Homeಮುಖಪುಟಕೌಶಂಬಿ: 'ನಕಲಿ ಎನ್‌ಕೌಂಟರ್' ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ

ಕೌಶಂಬಿ: ‘ನಕಲಿ ಎನ್‌ಕೌಂಟರ್’ ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ

- Advertisement -
- Advertisement -

ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸರಾಯ್ ಅಕಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಪೊಲೀಸರು ತನ್ನ ಮಗ ಸದ್ದಾಂನನ್ನು ‘ನಕಲಿ ಎನ್‌ಕೌಂಟರ್’ನಲ್ಲಿ ಗುಂಡಿಕ್ಕಿ ಗಾಯಗೊಳಿಸಿದ್ದಾರೆ ಮತ್ತು ಇನ್ನೊಬ್ಬ ಮಗ ಅಲಿಶಾನ್ ನಾಪತ್ತೆಯಾಗಿದ್ದಾನೆ ಎಂದು ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಕುಟುಂಬವು ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ವಿಡಿಯೊ ಹಂಚಿಕೊಂಡಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಗಮನ ಸೆಳೆದಿದೆ. ಸದ್ದಾಂ ಮತ್ತು ಅಲಿಶಾನ್ ತಂದೆ ಮೊಯಿನ್ ಅಹ್ಮದ್ ಅವರ ಮೇಲೆ ಹಲ್ಲೆ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಬ್ಬರು ಸಹೋದರರು ಆರೋಪಿಗಳನ್ನು ಪ್ರಶ್ನಿಸಲು ಹೋದಾಗ ಈ ಘಟನೆ ನಡೆದಿದೆ ಎಂದು ಕುಟುಂಬ ಹೇಳಿಕೊಂಡಿದೆ.

ಪೊಲೀಸರು ಇಬ್ಬರೂ ಸಹೋದರರನ್ನು ಕರೆದೊಯ್ದ ನಂತರ, ಸದ್ದಾಂನನ್ನು ಎನ್‌ಕೌಂಟರ್ ನಂತರ ಬಂಧಿಸಲಾಗಿದೆ ಎಂದು ತೋರಿಸಲಾಗಿದೆ. ಆದರೆ, ಅಲಿಶಾನ್‌ನ ಸುಳಿವು ಇನ್ನೂ ಸಿಕ್ಕಿಲ್ಲ. ಈ ಕುರಿತು ಮಾತನಾಡಿದ ಸದ್ದಾಂ ಅವರ ಪತ್ನಿ ಇಶಿದಾ, “ನನ್ನ ಗಂಡ ಮತ್ತು ಭಾವ ಅಲಿಶಾನ್ ಇಬ್ಬರನ್ನೂ ಪೊಲೀಸರು ಕರೆದೊಯ್ದಿದ್ದಾರೆ. ಈಗ ನನ್ನ ಭಾವನ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅವನಿಗೂ ಏನಾದರೂ ಆಗಬಹುದೆಂದು ನಾವು ಭಯಪಡುತ್ತಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ‘ಎನ್‌ಕೌಂಟರ್ ಸಂಸ್ಕೃತಿ’ಯ ಬಗ್ಗೆ ಮತ್ತಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ಈ ರೀತಿಯ ಪ್ರಕರಣಗಳು, ನಿರ್ದಿಷ್ಟವಾಗಿ ಮುಸ್ಲಿಮರು ಮತ್ತು ದಲಿತರನ್ನು ಗುರಿಯಾಗಿಸಿಕೊಳ್ಳುತ್ತಿವೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. ಕುಟುಂಬವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನ್ಯಾಯಕ್ಕಾಗಿ ಮನವಿ ಮಾಡಿದ್ದು, ಪೊಲೀಸ್ ಕ್ರಮದ ವಿರುದ್ಧ ತನಿಖೆಗೆ ಒತ್ತಾಯಿಸಿದೆ.

ಪೊಲೀಸರು ತಪ್ಪು ಮಾಡಿದ್ದಾರೆ ಎಂದು ಆರೋಪಿಸುವ ಸಂತ್ರಸ್ತರ ಕುಟುಂಬದ ಹೊಸ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಆರೋಪಗಳು ಹೊರಬಿದ್ದಿವೆ. ಗ್ರಾಮ ಪಂಚಾಯತ್ ಮುಖ್ಯಸ್ಥೆ ಇಶಿದಾ, ಪೊಲೀಸರ ಮೇಲೆ ದೂರು ನೀಡಿ, ಸ್ಥಳೀಯ ಜಗಳವು ಕೈ ಮೀರಿದ ನಂತರ ಕೌಶಂಬಿ ಪೊಲೀಸರು ತಮ್ಮ ಪತಿ ಸದ್ದಾಂ ಮತ್ತು ಭಾವ ಅಲಿಶಾನ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೊಲೀಸರು ನನ್ನ ಪತಿ ಮತ್ತು ನನ್ನ ಭಾವ ಇಬ್ಬರನ್ನೂ ಕರೆದೊಯ್ದಿದ್ದಾರೆ. ನಂತರ, ಅವರು ಎನ್‌ಕೌಂಟರ್‌ನಲ್ಲಿ ಸದ್ದಾಂ ಅವರನ್ನು ಬಂಧಿಸಿ ಅವರ ಕಾಲಿಗೆ ಗುಂಡು ಹಾರಿಸಿದ್ದಾರೆ. ಆದರೆ ಅಲಿಶಾನ್ ಎಲ್ಲಿದ್ದಾರೆ? ಅವರನ್ನೂ ಕೊಲ್ಲುತ್ತಾರೆ ಎಂದು ನಮಗೆ ಭಯವಾಗಿದೆ” ಎಂದು ಹೇಳಿದರು.

ಇಶಿದಾ ಕಣ್ಣೀರು ಹಾಕುತ್ತಾ, “ಸದ್ದಾಂ ಕ್ರಿಮಿನಲ್ ಅಲ್ಲ. ತನ್ನ ತಂದೆಯನ್ನು ಥಳಿಸಿದವರನ್ನು ಪ್ರಶ್ನಿಸಲು ಅವನು ಹೋಗಿದ್ದ ಅಷ್ಟೇ. ನಮಗೆ ನ್ಯಾಯ ಒದಗಿಸುವ ಬದಲು, ಪೊಲೀಸರು ನನ್ನ ಪತಿಯನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ಹೇಳಿದರು.

ಇಶಿದಾ ಅವರ ಮಾವ ಮೊಯಿನ್ ಅಹ್ಮದ್, ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಸರಾಯ್ ಅಕಿಲ್ ಮಾರುಕಟ್ಟೆಗೆ ಹೋದಾಗ ಈ ವಿವಾದ ಪ್ರಾರಂಭವಾಯಿತು. ಅಲ್ಲಿ, ಮಾದಕ ವ್ಯಸನಿಗಳೆಂದು ಹೇಳಲಾದ ಇಬ್ಬರು ಅಥವಾ ಮೂವರು ವ್ಯಕ್ತಿಗಳು ಅವರ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದರು.

ಈ ಸುದ್ದಿ ಸದ್ದಾಂ ಮತ್ತು ಅಲಿಶಾನ್‌ಗೆ ತಲುಪಿದಾಗ, ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಹಲ್ಲೆಕೋರರನ್ನು ಪ್ರಶ್ನಿಸಿದ್ದಾರೆ. ಮಾತುಕತೆ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸಿದ್ದು, ಇಬ್ಬರೂ ಸಹೋದರರನ್ನು ಪೊಲೀಸರು ಕರೆದೊಯ್ದಿದ್ದಾರೆ. ಕುಟುಂಬದ ಪ್ರಕಾರ, ನಂತರ ನಡೆದ ಘಟನೆಯಿಂದ ಅವರಿಗೆ ಆಘಾತವಾಗಿದೆ. ಸದ್ದಾಂ ಅವರನ್ನು ‘ಎನ್‌ಕೌಂಟರ್’ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತೋರಿಸಿದ್ದು, ಅವರ ಕಾಲಿಗೆ ಗುಂಡು ಹಾರಿಸಲಾಗಿದೆ. ಆದರೆ, ಅಲಿಶಾನ್ ಯಾವುದೇ ವಿವರಣೆಯಿಲ್ಲದೆ ನಾಪತ್ತೆಯಾಗಿದ್ದಾರೆ.

ಹಿರಿಯ ತಂದೆ ಮೊಯಿನ್ ಅಹ್ಮದ್ ಕೂಡ ವೈರಲ್ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದು, ಹಲ್ಲೆಯಿಂದ ಅವರ ಮುಖದಲ್ಲಿ ರಕ್ತವಿತ್ತು. ತಮ್ಮ ಪುತ್ರರನ್ನು ಅಪರಾಧಿಗಳೆಂದು ಬಿಂಬಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ನನ್ನ ಮೇಲೆ ಮೊದಲು ಹಲ್ಲೆಯಾಯಿತು. ನನ್ನ ಪುತ್ರರು ನನ್ನನ್ನು ರಕ್ಷಿಸಲು ಮಾತ್ರ ಬಂದಿದ್ದರು. ಆದರೆ ಪೊಲೀಸರು ಕಥೆಯನ್ನು ತಿರುಚಿ, ನಮ್ಮ ವಿರುದ್ಧ ವಿಡಿಯೊಗಳನ್ನು ಹರಡಿದ್ದಾರೆ ಮತ್ತು ಈಗ ನನ್ನ ಒಬ್ಬ ಮಗ ನಾಪತ್ತೆಯಾಗಿದ್ದಾನೆ” ಎಂದು ಅವರು ಹೇಳಿದರು.

ಕುಟುಂಬವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದೆ. “ನನ್ನ ಭಾವ ಅಲಿಶಾನ್‌ಗೆ ಏನಾದರೂ ಆದರೆ, ಇಡೀ ಜವಾಬ್ದಾರಿ ಕೌಶಂಬಿ ಪೊಲೀಸರದ್ದಾಗಿರುತ್ತದೆ” ಎಂದು ಇಶಿದಾ ಘೋಷಿಸಿದರು.

ಸ್ಥಳೀಯ ನಿವಾಸಿಗಳು ಕೂಡ ಪೊಲೀಸರ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನಿಸಲು ಪ್ರಾರಂಭಿಸಿದ್ದಾರೆ. “ನೈಜ ಅಪರಾಧಿಗಳಿಗೆ ಶಿಕ್ಷೆ ನೀಡುವ ಬದಲು, ಸಂತ್ರಸ್ತರನ್ನು ಮೌನಗೊಳಿಸುವ ಪ್ರಯತ್ನ ಇದಾಗಿದೆ” ಎಂದು ಹೆಸರು ಹೇಳಲು ಇಚ್ಛಿಸದ ಒಬ್ಬ ಗ್ರಾಮಸ್ಥ ಹೇಳಿದರು.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡುತ್ತಿದ್ದಂತೆ, ಅಲಿಶಾನ್ ನಾಪತ್ತೆ ಮತ್ತು ಸದ್ದಾಂ ಅವರಿಗೆ ಗುಂಡು ಹಾರಿಸಿದ ಸಂದರ್ಭಗಳ ಬಗ್ಗೆ ವಿವರಣೆ ನೀಡುವಂತೆ ಕೌಶಂಬಿ ಪೊಲೀಸರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಈ ಪ್ರಕರಣವು ಅಧಿಕಾರದ ದುರುಪಯೋಗದ ದೊಡ್ಡ ಮಾದರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ ಹಕ್ಕುಗಳ ಹೋರಾಟಗಾರರು ಸ್ವತಂತ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಸದ್ಯ, ಕುಟುಂಬವು ಭಯದಲ್ಲಿದೆ. “ನಮಗೆ ಕೇವಲ ನ್ಯಾಯ ಬೇಕು. ಮುಗ್ಧ ಮುಸ್ಲಿಮರನ್ನು ಅಪರಾಧಿಗಳೆಂದು ಪರಿಗಣಿಸುವುದನ್ನು ನಿಲ್ಲಿಸಿ. ನಮ್ಮ ಮಗ ಜೀವಂತವಾಗಿ ಹಿಂದಿರುಗಬೇಕು” ಎಂದು ಇಶಿದಾ ಮನವಿ ಮಾಡಿದರು, ಸಮುದಾಯವು ಆತಂಕದಿಂದ ಉತ್ತರಗಳಿಗಾಗಿ ಕಾಯುತ್ತಿದೆ.

ಒಡಿಶಾ| ಗೋಹತ್ಯೆ ಆರೋಪದ ಮೇಲೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...