Homeಕರ್ನಾಟಕಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

- Advertisement -
- Advertisement -

ಕಾಂಗ್ರೆಸ್‌ನ ವಕ್ತಾರರಾಗಿದ್ದ ಕವಿತಾ ರೆಡ್ಡಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ. ಕೆಪಿಸಿಸಿ ‌ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ ಹಾಗೂ ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಸೇರಿದಂತೆ, ಪಕ್ಷದ ಕೆಲ ಆಂತರಿಕ ವಿಚಾರಗಳ ಬಗ್ಗೆ ಕವಿತಾ ರೆಡ್ಡಿ ಅವರು ಕೆಲ ದಿನಗಳ ಹಿಂದೆ ಬಹಿರಂಗವಾಗಿ  ತಮ್ಮ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಕವಿತಾ ರೆಡ್ಡಿ ಅವರಿಗೆ ರಾಜ್ಯ ಕಾಂಗ್ರೆಸ್‌ ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿತ್ತು. “ಕವಿತಾ ರಡ್ಡಿ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರು ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳನ್ನು ಅಮಾನತ್ತಿನಲ್ಲಿಡಲಾಗಿದೆ” ಎಂದು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್‌ ಪತ್ರದಲ್ಲಿ ಆದೇಶದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜತೆಗೆ ಮಾತನಾಡಿದ ಕವಿತಾ ರೆಡ್ಡಿ, “ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗಿನಿಂದಲೂ ನನಗೆ ಪಕ್ಷದಲ್ಲಿ ನ್ಯಾಯ ಸಿಕ್ಕಿಲ್ಲ; ನನಗೆ ಬಹಳಷ್ಟು ಅನ್ಯಾಯವಾಗಿದೆ, ಅದಕ್ಕೆ ನ್ಯಾಯ ಸಿಕ್ಕಿಲ್ಲ ಎನ್ನುವುದು ಅವರಿಗೂ ಗೊತ್ತಿದೆ. ನನಗೆ ನೋಟಿಸ್ ಯಾಕೆ ಕಳಿಸಿದ್ದಾರೆ ಎಂಬುದು ಪಕ್ಷದ ಶಿಸ್ತು ಪಾಲನಾ ಸಮಿತಿಗೆ ಗೊತ್ತಿಲ್ಲ. ನಾನು ಕಳಿಸಿರುವ 32 ಪುಟಗಳ ಸ್ಪಷ್ಟನೆಗೆ ಅವರಿಂದ ಯಾವುದೇ ಉತ್ತರ ಬಂದಿಲ್ಲ” ಎಂದರು.

“ನನಗೆ ನೋಟಿಸ್ ಕೊಟ್ಟಿರುವ ಉದ್ದೇಶ ಸ್ಪಷ್ಟವಾಗಿದೆ; ಮೊದಲೆನೆಯದಾಗಿ ನಾನು ಪರಿಶಿಷ್ಟ ಪಂಗಡದ ಹೆಣ್ಣು ಮಗಳಾದ ಭವ್ಯಾ ಸಿಂಗ್ ಪರವಾಗಿ ನಿಂತಿದ್ದು. ಮತ್ತೊಂದು, ರಾಮಲಿಂಗಾ ರೆಡ್ಡಿ ಅವರನ್ನು ವಿರೋಧಿಸಿದ್ದು. ನನ್ನ ಮೇಲಿನ ಕ್ರಮಕ್ಕೆ ಇವೇ ಪ್ರಮುಖ ಕರಾಣಗಳು. ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಕಳೆದ ಎರಡು ವರ್ಷಗಳಿಂದ ಕಾಯುತ್ತಿದ್ದಾರೆ. ‘ರಾಮಲಿಂಗಾ ರೆಡ್ಡಿ ಅವರ ಮಗಳು ಸೌಮ್ಯಾ ರೆಡ್ಡಿ ಖಿನ್ನತೆಗೆ ಒಳಗಾಗಿದ್ದಾರೆ; ಅವರು ಅದರಿಂದ ಹೊರಗಡೆ ಬರಬೇಕಾದರೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕು’ ಎಂದು ಹೇಳಿ, ತರಾತುರಿಯಲ್ಲಿ ನಿರ್ಧರಿಸಿದರೆ ನಾವು ಏನು ಮಾಡುವುದಕ್ಕೆ ಸಾಧ್ಯ” ಎಂದು ಪ್ರಶ್ನಿಸಿದರು.

ನಿಮ್ಮ ನೇರ ಆರೋಪ ಯಾರ ಮೇಲೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪಕ್ಷದ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಇನ್ಯಾರ ಮೇಲೆ ಆರೋಪ ಮಾಡುವುದು? ರಾಮಲಿಂಗಾರೆಡ್ಡಿ ತಮಗಿರುವ ಅಧಿಕಾರ ಬಳಸಿಕೊಂಡು ಅವರ ಮಗಳನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ; ನಮ್ಮ ಹಿಂದೆ ಯಾರಿದ್ದಾರೆ? ಪಕ್ಷದ ಅಧ್ಯಕ್ಷರು ನಮ್ಮ ಪರವಾಗಿ ನಿಲ್ಲಬೇಕಿತ್ತು. ನನಗೆ ಅನ್ಯಾಯ ಆಗಿದೆ ಎಂಬುದು ಅಧ್ಯಕ್ಷರಿಗೂ ಗೊತ್ತಿದೆ” ಎಂದರು.

ಈ ಬೆಳವಣಿಗೆಯನ್ನು ಕುಟುಂಬ ರಾಜಕೀಯದ ಪರಿಣಾಮ ಎಂದು ಭಾವಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕವಿತಾ, “ಖಂಡಿತಾ.. ಕುಟುಂಬ ರಾಜಕಾರಣವಲ್ಲದೆ ಮತ್ತಿನ್ನೇನು? ನಾಲ್ಕೈದು ಜನ ಮಹಿಳಾ ಕಾರ್ಯಕರ್ತರು ಆಕಾಂಕ್ಷಿಗಳಾಗಿದ್ದರು. ಕಮಲಾಕ್ಷಿ ರಾಜಣ್ಣ, ವೀಣಾ ಕಾಶಪ್ಪನವರ್ ಅಥವಾ ಬೇರೊಬ್ಬರಿಗೆ ಕೊಟ್ಟಿದ್ದರೆ ಸಾಮಾಜಿಕ ನ್ಯಾಯ ಎಂದು ನಾವು ಒಪ್ಪಿಕೊಳ್ಳುತ್ತಿದ್ದೆವು. ಆದರೆ, ಇವರು ಕೊಟ್ಟಿರುವುದು ಯಾರಿಗೆ? ಏನೂ ಕೆಲಸ ಮಾಡದೇ ಇರುವ ರಾಮಲಿಂಗಾರೆಡ್ಡಿ ಅವರ ಮಗಳನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಪಕ್ಷದ ಯಾವಯಾವ ಹುದ್ದೆಯಲ್ಲಿ ಅವರು ಕೆಲಸ ಮಾಡಿದ್ದಾರೆ. ನನ್ನ ಜೊತೆಯಲ್ಲಿ ಸೌಮ್ಯಾ ಅವರನ್ನೂ ವಕ್ತಾರರನ್ನಾಗಿ ಮಾಡಿದ್ದರು. ಆದರೆ, ಆಕೆ ಮಾಡಿದ್ದೇನು? ಈವರೆಗೆ ಒಂದೇ ಒಂದು ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಇತ್ತೀಚೆಗಷ್ಟೇ ಅವರನ್ನು ಪ್ರಧಾನ ಕಾರ್ಯದರ್ಶಿ ಮಾಡಲಾಗಿತ್ತು; ಈಗ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಇದಕ್ಕೆಲ್ಲಾ ಅನುಸರಿಸಿದ ಮಾನದಂಡ ಯಾವುದು” ಎಂದು ಅವರು ಬೇಸರ ಹೊರಹಾಕಿದರು.

“ಪಕ್ಷದ ಕಾರ್ಯಕರ್ತೆಯಾಗಿ ನನಗೆ ಕೇಳುವ ಅಧಿಕಾರ ಇದೆ.. ಅದಕ್ಕಾಗಿ ಪ್ರಶ್ನೆ ಮಾಡುತ್ತೇನೆ. ಪಕ್ಷ ಎಲ್ಲರಿಗೂ ಸೇರಿದ್ದು; ಇಂತಹ ಒಂದು ಕಾರಣಕ್ಕೆ ನಾವು ಅವರನ್ನು (ಸೌಮ್ಯಾ ರೆಡ್ಡಿ) ಅಧ್ಯಕ್ಷರನ್ನಾಗಿ ಮಾಡುತ್ತಿದ್ದೇವೆ ಎಂದು ನಮಗೆ ಪಕ್ಷದ ಅಧ್ಯಕ್ಷರು ಕರೆದು ಹೇಳಬಹುದಿತ್ತು. ದುಡ್ಡಿನ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಅಥವಾ ಅವರ ಅಪ್ಪನನ್ನು ಓಲೈಕೆ ಮಾಡುವುದಕ್ಕೆ ಸ್ಥಾನ ಕೊಡುತ್ತಿದ್ದೇವೆ ಎಂದು ಹೇಳಿದ್ದಿದ್ದರೆ, ರಾಜಕಾರಣಿಯಾಗಿ ನಾನೂ ಅರ್ಥ ಮಾಡಿಕೊಳ್ಳುತ್ತಿದ್ದೆ” ಎಂದು ಅವರು ಆಕ್ರೋಶ ಹೊರಹಾಕಿದರು.

ನಿಮ್ಮ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ, “ನ್ಯಾಯ ಸಿಗದೇ ಇದ್ದರೆ ಮುಂದಿನ ನಡೆ ಏನಿರುತ್ತೆ..? ನನ್ನ ಹೋರಾಟ ಮುಂದುವರಿಯುತ್ತದೆ. ಅನ್ಯಾಯ ಮತ್ತು ಮಹಿಳಾ ಶೋಷಣೆ ವಿರುದ್ಧ ಮಾತನಾಡುವುದನ್ನು ಮುಂದುವರಿಸುತ್ತೇನೆ. ಹಲವು ದಶಕಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ ಮಾಡಿರುವ ನಾನು ಸಿದ್ಧಾಂತದಲ್ಲಿ ಎಷ್ಟು ಕಮಿಟೆಡ್ ಎಂಬುದು ಹಲವರಿಗೆ ಗೊತ್ತಿದೆ. ನನ್ನಂತವರಿಗೆ ಇಷ್ಟು ಕಿರುಕುಳ ನೀಡುತ್ತಿದ್ದಾರೆ. ಇನ್ನು ಸಾಮಾನ್ಯ ಕಾರ್ಯಕರ್ತರಿಗೆ ಪಕ್ಷದಲ್ಲಿ ಜಾಗ ಎಲ್ಲಿ ಸಿಗುತ್ತದೆ” ಎಂದು ಕವಿತಾ ಭಾವುಕರಾದರು.

“ನನಗೆ ನ್ಯಾಯ ಸಿಗುವುದಿಲ್ಲ ಎಂಬುದು ಅವರ ನಡೆಯಿಂದಲೇ ಸ್ಪಷ್ಟವಾಗಿದೆ. ಶಿಸ್ತು ಕ್ರಮ ನನಗೆ ಮಾತ್ರ ಯಾಕೆ..? ಪಕ್ಷ ಮತ್ತು ಅಧ್ಯಕ್ಷರ ವಿರುದ್ಧ ಹಲವು ಸಚಿವರು, ಶಾಸಕರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಪಕ್ಷ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರಿಗೆಲ್ಲಾ ನೋಟಿಸ್ ನೀಡಿ ಅಮಾನತು ಮಾಡಿಲ್ಲ ಯಾಕೆ? ನಾನು ಹೆಣ್ಣು ಮಗಳು ಎಂಬ ಕಾರಣಕ್ಕೆ ಅಮಾನತು ಮಾಡಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...