Homeಕರ್ನಾಟಕನಟಿ ಸಂಯುಕ್ತ ಹೆಗ್ಡೆ ಬಳಿ ಕ್ಷಮೆಯಾಚಿಸಿದ ಕವಿತಾ ರೆಡ್ಡಿ

ನಟಿ ಸಂಯುಕ್ತ ಹೆಗ್ಡೆ ಬಳಿ ಕ್ಷಮೆಯಾಚಿಸಿದ ಕವಿತಾ ರೆಡ್ಡಿ

ತಮ್ಮ ಮೇಲಿನ ನೈತಿಕ ಪೊಲೀಸ್‌ಗಿರಿ ಆರೋಪಕ್ಕೆ ಉತ್ತರಿಸಿದ ಕವಿತಾ ರೆಡ್ಡಿ, “ಇಂತಾ ಹೇಳಿಕೆ ಸಂಪೂರ್ಣವಾಗಿ ಮೂರ್ಖತನವಾಗಿದ್ದು, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ” ಎಂದು ನಿನ್ನೆ ಹೇಳಿದ್ದರು.

- Advertisement -
- Advertisement -

ಶುಕ್ರವಾರ ಸಂಜೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಆಗರ ಕೆರೆಯ ಪಕ್ಕದ ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದಾಗ ಕವಿತಾ ರೆಡ್ಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಂಯುಕ್ತ ಹೆಗ್ಡೆ ಆರೋಪಿಸಿದ ಹಿನ್ನೆಲೆಯಲ್ಲಿ, ಈ ಘಟನೆಯ ಕುರಿತು ಕವಿತಾ ರೆಡ್ಡಿ ಇಂದು ಕ್ಷಮೆಯಾಚಿಸಿದ್ದಾರೆ.

“ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡಿದ್ದಾಗಿ ಆರೋಪಿಸಿ ಎಐಸಿಸಿ ಸದಸ್ಯೆ ಕವಿತಾ ರೆಡ್ಡಿ ನೇತೃತ್ವದ ಜನರ ಗುಂಪು ತಮ್ಮ ಹಲ್ಲೆ ಮಾಡಿದ್ದಾರೆ” ಎಂದು ನಟಿ ಸಂಯುಕ್ತ ಹೆಗ್ಡೆ ಆರೋಪಿಸಿದ್ದರು.

ಇದರ ಬಗ್ಗೆ ಇಂದು ಟ್ವೀಟ್ ಮಾಡಿರುವ ಕವಿತಾ ರೆಡ್ಡಿ, “ನಾನು ಮೊದಲಿನಿಂದಲೂ ನೈತಿಕ ಪೊಲೀಸ್ ಗಿರಿಯನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದರ ಭಾಗವಾಗಿಯೆ ನನ್ನ ಕ್ರಿಯೆಗಳು ರೂಪುಗೊಂಡಿದ್ದವು. ನಿನ್ನೆಯ ವಾದವು ನನ್ನ ಉದ್ವೇಗಗೊಂಡ ವರ್ತನೆಯಿಂದ ಕೊನೆಯಾಯಿತು. ಇದು ನನ್ನ ಸಮಸ್ಯೆ. ಒಬ್ಬ ನಾಗರೀಕ ಪ್ರಜೆಯಾಗಿ ಮತ್ತು ಪ್ರಗತಿಪರ ಮಹಿಳೆಯಾಗಿ, ಸಂಯಕ್ತ ಹೆಗ್ಡೆ ಮತ್ತು ಅವರ ಗೆಳತಿಯರಲ್ಲಿ ನಾನು ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ವೀಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಘಟನೆಯ ವಿಡಿಯೋ ದೃಶ್ಯಾವಳಿಯನ್ನು ಸಂಯುಕ್ತ ಹೆಗ್ಡೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಲೈವ್‌ ನಲ್ಲಿ ಹಂಚಿಕೊಂಡಿದ್ದರು. ಅಲ್ಲಿ ನೆರೆದಿದ್ದ ಜನರು ಅವರು ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೆ ವ್ಯಕ್ತಿಯೊಬ್ಬ ಅವರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸುವುದಾಗಿ ಅವರನ್ನು ಬೆದರಿಸಿರುವುದು ಅವರ ಮತ್ತೊಂದು ವಿಡಿಯೋದಲ್ಲಿ ದಾಖಲಾಗಿತ್ತು.

ಅಷ್ಟೇ ಅಲ್ಲದೆ ತನ್ನ ಗೆಳತಿ ಮೇಲೆ ಕವಿತಾ ಹಲ್ಲೆ ನಡೆಸಲು ಹೋಗಿದ್ದಾರೆ ಎಂದು ನಟಿ ಆರೋಪಿಸಿದ್ದು, ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಾಕಿದ್ದಾರೆ. ವಿಡಿಯೋದಲ್ಲಿ ಕವಿತಾ ರೆಡ್ಡಿ ಯುವತಿಯನ್ನು ದೂಡುತ್ತಿರುವುದು ದಾಖಲಾಗಿತ್ತು.

ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು, ಕವಿತಾ ರೆಡ್ಡಿಯವರನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ತರಾಟೆಗೆ ತೆಗೆದುಕೊಂಡಿದ್ದರು.


ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...