Homeಮುಖಪುಟಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

- Advertisement -
- Advertisement -

ಗೌರಿ ಲಂಕೇಶ್‌ ದಿಟ್ಟ ಪತ್ರಕರ್ತೆ ಮಾತ್ರ ಆಗಿರಲಿಲ್ಲ, ಹೋರಾಟಗಾರ್ತಿಯೂ, ಪ್ರೀತಿ ತುಂಬಿದ ತಾಯಿಯೂ, ಸಾಮಾಜಿಕ ಚಳವಳಿಗಳ ಶಕ್ತಿಯೂ ಆಗಿದ್ದರು. ಆ ಮೂಲಕ ಕೋಮುವಾದಿಗಳಿಗೆ ಸಿಂಹಸ್ವಪ್ನವಾಗಿದ್ದರು. ಕೋಮು ಸೌಹಾರ್ದಕ್ಕಾಗಿ, ಬಹುತ್ವದ ಉಳಿವಿಗಾಗಿ ಅವರು ನಿರಂತರ ಶ್ರಮಿಸುತ್ತಿದ್ದರು. ಶೋಷಿತರು ದನಿಯಾಗಿದ್ದರು. ಅದಕ್ಕಾಗಿಯೇ ಅವರು ಸನಾತನಾವಾದಿಗಳ ಗುಂಡಿಗೆ ಎದೆಯೊಡ್ಡಬೇಕಾಯಿತು. ಆದರೆ ಯಾವ ಗೌರಿ ಲಂಕೇಶ್‌ರವರ ದನಿಯನ್ನು ಅಡಗಿಸಲು ಅವರನ್ನು ಹತ್ಯೆ ಮಾಡಲಾಯಿತೊ ಆ ದನಿ ದ್ವಿಗುಣಗೊಂಡಿತು. ರಾಜ್ಯ-ದೇಶ-ಪ್ರಪಂಚದೆಲ್ಲೆಡೆ ನಾನು ಗೌರಿ ನಾವೆಲ್ಲರೂ ಗೌರಿ ಎಂಬ ದನಿ ಎದ್ದಿತು. ಅದು ಇಂದಿಗೂ ಮುಂದುವರೆಯುತ್ತಿದೆ. ಅದು ಮತ್ತಷ್ಟು ಮಾರ್ಧನಿಸುವಂತೆ ಮಾಡಲು ಅವರ ಸಹೋದರಿ ಕವಿತಾ ಲಂಕೇಶ್‌ ಮುಂದಾಗಿದ್ದು ಗೌರಿ ಲಂಕೇಶ್‌ರವರ ಬದುಕು, ಹೋರಾಟದ ಕುರಿತು ಸಾಕ್ಷ್ಯಚಿತ್ರವೊಂದನ್ನು ತಯಾರಿಸುತ್ತಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕಿ ಕವಿತಾ ಲಂಕೇಶ್ ಅವರು ಗೌರಿ ಲಂಕೇಶ್ ರವರ ಹತ್ಯೆಗೆ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಅದರೊಟ್ಟಿಗೆ ಗೌರಿಯವರ ಕುರಿತು ಪ್ರಪಂಚಕ್ಕೆ ತಿಳಿಸುವ ಕೆಲಸದಲ್ಲಿಯೂ ನಿರತರಾಗಿದ್ದಾರೆ. ಅದಕ್ಕಾಗಿ ಇಡೀ ಕರ್ನಾಟಕ ಸುತ್ತುತ್ತಿರುವ ಅವರು ಈ ತಿಂಗಳಿನಲ್ಲಿ ಸಾಕ್ಷ್ಯಚಿತ್ರ ಪೂರ್ಣಗೊಳಿಸಿ 2022ರ ಜನವರಿಯಲ್ಲಿ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದಾರೆ.

ಆಮ್ಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ ಸಂಸ್ಥೆಯು ಕಳೆದ ವರ್ಷ ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ” ಎಂದು ಕವಿತಾ ಲಂಕೇಶ್‌ ಹೇಳಿದ್ದಾರೆ.

“ಗೌರಿ ನನಗೆ ಸಹೋದರಿ ಎಂಬುದಕ್ಕಿಂತಲೂ ಮಿಗಿಲಾಗಿ ಆಕೆಯ ಜೀವನವು ಆಕೆಯ ಬಗ್ಗೆ ಚಿತ್ರಮಾಡಬೇಕೆಂಬ ಕಠಿಣ ನಿರ್ಧಾರಕ್ಕೆ ಕಾರಣವಾಗಿತ್ತು. ಆಕೆ ನನ್ನ ಸ್ನೇಹಿತೆ, ಮಾರ್ಗದರ್ಶಕಿಯಾಗಿದ್ದಳು. ಆಕೆ ನನ್ನ ಹತ್ತಿರದಲ್ಲಿಲ್ಲ ಎಂದು ನಾನು ಇನ್ನೂ ಅರ್ಥಮಾಡಿಕೊಳ್ಳಬೇಕಾಗಿದೆ. ಚಿತ್ರ ಮಾಡುವುದು ಎಂದರೆ, ಆ ಆಘಾತಕಾರಿ ನೆನಪುಗಳಿಗೆ ಹಿಂತಿರುಗುವುದು. ಆದರೆ, ನ್ಯಾಯ ಮತ್ತು ಜನರ ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಡುವಾಗ ಯಾವುದೇ ಭಯವಿಲ್ಲದ ಆಕೆಯ ಕಥೆಯನ್ನು ನಾನು ಹೇಳಲೇಬೇಕು ಎಂದು ನಾನು ಭಾವಿಸಿದ್ದೇನೆ” ಎಂದು ಕವಿತಾ ಲಂಕೇಶ್ ಹೇಳಿದ್ದಾರೆ. 

ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

2000 ರಲ್ಲಿ ನಮ್ಮ ತಂದೆಯ ಪ್ರಕಾಶನ ಲಂಕೇಶ್ ಪತ್ರಿಕೆಯ ಜವಾಬ್ದಾರಿಯನ್ನು ಗೌರಿ ವಹಿಸಿಕೊಂಡಿರು. ನಂತರದ ಅವರ ಜೀವನ ಮತ್ತು ಅವರ ಕ್ರಿಯಾಶೀಲತೆಯನ್ನು ಈ ಚಿತ್ರ ಸೆರೆಹಿಡಿಯುತ್ತದೆ. ಸಾಕ್ಷ್ಯಚಿತ್ರವು ನೆದರ್ಲ್ಯಾಂಡ್‌ನಲ್ಲಿ ನಡೆಯುವ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ಪ್ರದರ್ಶನಗೊಳ್ಳುವ ಸಾಧ್ಯತೆಯಿದೆ.

ಸೆಪ್ಟೆಂಬರ್ 5, 2017 ರ ಸಂಜೆ, ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಯಲ್ಲಿ ಗೌರಿ ಹತ್ಯೆಯಾದರು. ಆಗಿನ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರವು ಸ್ಥಾಪಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) 18 ಆರೋಪಿಗಳನ್ನು ಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆ ಆರೋಪಿಗಳು ಬಲಪಂಥೀಯ ಗುಂಪುಗಳಿಗೆ ನಿಷ್ಠರಾಗಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವರದಿ ಮಾಡಿದ್ದಾರೆ. ಅವರ ಮೇಲೆ ಕಠಿಣ ಕೋಕಾ ಪ್ರಕರಣವನ್ನು ಹೇರಲಾಗಿದೆ. ಕರ್ನಾಟಕ ಹೈಕೋರ್ಟ್ ಒಬ್ಬ ಆರೋಪಿ ಮೇಲಿನ ಕೋಕಾ ಪ್ರಕರಣ ರದ್ದುಗೊಳಿಸಲು ಮುಂದಾಗಿತ್ತು. ಆಗ ಕವಿತಾ ಲಂಕೇಶ್‌ರವರು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ ಅದಕ್ಕೆ ತಡೆ ತಂದಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...