Homeಮುಖಪುಟಕೌಶಂಬಿ: 'ನಕಲಿ ಎನ್‌ಕೌಂಟರ್' ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ

ಕೌಶಂಬಿ: ‘ನಕಲಿ ಎನ್‌ಕೌಂಟರ್’ ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ

- Advertisement -
- Advertisement -

ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸರಾಯ್ ಅಕಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಪೊಲೀಸರು ತನ್ನ ಮಗ ಸದ್ದಾಂನನ್ನು ‘ನಕಲಿ ಎನ್‌ಕೌಂಟರ್’ನಲ್ಲಿ ಗುಂಡಿಕ್ಕಿ ಗಾಯಗೊಳಿಸಿದ್ದಾರೆ ಮತ್ತು ಇನ್ನೊಬ್ಬ ಮಗ ಅಲಿಶಾನ್ ನಾಪತ್ತೆಯಾಗಿದ್ದಾನೆ ಎಂದು ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಕುಟುಂಬವು ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ವಿಡಿಯೊ ಹಂಚಿಕೊಂಡಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಗಮನ ಸೆಳೆದಿದೆ. ಸದ್ದಾಂ ಮತ್ತು ಅಲಿಶಾನ್ ತಂದೆ ಮೊಯಿನ್ ಅಹ್ಮದ್ ಅವರ ಮೇಲೆ ಹಲ್ಲೆ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಬ್ಬರು ಸಹೋದರರು ಆರೋಪಿಗಳನ್ನು ಪ್ರಶ್ನಿಸಲು ಹೋದಾಗ ಈ ಘಟನೆ ನಡೆದಿದೆ ಎಂದು ಕುಟುಂಬ ಹೇಳಿಕೊಂಡಿದೆ.

ಪೊಲೀಸರು ಇಬ್ಬರೂ ಸಹೋದರರನ್ನು ಕರೆದೊಯ್ದ ನಂತರ, ಸದ್ದಾಂನನ್ನು ಎನ್‌ಕೌಂಟರ್ ನಂತರ ಬಂಧಿಸಲಾಗಿದೆ ಎಂದು ತೋರಿಸಲಾಗಿದೆ. ಆದರೆ, ಅಲಿಶಾನ್‌ನ ಸುಳಿವು ಇನ್ನೂ ಸಿಕ್ಕಿಲ್ಲ. ಈ ಕುರಿತು ಮಾತನಾಡಿದ ಸದ್ದಾಂ ಅವರ ಪತ್ನಿ ಇಶಿದಾ, “ನನ್ನ ಗಂಡ ಮತ್ತು ಭಾವ ಅಲಿಶಾನ್ ಇಬ್ಬರನ್ನೂ ಪೊಲೀಸರು ಕರೆದೊಯ್ದಿದ್ದಾರೆ. ಈಗ ನನ್ನ ಭಾವನ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅವನಿಗೂ ಏನಾದರೂ ಆಗಬಹುದೆಂದು ನಾವು ಭಯಪಡುತ್ತಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ‘ಎನ್‌ಕೌಂಟರ್ ಸಂಸ್ಕೃತಿ’ಯ ಬಗ್ಗೆ ಮತ್ತಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ಈ ರೀತಿಯ ಪ್ರಕರಣಗಳು, ನಿರ್ದಿಷ್ಟವಾಗಿ ಮುಸ್ಲಿಮರು ಮತ್ತು ದಲಿತರನ್ನು ಗುರಿಯಾಗಿಸಿಕೊಳ್ಳುತ್ತಿವೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. ಕುಟುಂಬವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನ್ಯಾಯಕ್ಕಾಗಿ ಮನವಿ ಮಾಡಿದ್ದು, ಪೊಲೀಸ್ ಕ್ರಮದ ವಿರುದ್ಧ ತನಿಖೆಗೆ ಒತ್ತಾಯಿಸಿದೆ.

ಪೊಲೀಸರು ತಪ್ಪು ಮಾಡಿದ್ದಾರೆ ಎಂದು ಆರೋಪಿಸುವ ಸಂತ್ರಸ್ತರ ಕುಟುಂಬದ ಹೊಸ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಆರೋಪಗಳು ಹೊರಬಿದ್ದಿವೆ. ಗ್ರಾಮ ಪಂಚಾಯತ್ ಮುಖ್ಯಸ್ಥೆ ಇಶಿದಾ, ಪೊಲೀಸರ ಮೇಲೆ ದೂರು ನೀಡಿ, ಸ್ಥಳೀಯ ಜಗಳವು ಕೈ ಮೀರಿದ ನಂತರ ಕೌಶಂಬಿ ಪೊಲೀಸರು ತಮ್ಮ ಪತಿ ಸದ್ದಾಂ ಮತ್ತು ಭಾವ ಅಲಿಶಾನ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೊಲೀಸರು ನನ್ನ ಪತಿ ಮತ್ತು ನನ್ನ ಭಾವ ಇಬ್ಬರನ್ನೂ ಕರೆದೊಯ್ದಿದ್ದಾರೆ. ನಂತರ, ಅವರು ಎನ್‌ಕೌಂಟರ್‌ನಲ್ಲಿ ಸದ್ದಾಂ ಅವರನ್ನು ಬಂಧಿಸಿ ಅವರ ಕಾಲಿಗೆ ಗುಂಡು ಹಾರಿಸಿದ್ದಾರೆ. ಆದರೆ ಅಲಿಶಾನ್ ಎಲ್ಲಿದ್ದಾರೆ? ಅವರನ್ನೂ ಕೊಲ್ಲುತ್ತಾರೆ ಎಂದು ನಮಗೆ ಭಯವಾಗಿದೆ” ಎಂದು ಹೇಳಿದರು.

ಇಶಿದಾ ಕಣ್ಣೀರು ಹಾಕುತ್ತಾ, “ಸದ್ದಾಂ ಕ್ರಿಮಿನಲ್ ಅಲ್ಲ. ತನ್ನ ತಂದೆಯನ್ನು ಥಳಿಸಿದವರನ್ನು ಪ್ರಶ್ನಿಸಲು ಅವನು ಹೋಗಿದ್ದ ಅಷ್ಟೇ. ನಮಗೆ ನ್ಯಾಯ ಒದಗಿಸುವ ಬದಲು, ಪೊಲೀಸರು ನನ್ನ ಪತಿಯನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ಹೇಳಿದರು.

ಇಶಿದಾ ಅವರ ಮಾವ ಮೊಯಿನ್ ಅಹ್ಮದ್, ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಸರಾಯ್ ಅಕಿಲ್ ಮಾರುಕಟ್ಟೆಗೆ ಹೋದಾಗ ಈ ವಿವಾದ ಪ್ರಾರಂಭವಾಯಿತು. ಅಲ್ಲಿ, ಮಾದಕ ವ್ಯಸನಿಗಳೆಂದು ಹೇಳಲಾದ ಇಬ್ಬರು ಅಥವಾ ಮೂವರು ವ್ಯಕ್ತಿಗಳು ಅವರ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದರು.

ಈ ಸುದ್ದಿ ಸದ್ದಾಂ ಮತ್ತು ಅಲಿಶಾನ್‌ಗೆ ತಲುಪಿದಾಗ, ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಹಲ್ಲೆಕೋರರನ್ನು ಪ್ರಶ್ನಿಸಿದ್ದಾರೆ. ಮಾತುಕತೆ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸಿದ್ದು, ಇಬ್ಬರೂ ಸಹೋದರರನ್ನು ಪೊಲೀಸರು ಕರೆದೊಯ್ದಿದ್ದಾರೆ. ಕುಟುಂಬದ ಪ್ರಕಾರ, ನಂತರ ನಡೆದ ಘಟನೆಯಿಂದ ಅವರಿಗೆ ಆಘಾತವಾಗಿದೆ. ಸದ್ದಾಂ ಅವರನ್ನು ‘ಎನ್‌ಕೌಂಟರ್’ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತೋರಿಸಿದ್ದು, ಅವರ ಕಾಲಿಗೆ ಗುಂಡು ಹಾರಿಸಲಾಗಿದೆ. ಆದರೆ, ಅಲಿಶಾನ್ ಯಾವುದೇ ವಿವರಣೆಯಿಲ್ಲದೆ ನಾಪತ್ತೆಯಾಗಿದ್ದಾರೆ.

ಹಿರಿಯ ತಂದೆ ಮೊಯಿನ್ ಅಹ್ಮದ್ ಕೂಡ ವೈರಲ್ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದು, ಹಲ್ಲೆಯಿಂದ ಅವರ ಮುಖದಲ್ಲಿ ರಕ್ತವಿತ್ತು. ತಮ್ಮ ಪುತ್ರರನ್ನು ಅಪರಾಧಿಗಳೆಂದು ಬಿಂಬಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ನನ್ನ ಮೇಲೆ ಮೊದಲು ಹಲ್ಲೆಯಾಯಿತು. ನನ್ನ ಪುತ್ರರು ನನ್ನನ್ನು ರಕ್ಷಿಸಲು ಮಾತ್ರ ಬಂದಿದ್ದರು. ಆದರೆ ಪೊಲೀಸರು ಕಥೆಯನ್ನು ತಿರುಚಿ, ನಮ್ಮ ವಿರುದ್ಧ ವಿಡಿಯೊಗಳನ್ನು ಹರಡಿದ್ದಾರೆ ಮತ್ತು ಈಗ ನನ್ನ ಒಬ್ಬ ಮಗ ನಾಪತ್ತೆಯಾಗಿದ್ದಾನೆ” ಎಂದು ಅವರು ಹೇಳಿದರು.

ಕುಟುಂಬವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದೆ. “ನನ್ನ ಭಾವ ಅಲಿಶಾನ್‌ಗೆ ಏನಾದರೂ ಆದರೆ, ಇಡೀ ಜವಾಬ್ದಾರಿ ಕೌಶಂಬಿ ಪೊಲೀಸರದ್ದಾಗಿರುತ್ತದೆ” ಎಂದು ಇಶಿದಾ ಘೋಷಿಸಿದರು.

ಸ್ಥಳೀಯ ನಿವಾಸಿಗಳು ಕೂಡ ಪೊಲೀಸರ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನಿಸಲು ಪ್ರಾರಂಭಿಸಿದ್ದಾರೆ. “ನೈಜ ಅಪರಾಧಿಗಳಿಗೆ ಶಿಕ್ಷೆ ನೀಡುವ ಬದಲು, ಸಂತ್ರಸ್ತರನ್ನು ಮೌನಗೊಳಿಸುವ ಪ್ರಯತ್ನ ಇದಾಗಿದೆ” ಎಂದು ಹೆಸರು ಹೇಳಲು ಇಚ್ಛಿಸದ ಒಬ್ಬ ಗ್ರಾಮಸ್ಥ ಹೇಳಿದರು.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡುತ್ತಿದ್ದಂತೆ, ಅಲಿಶಾನ್ ನಾಪತ್ತೆ ಮತ್ತು ಸದ್ದಾಂ ಅವರಿಗೆ ಗುಂಡು ಹಾರಿಸಿದ ಸಂದರ್ಭಗಳ ಬಗ್ಗೆ ವಿವರಣೆ ನೀಡುವಂತೆ ಕೌಶಂಬಿ ಪೊಲೀಸರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಈ ಪ್ರಕರಣವು ಅಧಿಕಾರದ ದುರುಪಯೋಗದ ದೊಡ್ಡ ಮಾದರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ ಹಕ್ಕುಗಳ ಹೋರಾಟಗಾರರು ಸ್ವತಂತ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಸದ್ಯ, ಕುಟುಂಬವು ಭಯದಲ್ಲಿದೆ. “ನಮಗೆ ಕೇವಲ ನ್ಯಾಯ ಬೇಕು. ಮುಗ್ಧ ಮುಸ್ಲಿಮರನ್ನು ಅಪರಾಧಿಗಳೆಂದು ಪರಿಗಣಿಸುವುದನ್ನು ನಿಲ್ಲಿಸಿ. ನಮ್ಮ ಮಗ ಜೀವಂತವಾಗಿ ಹಿಂದಿರುಗಬೇಕು” ಎಂದು ಇಶಿದಾ ಮನವಿ ಮಾಡಿದರು, ಸಮುದಾಯವು ಆತಂಕದಿಂದ ಉತ್ತರಗಳಿಗಾಗಿ ಕಾಯುತ್ತಿದೆ.

ಒಡಿಶಾ| ಗೋಹತ್ಯೆ ಆರೋಪದ ಮೇಲೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...