Homeಕರ್ನಾಟಕನಟಿ ಸಂಯುಕ್ತ ಹೆಗ್ಡೆ ಬಳಿ ಕ್ಷಮೆಯಾಚಿಸಿದ ಕವಿತಾ ರೆಡ್ಡಿ

ನಟಿ ಸಂಯುಕ್ತ ಹೆಗ್ಡೆ ಬಳಿ ಕ್ಷಮೆಯಾಚಿಸಿದ ಕವಿತಾ ರೆಡ್ಡಿ

ತಮ್ಮ ಮೇಲಿನ ನೈತಿಕ ಪೊಲೀಸ್‌ಗಿರಿ ಆರೋಪಕ್ಕೆ ಉತ್ತರಿಸಿದ ಕವಿತಾ ರೆಡ್ಡಿ, “ಇಂತಾ ಹೇಳಿಕೆ ಸಂಪೂರ್ಣವಾಗಿ ಮೂರ್ಖತನವಾಗಿದ್ದು, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ” ಎಂದು ನಿನ್ನೆ ಹೇಳಿದ್ದರು.

- Advertisement -
- Advertisement -

ಶುಕ್ರವಾರ ಸಂಜೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಆಗರ ಕೆರೆಯ ಪಕ್ಕದ ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದಾಗ ಕವಿತಾ ರೆಡ್ಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಂಯುಕ್ತ ಹೆಗ್ಡೆ ಆರೋಪಿಸಿದ ಹಿನ್ನೆಲೆಯಲ್ಲಿ, ಈ ಘಟನೆಯ ಕುರಿತು ಕವಿತಾ ರೆಡ್ಡಿ ಇಂದು ಕ್ಷಮೆಯಾಚಿಸಿದ್ದಾರೆ.

“ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡಿದ್ದಾಗಿ ಆರೋಪಿಸಿ ಎಐಸಿಸಿ ಸದಸ್ಯೆ ಕವಿತಾ ರೆಡ್ಡಿ ನೇತೃತ್ವದ ಜನರ ಗುಂಪು ತಮ್ಮ ಹಲ್ಲೆ ಮಾಡಿದ್ದಾರೆ” ಎಂದು ನಟಿ ಸಂಯುಕ್ತ ಹೆಗ್ಡೆ ಆರೋಪಿಸಿದ್ದರು.

ಇದರ ಬಗ್ಗೆ ಇಂದು ಟ್ವೀಟ್ ಮಾಡಿರುವ ಕವಿತಾ ರೆಡ್ಡಿ, “ನಾನು ಮೊದಲಿನಿಂದಲೂ ನೈತಿಕ ಪೊಲೀಸ್ ಗಿರಿಯನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದರ ಭಾಗವಾಗಿಯೆ ನನ್ನ ಕ್ರಿಯೆಗಳು ರೂಪುಗೊಂಡಿದ್ದವು. ನಿನ್ನೆಯ ವಾದವು ನನ್ನ ಉದ್ವೇಗಗೊಂಡ ವರ್ತನೆಯಿಂದ ಕೊನೆಯಾಯಿತು. ಇದು ನನ್ನ ಸಮಸ್ಯೆ. ಒಬ್ಬ ನಾಗರೀಕ ಪ್ರಜೆಯಾಗಿ ಮತ್ತು ಪ್ರಗತಿಪರ ಮಹಿಳೆಯಾಗಿ, ಸಂಯಕ್ತ ಹೆಗ್ಡೆ ಮತ್ತು ಅವರ ಗೆಳತಿಯರಲ್ಲಿ ನಾನು ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ವೀಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಘಟನೆಯ ವಿಡಿಯೋ ದೃಶ್ಯಾವಳಿಯನ್ನು ಸಂಯುಕ್ತ ಹೆಗ್ಡೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಲೈವ್‌ ನಲ್ಲಿ ಹಂಚಿಕೊಂಡಿದ್ದರು. ಅಲ್ಲಿ ನೆರೆದಿದ್ದ ಜನರು ಅವರು ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೆ ವ್ಯಕ್ತಿಯೊಬ್ಬ ಅವರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸುವುದಾಗಿ ಅವರನ್ನು ಬೆದರಿಸಿರುವುದು ಅವರ ಮತ್ತೊಂದು ವಿಡಿಯೋದಲ್ಲಿ ದಾಖಲಾಗಿತ್ತು.

ಅಷ್ಟೇ ಅಲ್ಲದೆ ತನ್ನ ಗೆಳತಿ ಮೇಲೆ ಕವಿತಾ ಹಲ್ಲೆ ನಡೆಸಲು ಹೋಗಿದ್ದಾರೆ ಎಂದು ನಟಿ ಆರೋಪಿಸಿದ್ದು, ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಾಕಿದ್ದಾರೆ. ವಿಡಿಯೋದಲ್ಲಿ ಕವಿತಾ ರೆಡ್ಡಿ ಯುವತಿಯನ್ನು ದೂಡುತ್ತಿರುವುದು ದಾಖಲಾಗಿತ್ತು.

ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು, ಕವಿತಾ ರೆಡ್ಡಿಯವರನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ತರಾಟೆಗೆ ತೆಗೆದುಕೊಂಡಿದ್ದರು.


ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...