Homeಕರ್ನಾಟಕಕಾವೇರಿ ವಿವಾದ: ಸುಪ್ರೀಂ ಆದೇಶಕ್ಕೆ ವಿರೋಧ; ರಾಜ್ಯದ ಹಲವೆಡೆ ಪ್ರತಿಭಟನೆ

ಕಾವೇರಿ ವಿವಾದ: ಸುಪ್ರೀಂ ಆದೇಶಕ್ಕೆ ವಿರೋಧ; ರಾಜ್ಯದ ಹಲವೆಡೆ ಪ್ರತಿಭಟನೆ

- Advertisement -
- Advertisement -

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂಕೋರ್ಟ್‌ ಸೂಚಿಸಿದ ಬೆನ್ನಲ್ಲೇ ರಾಜ್ಯದ ವಿವಧೆಡೆ ಪ್ರತಿಭಟನೆ ಭುಗಿಲೆದ್ದಿದೆ.

ಚಾಮರಾಜನಗರದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ಸೇನಾ ಪಡೆಗಳ ವತಿಯಿಂದ ಪ್ರತ್ಯೇಕವಾಗಿ ಪ್ರತಿಭಟನೆ ನಡೆದಿದೆ. ಕಬ್ಬು ಬೆಳೆಗಾರರ ಸಂಘ ಬೆಂಗಳೂರು–ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಧರಣಿ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಡ್ಯದ ಜೆ.ಸಿ ವೃತ್ತದಲ್ಲಿ ಕನ್ನಡ ಸೇನೆ ಸದಸ್ಯರು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಸರ್.ಎಂ.ವಿ ಪ್ರತಿಮೆ ಎದುರು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ‌ ಸದಸ್ಯರು‌ ಕೂಡ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಕೆಆರ್‌ಎಸ್ ಜಲಾಶಯದ ಪ್ರವೇಶ ದ್ವಾರದಲ್ಲಿ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿ ಒಳನುಗ್ಗಲು ಯತ್ನಿಸಿದ್ದು, ಈ ವೇಳೆ ಭದ್ರತಾ ಪಡೆದ ಸಿಬ್ಬಂದಿಗಳು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಮಂಡ್ಯದಲ್ಲಿ ಶನಿವಾರ ಬಂದ್‌ ಮಾಡುವುದಾಗಿ ಕೂಡ ನಿರ್ಧಾರಕ್ಕೆ ಬರಲಾಗಿದೆ.

ಇನ್ನು ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಈ ವೇಳೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಜಮಾಯಿಸಿದ ನೂರಕ್ಕೂ ಹೆಚ್ಚು ಕನ್ನಡಪರ ಸಂಘಟನೆಯ ಸದಸ್ಯರು ವಿಧಾನಸೌಧದತ್ತ ಪಾದಯಾತ್ರೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಕ.ರ.ವೇ ಅಧ್ಯಕ್ಷ ನಾರಾಯಣಗೌಡ ಮಾತನಾಡಿ, ರಾಜ್ಯ ಸರ್ಕಾರ ಈ ವಿಚಾರದಲ್ಲಿ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ತಮಿಳುನಾಡಿಗೆ ನೀರು ಬಿಡಬಾರದು. ರೈತರು ಸಂಕಷ್ಟದ ಸಮಯದಲ್ಲಿ ರಾಜ್ಯದ ರೈತರೊಂದಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು.

ಇದಲ್ಲದೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕರ್ನಾಟಕ ಬಂದ್‌ಗೆ ಕರೆ ನೀಡಲು ಮುಂದಾಗಿದ್ದು, ಈ ಕುರಿತು ನಾಳೆ ಸಭೆ ಕರೆಯಲಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಉತ್ತರಪ್ರದೇಶ: ಪೊಲೀಸರ ನಿರ್ಲಕ್ಷ್ಯ; ಮೂವರು ಆರೋಪಿಗಳು ಕಸ್ಟಡಿಯಿಂದ ಪರಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...