Homeಮುಖಪುಟಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

- Advertisement -
- Advertisement -

ಗೌರಿ ಲಂಕೇಶ್‌ ದಿಟ್ಟ ಪತ್ರಕರ್ತೆ ಮಾತ್ರ ಆಗಿರಲಿಲ್ಲ, ಹೋರಾಟಗಾರ್ತಿಯೂ, ಪ್ರೀತಿ ತುಂಬಿದ ತಾಯಿಯೂ, ಸಾಮಾಜಿಕ ಚಳವಳಿಗಳ ಶಕ್ತಿಯೂ ಆಗಿದ್ದರು. ಆ ಮೂಲಕ ಕೋಮುವಾದಿಗಳಿಗೆ ಸಿಂಹಸ್ವಪ್ನವಾಗಿದ್ದರು. ಕೋಮು ಸೌಹಾರ್ದಕ್ಕಾಗಿ, ಬಹುತ್ವದ ಉಳಿವಿಗಾಗಿ ಅವರು ನಿರಂತರ ಶ್ರಮಿಸುತ್ತಿದ್ದರು. ಶೋಷಿತರು ದನಿಯಾಗಿದ್ದರು. ಅದಕ್ಕಾಗಿಯೇ ಅವರು ಸನಾತನಾವಾದಿಗಳ ಗುಂಡಿಗೆ ಎದೆಯೊಡ್ಡಬೇಕಾಯಿತು. ಆದರೆ ಯಾವ ಗೌರಿ ಲಂಕೇಶ್‌ರವರ ದನಿಯನ್ನು ಅಡಗಿಸಲು ಅವರನ್ನು ಹತ್ಯೆ ಮಾಡಲಾಯಿತೊ ಆ ದನಿ ದ್ವಿಗುಣಗೊಂಡಿತು. ರಾಜ್ಯ-ದೇಶ-ಪ್ರಪಂಚದೆಲ್ಲೆಡೆ ನಾನು ಗೌರಿ ನಾವೆಲ್ಲರೂ ಗೌರಿ ಎಂಬ ದನಿ ಎದ್ದಿತು. ಅದು ಇಂದಿಗೂ ಮುಂದುವರೆಯುತ್ತಿದೆ. ಅದು ಮತ್ತಷ್ಟು ಮಾರ್ಧನಿಸುವಂತೆ ಮಾಡಲು ಅವರ ಸಹೋದರಿ ಕವಿತಾ ಲಂಕೇಶ್‌ ಮುಂದಾಗಿದ್ದು ಗೌರಿ ಲಂಕೇಶ್‌ರವರ ಬದುಕು, ಹೋರಾಟದ ಕುರಿತು ಸಾಕ್ಷ್ಯಚಿತ್ರವೊಂದನ್ನು ತಯಾರಿಸುತ್ತಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕಿ ಕವಿತಾ ಲಂಕೇಶ್ ಅವರು ಗೌರಿ ಲಂಕೇಶ್ ರವರ ಹತ್ಯೆಗೆ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಅದರೊಟ್ಟಿಗೆ ಗೌರಿಯವರ ಕುರಿತು ಪ್ರಪಂಚಕ್ಕೆ ತಿಳಿಸುವ ಕೆಲಸದಲ್ಲಿಯೂ ನಿರತರಾಗಿದ್ದಾರೆ. ಅದಕ್ಕಾಗಿ ಇಡೀ ಕರ್ನಾಟಕ ಸುತ್ತುತ್ತಿರುವ ಅವರು ಈ ತಿಂಗಳಿನಲ್ಲಿ ಸಾಕ್ಷ್ಯಚಿತ್ರ ಪೂರ್ಣಗೊಳಿಸಿ 2022ರ ಜನವರಿಯಲ್ಲಿ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದಾರೆ.

ಆಮ್ಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ ಸಂಸ್ಥೆಯು ಕಳೆದ ವರ್ಷ ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ” ಎಂದು ಕವಿತಾ ಲಂಕೇಶ್‌ ಹೇಳಿದ್ದಾರೆ.

“ಗೌರಿ ನನಗೆ ಸಹೋದರಿ ಎಂಬುದಕ್ಕಿಂತಲೂ ಮಿಗಿಲಾಗಿ ಆಕೆಯ ಜೀವನವು ಆಕೆಯ ಬಗ್ಗೆ ಚಿತ್ರಮಾಡಬೇಕೆಂಬ ಕಠಿಣ ನಿರ್ಧಾರಕ್ಕೆ ಕಾರಣವಾಗಿತ್ತು. ಆಕೆ ನನ್ನ ಸ್ನೇಹಿತೆ, ಮಾರ್ಗದರ್ಶಕಿಯಾಗಿದ್ದಳು. ಆಕೆ ನನ್ನ ಹತ್ತಿರದಲ್ಲಿಲ್ಲ ಎಂದು ನಾನು ಇನ್ನೂ ಅರ್ಥಮಾಡಿಕೊಳ್ಳಬೇಕಾಗಿದೆ. ಚಿತ್ರ ಮಾಡುವುದು ಎಂದರೆ, ಆ ಆಘಾತಕಾರಿ ನೆನಪುಗಳಿಗೆ ಹಿಂತಿರುಗುವುದು. ಆದರೆ, ನ್ಯಾಯ ಮತ್ತು ಜನರ ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಡುವಾಗ ಯಾವುದೇ ಭಯವಿಲ್ಲದ ಆಕೆಯ ಕಥೆಯನ್ನು ನಾನು ಹೇಳಲೇಬೇಕು ಎಂದು ನಾನು ಭಾವಿಸಿದ್ದೇನೆ” ಎಂದು ಕವಿತಾ ಲಂಕೇಶ್ ಹೇಳಿದ್ದಾರೆ. 

ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

2000 ರಲ್ಲಿ ನಮ್ಮ ತಂದೆಯ ಪ್ರಕಾಶನ ಲಂಕೇಶ್ ಪತ್ರಿಕೆಯ ಜವಾಬ್ದಾರಿಯನ್ನು ಗೌರಿ ವಹಿಸಿಕೊಂಡಿರು. ನಂತರದ ಅವರ ಜೀವನ ಮತ್ತು ಅವರ ಕ್ರಿಯಾಶೀಲತೆಯನ್ನು ಈ ಚಿತ್ರ ಸೆರೆಹಿಡಿಯುತ್ತದೆ. ಸಾಕ್ಷ್ಯಚಿತ್ರವು ನೆದರ್ಲ್ಯಾಂಡ್‌ನಲ್ಲಿ ನಡೆಯುವ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ಪ್ರದರ್ಶನಗೊಳ್ಳುವ ಸಾಧ್ಯತೆಯಿದೆ.

ಸೆಪ್ಟೆಂಬರ್ 5, 2017 ರ ಸಂಜೆ, ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಯಲ್ಲಿ ಗೌರಿ ಹತ್ಯೆಯಾದರು. ಆಗಿನ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರವು ಸ್ಥಾಪಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) 18 ಆರೋಪಿಗಳನ್ನು ಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆ ಆರೋಪಿಗಳು ಬಲಪಂಥೀಯ ಗುಂಪುಗಳಿಗೆ ನಿಷ್ಠರಾಗಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವರದಿ ಮಾಡಿದ್ದಾರೆ. ಅವರ ಮೇಲೆ ಕಠಿಣ ಕೋಕಾ ಪ್ರಕರಣವನ್ನು ಹೇರಲಾಗಿದೆ. ಕರ್ನಾಟಕ ಹೈಕೋರ್ಟ್ ಒಬ್ಬ ಆರೋಪಿ ಮೇಲಿನ ಕೋಕಾ ಪ್ರಕರಣ ರದ್ದುಗೊಳಿಸಲು ಮುಂದಾಗಿತ್ತು. ಆಗ ಕವಿತಾ ಲಂಕೇಶ್‌ರವರು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ ಅದಕ್ಕೆ ತಡೆ ತಂದಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...