Homeಕರ್ನಾಟಕಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

- Advertisement -
- Advertisement -

ಕಾಂಗ್ರೆಸ್‌ನ ವಕ್ತಾರರಾಗಿದ್ದ ಕವಿತಾ ರೆಡ್ಡಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ. ಕೆಪಿಸಿಸಿ ‌ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ ಹಾಗೂ ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಸೇರಿದಂತೆ, ಪಕ್ಷದ ಕೆಲ ಆಂತರಿಕ ವಿಚಾರಗಳ ಬಗ್ಗೆ ಕವಿತಾ ರೆಡ್ಡಿ ಅವರು ಕೆಲ ದಿನಗಳ ಹಿಂದೆ ಬಹಿರಂಗವಾಗಿ  ತಮ್ಮ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಕವಿತಾ ರೆಡ್ಡಿ ಅವರಿಗೆ ರಾಜ್ಯ ಕಾಂಗ್ರೆಸ್‌ ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿತ್ತು. “ಕವಿತಾ ರಡ್ಡಿ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರು ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳನ್ನು ಅಮಾನತ್ತಿನಲ್ಲಿಡಲಾಗಿದೆ” ಎಂದು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್‌ ಪತ್ರದಲ್ಲಿ ಆದೇಶದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜತೆಗೆ ಮಾತನಾಡಿದ ಕವಿತಾ ರೆಡ್ಡಿ, “ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗಿನಿಂದಲೂ ನನಗೆ ಪಕ್ಷದಲ್ಲಿ ನ್ಯಾಯ ಸಿಕ್ಕಿಲ್ಲ; ನನಗೆ ಬಹಳಷ್ಟು ಅನ್ಯಾಯವಾಗಿದೆ, ಅದಕ್ಕೆ ನ್ಯಾಯ ಸಿಕ್ಕಿಲ್ಲ ಎನ್ನುವುದು ಅವರಿಗೂ ಗೊತ್ತಿದೆ. ನನಗೆ ನೋಟಿಸ್ ಯಾಕೆ ಕಳಿಸಿದ್ದಾರೆ ಎಂಬುದು ಪಕ್ಷದ ಶಿಸ್ತು ಪಾಲನಾ ಸಮಿತಿಗೆ ಗೊತ್ತಿಲ್ಲ. ನಾನು ಕಳಿಸಿರುವ 32 ಪುಟಗಳ ಸ್ಪಷ್ಟನೆಗೆ ಅವರಿಂದ ಯಾವುದೇ ಉತ್ತರ ಬಂದಿಲ್ಲ” ಎಂದರು.

“ನನಗೆ ನೋಟಿಸ್ ಕೊಟ್ಟಿರುವ ಉದ್ದೇಶ ಸ್ಪಷ್ಟವಾಗಿದೆ; ಮೊದಲೆನೆಯದಾಗಿ ನಾನು ಪರಿಶಿಷ್ಟ ಪಂಗಡದ ಹೆಣ್ಣು ಮಗಳಾದ ಭವ್ಯಾ ಸಿಂಗ್ ಪರವಾಗಿ ನಿಂತಿದ್ದು. ಮತ್ತೊಂದು, ರಾಮಲಿಂಗಾ ರೆಡ್ಡಿ ಅವರನ್ನು ವಿರೋಧಿಸಿದ್ದು. ನನ್ನ ಮೇಲಿನ ಕ್ರಮಕ್ಕೆ ಇವೇ ಪ್ರಮುಖ ಕರಾಣಗಳು. ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಕಳೆದ ಎರಡು ವರ್ಷಗಳಿಂದ ಕಾಯುತ್ತಿದ್ದಾರೆ. ‘ರಾಮಲಿಂಗಾ ರೆಡ್ಡಿ ಅವರ ಮಗಳು ಸೌಮ್ಯಾ ರೆಡ್ಡಿ ಖಿನ್ನತೆಗೆ ಒಳಗಾಗಿದ್ದಾರೆ; ಅವರು ಅದರಿಂದ ಹೊರಗಡೆ ಬರಬೇಕಾದರೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕು’ ಎಂದು ಹೇಳಿ, ತರಾತುರಿಯಲ್ಲಿ ನಿರ್ಧರಿಸಿದರೆ ನಾವು ಏನು ಮಾಡುವುದಕ್ಕೆ ಸಾಧ್ಯ” ಎಂದು ಪ್ರಶ್ನಿಸಿದರು.

ನಿಮ್ಮ ನೇರ ಆರೋಪ ಯಾರ ಮೇಲೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪಕ್ಷದ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಇನ್ಯಾರ ಮೇಲೆ ಆರೋಪ ಮಾಡುವುದು? ರಾಮಲಿಂಗಾರೆಡ್ಡಿ ತಮಗಿರುವ ಅಧಿಕಾರ ಬಳಸಿಕೊಂಡು ಅವರ ಮಗಳನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ; ನಮ್ಮ ಹಿಂದೆ ಯಾರಿದ್ದಾರೆ? ಪಕ್ಷದ ಅಧ್ಯಕ್ಷರು ನಮ್ಮ ಪರವಾಗಿ ನಿಲ್ಲಬೇಕಿತ್ತು. ನನಗೆ ಅನ್ಯಾಯ ಆಗಿದೆ ಎಂಬುದು ಅಧ್ಯಕ್ಷರಿಗೂ ಗೊತ್ತಿದೆ” ಎಂದರು.

ಈ ಬೆಳವಣಿಗೆಯನ್ನು ಕುಟುಂಬ ರಾಜಕೀಯದ ಪರಿಣಾಮ ಎಂದು ಭಾವಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕವಿತಾ, “ಖಂಡಿತಾ.. ಕುಟುಂಬ ರಾಜಕಾರಣವಲ್ಲದೆ ಮತ್ತಿನ್ನೇನು? ನಾಲ್ಕೈದು ಜನ ಮಹಿಳಾ ಕಾರ್ಯಕರ್ತರು ಆಕಾಂಕ್ಷಿಗಳಾಗಿದ್ದರು. ಕಮಲಾಕ್ಷಿ ರಾಜಣ್ಣ, ವೀಣಾ ಕಾಶಪ್ಪನವರ್ ಅಥವಾ ಬೇರೊಬ್ಬರಿಗೆ ಕೊಟ್ಟಿದ್ದರೆ ಸಾಮಾಜಿಕ ನ್ಯಾಯ ಎಂದು ನಾವು ಒಪ್ಪಿಕೊಳ್ಳುತ್ತಿದ್ದೆವು. ಆದರೆ, ಇವರು ಕೊಟ್ಟಿರುವುದು ಯಾರಿಗೆ? ಏನೂ ಕೆಲಸ ಮಾಡದೇ ಇರುವ ರಾಮಲಿಂಗಾರೆಡ್ಡಿ ಅವರ ಮಗಳನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಪಕ್ಷದ ಯಾವಯಾವ ಹುದ್ದೆಯಲ್ಲಿ ಅವರು ಕೆಲಸ ಮಾಡಿದ್ದಾರೆ. ನನ್ನ ಜೊತೆಯಲ್ಲಿ ಸೌಮ್ಯಾ ಅವರನ್ನೂ ವಕ್ತಾರರನ್ನಾಗಿ ಮಾಡಿದ್ದರು. ಆದರೆ, ಆಕೆ ಮಾಡಿದ್ದೇನು? ಈವರೆಗೆ ಒಂದೇ ಒಂದು ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಇತ್ತೀಚೆಗಷ್ಟೇ ಅವರನ್ನು ಪ್ರಧಾನ ಕಾರ್ಯದರ್ಶಿ ಮಾಡಲಾಗಿತ್ತು; ಈಗ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಇದಕ್ಕೆಲ್ಲಾ ಅನುಸರಿಸಿದ ಮಾನದಂಡ ಯಾವುದು” ಎಂದು ಅವರು ಬೇಸರ ಹೊರಹಾಕಿದರು.

“ಪಕ್ಷದ ಕಾರ್ಯಕರ್ತೆಯಾಗಿ ನನಗೆ ಕೇಳುವ ಅಧಿಕಾರ ಇದೆ.. ಅದಕ್ಕಾಗಿ ಪ್ರಶ್ನೆ ಮಾಡುತ್ತೇನೆ. ಪಕ್ಷ ಎಲ್ಲರಿಗೂ ಸೇರಿದ್ದು; ಇಂತಹ ಒಂದು ಕಾರಣಕ್ಕೆ ನಾವು ಅವರನ್ನು (ಸೌಮ್ಯಾ ರೆಡ್ಡಿ) ಅಧ್ಯಕ್ಷರನ್ನಾಗಿ ಮಾಡುತ್ತಿದ್ದೇವೆ ಎಂದು ನಮಗೆ ಪಕ್ಷದ ಅಧ್ಯಕ್ಷರು ಕರೆದು ಹೇಳಬಹುದಿತ್ತು. ದುಡ್ಡಿನ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಅಥವಾ ಅವರ ಅಪ್ಪನನ್ನು ಓಲೈಕೆ ಮಾಡುವುದಕ್ಕೆ ಸ್ಥಾನ ಕೊಡುತ್ತಿದ್ದೇವೆ ಎಂದು ಹೇಳಿದ್ದಿದ್ದರೆ, ರಾಜಕಾರಣಿಯಾಗಿ ನಾನೂ ಅರ್ಥ ಮಾಡಿಕೊಳ್ಳುತ್ತಿದ್ದೆ” ಎಂದು ಅವರು ಆಕ್ರೋಶ ಹೊರಹಾಕಿದರು.

ನಿಮ್ಮ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ, “ನ್ಯಾಯ ಸಿಗದೇ ಇದ್ದರೆ ಮುಂದಿನ ನಡೆ ಏನಿರುತ್ತೆ..? ನನ್ನ ಹೋರಾಟ ಮುಂದುವರಿಯುತ್ತದೆ. ಅನ್ಯಾಯ ಮತ್ತು ಮಹಿಳಾ ಶೋಷಣೆ ವಿರುದ್ಧ ಮಾತನಾಡುವುದನ್ನು ಮುಂದುವರಿಸುತ್ತೇನೆ. ಹಲವು ದಶಕಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ ಮಾಡಿರುವ ನಾನು ಸಿದ್ಧಾಂತದಲ್ಲಿ ಎಷ್ಟು ಕಮಿಟೆಡ್ ಎಂಬುದು ಹಲವರಿಗೆ ಗೊತ್ತಿದೆ. ನನ್ನಂತವರಿಗೆ ಇಷ್ಟು ಕಿರುಕುಳ ನೀಡುತ್ತಿದ್ದಾರೆ. ಇನ್ನು ಸಾಮಾನ್ಯ ಕಾರ್ಯಕರ್ತರಿಗೆ ಪಕ್ಷದಲ್ಲಿ ಜಾಗ ಎಲ್ಲಿ ಸಿಗುತ್ತದೆ” ಎಂದು ಕವಿತಾ ಭಾವುಕರಾದರು.

“ನನಗೆ ನ್ಯಾಯ ಸಿಗುವುದಿಲ್ಲ ಎಂಬುದು ಅವರ ನಡೆಯಿಂದಲೇ ಸ್ಪಷ್ಟವಾಗಿದೆ. ಶಿಸ್ತು ಕ್ರಮ ನನಗೆ ಮಾತ್ರ ಯಾಕೆ..? ಪಕ್ಷ ಮತ್ತು ಅಧ್ಯಕ್ಷರ ವಿರುದ್ಧ ಹಲವು ಸಚಿವರು, ಶಾಸಕರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಪಕ್ಷ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರಿಗೆಲ್ಲಾ ನೋಟಿಸ್ ನೀಡಿ ಅಮಾನತು ಮಾಡಿಲ್ಲ ಯಾಕೆ? ನಾನು ಹೆಣ್ಣು ಮಗಳು ಎಂಬ ಕಾರಣಕ್ಕೆ ಅಮಾನತು ಮಾಡಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...