Homeಅಂತರಾಷ್ಟ್ರೀಯಕಝಾಕಿಸ್ತಾನ್‌ನಲ್ಲಿ ಭುಗಿಲೆದ್ದ ಇಂಧನ ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ದಾಳಿ

ಕಝಾಕಿಸ್ತಾನ್‌ನಲ್ಲಿ ಭುಗಿಲೆದ್ದ ಇಂಧನ ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ದಾಳಿ

12 ಹೆಚ್ಚು ಪ್ರತಿಭಟನಾಕಾರರು ಹಾಗೂ 18 ಪೊಲೀಸರು ಮೃತಪಟ್ಟಿದ್ದು, ಗಲಭೆ ನಿಯಂತ್ರಿಸಲು ರಷ್ಯಾ ಸೇನೆ ಪ್ರವೇಶಿಸಿದೆ

- Advertisement -
- Advertisement -

ಕಝಾಕಿಸ್ತಾನ್‌ ನಲ್ಲಿ ಇಂಧನ ಬೆಲೆಗಳ ಹೆಚ್ಚಳವನ್ನು ವಿರೋಧಿಸಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಬೆಲೆ ಏರಿಕೆ ವಿರುದ್ದ ಪ್ರಾರಂಭವಾಗಿದ್ದ ಪ್ರತಿಭಟನೆಯು ಇದೀಗ ಸರ್ಕಾರಿ ವಿರೋಧಿ ಗಲಭೆಯಾಗಿ ಮಾರ್ಪಟ್ಟಿದ್ದು, 12 ಹೆಚ್ಚು ಪ್ರತಿಭಟನಾಕಾರರು ಹಾಗೂ 18 ಪೊಲೀಸರು ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬ ಪೊಲೀಸ್ ಅಧಿಕಾರಿಯ ಶಿರಚ್ಛೇದ ಮಾಡಿರುವುದಾಗಿ ವರದಿಯಾಗಿದೆ.

ಬುಧವಾರದಂದು ದೇಶದ ಅತಿದೊಡ್ಡ ನಗರವಾದ ನೂರ್‌ ಸುಲ್ತಾನ್‌ನಲ್ಲಿರುವ ಅಧ್ಯಕ್ಷರ ನಿವಾಸ ಮತ್ತು ಅಲ್ಮಾಟಿಯ ಮೇಯರ್ ಕಚೇರಿಗೆ ನುಗ್ಗಿದ ಪ್ರತಿಭಟನಾಕಾರರು ರಾತ್ರಿಯಿಡೀ ಹಲವು ಕಟ್ಟಡಗಳಿಗೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ಹಲವು ಸರ್ಕಾರಿ ಕಚೇರಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ:ಗಾಲ್ವಾನ್ ಕಣಿವೆಯಲ್ಲಿ ಚೀನಿ ಧ್ವಜಾರೋಹಣ: ಮೋದಿ ಮೌನ ಪ್ರಶ್ನಿಸಿದ ಖರ್ಗೆ

“ಡಜನ್‌ಗಟ್ಟಲೆ ದಾಳಿಕೋರರನ್ನು ಹತ್ಯೆ(liquidated) ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರ ಸಲ್ತಾನಾತ್ ಅಜಿರ್ಬೆಕ್ ರಾಜ್ಯ ಸುದ್ದಿ ವಾಹಿನಿ ಖಬರ್ -24 ಗೆ ತಿಳಿಸಿದ್ದಾರೆ. ಉಗ್ರಗಾಮಿಗಳೆಂದು ಭಾವಿಸಲಾದ ಜನರನ್ನು ಕೊಲ್ಲುವುದನ್ನು ವಿವರಿಸಲು ಬಳಸುವ ಸಾಮಾನ್ಯ ಪದವನ್ನು ಅವರು ಬಳಸಿದ್ದಾರೆ.

ಕಝಾಕಿಸ್ತಾನ್‌ ಅಧ್ಯಕ್ಷರಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಆರಂಭದಲ್ಲಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸುವುದಕ್ಕೆ ಪ್ರಯತ್ನಿಸುತ್ತಿರುವಂತೆ ತೋರುತ್ತಿದ್ದರೂ, ನಂತರ ಅವರು ಅಶಾಂತಿಯನ್ನು ನಿಗ್ರಹಿಸಲು ಕಠಿಣಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಮತ್ತು ಇಡೀ ದೇಶದಲ್ಲಿ ಎರಡು ವಾರಗಳ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಅಶಾಂತಿಯನ್ನು ಅವರು “ಭಯೋತ್ಪಾದಕ ಬ್ಯಾಂಡ್” ಎಂದು ದೂಷಿಸಿದ್ದು, ಸಹಾಯಕ್ಕಾಗಿ ರಷ್ಯಾ ನೇತೃತ್ವದ ಮಿಲಿಟರಿ ಒಕ್ಕೂಟವನ್ನು ಕರೆದ್ದಾರೆ.

ಇದನ್ನೂ ಓದಿ:ಧರ್ಮ ಸಂಸದ್‌ನಲ್ಲಿ ದ್ವೇ‍ಷ ಭಾಷಣ: ಭಾರತದ ಉನ್ನತ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದ ಪಾಕಿಸ್ತಾನ

ಈಗಾಗಲೆ, ಪ್ರತಿಭಟನೆಗಳನ್ನು ಹತ್ತಿಕ್ಕಲು ರಷ್ಯಾ ಮತ್ತು ಅದರ ಮಿತ್ರರಾಷ್ಟ್ರಗಳು ಪಡೆಗಳನ್ನು ಕಳುಹಿಸಿದೆ. ಆದರೆ ಇದನ್ನು ಅಮೇರಿಕಾ ವಿರೋಧಿಸಿದ್ದು, ‘ವಿಶ್ವವೂ ಗಮನಿಸುತ್ತಿದೆ’ ಎಂದು ಎಚ್ಚರಿಸಿದೆ.

ಪೆಟ್ರೋಲಿಯಂ ಅನಿಲ ಇಂಧನದ ಬೆಲೆಯಲ್ಲಿ ತೀವ್ರ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಕಝಾಕಿಸ್ತಾನದಲ್ಲಿ ಭಾನುವಾರ ಪ್ರಾರಂಭವಾದ ಪ್ರತಿಭಟನೆಗಳು ತೀವ್ರಗೊಂಡಿದ್ದು ನಂತರದಲ್ಲಿ ದೇಶದ ಪಶ್ಚಿಮ ಅಲ್ಮಾಟಿ ಮತ್ತು ರಾಜಧಾನಿ ನೂರ್-ಸುಲ್ತಾನ್‌ಗೆ ಹಬ್ಬಿಕೊಂಡಿದೆ. ಮೂರು ದಶಕಗಳ ಹಿಂದೆ ಸ್ವಾತಂತ್ರ್ಯ ಗಳಿಸಿದ ಕಝಾಕಿಸ್ತಾನ್‌ನಲ್ಲಿ, ಪ್ರತಿಭಟನೆಯ ವೇಳೆ ನಡೆದ ಅತ್ಯಂತ ಭೀಕರ ಘಟನೆ ಇದು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಕಝಕಿಸ್ತಾನದಲ್ಲಿ ಬೆಲೆ ಏರಿಕೆಯ ಬಿಸಿ ತೀವ್ರವಾಗಿದ್ದು ಬೆಲೆ ಏರಿಕೆಯಿಂದಾಗಿ ಅಲ್ಲಿಯ ಜನರು ಬೇಸತ್ತಿದ್ದು, ಇದರ ಜೊತೆಗೆ ಹಣದುಬ್ಬರವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. 2019ರಲ್ಲಿ ಅಧ್ಯಕ್ಷನಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಜನರ ತೀವ್ರ ವಿರೋಧಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ:ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...