Homeಅಂಕಣಗಳುಕಟ್ಟೆಪುರಾಣ: ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ

ಕಟ್ಟೆಪುರಾಣ: ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ

“ಅದೆ ಕಂಡ್ಳ ನಾನೇಳಿದ್ದು, ಊರಲ್ಲಿ ಪ್ರಾಯಕ್ಕೆ ಬಂದೆದ್ದೆ ಯಲ್ಲ ಹುಡುಗ್ರು ಬೆಂಗಳೂರು ಸೇರಿಕಂಡಿದ್ರು. ನೋಡೀಗ ಯಲ್ಲ ಬಂದವೆ ಯವಸಾಯ ಮಾಡ್ತ ಅವೆ ಊರಿಗೇ ಒಂದು ಕಳೆ ಬಂದದೆ.”

- Advertisement -
- Advertisement -

ವಾಟಿಸ್ಸೆ ಬಂದ ಕೂಡಲೆ ಜುಮ್ಮಿ ಏನೋ ಹೊಳೆದಂತೆ.

“ಲೇ ವಾಟಿಸ್ಸೆ ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ” ಎಂದಳು.

“ನಿನಿಗೇನಾಯ್ತಕ್ಕ ಇಂತ ಮಾತಾಡ್ತೀ.”

“ಪ್ರಪಂಚನೆ ಹೆದರಿಕಂಡು ಕುಂತದೆ ಇವುಳಿಗೆ ವಳ್ಳೆದಾಯ್ತಂತೆ ಇದಕೇನೇಳ್ತಿಯಪ್ಪ” ಎಂದ ಉಗ್ರಿ.

“ಅಕ್ಕನೆ ಹೇಳ್ತಳೆ ಬುಡು. ಅದೇನೇಳಕ್ಕ.”

“ನಮ್ಮೂರು ಮಂದ್ಲಿದ್ದಂಗಾಯ್ತು ಕಂಡ್ಳ.”

“ಯಂಗೇ ಅಂತ.”

“ಹೆಚ್ಚುಕಮ್ಮಿ ಇಪ್ಪತ್ತು ಮನೆ ಬಾಗಲಾಕಿದ್ದೊ ಕಂಡ್ಳ, ಅವುರ್ಯಲ್ಲ ಬೆಂಗಳೂರು ಸೇರಿಕಂಡಿದ್ರು. ಈಗ್ಯಲ್ಲ ಬಂದು ಬಾಗಲತಗದವುರೆ ಕತ್ಲೆ ಮನೆ ಬೆಳಕಾದೊ.”

“ಓಟರ್‍ಲಿಸ್ಟು ಪಿಲಪ್ಪಾದ ರಾಜಕಾರಣಿಯಂಗೆ ಖುಷಿಯಾಗಿದ್ದಿಯಲ್ಲಕ್ಕ. ಜನಕೆ ಇದ್ದ ಜಾಗದಲ್ಲಿ ಕ್ಯಲಸಿರಲಿಲ್ಲ. ಯಲ್ಲ ಬೆಂಗಳೂರಿಗೋಗಿದ್ರು, ಕರೋನಾ ಕಾಯಿಲಗೆ ಹೆದರಿ ತಿರಗ ಊರಿಗೆ ಬಂದವುರೆ ಅಷ್ಟೆಯ.”

“ಅದೆ ಕಂಡ್ಳ ನಾನೇಳಿದ್ದು, ಊರಲ್ಲಿ ಪ್ರಾಯಕ್ಕೆ ಬಂದೆದ್ದೆ ಯಲ್ಲ ಹುಡುಗ್ರು ಬೆಂಗಳೂರು ಸೇರಿಕಂಡಿದ್ರು. ನೋಡೀಗ ಯಲ್ಲ ಬಂದವೆ ಯವಸಾಯ ಮಾಡ್ತ ಅವೆ ಊರಿಗೇ ಒಂದು ಕಳೆ ಬಂದದೆ.”

“ಊರಿಗೆ ಕಳೆ ಬರದು ದುಡಿಯೋಕೈಗೆ ಕ್ಯಲಸಿದ್ದಾಗ ಕಣಕ್ಕ. ಕ್ಯಲಸಿಲ್ದೊರ ಮಕ ನೋಡಕ್ಕಾದತೆ?”

“ಅಲ್ಲಾ ಕಣೊ ವಾಟಿಸ್ಸೆ ರಾಜಕಾರಣಿಗಳಿಗ್ಯಾವ ಕ್ಯಲಸದೊ ಆದ್ರು ಅವುರ ಮಕ ನೋಡು ಯಂಗೆ ಲಕಲಕ ಅಂತ ವಳಿತದೆ” ಎಂದ ಉಗ್ರಿ.

“ಅದೇನೊ ನಿಜ ಆ ಸಿ.ಟಿ ರವಿ ಅನ್ನೊ ಮಿನಿಸ್ಟ್ರಿಗೆ ಪಾಪ ಏನೂ ಕ್ಯಲಸಿಲ್ಲ ಅದ್ಕೆ ಲೇಖನ ಬರಿತ ಕುಂತವುನೆ.”

“ಏನು ಬರದವುನೆ.”

“ನಾವು ಚೀಣಾ ದೇಸದ ಪದಾರ್ಥ ಬಳಸಬಾರ್ದು ನಾವೇ ತಯಾರು ಮಾಡಿಕಬೇಕು ಅಂತ ಬರದವುನೆ.”

“ಅಲ್ಲಾ ಕಣೊ ವಾಟಿಸ್ಸೆ ಅವುನ ಮನೆಲಿರೊ ಅರ್ದಕ್ಕರ್ದ ಪದಾರ್ಥ ಚೀಣಾ ದೇಸದ ಪದಾರ್ಥ. ಅಂತದ್ರಲ್ಲಿ ಲೇಖನ ಬರಿತನೆ ಅಂದ್ರೆ, ಅವುನ ಮನೆಲಿರೊ ಚೀಣಾ ದೇಸದ ಪದಾರ್ಥವ ವರಿಕಾಕಿ ಬೆಂಕಿ ಹಚ್ಚಿ ಅಮ್ಯಾಲೆ ಲೇಖನ ಪಾಕನ ಬರಿಬೇಕಲವೇನೊ.”

“ಬಿಜೆಪಿಗಳೇ ಅಂಗಲವೇನೊ, ಹೇಳದೊಂದು ಮಾಡದೊಂದು. ಯಲ್ಲಾನು ನಾವೇ ತಯಾರು ಮಾಡಿಕಬೇಕು ಅಂದ್ರೆ ಈ ಚೆಡ್ಡಿಗಳ ಕೈಲಿ ಏನಾಯ್ತದಪ್ಪಾ ಅಂದ್ರೇ, ಅವು ಕುಂಕುಮ ಗಂಧವ ಅವೇ ತಯಾರಿಸತ್ತವೆ? ಮಡಿ ಪಂಚೆ, ಟವಲ್ಲು, ಗಂಟೆ, ಮಂಗಳಾರತಿ ತಟ್ಟೆ ಕರ್ಪೂರನು ಬೇಕಾದ್ರೆ ಮಾಡಿಕತ್ತವೆ. ಇನ್ನುಳದಂಗೆ ಪೂಜಾರಿ ಕೈಲಿರೊ ಮೊಬೈಲು, ಗಡಿಯಾರ, ಮಂಗಳಾರತಿ ತಟ್ಟಿಗೆ ಬಿದ್ದ ಕಾಸಿನ ಲೆಕ್ಕ ಬರಿಯೋ ಪೆನ್ನೂ ಕೂಡ ಚೀಣಾ ದೇಸದ್ದೆಯಪ್ಪ ಅಂತದರಲ್ಲಿ ಚೀಣಾ ದೇಸದಿಂದ ಬರೋ ಪದಾರ್ಥವ ತಾವೇ ತಯಾರಿಸಿಕೊಳಕ್ಕಾದತೆ.”

“ಸಿ.ಟಿ ರವಿ ಅಂದ್ರೆ ಅವುನ್ಯಾರ್ಲ.”

“ಇದೇನಕ್ಕ ಹಿಂಕೇಳ್ತಿ ಅವುನು ಚಿಕ್ಕಮಗಳೂರು ಕಡೆ ರಾಜಕಾರಣಿ. ಬಾಬಾಬುಡನ್‍ಗಿರಿಯ ದತ್ತಪೀಠ ಮಾಡಕ್ಕೊಗಿ ಗಲಾಟೆ ಎಬ್ಬಿಸಿ ಎಮ್ಮೆಲ್ಲೆ ಆದೋನು. ಈಗ ಮಂತ್ರಿಯಾಗ್ಯವುನೆ, ಕರೋನಾ ಕಾಯ್ಲದ ಕಾರಣಕ್ಕೆ ಕ್ಯಲಸಕ್ಕೆ ಬಾರದೋನಂಗಾಗ್ಯವುನೆ.”

“ಅದ್ಯಾಕಂಗಾದ.”

“ಅವುನೊಬ್ಬನೆ ಅಂಗಾಗಿಲ್ಲ ಕಣಕ್ಕ ಇಡೀ ಎಡೂರಪ್ಪನ ಸಂಪುಟವೇ ಅಂಗಾಗ್ಯದೆ. ಮಂತ್ರಿಗಳಾಗಿ ಮ್ಯರಿತ ಸನ್ಮಾನ ಮ್ಯರವಣಿಗೆ ದೇಸಭಕ್ತಿ ಬಾಸಣ ಮಾಡಿಕಂಡು ಮೋದಿ ಹೊಗಳಿಕಂಡು ಮ್ಯರಿಯನ ಅಂತ ಇದ್ದೊರಿಗೆ ಶನಿ ವಕ್ರಿಸಿದಂಗೆ ಕರೋನಾ ವಕ್ರಿಸಿಬುಡ್ತು ಹಂಗಾಗಿ ಯಲ್ಲ ಡಲ್ಲಾಗ್ಯವುರೆ.”

“ಎಡೂರಪ್ಪನೆ ಡಲ್ಲಾಗ್ಯವುರೆ.”

“ಅವುನ್ಯಾವತ್ತು ಲವುಲವಿಕೆ ಆಗಿದ್ನೊ ಪಾಪ ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಪೈಲ್ಸ್ ತರ ಶೋಭಾ ಕಾಡಿದ್ಲು, ಈಗ ಕರೋನಾ ಕಾಡ್ತಾ ಅದೆ. ಮುಖ್ಯಮಂತ್ರಿ ಪದವಿಯ ಎಂಜಾಯ್ ಮಾಡಕ್ಕೆ ಆಗಲಿಲ್ಲ.”

“ಮುಖ್ಯಮಂತ್ರಿ ಪದವಿಯ ಎಂಜಾಯ್ ಮಾಡಿದೋರು ಅಂದ್ರೆ ಸಿದ್ದರಾಮಯ್ಯ, ಕುಮಾರಣ್ಣ ಕಣೊ.”

“ಸಿದ್ದರಾಮಯ್ಯನಿಗಿಂತ ಕುಮಾರಣ್ಣ ಕಣೊ ಎಂಜಾಯ್ ಮಾಡಿದ್ದು.”

“ಅದ್ಯಂಗ್ಲಾ ಎಂದಳು ಜುಮ್ಮಿ.”

“ಕುಮಾರಣ್ಣ ಕ್ಯಲಸದ ಒತ್ತಡ ಜಾಸ್ತಿಯಾಯ್ತು ಅಂದ್ರೆ ರಾಧಿಕನ ಮನೆಗೋಗಿ ಮನಗಿಬುಡತಿದ್ದ. ಆಗ ಎಂ.ಪಿ ಪ್ರಕಾಸಿದ್ರು ಯಲ್ಲನು ನೋಡಿಕಳರು. ಈಗ ಹೋಟ್ಳಲ್ಲಿದ್ದ ಕಣಕ್ಕ ಮುಖ್ಯಮಂತ್ರಿಯಾದೊನು ಹೋಟ್ಳಲ್ಲಿರತರೇನಕ್ಕ ಅದ್ಕೆ ಪವರ್ ಕಳಕಂಡ.”

“ಆ ಹೋಟ್ಳು ರೂಮು ದೆಸೆರೂಮಂತೆ ಕಣೊ. ಅದರಲ್ಲಿದ್ದಾಗ ಮುಖ್ಯಮಂತ್ರಿಯಾದೆ ಅದಕೆ ಅದರೊಳಗಿದ್ದಿನಿ ಅಂದಿದ್ದ.”

“ಸರಿಯಪ್ಪ ಆ ರೂಮಲ್ಲೆ ಇದ್ದಾಗ ಮುಖ್ಯಮಂತ್ರಿಗಿರಿ ಕಳಕಂಡನಲ್ಲ ಅದಕೇನೇಳ್ತನೆ.”

“ಅದನ್ನ ತಗದು ಶಾಸಕರ ಮ್ಯಾಲಾಕ್ತನೆ. ಏನೇ ಆಗ್ಲಿ ಕುಮಾರಣ್ಣ ಅವುರ್ಯಲ್ಲ ಈ ಬಿಜೆಪಿಗಳಷ್ಟು ಕ್ಯಟ್ಟೊರಲ್ಲ ಕಣೊ ಈ ಮುಂಡೆ ಮಕ್ಕಳು ಭ್ಯಳೆಮ್ಯಾಲೆ ಎರಗತಾಯಿರೋ ಮಿಡತೆ ದಂಡಿದ್ದಂಗೆ. ಯಲ್ಲನು ವಕ್ಕತಿಂದ ಸರ್ವನಾಶ ಮಾಡ್ತರೆ ನೋಡ್ತಾಯಿರು.”

“ !?


ಇದನ್ನು ಓದಿ:

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...