Homeಕರ್ನಾಟಕಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

- Advertisement -
- Advertisement -

ಕಾಂಗ್ರೆಸ್‌ನ ವಕ್ತಾರರಾಗಿದ್ದ ಕವಿತಾ ರೆಡ್ಡಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ. ಕೆಪಿಸಿಸಿ ‌ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ ಹಾಗೂ ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಸೇರಿದಂತೆ, ಪಕ್ಷದ ಕೆಲ ಆಂತರಿಕ ವಿಚಾರಗಳ ಬಗ್ಗೆ ಕವಿತಾ ರೆಡ್ಡಿ ಅವರು ಕೆಲ ದಿನಗಳ ಹಿಂದೆ ಬಹಿರಂಗವಾಗಿ  ತಮ್ಮ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಕವಿತಾ ರೆಡ್ಡಿ ಅವರಿಗೆ ರಾಜ್ಯ ಕಾಂಗ್ರೆಸ್‌ ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿತ್ತು. “ಕವಿತಾ ರಡ್ಡಿ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರು ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳನ್ನು ಅಮಾನತ್ತಿನಲ್ಲಿಡಲಾಗಿದೆ” ಎಂದು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್‌ ಪತ್ರದಲ್ಲಿ ಆದೇಶದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜತೆಗೆ ಮಾತನಾಡಿದ ಕವಿತಾ ರೆಡ್ಡಿ, “ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗಿನಿಂದಲೂ ನನಗೆ ಪಕ್ಷದಲ್ಲಿ ನ್ಯಾಯ ಸಿಕ್ಕಿಲ್ಲ; ನನಗೆ ಬಹಳಷ್ಟು ಅನ್ಯಾಯವಾಗಿದೆ, ಅದಕ್ಕೆ ನ್ಯಾಯ ಸಿಕ್ಕಿಲ್ಲ ಎನ್ನುವುದು ಅವರಿಗೂ ಗೊತ್ತಿದೆ. ನನಗೆ ನೋಟಿಸ್ ಯಾಕೆ ಕಳಿಸಿದ್ದಾರೆ ಎಂಬುದು ಪಕ್ಷದ ಶಿಸ್ತು ಪಾಲನಾ ಸಮಿತಿಗೆ ಗೊತ್ತಿಲ್ಲ. ನಾನು ಕಳಿಸಿರುವ 32 ಪುಟಗಳ ಸ್ಪಷ್ಟನೆಗೆ ಅವರಿಂದ ಯಾವುದೇ ಉತ್ತರ ಬಂದಿಲ್ಲ” ಎಂದರು.

“ನನಗೆ ನೋಟಿಸ್ ಕೊಟ್ಟಿರುವ ಉದ್ದೇಶ ಸ್ಪಷ್ಟವಾಗಿದೆ; ಮೊದಲೆನೆಯದಾಗಿ ನಾನು ಪರಿಶಿಷ್ಟ ಪಂಗಡದ ಹೆಣ್ಣು ಮಗಳಾದ ಭವ್ಯಾ ಸಿಂಗ್ ಪರವಾಗಿ ನಿಂತಿದ್ದು. ಮತ್ತೊಂದು, ರಾಮಲಿಂಗಾ ರೆಡ್ಡಿ ಅವರನ್ನು ವಿರೋಧಿಸಿದ್ದು. ನನ್ನ ಮೇಲಿನ ಕ್ರಮಕ್ಕೆ ಇವೇ ಪ್ರಮುಖ ಕರಾಣಗಳು. ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಕಳೆದ ಎರಡು ವರ್ಷಗಳಿಂದ ಕಾಯುತ್ತಿದ್ದಾರೆ. ‘ರಾಮಲಿಂಗಾ ರೆಡ್ಡಿ ಅವರ ಮಗಳು ಸೌಮ್ಯಾ ರೆಡ್ಡಿ ಖಿನ್ನತೆಗೆ ಒಳಗಾಗಿದ್ದಾರೆ; ಅವರು ಅದರಿಂದ ಹೊರಗಡೆ ಬರಬೇಕಾದರೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕು’ ಎಂದು ಹೇಳಿ, ತರಾತುರಿಯಲ್ಲಿ ನಿರ್ಧರಿಸಿದರೆ ನಾವು ಏನು ಮಾಡುವುದಕ್ಕೆ ಸಾಧ್ಯ” ಎಂದು ಪ್ರಶ್ನಿಸಿದರು.

ನಿಮ್ಮ ನೇರ ಆರೋಪ ಯಾರ ಮೇಲೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪಕ್ಷದ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಇನ್ಯಾರ ಮೇಲೆ ಆರೋಪ ಮಾಡುವುದು? ರಾಮಲಿಂಗಾರೆಡ್ಡಿ ತಮಗಿರುವ ಅಧಿಕಾರ ಬಳಸಿಕೊಂಡು ಅವರ ಮಗಳನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ; ನಮ್ಮ ಹಿಂದೆ ಯಾರಿದ್ದಾರೆ? ಪಕ್ಷದ ಅಧ್ಯಕ್ಷರು ನಮ್ಮ ಪರವಾಗಿ ನಿಲ್ಲಬೇಕಿತ್ತು. ನನಗೆ ಅನ್ಯಾಯ ಆಗಿದೆ ಎಂಬುದು ಅಧ್ಯಕ್ಷರಿಗೂ ಗೊತ್ತಿದೆ” ಎಂದರು.

ಈ ಬೆಳವಣಿಗೆಯನ್ನು ಕುಟುಂಬ ರಾಜಕೀಯದ ಪರಿಣಾಮ ಎಂದು ಭಾವಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕವಿತಾ, “ಖಂಡಿತಾ.. ಕುಟುಂಬ ರಾಜಕಾರಣವಲ್ಲದೆ ಮತ್ತಿನ್ನೇನು? ನಾಲ್ಕೈದು ಜನ ಮಹಿಳಾ ಕಾರ್ಯಕರ್ತರು ಆಕಾಂಕ್ಷಿಗಳಾಗಿದ್ದರು. ಕಮಲಾಕ್ಷಿ ರಾಜಣ್ಣ, ವೀಣಾ ಕಾಶಪ್ಪನವರ್ ಅಥವಾ ಬೇರೊಬ್ಬರಿಗೆ ಕೊಟ್ಟಿದ್ದರೆ ಸಾಮಾಜಿಕ ನ್ಯಾಯ ಎಂದು ನಾವು ಒಪ್ಪಿಕೊಳ್ಳುತ್ತಿದ್ದೆವು. ಆದರೆ, ಇವರು ಕೊಟ್ಟಿರುವುದು ಯಾರಿಗೆ? ಏನೂ ಕೆಲಸ ಮಾಡದೇ ಇರುವ ರಾಮಲಿಂಗಾರೆಡ್ಡಿ ಅವರ ಮಗಳನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಪಕ್ಷದ ಯಾವಯಾವ ಹುದ್ದೆಯಲ್ಲಿ ಅವರು ಕೆಲಸ ಮಾಡಿದ್ದಾರೆ. ನನ್ನ ಜೊತೆಯಲ್ಲಿ ಸೌಮ್ಯಾ ಅವರನ್ನೂ ವಕ್ತಾರರನ್ನಾಗಿ ಮಾಡಿದ್ದರು. ಆದರೆ, ಆಕೆ ಮಾಡಿದ್ದೇನು? ಈವರೆಗೆ ಒಂದೇ ಒಂದು ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಇತ್ತೀಚೆಗಷ್ಟೇ ಅವರನ್ನು ಪ್ರಧಾನ ಕಾರ್ಯದರ್ಶಿ ಮಾಡಲಾಗಿತ್ತು; ಈಗ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಇದಕ್ಕೆಲ್ಲಾ ಅನುಸರಿಸಿದ ಮಾನದಂಡ ಯಾವುದು” ಎಂದು ಅವರು ಬೇಸರ ಹೊರಹಾಕಿದರು.

“ಪಕ್ಷದ ಕಾರ್ಯಕರ್ತೆಯಾಗಿ ನನಗೆ ಕೇಳುವ ಅಧಿಕಾರ ಇದೆ.. ಅದಕ್ಕಾಗಿ ಪ್ರಶ್ನೆ ಮಾಡುತ್ತೇನೆ. ಪಕ್ಷ ಎಲ್ಲರಿಗೂ ಸೇರಿದ್ದು; ಇಂತಹ ಒಂದು ಕಾರಣಕ್ಕೆ ನಾವು ಅವರನ್ನು (ಸೌಮ್ಯಾ ರೆಡ್ಡಿ) ಅಧ್ಯಕ್ಷರನ್ನಾಗಿ ಮಾಡುತ್ತಿದ್ದೇವೆ ಎಂದು ನಮಗೆ ಪಕ್ಷದ ಅಧ್ಯಕ್ಷರು ಕರೆದು ಹೇಳಬಹುದಿತ್ತು. ದುಡ್ಡಿನ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಅಥವಾ ಅವರ ಅಪ್ಪನನ್ನು ಓಲೈಕೆ ಮಾಡುವುದಕ್ಕೆ ಸ್ಥಾನ ಕೊಡುತ್ತಿದ್ದೇವೆ ಎಂದು ಹೇಳಿದ್ದಿದ್ದರೆ, ರಾಜಕಾರಣಿಯಾಗಿ ನಾನೂ ಅರ್ಥ ಮಾಡಿಕೊಳ್ಳುತ್ತಿದ್ದೆ” ಎಂದು ಅವರು ಆಕ್ರೋಶ ಹೊರಹಾಕಿದರು.

ನಿಮ್ಮ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ, “ನ್ಯಾಯ ಸಿಗದೇ ಇದ್ದರೆ ಮುಂದಿನ ನಡೆ ಏನಿರುತ್ತೆ..? ನನ್ನ ಹೋರಾಟ ಮುಂದುವರಿಯುತ್ತದೆ. ಅನ್ಯಾಯ ಮತ್ತು ಮಹಿಳಾ ಶೋಷಣೆ ವಿರುದ್ಧ ಮಾತನಾಡುವುದನ್ನು ಮುಂದುವರಿಸುತ್ತೇನೆ. ಹಲವು ದಶಕಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ ಮಾಡಿರುವ ನಾನು ಸಿದ್ಧಾಂತದಲ್ಲಿ ಎಷ್ಟು ಕಮಿಟೆಡ್ ಎಂಬುದು ಹಲವರಿಗೆ ಗೊತ್ತಿದೆ. ನನ್ನಂತವರಿಗೆ ಇಷ್ಟು ಕಿರುಕುಳ ನೀಡುತ್ತಿದ್ದಾರೆ. ಇನ್ನು ಸಾಮಾನ್ಯ ಕಾರ್ಯಕರ್ತರಿಗೆ ಪಕ್ಷದಲ್ಲಿ ಜಾಗ ಎಲ್ಲಿ ಸಿಗುತ್ತದೆ” ಎಂದು ಕವಿತಾ ಭಾವುಕರಾದರು.

“ನನಗೆ ನ್ಯಾಯ ಸಿಗುವುದಿಲ್ಲ ಎಂಬುದು ಅವರ ನಡೆಯಿಂದಲೇ ಸ್ಪಷ್ಟವಾಗಿದೆ. ಶಿಸ್ತು ಕ್ರಮ ನನಗೆ ಮಾತ್ರ ಯಾಕೆ..? ಪಕ್ಷ ಮತ್ತು ಅಧ್ಯಕ್ಷರ ವಿರುದ್ಧ ಹಲವು ಸಚಿವರು, ಶಾಸಕರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಪಕ್ಷ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರಿಗೆಲ್ಲಾ ನೋಟಿಸ್ ನೀಡಿ ಅಮಾನತು ಮಾಡಿಲ್ಲ ಯಾಕೆ? ನಾನು ಹೆಣ್ಣು ಮಗಳು ಎಂಬ ಕಾರಣಕ್ಕೆ ಅಮಾನತು ಮಾಡಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...