Homeಅಂಕಣಗಳುಥೂತ್ತೇರಿ | ಯಾಹೂವಯಸ್ಸಾದ ಮ್ಯಾಲೆ ಜೀರ್ಣಶಕ್ತಿ ಕಡಿಮೆ ಆಯ್ತದೆ ಸಾ!

ವಯಸ್ಸಾದ ಮ್ಯಾಲೆ ಜೀರ್ಣಶಕ್ತಿ ಕಡಿಮೆ ಆಯ್ತದೆ ಸಾ!

- Advertisement -
| ಯಾಹೂ |
ಇಡೀ ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿರುವುದು ಮೂರು ಜಿಲ್ಲೆಗಳಲ್ಲಿ ಎಂಬಂತೆ ಮಾಧ್ಯಮಗಳು ಬೊಬ್ಬೆ ಇಡುತ್ತಿರುವಾಗ ಮಂಡ್ಯದ ಪರಿಸ್ಥಿತಿ ಎಲ್ಲಿಗೆ ಮುಟ್ಟಿದೆ ಎಂಬ ಬಗ್ಗೆ ವಾಟಿಸ್ಸೆ ಕೇಳಬೇಕೆಂದು ಫೋನ್ ಮಾಡಲಾಗಿ ರಿಂಗಾಯ್ತು.
“ಹೇಳಿ ಸಾ.”
“ನನ್ನೆಸರು ನಿನ್ನ ಮೊಬೈಲಲ್ಲಿ ಫೀಡಾಗಿದೆಯಾ ವಾಟಿಸ್ಸೆ.”
“ಇಲ್ಲ ಸಾ.”
“ಮತ್ತೆ ಹೇಳಿ ಸಾರ್ ಅಂದ್ಯಲ್ಲ.”
“ನಾನು ಅಂಬರೀಶ್ ಅಭಿಮಾನಿ ಸಾ.”
“ಅದಕ್ಕೂ ಇದಕ್ಕೂ ಏನು ಸಂಬಂಧ.”
“ನಮ್ಮ ಅಂಬರೀಶ್‍ಗೆ ಪ್ರೊಡ್ಯೂಸರೊ, ಡೈರೆಕ್ಟರೊ ಶೂಟಿಂಗ್ ಡೇಟ್ ಹೇಳಿದ್ರೆ ಬರಕತಿರಲಿಲ್ಲವಂತೆ. ಅಂಗೆ ಗೆಪ್ತಿಲಿ ಮಡಿಕ್ಯಂಡು ಹೋಯ್ತಿದ್ನಂತೆ. ಅಂಗೆ ನಾನೊಂದು ನಂಬರ್ ನೋಡಿಕೊಂಡರೆ ಸಾಕು, ಬರಕಳೋದಿಲ್ಲ. ಅದೇ ಮೈಂಡ್ ಫೀಡಾಗಿರುತ್ತೆ ಸಾ.”
“ಎಂಥಾ ಪ್ರತಿಭೆನ್ರಿ ನಿಮ್ದು.”
“ಏನು ಮಾಡದು ಸಾ, ಬ್ಯಾಡ್‍ಲಕ್ಕು.”
“ಲಕ್ಕನ್ಯಲ್ಲ ನಂಬುತಿಯಾ.”
“ಸುಮ್ಮನೆ ಮಾತಿಗೇಳಿದೆ, ಇದ್ಯಲ್ಲ ಮೂಡನಂಬಿಕೆ ಕಾಲ್ದಲ್ಲಿ ಬಂದ ಪದ ರೂಢಿಯಾಗಿಬಿಟ್ಟಿವೆ.”
“ಇರ್ಲಿ ಮಂಡ್ಯದ ರಾಜಕಾರಣ ಹೆಂಗೆ ನಡೀತಿದೆ.”
“ಈ ಜೆಡಿಎಸ್‍ನವುಕೆ ಏನೋ ಕೇಡುಗಾಲ ಸಾ.”
“ಯಾಕೆ.”
“ಸುಮಲತಾ ಕ್ಯಾಂಡಿಡೇಟಾದೇಟಿಗೆ, ಸುಮಲತಾ ಅನ್ನೋ ಹೆಸರಿನ ಮೂರು ಹೆಂಗಸರನ್ನ ಹುಡುಕಿ ನಿಲ್ಸದ ಸಾ.”
“ಅವುರಾಗಿ ನಿಂತಿಲ್ಲವೇ?”
“ಥೂ ಇಲ್ಲ ಸಾ. ಗೊರವಿ ಸುಮಲತಾ ನಮ್ಮ ಫ್ರೆಂಡ್ ದೇವರಾಜನ ಸಮಂದಿ, ಅವನ್ನ ವಿಚಾರಿಸ್ದೆ. ಅವಳ ಗಂಡನಿಗೂ ಹೇಳದಂಗೆ ಅವಳ ಹಾರಿಸಿಗಂಡೋಗಿ ನಾಮಪತ್ರ ಸಲ್ಸದ ಸಾ.”
“ಕ್ಯೆಟ್ಟ ರಾಜಕಾರಣ ಇದು.”
“ಕ್ಯೆಟ್ಟ ರಾಜಕಾರಣ ಅಲ್ಲ, ಕುಲಗೆಟ್ಟ ರಾಜಕಾರಣ.”
“ಇದನ್ನೆಲ್ಲ ಹ್ಯಂಗೆ ಫೇಸ್ ಮಾಡ್ತಾಯಿದೀರಿ.”
“ಆ ಕುಮಾರಸ್ವಾಮಿ ಟೀಮು ಮಾಡಿದ್ದೆಲ್ಲಾ ಅವುರಿಗೇ ಅಟಕಾಯ್ಸಿಗತ್ತಾ ಅದೇ ಸಾ.”
“ಹೆಂಗೇ.”
“ಸುಮಲತನೆಸರಿನ ಮೂರು ಜನ ಹೆಂಗಸರ ಹುಡುಕಿ ನಿಲ್ಸಿದರಂತೆ ಅನ್ನದೆ ಸುಮಲತನಿಗೆ ಪ್ಲಸ್ ಪಾಯಿಂಟ್ ಆಗದೆ ಸರ್.”
“ಓಟರ್ಸ್‍ಗೆ ಕನ್‍ಪೀಜಾಗಲ್ವಾ.”
“ಕನಪೀಜ್ ಮಾಡಿಕಳೊ ಓಟರ್ಸ್ ತಿರೋದ್ರು, ಈಗ ಬದುಕಿರೋರ್ಯಲ್ಲ ನನ್ನಂಥೋರು. ಅವುರಿಗೆಲ್ಲ ತಿಳಿತದೆ ಸಾ.”
“ಕ್ಯಾನುವಾಸ್ಯೆಂಗೆ ಮಾಡ್ತಾಯಿದೀರಿ.”
“ಇಬ್ಬರು ತರಕಲೆಂಗಸರ ಮಧ್ಯೆ ಒಂದು ಒಳ್ಳೆ ಹೆಂಗಸದೆ ನೋಡಿ, ಕ್ಯಂಪಗೆ ತುಂಬಿದ ಮುಖ, ಅವಳೇ ನಮ್ಮ ಸುಮಲತಾ ಅಂತ ಪ್ರಚಾರ ಮಾಡ್ತಾ ಇದೀವಿ.”
“ಸುಮಲತಾ ಯಂಗೇ.”
“ಭಾಳಾ ವರುಸದ ನಂತ್ರ ನಮಿಗೆ ಒಳ್ಳೆ ರಾಜಕಾರಣಿ ಸಿಕ್ಕಿದ್ರು ಸಾ. ಸಂಸ್ಕೃತೀನೆ ಇಲ್ಲದ ದಳದವುಕೆ ರಾಜಕಾರಣ ಅಂದ್ರೇನು, ಚುನಾವಣಾ ಭಾಷಣ ಅಂದ್ರೇನು, ಅಂತ ಹೇಳಿ ಕೊಡ್ತಾ ಅವುಳೆ. ಅದರಲ್ಲೂ ಕುಮಾರಸ್ವಾಮಿ ಹರಾಜಾಗೋಗಿಬಿಟ್ಟ.”
“ಅಂಗಂತೀಯ.”
“ಊ ಸಾ, ಅವುನಿಗೊಂತರಾ ತಲಿ ಕೆಟ್ಟೋಗಿಬುಟ್ಟದೆ. ರಾತ್ರಿ ವೊತ್ತು ತಾಲೂಕಿಗೆ ಬತ್ತನೆ, ಕಾಂಗ್ರೆಸ್ಸಿನೋರನ್ನೆಲ್ಲಾ ಕೊಳ್ಕತಾ ಅವುನೆ, ನನಿಗೂ ಆಫರ್ ಬಂದಿತ್ತು ಸಾ. ಹೋಗಲಿಲ್ಲ.”
“ಯಾಕೆ.”
“ವಾಟಿಸ್ಸೆಗೆ ಇವತ್ತಿನವರೆಗೂ ಯಾಕೆ ವಳ್ಳೆ ಹೆಸುರದೆ ಅಂದ್ರೆ, ಅವುನ್ನ ಯಾರು ಕೊಳ್ಳಕ್ಕಾಗಿಲ್ಲ ಸಾ.”
“ಅವರು ಓಟಿಗೆ ದುಡ್ಡು ಕೊಟ್ರೆ ಈಸಗತ್ತಿನಿ ಅಂದಿದ್ರಿ.”
“ಅದು ನಮ್ಮನೆ ದುಡ್ಡನ್ನ ರಿಟರ್ನ್ ಈಸಗಂಡಂಗೆ ಸಾ, ಅದಕ್ಕೆ”
“ಯಲಕ್ಷನ್ ಖರ್ಚಿಗೆ ಸುಮಲತ ಯಂಗೆ ಮಾಡ್ತಾ ಅವುರೆ”
“ಮೇಜರ್ ಖರ್ಚಾ ರಾಕ್‍ಲೈನ್ ವ್ಯೆಂಕಟೇಶ ನೋಡಿಕತ್ತನೆ, ಇನ್ನುಳದದ್ದ ಕಾರ್ಯಕರ್ತರೆ ಕೈಯಿಂದ ಹಾಯ್ಕಂಡು ಮಾಡ್ತ ಅವುರೆ ಸಾ, ಅಂಬರೀಶ್‍ಗೋಸ್ಕರ.”
“ಸುಮಲತರಿಗೋಸ್ಕರ ಅಲವಾ.”
“ಅಂಬರೀಶ್ ರುಣ ಅದೇ ಸಾ ನಮ್ಮ ಮ್ಯಾಲೆ. ಅದ ತೀರುಸಬೇಕಾದ್ರೆ ಸುಮಲತಾರಿಗೆ ಕ್ಯೆಲಸ ಮಾಡಬೇಕಾಗಿದೆ. ಅದರಲ್ಲೂ ಸುಮಲತಾನೆ ಅಂಬರೀಶ್‍ಗಿಂತ ಗ್ರೇಟು ಸಾ.”
“ಅದ್ಯಂಗೆ.”
“ನೋಡಿ ಸಾ, ಅಂಬರೀಶ್ ಲಾಡ್ಜಲ್ಲಿ ರೂಂ ಮಾಡಿಕೊಂಡಿದ್ದೋನು, ಅಂತೋನಿಗೆ ಮೂಗುದಾರ ಹಾಕಿ, ಕೊಳ್ಳುರಿ ಹಾಕಿ, ಸಂಸಾರಕ್ಕೆ ಒಗ್ಗಿಸಿದೋಳು ಸುಮಲತಾ. ಅಂಥ ಒಂಟಿ ಸಲಗನ್ನ ಬಗ್ಗಿಸಿದೋಳಿಗೆ ಈ ತರಕಲ ಗಂಡುಸ್ರು ಯಾವ ಲೆಕ್ಕ ಸಾ. ಅದ್ಕೆ ಅವುಳೆದ್ರಿಗೆ ಕುಮಾರಸ್ವಾಮಿ, ಡಿಕೆ.ಶಿವಕುಮಾರ್ ಯಲ್ಲ ನೀರು ಕುಡಿತ ಇರದು.”
“ತಮ್ಮಣ್ಣನ ಬಗ್ಗೆ ಏನೇಳ್ತಿ.”
“ಅವನು ಕದ್ದು ಮರಳೊಡೆಯೋ ಲಾರಿ ಡ್ರೈವರ್‍ತರ ಅವುನೆ ಸಾ, ಅವನ ಬಗ್ಗೆ ಮಾತಾಡಿದ್ರೆ ನನಿಗೆ ಅವಮಾನ.”
“ಯಾಕಂಗಂತೀರಿ.”
“ಸುಮಲತ ದಕ್ಷಿಣ ಭಾರತದ ಮಹಾನ್ ನಟಿ, ಅಂಬರೀಶ್ ಪತ್ನಿ, ಈ ತಮ್ಮಣ್ಣ ಅವುರ ಮನಿಗೋದಾಗ ಸುಮಲತಾ ನೀರು ಕೊಡಬೇಕಾಗಿತ್ತಂತೆ. ಅಷ್ಟು ಬಾಯಾರಿದ್ರೆ ಅಲ್ಲೇ ಟೇಬಲ್ ಮ್ಯಾಲೆ ನೀರಿನ ಬಾಟ್ಳಿ ಇದ್ದೋ, ತಗೊಂಡು ಕುಡಿಬೇಕಾಗಿತ್ತು. ಸೋಡನೂ ಇತ್ತು, ನ್ಯೆನ್ನೆ ದಿನ ಕುಡುದು ಬಿಟ್ಟಿರೋ ಡ್ರಿಂಕ್ಸೂ ಇತ್ತು ಸಾ. ಈ ಮರಳಿನ ಲಾರಿ ಡ್ರೈವರ್ರು, ಸುಮಲತಾ ಬಂದು ನೀರುಕೊಡ್ನಿಲ್ಲ ಅಂತಾನಲ್ಲ, ನೀವೇ ಹೇಳಿ ಸಾ.”
“ನಿಖಿಲ್‍ಗೆ ಓಟು ಮಾಡದ್ರಿಂದ ಅಂಬರೀಶ್ ಆತ್ಮಕ್ಕೆ ಶಾಂತಿ ಸಿಗತದೆ ಅಂತ ಡಿಕೆಶಿ ಹೇಳಿದ್ರು ಕೇಳಿಸಿಗಂಡ್ಯಾ.”
“ಕೇಳಿಸಿಗಂಡು ಸಕತ್ತು ನಗಾಡಿದೆ ಸಾ.”
“ಯಾಕೆ.”
“ಮಂಡ್ಯ ಚುನಾವಣೇಲಿ ಇಲ್ಲಿಗಂಟ ಇಂತ ಮಾತ ಕೇಳಿರಲಿಲ್ಲ. ಅಂಬರೀಶ್ ಆತ್ಮಕ್ಕೆ ಶಾಂತಿ ಸಿಗತದೆ ಅಂದ್ರೆ ನಿಖಿಲೇನು ಅಂಬರೀಶ್ ಮಗನ ಸಾ. ಈ ಡಿಕೆಸಿ ಹಣ ಆಸ್ತಿ ಜಾಸ್ತಿಯಾಗಿ, ಆಸ್ತಿ ಕಾರಣಕ್ಕೆ ಕಷ್ಟ ಅನುಬವುಸ್ತಯಿರೋನು. ಅವೊಂತರ ಆತ್ಮವಂಚನೆ ಜನ ಸಾ. ಸಿಂಹ ಇಲ್ಲ ಅಂತ ನಾಯಿ ನರಿಗಳೆಲ್ಲ ಬೊಗಳತ ಅವೇ. ಆದರೆ ಹುಲಿ ಎದ್ದು ನಿಂತಿರದು ಅವುಕ್ಕೆ ಗೊತ್ತೇಯಿಲ್ಲ.”
“ಸಿಂಹ ಯಾರು? ಹುಲಿ ಯಾರು?”
“ಸಿಂಹ ಅಂಬರೀಶಣ್ಣ, ಅಂದ್ರೆ ಲಯನ್ನು, ಸುಮಲತಾ ಹುಲಿ, ಅಂದ್ರೆ ಟೈಗರ್ರು. ಈ ಟೈಗರ್ ಮತ್ತೆ ಸಿಂಹದ ಮರಿ ಅಂದ್ರೆ ಲೈಗರ್ ಅಭಿಷೇಕ್.”
“ಲೈಗರ್ ಅಂದ್ರೇನು.”
“ಅಂದ್ರೆ, ಲಯನ್ನು ಮತ್ತು ಟೈಗರ್ರು ಕ್ರಾಸಲ್ಲಿ ಲೈಗರ್ ಬರುತ್ತೆ ಸಾ. ಅದೇ ನಮ್ಮ ಅಭಿಷೇಕ್. ಗೊತ್ತಾಯ್ತಾ ಸಾ.”
“ಪರವಾಗಿಲ್ಲ ಒಳ್ಳೆ ತಳಿ ತಜ್ಞನಂಗೆ ಮಾತಾಡ್ತಿ. ನಮ್ಮ ದ್ಯಾವೇಗೌಡ್ರ ಬಗ್ಗೆ ಏನೇಳ್ತೀರಿ.”
“ಪಾಪ ದುರಾಶೆ ಮುದುಕ. ಎಂಟು ಮುದ್ದೆ ಕೇಳಿದ್ದ, ಆ ಕಾಂಗ್ರೆಸ್ ಬಡ್ಡೇತವು ಹೋಗತ್ತಾಗೆ ನುಂಗು ಅಂತ ಯೆಂಟು ಮುದ್ದೆ ಇಕ್ಕಿದ್ರು. ಉಣ್ಣಕ್ಕಾಗದೆ ಒಂದು ಮುದ್ದೆಯ ವಾಪಸ್ ಕೊಟ್ಟವುನೆ. ಚಿಕ್ಕಮಂಗ್ಳೂರ್ ಮುದ್ದೆನ ತಿರಗ ಕಾಂಗ್ರೆಸ್ ಕ್ಯಾಂಡಿಡೇಟಿಗೆ ಕೊಟ್ಟವುನೆ. ಆರಂಬುದಲ್ಲಿ ಹನ್ನೆಲ್ಡು ಮುದ್ದೆ ಕೇಳಿದ್ದ. ಇವತ್ತಿನ ಸ್ಥಿತಿ ನೋಡಿದರೆ ಅವುನ್ನ ವಾಪಸ್ ಕೊಡುತಿದ್ದ ಅನ್ನಸ್ತದೆ. ವಯಸ್ಸಾದ ಮ್ಯಾಲೆ ಜೀರ್ಣಶಕ್ತಿ ಕಡಿಮೆ ಆಯ್ತದೆ ಅನ್ನದ್ಕೆ ಇದೇ ಉದಾರಣೆ ಸಾ.”
“ಸಾ, ಒಂದ್ ಟೂ ಹಂಡ್ರೆಡ್ ರುಪೀಸ್ ಕರೆನ್ಸಿ ಹಾಕ್ಸಿ ಸಾ”
“ಥೂತ್ತೇರಿ!!!”
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...