Homeಕರ್ನಾಟಕಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

- Advertisement -
- Advertisement -

ಕಾಂಗ್ರೆಸ್‌ನ ವಕ್ತಾರರಾಗಿದ್ದ ಕವಿತಾ ರೆಡ್ಡಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ. ಕೆಪಿಸಿಸಿ ‌ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ ಹಾಗೂ ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಸೇರಿದಂತೆ, ಪಕ್ಷದ ಕೆಲ ಆಂತರಿಕ ವಿಚಾರಗಳ ಬಗ್ಗೆ ಕವಿತಾ ರೆಡ್ಡಿ ಅವರು ಕೆಲ ದಿನಗಳ ಹಿಂದೆ ಬಹಿರಂಗವಾಗಿ  ತಮ್ಮ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಕವಿತಾ ರೆಡ್ಡಿ ಅವರಿಗೆ ರಾಜ್ಯ ಕಾಂಗ್ರೆಸ್‌ ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿತ್ತು. “ಕವಿತಾ ರಡ್ಡಿ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರು ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳನ್ನು ಅಮಾನತ್ತಿನಲ್ಲಿಡಲಾಗಿದೆ” ಎಂದು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್‌ ಪತ್ರದಲ್ಲಿ ಆದೇಶದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜತೆಗೆ ಮಾತನಾಡಿದ ಕವಿತಾ ರೆಡ್ಡಿ, “ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗಿನಿಂದಲೂ ನನಗೆ ಪಕ್ಷದಲ್ಲಿ ನ್ಯಾಯ ಸಿಕ್ಕಿಲ್ಲ; ನನಗೆ ಬಹಳಷ್ಟು ಅನ್ಯಾಯವಾಗಿದೆ, ಅದಕ್ಕೆ ನ್ಯಾಯ ಸಿಕ್ಕಿಲ್ಲ ಎನ್ನುವುದು ಅವರಿಗೂ ಗೊತ್ತಿದೆ. ನನಗೆ ನೋಟಿಸ್ ಯಾಕೆ ಕಳಿಸಿದ್ದಾರೆ ಎಂಬುದು ಪಕ್ಷದ ಶಿಸ್ತು ಪಾಲನಾ ಸಮಿತಿಗೆ ಗೊತ್ತಿಲ್ಲ. ನಾನು ಕಳಿಸಿರುವ 32 ಪುಟಗಳ ಸ್ಪಷ್ಟನೆಗೆ ಅವರಿಂದ ಯಾವುದೇ ಉತ್ತರ ಬಂದಿಲ್ಲ” ಎಂದರು.

“ನನಗೆ ನೋಟಿಸ್ ಕೊಟ್ಟಿರುವ ಉದ್ದೇಶ ಸ್ಪಷ್ಟವಾಗಿದೆ; ಮೊದಲೆನೆಯದಾಗಿ ನಾನು ಪರಿಶಿಷ್ಟ ಪಂಗಡದ ಹೆಣ್ಣು ಮಗಳಾದ ಭವ್ಯಾ ಸಿಂಗ್ ಪರವಾಗಿ ನಿಂತಿದ್ದು. ಮತ್ತೊಂದು, ರಾಮಲಿಂಗಾ ರೆಡ್ಡಿ ಅವರನ್ನು ವಿರೋಧಿಸಿದ್ದು. ನನ್ನ ಮೇಲಿನ ಕ್ರಮಕ್ಕೆ ಇವೇ ಪ್ರಮುಖ ಕರಾಣಗಳು. ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಕಳೆದ ಎರಡು ವರ್ಷಗಳಿಂದ ಕಾಯುತ್ತಿದ್ದಾರೆ. ‘ರಾಮಲಿಂಗಾ ರೆಡ್ಡಿ ಅವರ ಮಗಳು ಸೌಮ್ಯಾ ರೆಡ್ಡಿ ಖಿನ್ನತೆಗೆ ಒಳಗಾಗಿದ್ದಾರೆ; ಅವರು ಅದರಿಂದ ಹೊರಗಡೆ ಬರಬೇಕಾದರೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕು’ ಎಂದು ಹೇಳಿ, ತರಾತುರಿಯಲ್ಲಿ ನಿರ್ಧರಿಸಿದರೆ ನಾವು ಏನು ಮಾಡುವುದಕ್ಕೆ ಸಾಧ್ಯ” ಎಂದು ಪ್ರಶ್ನಿಸಿದರು.

ನಿಮ್ಮ ನೇರ ಆರೋಪ ಯಾರ ಮೇಲೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪಕ್ಷದ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಇನ್ಯಾರ ಮೇಲೆ ಆರೋಪ ಮಾಡುವುದು? ರಾಮಲಿಂಗಾರೆಡ್ಡಿ ತಮಗಿರುವ ಅಧಿಕಾರ ಬಳಸಿಕೊಂಡು ಅವರ ಮಗಳನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ; ನಮ್ಮ ಹಿಂದೆ ಯಾರಿದ್ದಾರೆ? ಪಕ್ಷದ ಅಧ್ಯಕ್ಷರು ನಮ್ಮ ಪರವಾಗಿ ನಿಲ್ಲಬೇಕಿತ್ತು. ನನಗೆ ಅನ್ಯಾಯ ಆಗಿದೆ ಎಂಬುದು ಅಧ್ಯಕ್ಷರಿಗೂ ಗೊತ್ತಿದೆ” ಎಂದರು.

ಈ ಬೆಳವಣಿಗೆಯನ್ನು ಕುಟುಂಬ ರಾಜಕೀಯದ ಪರಿಣಾಮ ಎಂದು ಭಾವಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕವಿತಾ, “ಖಂಡಿತಾ.. ಕುಟುಂಬ ರಾಜಕಾರಣವಲ್ಲದೆ ಮತ್ತಿನ್ನೇನು? ನಾಲ್ಕೈದು ಜನ ಮಹಿಳಾ ಕಾರ್ಯಕರ್ತರು ಆಕಾಂಕ್ಷಿಗಳಾಗಿದ್ದರು. ಕಮಲಾಕ್ಷಿ ರಾಜಣ್ಣ, ವೀಣಾ ಕಾಶಪ್ಪನವರ್ ಅಥವಾ ಬೇರೊಬ್ಬರಿಗೆ ಕೊಟ್ಟಿದ್ದರೆ ಸಾಮಾಜಿಕ ನ್ಯಾಯ ಎಂದು ನಾವು ಒಪ್ಪಿಕೊಳ್ಳುತ್ತಿದ್ದೆವು. ಆದರೆ, ಇವರು ಕೊಟ್ಟಿರುವುದು ಯಾರಿಗೆ? ಏನೂ ಕೆಲಸ ಮಾಡದೇ ಇರುವ ರಾಮಲಿಂಗಾರೆಡ್ಡಿ ಅವರ ಮಗಳನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಪಕ್ಷದ ಯಾವಯಾವ ಹುದ್ದೆಯಲ್ಲಿ ಅವರು ಕೆಲಸ ಮಾಡಿದ್ದಾರೆ. ನನ್ನ ಜೊತೆಯಲ್ಲಿ ಸೌಮ್ಯಾ ಅವರನ್ನೂ ವಕ್ತಾರರನ್ನಾಗಿ ಮಾಡಿದ್ದರು. ಆದರೆ, ಆಕೆ ಮಾಡಿದ್ದೇನು? ಈವರೆಗೆ ಒಂದೇ ಒಂದು ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಇತ್ತೀಚೆಗಷ್ಟೇ ಅವರನ್ನು ಪ್ರಧಾನ ಕಾರ್ಯದರ್ಶಿ ಮಾಡಲಾಗಿತ್ತು; ಈಗ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಇದಕ್ಕೆಲ್ಲಾ ಅನುಸರಿಸಿದ ಮಾನದಂಡ ಯಾವುದು” ಎಂದು ಅವರು ಬೇಸರ ಹೊರಹಾಕಿದರು.

“ಪಕ್ಷದ ಕಾರ್ಯಕರ್ತೆಯಾಗಿ ನನಗೆ ಕೇಳುವ ಅಧಿಕಾರ ಇದೆ.. ಅದಕ್ಕಾಗಿ ಪ್ರಶ್ನೆ ಮಾಡುತ್ತೇನೆ. ಪಕ್ಷ ಎಲ್ಲರಿಗೂ ಸೇರಿದ್ದು; ಇಂತಹ ಒಂದು ಕಾರಣಕ್ಕೆ ನಾವು ಅವರನ್ನು (ಸೌಮ್ಯಾ ರೆಡ್ಡಿ) ಅಧ್ಯಕ್ಷರನ್ನಾಗಿ ಮಾಡುತ್ತಿದ್ದೇವೆ ಎಂದು ನಮಗೆ ಪಕ್ಷದ ಅಧ್ಯಕ್ಷರು ಕರೆದು ಹೇಳಬಹುದಿತ್ತು. ದುಡ್ಡಿನ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಅಥವಾ ಅವರ ಅಪ್ಪನನ್ನು ಓಲೈಕೆ ಮಾಡುವುದಕ್ಕೆ ಸ್ಥಾನ ಕೊಡುತ್ತಿದ್ದೇವೆ ಎಂದು ಹೇಳಿದ್ದಿದ್ದರೆ, ರಾಜಕಾರಣಿಯಾಗಿ ನಾನೂ ಅರ್ಥ ಮಾಡಿಕೊಳ್ಳುತ್ತಿದ್ದೆ” ಎಂದು ಅವರು ಆಕ್ರೋಶ ಹೊರಹಾಕಿದರು.

ನಿಮ್ಮ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ, “ನ್ಯಾಯ ಸಿಗದೇ ಇದ್ದರೆ ಮುಂದಿನ ನಡೆ ಏನಿರುತ್ತೆ..? ನನ್ನ ಹೋರಾಟ ಮುಂದುವರಿಯುತ್ತದೆ. ಅನ್ಯಾಯ ಮತ್ತು ಮಹಿಳಾ ಶೋಷಣೆ ವಿರುದ್ಧ ಮಾತನಾಡುವುದನ್ನು ಮುಂದುವರಿಸುತ್ತೇನೆ. ಹಲವು ದಶಕಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ ಮಾಡಿರುವ ನಾನು ಸಿದ್ಧಾಂತದಲ್ಲಿ ಎಷ್ಟು ಕಮಿಟೆಡ್ ಎಂಬುದು ಹಲವರಿಗೆ ಗೊತ್ತಿದೆ. ನನ್ನಂತವರಿಗೆ ಇಷ್ಟು ಕಿರುಕುಳ ನೀಡುತ್ತಿದ್ದಾರೆ. ಇನ್ನು ಸಾಮಾನ್ಯ ಕಾರ್ಯಕರ್ತರಿಗೆ ಪಕ್ಷದಲ್ಲಿ ಜಾಗ ಎಲ್ಲಿ ಸಿಗುತ್ತದೆ” ಎಂದು ಕವಿತಾ ಭಾವುಕರಾದರು.

“ನನಗೆ ನ್ಯಾಯ ಸಿಗುವುದಿಲ್ಲ ಎಂಬುದು ಅವರ ನಡೆಯಿಂದಲೇ ಸ್ಪಷ್ಟವಾಗಿದೆ. ಶಿಸ್ತು ಕ್ರಮ ನನಗೆ ಮಾತ್ರ ಯಾಕೆ..? ಪಕ್ಷ ಮತ್ತು ಅಧ್ಯಕ್ಷರ ವಿರುದ್ಧ ಹಲವು ಸಚಿವರು, ಶಾಸಕರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಪಕ್ಷ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರಿಗೆಲ್ಲಾ ನೋಟಿಸ್ ನೀಡಿ ಅಮಾನತು ಮಾಡಿಲ್ಲ ಯಾಕೆ? ನಾನು ಹೆಣ್ಣು ಮಗಳು ಎಂಬ ಕಾರಣಕ್ಕೆ ಅಮಾನತು ಮಾಡಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...