Homeಅಂತರಾಷ್ಟ್ರೀಯಕಝಾಕಿಸ್ತಾನ್‌ನಲ್ಲಿ ಭುಗಿಲೆದ್ದ ಇಂಧನ ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ದಾಳಿ

ಕಝಾಕಿಸ್ತಾನ್‌ನಲ್ಲಿ ಭುಗಿಲೆದ್ದ ಇಂಧನ ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ದಾಳಿ

12 ಹೆಚ್ಚು ಪ್ರತಿಭಟನಾಕಾರರು ಹಾಗೂ 18 ಪೊಲೀಸರು ಮೃತಪಟ್ಟಿದ್ದು, ಗಲಭೆ ನಿಯಂತ್ರಿಸಲು ರಷ್ಯಾ ಸೇನೆ ಪ್ರವೇಶಿಸಿದೆ

- Advertisement -
- Advertisement -

ಕಝಾಕಿಸ್ತಾನ್‌ ನಲ್ಲಿ ಇಂಧನ ಬೆಲೆಗಳ ಹೆಚ್ಚಳವನ್ನು ವಿರೋಧಿಸಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಬೆಲೆ ಏರಿಕೆ ವಿರುದ್ದ ಪ್ರಾರಂಭವಾಗಿದ್ದ ಪ್ರತಿಭಟನೆಯು ಇದೀಗ ಸರ್ಕಾರಿ ವಿರೋಧಿ ಗಲಭೆಯಾಗಿ ಮಾರ್ಪಟ್ಟಿದ್ದು, 12 ಹೆಚ್ಚು ಪ್ರತಿಭಟನಾಕಾರರು ಹಾಗೂ 18 ಪೊಲೀಸರು ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬ ಪೊಲೀಸ್ ಅಧಿಕಾರಿಯ ಶಿರಚ್ಛೇದ ಮಾಡಿರುವುದಾಗಿ ವರದಿಯಾಗಿದೆ.

ಬುಧವಾರದಂದು ದೇಶದ ಅತಿದೊಡ್ಡ ನಗರವಾದ ನೂರ್‌ ಸುಲ್ತಾನ್‌ನಲ್ಲಿರುವ ಅಧ್ಯಕ್ಷರ ನಿವಾಸ ಮತ್ತು ಅಲ್ಮಾಟಿಯ ಮೇಯರ್ ಕಚೇರಿಗೆ ನುಗ್ಗಿದ ಪ್ರತಿಭಟನಾಕಾರರು ರಾತ್ರಿಯಿಡೀ ಹಲವು ಕಟ್ಟಡಗಳಿಗೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ಹಲವು ಸರ್ಕಾರಿ ಕಚೇರಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ:ಗಾಲ್ವಾನ್ ಕಣಿವೆಯಲ್ಲಿ ಚೀನಿ ಧ್ವಜಾರೋಹಣ: ಮೋದಿ ಮೌನ ಪ್ರಶ್ನಿಸಿದ ಖರ್ಗೆ

“ಡಜನ್‌ಗಟ್ಟಲೆ ದಾಳಿಕೋರರನ್ನು ಹತ್ಯೆ(liquidated) ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರ ಸಲ್ತಾನಾತ್ ಅಜಿರ್ಬೆಕ್ ರಾಜ್ಯ ಸುದ್ದಿ ವಾಹಿನಿ ಖಬರ್ -24 ಗೆ ತಿಳಿಸಿದ್ದಾರೆ. ಉಗ್ರಗಾಮಿಗಳೆಂದು ಭಾವಿಸಲಾದ ಜನರನ್ನು ಕೊಲ್ಲುವುದನ್ನು ವಿವರಿಸಲು ಬಳಸುವ ಸಾಮಾನ್ಯ ಪದವನ್ನು ಅವರು ಬಳಸಿದ್ದಾರೆ.

ಕಝಾಕಿಸ್ತಾನ್‌ ಅಧ್ಯಕ್ಷರಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಆರಂಭದಲ್ಲಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸುವುದಕ್ಕೆ ಪ್ರಯತ್ನಿಸುತ್ತಿರುವಂತೆ ತೋರುತ್ತಿದ್ದರೂ, ನಂತರ ಅವರು ಅಶಾಂತಿಯನ್ನು ನಿಗ್ರಹಿಸಲು ಕಠಿಣಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಮತ್ತು ಇಡೀ ದೇಶದಲ್ಲಿ ಎರಡು ವಾರಗಳ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಅಶಾಂತಿಯನ್ನು ಅವರು “ಭಯೋತ್ಪಾದಕ ಬ್ಯಾಂಡ್” ಎಂದು ದೂಷಿಸಿದ್ದು, ಸಹಾಯಕ್ಕಾಗಿ ರಷ್ಯಾ ನೇತೃತ್ವದ ಮಿಲಿಟರಿ ಒಕ್ಕೂಟವನ್ನು ಕರೆದ್ದಾರೆ.

ಇದನ್ನೂ ಓದಿ:ಧರ್ಮ ಸಂಸದ್‌ನಲ್ಲಿ ದ್ವೇ‍ಷ ಭಾಷಣ: ಭಾರತದ ಉನ್ನತ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದ ಪಾಕಿಸ್ತಾನ

ಈಗಾಗಲೆ, ಪ್ರತಿಭಟನೆಗಳನ್ನು ಹತ್ತಿಕ್ಕಲು ರಷ್ಯಾ ಮತ್ತು ಅದರ ಮಿತ್ರರಾಷ್ಟ್ರಗಳು ಪಡೆಗಳನ್ನು ಕಳುಹಿಸಿದೆ. ಆದರೆ ಇದನ್ನು ಅಮೇರಿಕಾ ವಿರೋಧಿಸಿದ್ದು, ‘ವಿಶ್ವವೂ ಗಮನಿಸುತ್ತಿದೆ’ ಎಂದು ಎಚ್ಚರಿಸಿದೆ.

ಪೆಟ್ರೋಲಿಯಂ ಅನಿಲ ಇಂಧನದ ಬೆಲೆಯಲ್ಲಿ ತೀವ್ರ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಕಝಾಕಿಸ್ತಾನದಲ್ಲಿ ಭಾನುವಾರ ಪ್ರಾರಂಭವಾದ ಪ್ರತಿಭಟನೆಗಳು ತೀವ್ರಗೊಂಡಿದ್ದು ನಂತರದಲ್ಲಿ ದೇಶದ ಪಶ್ಚಿಮ ಅಲ್ಮಾಟಿ ಮತ್ತು ರಾಜಧಾನಿ ನೂರ್-ಸುಲ್ತಾನ್‌ಗೆ ಹಬ್ಬಿಕೊಂಡಿದೆ. ಮೂರು ದಶಕಗಳ ಹಿಂದೆ ಸ್ವಾತಂತ್ರ್ಯ ಗಳಿಸಿದ ಕಝಾಕಿಸ್ತಾನ್‌ನಲ್ಲಿ, ಪ್ರತಿಭಟನೆಯ ವೇಳೆ ನಡೆದ ಅತ್ಯಂತ ಭೀಕರ ಘಟನೆ ಇದು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಕಝಕಿಸ್ತಾನದಲ್ಲಿ ಬೆಲೆ ಏರಿಕೆಯ ಬಿಸಿ ತೀವ್ರವಾಗಿದ್ದು ಬೆಲೆ ಏರಿಕೆಯಿಂದಾಗಿ ಅಲ್ಲಿಯ ಜನರು ಬೇಸತ್ತಿದ್ದು, ಇದರ ಜೊತೆಗೆ ಹಣದುಬ್ಬರವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. 2019ರಲ್ಲಿ ಅಧ್ಯಕ್ಷನಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಜನರ ತೀವ್ರ ವಿರೋಧಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ:ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...