Homeಮುಖಪುಟಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

- Advertisement -
- Advertisement -

ಗೌರಿ ಲಂಕೇಶ್‌ ದಿಟ್ಟ ಪತ್ರಕರ್ತೆ ಮಾತ್ರ ಆಗಿರಲಿಲ್ಲ, ಹೋರಾಟಗಾರ್ತಿಯೂ, ಪ್ರೀತಿ ತುಂಬಿದ ತಾಯಿಯೂ, ಸಾಮಾಜಿಕ ಚಳವಳಿಗಳ ಶಕ್ತಿಯೂ ಆಗಿದ್ದರು. ಆ ಮೂಲಕ ಕೋಮುವಾದಿಗಳಿಗೆ ಸಿಂಹಸ್ವಪ್ನವಾಗಿದ್ದರು. ಕೋಮು ಸೌಹಾರ್ದಕ್ಕಾಗಿ, ಬಹುತ್ವದ ಉಳಿವಿಗಾಗಿ ಅವರು ನಿರಂತರ ಶ್ರಮಿಸುತ್ತಿದ್ದರು. ಶೋಷಿತರು ದನಿಯಾಗಿದ್ದರು. ಅದಕ್ಕಾಗಿಯೇ ಅವರು ಸನಾತನಾವಾದಿಗಳ ಗುಂಡಿಗೆ ಎದೆಯೊಡ್ಡಬೇಕಾಯಿತು. ಆದರೆ ಯಾವ ಗೌರಿ ಲಂಕೇಶ್‌ರವರ ದನಿಯನ್ನು ಅಡಗಿಸಲು ಅವರನ್ನು ಹತ್ಯೆ ಮಾಡಲಾಯಿತೊ ಆ ದನಿ ದ್ವಿಗುಣಗೊಂಡಿತು. ರಾಜ್ಯ-ದೇಶ-ಪ್ರಪಂಚದೆಲ್ಲೆಡೆ ನಾನು ಗೌರಿ ನಾವೆಲ್ಲರೂ ಗೌರಿ ಎಂಬ ದನಿ ಎದ್ದಿತು. ಅದು ಇಂದಿಗೂ ಮುಂದುವರೆಯುತ್ತಿದೆ. ಅದು ಮತ್ತಷ್ಟು ಮಾರ್ಧನಿಸುವಂತೆ ಮಾಡಲು ಅವರ ಸಹೋದರಿ ಕವಿತಾ ಲಂಕೇಶ್‌ ಮುಂದಾಗಿದ್ದು ಗೌರಿ ಲಂಕೇಶ್‌ರವರ ಬದುಕು, ಹೋರಾಟದ ಕುರಿತು ಸಾಕ್ಷ್ಯಚಿತ್ರವೊಂದನ್ನು ತಯಾರಿಸುತ್ತಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕಿ ಕವಿತಾ ಲಂಕೇಶ್ ಅವರು ಗೌರಿ ಲಂಕೇಶ್ ರವರ ಹತ್ಯೆಗೆ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಅದರೊಟ್ಟಿಗೆ ಗೌರಿಯವರ ಕುರಿತು ಪ್ರಪಂಚಕ್ಕೆ ತಿಳಿಸುವ ಕೆಲಸದಲ್ಲಿಯೂ ನಿರತರಾಗಿದ್ದಾರೆ. ಅದಕ್ಕಾಗಿ ಇಡೀ ಕರ್ನಾಟಕ ಸುತ್ತುತ್ತಿರುವ ಅವರು ಈ ತಿಂಗಳಿನಲ್ಲಿ ಸಾಕ್ಷ್ಯಚಿತ್ರ ಪೂರ್ಣಗೊಳಿಸಿ 2022ರ ಜನವರಿಯಲ್ಲಿ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದಾರೆ.

ಆಮ್ಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ ಸಂಸ್ಥೆಯು ಕಳೆದ ವರ್ಷ ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ” ಎಂದು ಕವಿತಾ ಲಂಕೇಶ್‌ ಹೇಳಿದ್ದಾರೆ.

“ಗೌರಿ ನನಗೆ ಸಹೋದರಿ ಎಂಬುದಕ್ಕಿಂತಲೂ ಮಿಗಿಲಾಗಿ ಆಕೆಯ ಜೀವನವು ಆಕೆಯ ಬಗ್ಗೆ ಚಿತ್ರಮಾಡಬೇಕೆಂಬ ಕಠಿಣ ನಿರ್ಧಾರಕ್ಕೆ ಕಾರಣವಾಗಿತ್ತು. ಆಕೆ ನನ್ನ ಸ್ನೇಹಿತೆ, ಮಾರ್ಗದರ್ಶಕಿಯಾಗಿದ್ದಳು. ಆಕೆ ನನ್ನ ಹತ್ತಿರದಲ್ಲಿಲ್ಲ ಎಂದು ನಾನು ಇನ್ನೂ ಅರ್ಥಮಾಡಿಕೊಳ್ಳಬೇಕಾಗಿದೆ. ಚಿತ್ರ ಮಾಡುವುದು ಎಂದರೆ, ಆ ಆಘಾತಕಾರಿ ನೆನಪುಗಳಿಗೆ ಹಿಂತಿರುಗುವುದು. ಆದರೆ, ನ್ಯಾಯ ಮತ್ತು ಜನರ ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಡುವಾಗ ಯಾವುದೇ ಭಯವಿಲ್ಲದ ಆಕೆಯ ಕಥೆಯನ್ನು ನಾನು ಹೇಳಲೇಬೇಕು ಎಂದು ನಾನು ಭಾವಿಸಿದ್ದೇನೆ” ಎಂದು ಕವಿತಾ ಲಂಕೇಶ್ ಹೇಳಿದ್ದಾರೆ. 

ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

2000 ರಲ್ಲಿ ನಮ್ಮ ತಂದೆಯ ಪ್ರಕಾಶನ ಲಂಕೇಶ್ ಪತ್ರಿಕೆಯ ಜವಾಬ್ದಾರಿಯನ್ನು ಗೌರಿ ವಹಿಸಿಕೊಂಡಿರು. ನಂತರದ ಅವರ ಜೀವನ ಮತ್ತು ಅವರ ಕ್ರಿಯಾಶೀಲತೆಯನ್ನು ಈ ಚಿತ್ರ ಸೆರೆಹಿಡಿಯುತ್ತದೆ. ಸಾಕ್ಷ್ಯಚಿತ್ರವು ನೆದರ್ಲ್ಯಾಂಡ್‌ನಲ್ಲಿ ನಡೆಯುವ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ಪ್ರದರ್ಶನಗೊಳ್ಳುವ ಸಾಧ್ಯತೆಯಿದೆ.

ಸೆಪ್ಟೆಂಬರ್ 5, 2017 ರ ಸಂಜೆ, ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಯಲ್ಲಿ ಗೌರಿ ಹತ್ಯೆಯಾದರು. ಆಗಿನ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರವು ಸ್ಥಾಪಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) 18 ಆರೋಪಿಗಳನ್ನು ಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆ ಆರೋಪಿಗಳು ಬಲಪಂಥೀಯ ಗುಂಪುಗಳಿಗೆ ನಿಷ್ಠರಾಗಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವರದಿ ಮಾಡಿದ್ದಾರೆ. ಅವರ ಮೇಲೆ ಕಠಿಣ ಕೋಕಾ ಪ್ರಕರಣವನ್ನು ಹೇರಲಾಗಿದೆ. ಕರ್ನಾಟಕ ಹೈಕೋರ್ಟ್ ಒಬ್ಬ ಆರೋಪಿ ಮೇಲಿನ ಕೋಕಾ ಪ್ರಕರಣ ರದ್ದುಗೊಳಿಸಲು ಮುಂದಾಗಿತ್ತು. ಆಗ ಕವಿತಾ ಲಂಕೇಶ್‌ರವರು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ ಅದಕ್ಕೆ ತಡೆ ತಂದಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...