Homeಕರ್ನಾಟಕಕಾವೇರಿ ಸಂಕಷ್ಟ: ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರು ಪತ್ರ ಬರೆದಿರುವುದು ಸ್ವಾಗತಾರ್ಹ ಎಂದ ಸಿಎಂ ಸಿದ್ದರಾಮಯ್ಯ

ಕಾವೇರಿ ಸಂಕಷ್ಟ: ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರು ಪತ್ರ ಬರೆದಿರುವುದು ಸ್ವಾಗತಾರ್ಹ ಎಂದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಗ್ಗೆ ಟ್ವೀಟ್ ಮಾಡಿದ್ದು, ”ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ” ಎಂದು ಪತ್ರದ ಪ್ರತಿಗಳನ್ನು ಹಂಚಿಕೊಂಡಿದ್ದಾರೆ.

ದೇವೇಗೌಡ ಅವರ ಟ್ವೀಟ್‌ನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ”ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ ಇಲ್ಲಿದೆ…

”ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನಿ ಮೋದಿ ಅವರನ್ನು ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

”ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...