Homeಅಂತರಾಷ್ಟ್ರೀಯಕಝಾಕಿಸ್ತಾನ್‌ನಲ್ಲಿ ಭುಗಿಲೆದ್ದ ಇಂಧನ ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ದಾಳಿ

ಕಝಾಕಿಸ್ತಾನ್‌ನಲ್ಲಿ ಭುಗಿಲೆದ್ದ ಇಂಧನ ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ದಾಳಿ

12 ಹೆಚ್ಚು ಪ್ರತಿಭಟನಾಕಾರರು ಹಾಗೂ 18 ಪೊಲೀಸರು ಮೃತಪಟ್ಟಿದ್ದು, ಗಲಭೆ ನಿಯಂತ್ರಿಸಲು ರಷ್ಯಾ ಸೇನೆ ಪ್ರವೇಶಿಸಿದೆ

- Advertisement -
- Advertisement -

ಕಝಾಕಿಸ್ತಾನ್‌ ನಲ್ಲಿ ಇಂಧನ ಬೆಲೆಗಳ ಹೆಚ್ಚಳವನ್ನು ವಿರೋಧಿಸಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಬೆಲೆ ಏರಿಕೆ ವಿರುದ್ದ ಪ್ರಾರಂಭವಾಗಿದ್ದ ಪ್ರತಿಭಟನೆಯು ಇದೀಗ ಸರ್ಕಾರಿ ವಿರೋಧಿ ಗಲಭೆಯಾಗಿ ಮಾರ್ಪಟ್ಟಿದ್ದು, 12 ಹೆಚ್ಚು ಪ್ರತಿಭಟನಾಕಾರರು ಹಾಗೂ 18 ಪೊಲೀಸರು ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬ ಪೊಲೀಸ್ ಅಧಿಕಾರಿಯ ಶಿರಚ್ಛೇದ ಮಾಡಿರುವುದಾಗಿ ವರದಿಯಾಗಿದೆ.

ಬುಧವಾರದಂದು ದೇಶದ ಅತಿದೊಡ್ಡ ನಗರವಾದ ನೂರ್‌ ಸುಲ್ತಾನ್‌ನಲ್ಲಿರುವ ಅಧ್ಯಕ್ಷರ ನಿವಾಸ ಮತ್ತು ಅಲ್ಮಾಟಿಯ ಮೇಯರ್ ಕಚೇರಿಗೆ ನುಗ್ಗಿದ ಪ್ರತಿಭಟನಾಕಾರರು ರಾತ್ರಿಯಿಡೀ ಹಲವು ಕಟ್ಟಡಗಳಿಗೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ಹಲವು ಸರ್ಕಾರಿ ಕಚೇರಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ:ಗಾಲ್ವಾನ್ ಕಣಿವೆಯಲ್ಲಿ ಚೀನಿ ಧ್ವಜಾರೋಹಣ: ಮೋದಿ ಮೌನ ಪ್ರಶ್ನಿಸಿದ ಖರ್ಗೆ

“ಡಜನ್‌ಗಟ್ಟಲೆ ದಾಳಿಕೋರರನ್ನು ಹತ್ಯೆ(liquidated) ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರ ಸಲ್ತಾನಾತ್ ಅಜಿರ್ಬೆಕ್ ರಾಜ್ಯ ಸುದ್ದಿ ವಾಹಿನಿ ಖಬರ್ -24 ಗೆ ತಿಳಿಸಿದ್ದಾರೆ. ಉಗ್ರಗಾಮಿಗಳೆಂದು ಭಾವಿಸಲಾದ ಜನರನ್ನು ಕೊಲ್ಲುವುದನ್ನು ವಿವರಿಸಲು ಬಳಸುವ ಸಾಮಾನ್ಯ ಪದವನ್ನು ಅವರು ಬಳಸಿದ್ದಾರೆ.

ಕಝಾಕಿಸ್ತಾನ್‌ ಅಧ್ಯಕ್ಷರಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಆರಂಭದಲ್ಲಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸುವುದಕ್ಕೆ ಪ್ರಯತ್ನಿಸುತ್ತಿರುವಂತೆ ತೋರುತ್ತಿದ್ದರೂ, ನಂತರ ಅವರು ಅಶಾಂತಿಯನ್ನು ನಿಗ್ರಹಿಸಲು ಕಠಿಣಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಮತ್ತು ಇಡೀ ದೇಶದಲ್ಲಿ ಎರಡು ವಾರಗಳ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಅಶಾಂತಿಯನ್ನು ಅವರು “ಭಯೋತ್ಪಾದಕ ಬ್ಯಾಂಡ್” ಎಂದು ದೂಷಿಸಿದ್ದು, ಸಹಾಯಕ್ಕಾಗಿ ರಷ್ಯಾ ನೇತೃತ್ವದ ಮಿಲಿಟರಿ ಒಕ್ಕೂಟವನ್ನು ಕರೆದ್ದಾರೆ.

ಇದನ್ನೂ ಓದಿ:ಧರ್ಮ ಸಂಸದ್‌ನಲ್ಲಿ ದ್ವೇ‍ಷ ಭಾಷಣ: ಭಾರತದ ಉನ್ನತ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದ ಪಾಕಿಸ್ತಾನ

ಈಗಾಗಲೆ, ಪ್ರತಿಭಟನೆಗಳನ್ನು ಹತ್ತಿಕ್ಕಲು ರಷ್ಯಾ ಮತ್ತು ಅದರ ಮಿತ್ರರಾಷ್ಟ್ರಗಳು ಪಡೆಗಳನ್ನು ಕಳುಹಿಸಿದೆ. ಆದರೆ ಇದನ್ನು ಅಮೇರಿಕಾ ವಿರೋಧಿಸಿದ್ದು, ‘ವಿಶ್ವವೂ ಗಮನಿಸುತ್ತಿದೆ’ ಎಂದು ಎಚ್ಚರಿಸಿದೆ.

ಪೆಟ್ರೋಲಿಯಂ ಅನಿಲ ಇಂಧನದ ಬೆಲೆಯಲ್ಲಿ ತೀವ್ರ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಕಝಾಕಿಸ್ತಾನದಲ್ಲಿ ಭಾನುವಾರ ಪ್ರಾರಂಭವಾದ ಪ್ರತಿಭಟನೆಗಳು ತೀವ್ರಗೊಂಡಿದ್ದು ನಂತರದಲ್ಲಿ ದೇಶದ ಪಶ್ಚಿಮ ಅಲ್ಮಾಟಿ ಮತ್ತು ರಾಜಧಾನಿ ನೂರ್-ಸುಲ್ತಾನ್‌ಗೆ ಹಬ್ಬಿಕೊಂಡಿದೆ. ಮೂರು ದಶಕಗಳ ಹಿಂದೆ ಸ್ವಾತಂತ್ರ್ಯ ಗಳಿಸಿದ ಕಝಾಕಿಸ್ತಾನ್‌ನಲ್ಲಿ, ಪ್ರತಿಭಟನೆಯ ವೇಳೆ ನಡೆದ ಅತ್ಯಂತ ಭೀಕರ ಘಟನೆ ಇದು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಕಝಕಿಸ್ತಾನದಲ್ಲಿ ಬೆಲೆ ಏರಿಕೆಯ ಬಿಸಿ ತೀವ್ರವಾಗಿದ್ದು ಬೆಲೆ ಏರಿಕೆಯಿಂದಾಗಿ ಅಲ್ಲಿಯ ಜನರು ಬೇಸತ್ತಿದ್ದು, ಇದರ ಜೊತೆಗೆ ಹಣದುಬ್ಬರವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. 2019ರಲ್ಲಿ ಅಧ್ಯಕ್ಷನಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಜನರ ತೀವ್ರ ವಿರೋಧಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ:ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...