Homeಕರ್ನಾಟಕನಟಿ ಸಂಯುಕ್ತ ಹೆಗ್ಡೆ ಬಳಿ ಕ್ಷಮೆಯಾಚಿಸಿದ ಕವಿತಾ ರೆಡ್ಡಿ

ನಟಿ ಸಂಯುಕ್ತ ಹೆಗ್ಡೆ ಬಳಿ ಕ್ಷಮೆಯಾಚಿಸಿದ ಕವಿತಾ ರೆಡ್ಡಿ

ತಮ್ಮ ಮೇಲಿನ ನೈತಿಕ ಪೊಲೀಸ್‌ಗಿರಿ ಆರೋಪಕ್ಕೆ ಉತ್ತರಿಸಿದ ಕವಿತಾ ರೆಡ್ಡಿ, “ಇಂತಾ ಹೇಳಿಕೆ ಸಂಪೂರ್ಣವಾಗಿ ಮೂರ್ಖತನವಾಗಿದ್ದು, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ” ಎಂದು ನಿನ್ನೆ ಹೇಳಿದ್ದರು.

- Advertisement -
- Advertisement -

ಶುಕ್ರವಾರ ಸಂಜೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಆಗರ ಕೆರೆಯ ಪಕ್ಕದ ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದಾಗ ಕವಿತಾ ರೆಡ್ಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಂಯುಕ್ತ ಹೆಗ್ಡೆ ಆರೋಪಿಸಿದ ಹಿನ್ನೆಲೆಯಲ್ಲಿ, ಈ ಘಟನೆಯ ಕುರಿತು ಕವಿತಾ ರೆಡ್ಡಿ ಇಂದು ಕ್ಷಮೆಯಾಚಿಸಿದ್ದಾರೆ.

“ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡಿದ್ದಾಗಿ ಆರೋಪಿಸಿ ಎಐಸಿಸಿ ಸದಸ್ಯೆ ಕವಿತಾ ರೆಡ್ಡಿ ನೇತೃತ್ವದ ಜನರ ಗುಂಪು ತಮ್ಮ ಹಲ್ಲೆ ಮಾಡಿದ್ದಾರೆ” ಎಂದು ನಟಿ ಸಂಯುಕ್ತ ಹೆಗ್ಡೆ ಆರೋಪಿಸಿದ್ದರು.

ಇದರ ಬಗ್ಗೆ ಇಂದು ಟ್ವೀಟ್ ಮಾಡಿರುವ ಕವಿತಾ ರೆಡ್ಡಿ, “ನಾನು ಮೊದಲಿನಿಂದಲೂ ನೈತಿಕ ಪೊಲೀಸ್ ಗಿರಿಯನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದರ ಭಾಗವಾಗಿಯೆ ನನ್ನ ಕ್ರಿಯೆಗಳು ರೂಪುಗೊಂಡಿದ್ದವು. ನಿನ್ನೆಯ ವಾದವು ನನ್ನ ಉದ್ವೇಗಗೊಂಡ ವರ್ತನೆಯಿಂದ ಕೊನೆಯಾಯಿತು. ಇದು ನನ್ನ ಸಮಸ್ಯೆ. ಒಬ್ಬ ನಾಗರೀಕ ಪ್ರಜೆಯಾಗಿ ಮತ್ತು ಪ್ರಗತಿಪರ ಮಹಿಳೆಯಾಗಿ, ಸಂಯಕ್ತ ಹೆಗ್ಡೆ ಮತ್ತು ಅವರ ಗೆಳತಿಯರಲ್ಲಿ ನಾನು ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ವೀಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಘಟನೆಯ ವಿಡಿಯೋ ದೃಶ್ಯಾವಳಿಯನ್ನು ಸಂಯುಕ್ತ ಹೆಗ್ಡೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಲೈವ್‌ ನಲ್ಲಿ ಹಂಚಿಕೊಂಡಿದ್ದರು. ಅಲ್ಲಿ ನೆರೆದಿದ್ದ ಜನರು ಅವರು ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೆ ವ್ಯಕ್ತಿಯೊಬ್ಬ ಅವರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸುವುದಾಗಿ ಅವರನ್ನು ಬೆದರಿಸಿರುವುದು ಅವರ ಮತ್ತೊಂದು ವಿಡಿಯೋದಲ್ಲಿ ದಾಖಲಾಗಿತ್ತು.

ಅಷ್ಟೇ ಅಲ್ಲದೆ ತನ್ನ ಗೆಳತಿ ಮೇಲೆ ಕವಿತಾ ಹಲ್ಲೆ ನಡೆಸಲು ಹೋಗಿದ್ದಾರೆ ಎಂದು ನಟಿ ಆರೋಪಿಸಿದ್ದು, ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಾಕಿದ್ದಾರೆ. ವಿಡಿಯೋದಲ್ಲಿ ಕವಿತಾ ರೆಡ್ಡಿ ಯುವತಿಯನ್ನು ದೂಡುತ್ತಿರುವುದು ದಾಖಲಾಗಿತ್ತು.

ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು, ಕವಿತಾ ರೆಡ್ಡಿಯವರನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ತರಾಟೆಗೆ ತೆಗೆದುಕೊಂಡಿದ್ದರು.


ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...