Homeಅಂಕಣಗಳುಕಟ್ಟೆಪುರಾಣ: ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ

ಕಟ್ಟೆಪುರಾಣ: ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ

“ಅದೆ ಕಂಡ್ಳ ನಾನೇಳಿದ್ದು, ಊರಲ್ಲಿ ಪ್ರಾಯಕ್ಕೆ ಬಂದೆದ್ದೆ ಯಲ್ಲ ಹುಡುಗ್ರು ಬೆಂಗಳೂರು ಸೇರಿಕಂಡಿದ್ರು. ನೋಡೀಗ ಯಲ್ಲ ಬಂದವೆ ಯವಸಾಯ ಮಾಡ್ತ ಅವೆ ಊರಿಗೇ ಒಂದು ಕಳೆ ಬಂದದೆ.”

- Advertisement -
- Advertisement -

ವಾಟಿಸ್ಸೆ ಬಂದ ಕೂಡಲೆ ಜುಮ್ಮಿ ಏನೋ ಹೊಳೆದಂತೆ.

“ಲೇ ವಾಟಿಸ್ಸೆ ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ” ಎಂದಳು.

“ನಿನಿಗೇನಾಯ್ತಕ್ಕ ಇಂತ ಮಾತಾಡ್ತೀ.”

“ಪ್ರಪಂಚನೆ ಹೆದರಿಕಂಡು ಕುಂತದೆ ಇವುಳಿಗೆ ವಳ್ಳೆದಾಯ್ತಂತೆ ಇದಕೇನೇಳ್ತಿಯಪ್ಪ” ಎಂದ ಉಗ್ರಿ.

“ಅಕ್ಕನೆ ಹೇಳ್ತಳೆ ಬುಡು. ಅದೇನೇಳಕ್ಕ.”

“ನಮ್ಮೂರು ಮಂದ್ಲಿದ್ದಂಗಾಯ್ತು ಕಂಡ್ಳ.”

“ಯಂಗೇ ಅಂತ.”

“ಹೆಚ್ಚುಕಮ್ಮಿ ಇಪ್ಪತ್ತು ಮನೆ ಬಾಗಲಾಕಿದ್ದೊ ಕಂಡ್ಳ, ಅವುರ್ಯಲ್ಲ ಬೆಂಗಳೂರು ಸೇರಿಕಂಡಿದ್ರು. ಈಗ್ಯಲ್ಲ ಬಂದು ಬಾಗಲತಗದವುರೆ ಕತ್ಲೆ ಮನೆ ಬೆಳಕಾದೊ.”

“ಓಟರ್‍ಲಿಸ್ಟು ಪಿಲಪ್ಪಾದ ರಾಜಕಾರಣಿಯಂಗೆ ಖುಷಿಯಾಗಿದ್ದಿಯಲ್ಲಕ್ಕ. ಜನಕೆ ಇದ್ದ ಜಾಗದಲ್ಲಿ ಕ್ಯಲಸಿರಲಿಲ್ಲ. ಯಲ್ಲ ಬೆಂಗಳೂರಿಗೋಗಿದ್ರು, ಕರೋನಾ ಕಾಯಿಲಗೆ ಹೆದರಿ ತಿರಗ ಊರಿಗೆ ಬಂದವುರೆ ಅಷ್ಟೆಯ.”

“ಅದೆ ಕಂಡ್ಳ ನಾನೇಳಿದ್ದು, ಊರಲ್ಲಿ ಪ್ರಾಯಕ್ಕೆ ಬಂದೆದ್ದೆ ಯಲ್ಲ ಹುಡುಗ್ರು ಬೆಂಗಳೂರು ಸೇರಿಕಂಡಿದ್ರು. ನೋಡೀಗ ಯಲ್ಲ ಬಂದವೆ ಯವಸಾಯ ಮಾಡ್ತ ಅವೆ ಊರಿಗೇ ಒಂದು ಕಳೆ ಬಂದದೆ.”

“ಊರಿಗೆ ಕಳೆ ಬರದು ದುಡಿಯೋಕೈಗೆ ಕ್ಯಲಸಿದ್ದಾಗ ಕಣಕ್ಕ. ಕ್ಯಲಸಿಲ್ದೊರ ಮಕ ನೋಡಕ್ಕಾದತೆ?”

“ಅಲ್ಲಾ ಕಣೊ ವಾಟಿಸ್ಸೆ ರಾಜಕಾರಣಿಗಳಿಗ್ಯಾವ ಕ್ಯಲಸದೊ ಆದ್ರು ಅವುರ ಮಕ ನೋಡು ಯಂಗೆ ಲಕಲಕ ಅಂತ ವಳಿತದೆ” ಎಂದ ಉಗ್ರಿ.

“ಅದೇನೊ ನಿಜ ಆ ಸಿ.ಟಿ ರವಿ ಅನ್ನೊ ಮಿನಿಸ್ಟ್ರಿಗೆ ಪಾಪ ಏನೂ ಕ್ಯಲಸಿಲ್ಲ ಅದ್ಕೆ ಲೇಖನ ಬರಿತ ಕುಂತವುನೆ.”

“ಏನು ಬರದವುನೆ.”

“ನಾವು ಚೀಣಾ ದೇಸದ ಪದಾರ್ಥ ಬಳಸಬಾರ್ದು ನಾವೇ ತಯಾರು ಮಾಡಿಕಬೇಕು ಅಂತ ಬರದವುನೆ.”

“ಅಲ್ಲಾ ಕಣೊ ವಾಟಿಸ್ಸೆ ಅವುನ ಮನೆಲಿರೊ ಅರ್ದಕ್ಕರ್ದ ಪದಾರ್ಥ ಚೀಣಾ ದೇಸದ ಪದಾರ್ಥ. ಅಂತದ್ರಲ್ಲಿ ಲೇಖನ ಬರಿತನೆ ಅಂದ್ರೆ, ಅವುನ ಮನೆಲಿರೊ ಚೀಣಾ ದೇಸದ ಪದಾರ್ಥವ ವರಿಕಾಕಿ ಬೆಂಕಿ ಹಚ್ಚಿ ಅಮ್ಯಾಲೆ ಲೇಖನ ಪಾಕನ ಬರಿಬೇಕಲವೇನೊ.”

“ಬಿಜೆಪಿಗಳೇ ಅಂಗಲವೇನೊ, ಹೇಳದೊಂದು ಮಾಡದೊಂದು. ಯಲ್ಲಾನು ನಾವೇ ತಯಾರು ಮಾಡಿಕಬೇಕು ಅಂದ್ರೆ ಈ ಚೆಡ್ಡಿಗಳ ಕೈಲಿ ಏನಾಯ್ತದಪ್ಪಾ ಅಂದ್ರೇ, ಅವು ಕುಂಕುಮ ಗಂಧವ ಅವೇ ತಯಾರಿಸತ್ತವೆ? ಮಡಿ ಪಂಚೆ, ಟವಲ್ಲು, ಗಂಟೆ, ಮಂಗಳಾರತಿ ತಟ್ಟೆ ಕರ್ಪೂರನು ಬೇಕಾದ್ರೆ ಮಾಡಿಕತ್ತವೆ. ಇನ್ನುಳದಂಗೆ ಪೂಜಾರಿ ಕೈಲಿರೊ ಮೊಬೈಲು, ಗಡಿಯಾರ, ಮಂಗಳಾರತಿ ತಟ್ಟಿಗೆ ಬಿದ್ದ ಕಾಸಿನ ಲೆಕ್ಕ ಬರಿಯೋ ಪೆನ್ನೂ ಕೂಡ ಚೀಣಾ ದೇಸದ್ದೆಯಪ್ಪ ಅಂತದರಲ್ಲಿ ಚೀಣಾ ದೇಸದಿಂದ ಬರೋ ಪದಾರ್ಥವ ತಾವೇ ತಯಾರಿಸಿಕೊಳಕ್ಕಾದತೆ.”

“ಸಿ.ಟಿ ರವಿ ಅಂದ್ರೆ ಅವುನ್ಯಾರ್ಲ.”

“ಇದೇನಕ್ಕ ಹಿಂಕೇಳ್ತಿ ಅವುನು ಚಿಕ್ಕಮಗಳೂರು ಕಡೆ ರಾಜಕಾರಣಿ. ಬಾಬಾಬುಡನ್‍ಗಿರಿಯ ದತ್ತಪೀಠ ಮಾಡಕ್ಕೊಗಿ ಗಲಾಟೆ ಎಬ್ಬಿಸಿ ಎಮ್ಮೆಲ್ಲೆ ಆದೋನು. ಈಗ ಮಂತ್ರಿಯಾಗ್ಯವುನೆ, ಕರೋನಾ ಕಾಯ್ಲದ ಕಾರಣಕ್ಕೆ ಕ್ಯಲಸಕ್ಕೆ ಬಾರದೋನಂಗಾಗ್ಯವುನೆ.”

“ಅದ್ಯಾಕಂಗಾದ.”

“ಅವುನೊಬ್ಬನೆ ಅಂಗಾಗಿಲ್ಲ ಕಣಕ್ಕ ಇಡೀ ಎಡೂರಪ್ಪನ ಸಂಪುಟವೇ ಅಂಗಾಗ್ಯದೆ. ಮಂತ್ರಿಗಳಾಗಿ ಮ್ಯರಿತ ಸನ್ಮಾನ ಮ್ಯರವಣಿಗೆ ದೇಸಭಕ್ತಿ ಬಾಸಣ ಮಾಡಿಕಂಡು ಮೋದಿ ಹೊಗಳಿಕಂಡು ಮ್ಯರಿಯನ ಅಂತ ಇದ್ದೊರಿಗೆ ಶನಿ ವಕ್ರಿಸಿದಂಗೆ ಕರೋನಾ ವಕ್ರಿಸಿಬುಡ್ತು ಹಂಗಾಗಿ ಯಲ್ಲ ಡಲ್ಲಾಗ್ಯವುರೆ.”

“ಎಡೂರಪ್ಪನೆ ಡಲ್ಲಾಗ್ಯವುರೆ.”

“ಅವುನ್ಯಾವತ್ತು ಲವುಲವಿಕೆ ಆಗಿದ್ನೊ ಪಾಪ ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಪೈಲ್ಸ್ ತರ ಶೋಭಾ ಕಾಡಿದ್ಲು, ಈಗ ಕರೋನಾ ಕಾಡ್ತಾ ಅದೆ. ಮುಖ್ಯಮಂತ್ರಿ ಪದವಿಯ ಎಂಜಾಯ್ ಮಾಡಕ್ಕೆ ಆಗಲಿಲ್ಲ.”

“ಮುಖ್ಯಮಂತ್ರಿ ಪದವಿಯ ಎಂಜಾಯ್ ಮಾಡಿದೋರು ಅಂದ್ರೆ ಸಿದ್ದರಾಮಯ್ಯ, ಕುಮಾರಣ್ಣ ಕಣೊ.”

“ಸಿದ್ದರಾಮಯ್ಯನಿಗಿಂತ ಕುಮಾರಣ್ಣ ಕಣೊ ಎಂಜಾಯ್ ಮಾಡಿದ್ದು.”

“ಅದ್ಯಂಗ್ಲಾ ಎಂದಳು ಜುಮ್ಮಿ.”

“ಕುಮಾರಣ್ಣ ಕ್ಯಲಸದ ಒತ್ತಡ ಜಾಸ್ತಿಯಾಯ್ತು ಅಂದ್ರೆ ರಾಧಿಕನ ಮನೆಗೋಗಿ ಮನಗಿಬುಡತಿದ್ದ. ಆಗ ಎಂ.ಪಿ ಪ್ರಕಾಸಿದ್ರು ಯಲ್ಲನು ನೋಡಿಕಳರು. ಈಗ ಹೋಟ್ಳಲ್ಲಿದ್ದ ಕಣಕ್ಕ ಮುಖ್ಯಮಂತ್ರಿಯಾದೊನು ಹೋಟ್ಳಲ್ಲಿರತರೇನಕ್ಕ ಅದ್ಕೆ ಪವರ್ ಕಳಕಂಡ.”

“ಆ ಹೋಟ್ಳು ರೂಮು ದೆಸೆರೂಮಂತೆ ಕಣೊ. ಅದರಲ್ಲಿದ್ದಾಗ ಮುಖ್ಯಮಂತ್ರಿಯಾದೆ ಅದಕೆ ಅದರೊಳಗಿದ್ದಿನಿ ಅಂದಿದ್ದ.”

“ಸರಿಯಪ್ಪ ಆ ರೂಮಲ್ಲೆ ಇದ್ದಾಗ ಮುಖ್ಯಮಂತ್ರಿಗಿರಿ ಕಳಕಂಡನಲ್ಲ ಅದಕೇನೇಳ್ತನೆ.”

“ಅದನ್ನ ತಗದು ಶಾಸಕರ ಮ್ಯಾಲಾಕ್ತನೆ. ಏನೇ ಆಗ್ಲಿ ಕುಮಾರಣ್ಣ ಅವುರ್ಯಲ್ಲ ಈ ಬಿಜೆಪಿಗಳಷ್ಟು ಕ್ಯಟ್ಟೊರಲ್ಲ ಕಣೊ ಈ ಮುಂಡೆ ಮಕ್ಕಳು ಭ್ಯಳೆಮ್ಯಾಲೆ ಎರಗತಾಯಿರೋ ಮಿಡತೆ ದಂಡಿದ್ದಂಗೆ. ಯಲ್ಲನು ವಕ್ಕತಿಂದ ಸರ್ವನಾಶ ಮಾಡ್ತರೆ ನೋಡ್ತಾಯಿರು.”

“ !?


ಇದನ್ನು ಓದಿ:

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...