Homeಮುಖಪುಟಕೌಶಂಬಿ: 'ನಕಲಿ ಎನ್‌ಕೌಂಟರ್' ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ

ಕೌಶಂಬಿ: ‘ನಕಲಿ ಎನ್‌ಕೌಂಟರ್’ ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ

- Advertisement -
- Advertisement -

ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸರಾಯ್ ಅಕಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಪೊಲೀಸರು ತನ್ನ ಮಗ ಸದ್ದಾಂನನ್ನು ‘ನಕಲಿ ಎನ್‌ಕೌಂಟರ್’ನಲ್ಲಿ ಗುಂಡಿಕ್ಕಿ ಗಾಯಗೊಳಿಸಿದ್ದಾರೆ ಮತ್ತು ಇನ್ನೊಬ್ಬ ಮಗ ಅಲಿಶಾನ್ ನಾಪತ್ತೆಯಾಗಿದ್ದಾನೆ ಎಂದು ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಕುಟುಂಬವು ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ವಿಡಿಯೊ ಹಂಚಿಕೊಂಡಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಗಮನ ಸೆಳೆದಿದೆ. ಸದ್ದಾಂ ಮತ್ತು ಅಲಿಶಾನ್ ತಂದೆ ಮೊಯಿನ್ ಅಹ್ಮದ್ ಅವರ ಮೇಲೆ ಹಲ್ಲೆ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಬ್ಬರು ಸಹೋದರರು ಆರೋಪಿಗಳನ್ನು ಪ್ರಶ್ನಿಸಲು ಹೋದಾಗ ಈ ಘಟನೆ ನಡೆದಿದೆ ಎಂದು ಕುಟುಂಬ ಹೇಳಿಕೊಂಡಿದೆ.

ಪೊಲೀಸರು ಇಬ್ಬರೂ ಸಹೋದರರನ್ನು ಕರೆದೊಯ್ದ ನಂತರ, ಸದ್ದಾಂನನ್ನು ಎನ್‌ಕೌಂಟರ್ ನಂತರ ಬಂಧಿಸಲಾಗಿದೆ ಎಂದು ತೋರಿಸಲಾಗಿದೆ. ಆದರೆ, ಅಲಿಶಾನ್‌ನ ಸುಳಿವು ಇನ್ನೂ ಸಿಕ್ಕಿಲ್ಲ. ಈ ಕುರಿತು ಮಾತನಾಡಿದ ಸದ್ದಾಂ ಅವರ ಪತ್ನಿ ಇಶಿದಾ, “ನನ್ನ ಗಂಡ ಮತ್ತು ಭಾವ ಅಲಿಶಾನ್ ಇಬ್ಬರನ್ನೂ ಪೊಲೀಸರು ಕರೆದೊಯ್ದಿದ್ದಾರೆ. ಈಗ ನನ್ನ ಭಾವನ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅವನಿಗೂ ಏನಾದರೂ ಆಗಬಹುದೆಂದು ನಾವು ಭಯಪಡುತ್ತಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ‘ಎನ್‌ಕೌಂಟರ್ ಸಂಸ್ಕೃತಿ’ಯ ಬಗ್ಗೆ ಮತ್ತಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ಈ ರೀತಿಯ ಪ್ರಕರಣಗಳು, ನಿರ್ದಿಷ್ಟವಾಗಿ ಮುಸ್ಲಿಮರು ಮತ್ತು ದಲಿತರನ್ನು ಗುರಿಯಾಗಿಸಿಕೊಳ್ಳುತ್ತಿವೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. ಕುಟುಂಬವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನ್ಯಾಯಕ್ಕಾಗಿ ಮನವಿ ಮಾಡಿದ್ದು, ಪೊಲೀಸ್ ಕ್ರಮದ ವಿರುದ್ಧ ತನಿಖೆಗೆ ಒತ್ತಾಯಿಸಿದೆ.

ಪೊಲೀಸರು ತಪ್ಪು ಮಾಡಿದ್ದಾರೆ ಎಂದು ಆರೋಪಿಸುವ ಸಂತ್ರಸ್ತರ ಕುಟುಂಬದ ಹೊಸ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಆರೋಪಗಳು ಹೊರಬಿದ್ದಿವೆ. ಗ್ರಾಮ ಪಂಚಾಯತ್ ಮುಖ್ಯಸ್ಥೆ ಇಶಿದಾ, ಪೊಲೀಸರ ಮೇಲೆ ದೂರು ನೀಡಿ, ಸ್ಥಳೀಯ ಜಗಳವು ಕೈ ಮೀರಿದ ನಂತರ ಕೌಶಂಬಿ ಪೊಲೀಸರು ತಮ್ಮ ಪತಿ ಸದ್ದಾಂ ಮತ್ತು ಭಾವ ಅಲಿಶಾನ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೊಲೀಸರು ನನ್ನ ಪತಿ ಮತ್ತು ನನ್ನ ಭಾವ ಇಬ್ಬರನ್ನೂ ಕರೆದೊಯ್ದಿದ್ದಾರೆ. ನಂತರ, ಅವರು ಎನ್‌ಕೌಂಟರ್‌ನಲ್ಲಿ ಸದ್ದಾಂ ಅವರನ್ನು ಬಂಧಿಸಿ ಅವರ ಕಾಲಿಗೆ ಗುಂಡು ಹಾರಿಸಿದ್ದಾರೆ. ಆದರೆ ಅಲಿಶಾನ್ ಎಲ್ಲಿದ್ದಾರೆ? ಅವರನ್ನೂ ಕೊಲ್ಲುತ್ತಾರೆ ಎಂದು ನಮಗೆ ಭಯವಾಗಿದೆ” ಎಂದು ಹೇಳಿದರು.

ಇಶಿದಾ ಕಣ್ಣೀರು ಹಾಕುತ್ತಾ, “ಸದ್ದಾಂ ಕ್ರಿಮಿನಲ್ ಅಲ್ಲ. ತನ್ನ ತಂದೆಯನ್ನು ಥಳಿಸಿದವರನ್ನು ಪ್ರಶ್ನಿಸಲು ಅವನು ಹೋಗಿದ್ದ ಅಷ್ಟೇ. ನಮಗೆ ನ್ಯಾಯ ಒದಗಿಸುವ ಬದಲು, ಪೊಲೀಸರು ನನ್ನ ಪತಿಯನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ಹೇಳಿದರು.

ಇಶಿದಾ ಅವರ ಮಾವ ಮೊಯಿನ್ ಅಹ್ಮದ್, ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಸರಾಯ್ ಅಕಿಲ್ ಮಾರುಕಟ್ಟೆಗೆ ಹೋದಾಗ ಈ ವಿವಾದ ಪ್ರಾರಂಭವಾಯಿತು. ಅಲ್ಲಿ, ಮಾದಕ ವ್ಯಸನಿಗಳೆಂದು ಹೇಳಲಾದ ಇಬ್ಬರು ಅಥವಾ ಮೂವರು ವ್ಯಕ್ತಿಗಳು ಅವರ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದರು.

ಈ ಸುದ್ದಿ ಸದ್ದಾಂ ಮತ್ತು ಅಲಿಶಾನ್‌ಗೆ ತಲುಪಿದಾಗ, ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಹಲ್ಲೆಕೋರರನ್ನು ಪ್ರಶ್ನಿಸಿದ್ದಾರೆ. ಮಾತುಕತೆ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸಿದ್ದು, ಇಬ್ಬರೂ ಸಹೋದರರನ್ನು ಪೊಲೀಸರು ಕರೆದೊಯ್ದಿದ್ದಾರೆ. ಕುಟುಂಬದ ಪ್ರಕಾರ, ನಂತರ ನಡೆದ ಘಟನೆಯಿಂದ ಅವರಿಗೆ ಆಘಾತವಾಗಿದೆ. ಸದ್ದಾಂ ಅವರನ್ನು ‘ಎನ್‌ಕೌಂಟರ್’ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತೋರಿಸಿದ್ದು, ಅವರ ಕಾಲಿಗೆ ಗುಂಡು ಹಾರಿಸಲಾಗಿದೆ. ಆದರೆ, ಅಲಿಶಾನ್ ಯಾವುದೇ ವಿವರಣೆಯಿಲ್ಲದೆ ನಾಪತ್ತೆಯಾಗಿದ್ದಾರೆ.

ಹಿರಿಯ ತಂದೆ ಮೊಯಿನ್ ಅಹ್ಮದ್ ಕೂಡ ವೈರಲ್ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದು, ಹಲ್ಲೆಯಿಂದ ಅವರ ಮುಖದಲ್ಲಿ ರಕ್ತವಿತ್ತು. ತಮ್ಮ ಪುತ್ರರನ್ನು ಅಪರಾಧಿಗಳೆಂದು ಬಿಂಬಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ನನ್ನ ಮೇಲೆ ಮೊದಲು ಹಲ್ಲೆಯಾಯಿತು. ನನ್ನ ಪುತ್ರರು ನನ್ನನ್ನು ರಕ್ಷಿಸಲು ಮಾತ್ರ ಬಂದಿದ್ದರು. ಆದರೆ ಪೊಲೀಸರು ಕಥೆಯನ್ನು ತಿರುಚಿ, ನಮ್ಮ ವಿರುದ್ಧ ವಿಡಿಯೊಗಳನ್ನು ಹರಡಿದ್ದಾರೆ ಮತ್ತು ಈಗ ನನ್ನ ಒಬ್ಬ ಮಗ ನಾಪತ್ತೆಯಾಗಿದ್ದಾನೆ” ಎಂದು ಅವರು ಹೇಳಿದರು.

ಕುಟುಂಬವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದೆ. “ನನ್ನ ಭಾವ ಅಲಿಶಾನ್‌ಗೆ ಏನಾದರೂ ಆದರೆ, ಇಡೀ ಜವಾಬ್ದಾರಿ ಕೌಶಂಬಿ ಪೊಲೀಸರದ್ದಾಗಿರುತ್ತದೆ” ಎಂದು ಇಶಿದಾ ಘೋಷಿಸಿದರು.

ಸ್ಥಳೀಯ ನಿವಾಸಿಗಳು ಕೂಡ ಪೊಲೀಸರ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನಿಸಲು ಪ್ರಾರಂಭಿಸಿದ್ದಾರೆ. “ನೈಜ ಅಪರಾಧಿಗಳಿಗೆ ಶಿಕ್ಷೆ ನೀಡುವ ಬದಲು, ಸಂತ್ರಸ್ತರನ್ನು ಮೌನಗೊಳಿಸುವ ಪ್ರಯತ್ನ ಇದಾಗಿದೆ” ಎಂದು ಹೆಸರು ಹೇಳಲು ಇಚ್ಛಿಸದ ಒಬ್ಬ ಗ್ರಾಮಸ್ಥ ಹೇಳಿದರು.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡುತ್ತಿದ್ದಂತೆ, ಅಲಿಶಾನ್ ನಾಪತ್ತೆ ಮತ್ತು ಸದ್ದಾಂ ಅವರಿಗೆ ಗುಂಡು ಹಾರಿಸಿದ ಸಂದರ್ಭಗಳ ಬಗ್ಗೆ ವಿವರಣೆ ನೀಡುವಂತೆ ಕೌಶಂಬಿ ಪೊಲೀಸರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಈ ಪ್ರಕರಣವು ಅಧಿಕಾರದ ದುರುಪಯೋಗದ ದೊಡ್ಡ ಮಾದರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ ಹಕ್ಕುಗಳ ಹೋರಾಟಗಾರರು ಸ್ವತಂತ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಸದ್ಯ, ಕುಟುಂಬವು ಭಯದಲ್ಲಿದೆ. “ನಮಗೆ ಕೇವಲ ನ್ಯಾಯ ಬೇಕು. ಮುಗ್ಧ ಮುಸ್ಲಿಮರನ್ನು ಅಪರಾಧಿಗಳೆಂದು ಪರಿಗಣಿಸುವುದನ್ನು ನಿಲ್ಲಿಸಿ. ನಮ್ಮ ಮಗ ಜೀವಂತವಾಗಿ ಹಿಂದಿರುಗಬೇಕು” ಎಂದು ಇಶಿದಾ ಮನವಿ ಮಾಡಿದರು, ಸಮುದಾಯವು ಆತಂಕದಿಂದ ಉತ್ತರಗಳಿಗಾಗಿ ಕಾಯುತ್ತಿದೆ.

ಒಡಿಶಾ| ಗೋಹತ್ಯೆ ಆರೋಪದ ಮೇಲೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...