Homeಮುಖಪುಟಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

- Advertisement -
- Advertisement -

ಗೌರಿ ಲಂಕೇಶ್‌ ದಿಟ್ಟ ಪತ್ರಕರ್ತೆ ಮಾತ್ರ ಆಗಿರಲಿಲ್ಲ, ಹೋರಾಟಗಾರ್ತಿಯೂ, ಪ್ರೀತಿ ತುಂಬಿದ ತಾಯಿಯೂ, ಸಾಮಾಜಿಕ ಚಳವಳಿಗಳ ಶಕ್ತಿಯೂ ಆಗಿದ್ದರು. ಆ ಮೂಲಕ ಕೋಮುವಾದಿಗಳಿಗೆ ಸಿಂಹಸ್ವಪ್ನವಾಗಿದ್ದರು. ಕೋಮು ಸೌಹಾರ್ದಕ್ಕಾಗಿ, ಬಹುತ್ವದ ಉಳಿವಿಗಾಗಿ ಅವರು ನಿರಂತರ ಶ್ರಮಿಸುತ್ತಿದ್ದರು. ಶೋಷಿತರು ದನಿಯಾಗಿದ್ದರು. ಅದಕ್ಕಾಗಿಯೇ ಅವರು ಸನಾತನಾವಾದಿಗಳ ಗುಂಡಿಗೆ ಎದೆಯೊಡ್ಡಬೇಕಾಯಿತು. ಆದರೆ ಯಾವ ಗೌರಿ ಲಂಕೇಶ್‌ರವರ ದನಿಯನ್ನು ಅಡಗಿಸಲು ಅವರನ್ನು ಹತ್ಯೆ ಮಾಡಲಾಯಿತೊ ಆ ದನಿ ದ್ವಿಗುಣಗೊಂಡಿತು. ರಾಜ್ಯ-ದೇಶ-ಪ್ರಪಂಚದೆಲ್ಲೆಡೆ ನಾನು ಗೌರಿ ನಾವೆಲ್ಲರೂ ಗೌರಿ ಎಂಬ ದನಿ ಎದ್ದಿತು. ಅದು ಇಂದಿಗೂ ಮುಂದುವರೆಯುತ್ತಿದೆ. ಅದು ಮತ್ತಷ್ಟು ಮಾರ್ಧನಿಸುವಂತೆ ಮಾಡಲು ಅವರ ಸಹೋದರಿ ಕವಿತಾ ಲಂಕೇಶ್‌ ಮುಂದಾಗಿದ್ದು ಗೌರಿ ಲಂಕೇಶ್‌ರವರ ಬದುಕು, ಹೋರಾಟದ ಕುರಿತು ಸಾಕ್ಷ್ಯಚಿತ್ರವೊಂದನ್ನು ತಯಾರಿಸುತ್ತಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕಿ ಕವಿತಾ ಲಂಕೇಶ್ ಅವರು ಗೌರಿ ಲಂಕೇಶ್ ರವರ ಹತ್ಯೆಗೆ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಅದರೊಟ್ಟಿಗೆ ಗೌರಿಯವರ ಕುರಿತು ಪ್ರಪಂಚಕ್ಕೆ ತಿಳಿಸುವ ಕೆಲಸದಲ್ಲಿಯೂ ನಿರತರಾಗಿದ್ದಾರೆ. ಅದಕ್ಕಾಗಿ ಇಡೀ ಕರ್ನಾಟಕ ಸುತ್ತುತ್ತಿರುವ ಅವರು ಈ ತಿಂಗಳಿನಲ್ಲಿ ಸಾಕ್ಷ್ಯಚಿತ್ರ ಪೂರ್ಣಗೊಳಿಸಿ 2022ರ ಜನವರಿಯಲ್ಲಿ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದಾರೆ.

ಆಮ್ಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ ಸಂಸ್ಥೆಯು ಕಳೆದ ವರ್ಷ ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ” ಎಂದು ಕವಿತಾ ಲಂಕೇಶ್‌ ಹೇಳಿದ್ದಾರೆ.

“ಗೌರಿ ನನಗೆ ಸಹೋದರಿ ಎಂಬುದಕ್ಕಿಂತಲೂ ಮಿಗಿಲಾಗಿ ಆಕೆಯ ಜೀವನವು ಆಕೆಯ ಬಗ್ಗೆ ಚಿತ್ರಮಾಡಬೇಕೆಂಬ ಕಠಿಣ ನಿರ್ಧಾರಕ್ಕೆ ಕಾರಣವಾಗಿತ್ತು. ಆಕೆ ನನ್ನ ಸ್ನೇಹಿತೆ, ಮಾರ್ಗದರ್ಶಕಿಯಾಗಿದ್ದಳು. ಆಕೆ ನನ್ನ ಹತ್ತಿರದಲ್ಲಿಲ್ಲ ಎಂದು ನಾನು ಇನ್ನೂ ಅರ್ಥಮಾಡಿಕೊಳ್ಳಬೇಕಾಗಿದೆ. ಚಿತ್ರ ಮಾಡುವುದು ಎಂದರೆ, ಆ ಆಘಾತಕಾರಿ ನೆನಪುಗಳಿಗೆ ಹಿಂತಿರುಗುವುದು. ಆದರೆ, ನ್ಯಾಯ ಮತ್ತು ಜನರ ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಡುವಾಗ ಯಾವುದೇ ಭಯವಿಲ್ಲದ ಆಕೆಯ ಕಥೆಯನ್ನು ನಾನು ಹೇಳಲೇಬೇಕು ಎಂದು ನಾನು ಭಾವಿಸಿದ್ದೇನೆ” ಎಂದು ಕವಿತಾ ಲಂಕೇಶ್ ಹೇಳಿದ್ದಾರೆ. 

ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

2000 ರಲ್ಲಿ ನಮ್ಮ ತಂದೆಯ ಪ್ರಕಾಶನ ಲಂಕೇಶ್ ಪತ್ರಿಕೆಯ ಜವಾಬ್ದಾರಿಯನ್ನು ಗೌರಿ ವಹಿಸಿಕೊಂಡಿರು. ನಂತರದ ಅವರ ಜೀವನ ಮತ್ತು ಅವರ ಕ್ರಿಯಾಶೀಲತೆಯನ್ನು ಈ ಚಿತ್ರ ಸೆರೆಹಿಡಿಯುತ್ತದೆ. ಸಾಕ್ಷ್ಯಚಿತ್ರವು ನೆದರ್ಲ್ಯಾಂಡ್‌ನಲ್ಲಿ ನಡೆಯುವ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ಪ್ರದರ್ಶನಗೊಳ್ಳುವ ಸಾಧ್ಯತೆಯಿದೆ.

ಸೆಪ್ಟೆಂಬರ್ 5, 2017 ರ ಸಂಜೆ, ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಯಲ್ಲಿ ಗೌರಿ ಹತ್ಯೆಯಾದರು. ಆಗಿನ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರವು ಸ್ಥಾಪಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) 18 ಆರೋಪಿಗಳನ್ನು ಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆ ಆರೋಪಿಗಳು ಬಲಪಂಥೀಯ ಗುಂಪುಗಳಿಗೆ ನಿಷ್ಠರಾಗಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವರದಿ ಮಾಡಿದ್ದಾರೆ. ಅವರ ಮೇಲೆ ಕಠಿಣ ಕೋಕಾ ಪ್ರಕರಣವನ್ನು ಹೇರಲಾಗಿದೆ. ಕರ್ನಾಟಕ ಹೈಕೋರ್ಟ್ ಒಬ್ಬ ಆರೋಪಿ ಮೇಲಿನ ಕೋಕಾ ಪ್ರಕರಣ ರದ್ದುಗೊಳಿಸಲು ಮುಂದಾಗಿತ್ತು. ಆಗ ಕವಿತಾ ಲಂಕೇಶ್‌ರವರು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ ಅದಕ್ಕೆ ತಡೆ ತಂದಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...