು ಮ್ಯರಿಯನ ಅಂತ ಇದ್ದೊರಿಗೆ ಶನಿ ವಕ್ರಿಸಿದಂಗೆ ಕರೋನಾ ವಕ್ರಿಸಿಬುಡ್ತು ಹಂಗಾಗಿ ಯಲ್ಲ ಡಲ್ಲಾಗ್ಯವುರೆ.”

“ಎಡೂರಪ್ಪನೆ ಡಲ್ಲಾಗ್ಯವುರೆ.”

“ಅವುನ್ಯಾವತ್ತು ಲವುಲವಿಕೆ ಆಗಿದ್ನೊ ಪಾಪ ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಪೈಲ್ಸ್ ತರ ಶೋಭಾ ಕಾಡಿದ್ಲು, ಈಗ ಕರೋನಾ ಕಾಡ್ತಾ ಅದೆ. ಮುಖ್ಯಮಂತ್ರಿ ಪದವಿಯ ಎಂಜಾಯ್ ಮಾಡಕ್ಕೆ ಆಗಲಿಲ್ಲ.”

“ಮುಖ್ಯಮಂತ್ರಿ ಪದವಿಯ ಎಂಜಾಯ್ ಮಾಡಿದೋರು ಅಂದ್ರೆ ಸಿದ್ದರಾಮಯ್ಯ, ಕುಮಾರಣ್ಣ ಕಣೊ.”

“ಸಿದ್ದರಾಮಯ್ಯನಿಗಿಂತ ಕುಮಾರಣ್ಣ ಕಣೊ ಎಂಜಾಯ್ ಮಾಡಿದ್ದು.”

“ಅದ್ಯಂಗ್ಲಾ ಎಂದಳು ಜುಮ್ಮಿ.”

“ಕುಮಾರಣ್ಣ ಕ್ಯಲಸದ ಒತ್ತಡ ಜಾಸ್ತಿಯಾಯ್ತು ಅಂದ್ರೆ ರಾಧಿಕನ ಮನೆಗೋಗಿ ಮನಗಿಬುಡತಿದ್ದ. ಆಗ ಎಂ.ಪಿ ಪ್ರಕಾಸಿದ್ರು ಯಲ್ಲನು ನೋಡಿಕಳರು. ಈಗ ಹೋಟ್ಳಲ್ಲಿದ್ದ ಕಣಕ್ಕ ಮುಖ್ಯಮಂತ್ರಿಯಾದೊನು ಹೋಟ್ಳಲ್ಲಿರತರೇನಕ್ಕ ಅದ್ಕೆ ಪವರ್ ಕಳಕಂಡ.”

“ಆ ಹೋಟ್ಳು ರೂಮು ದೆಸೆರೂಮಂತೆ ಕಣೊ. ಅದರಲ್ಲಿದ್ದಾಗ ಮುಖ್ಯಮಂತ್ರಿಯಾದೆ ಅದಕೆ ಅದರೊಳಗಿದ್ದಿನಿ ಅಂದಿದ್ದ.”

“ಸರಿಯಪ್ಪ ಆ ರೂಮಲ್ಲೆ ಇದ್ದಾಗ ಮುಖ್ಯಮಂತ್ರಿಗಿರಿ ಕಳಕಂಡನಲ್ಲ ಅದಕೇನೇಳ್ತನೆ.”

“ಅದನ್ನ ತಗದು ಶಾಸಕರ ಮ್ಯಾಲಾಕ್ತನೆ. ಏನೇ ಆಗ್ಲಿ ಕುಮಾರಣ್ಣ ಅವುರ್ಯಲ್ಲ ಈ ಬಿಜೆಪಿಗಳಷ್ಟು ಕ್ಯಟ್ಟೊರಲ್ಲ ಕಣೊ ಈ ಮುಂಡೆ ಮಕ್ಕಳು ಭ್ಯಳೆಮ್ಯಾಲೆ ಎರಗತಾಯಿರೋ ಮಿಡತೆ ದಂಡಿದ್ದಂಗೆ. ಯಲ್ಲನು ವಕ್ಕತಿಂದ ಸರ್ವನಾಶ ಮಾಡ್ತರೆ ನೋಡ್ತಾಯಿರು.”

“ !?


ಇದನ್ನು ಓದಿ:

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...