Homeಅಂತರಾಷ್ಟ್ರೀಯಕಝಾಕಿಸ್ತಾನ್‌ನಲ್ಲಿ ಭುಗಿಲೆದ್ದ ಇಂಧನ ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ದಾಳಿ

ಕಝಾಕಿಸ್ತಾನ್‌ನಲ್ಲಿ ಭುಗಿಲೆದ್ದ ಇಂಧನ ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ದಾಳಿ

12 ಹೆಚ್ಚು ಪ್ರತಿಭಟನಾಕಾರರು ಹಾಗೂ 18 ಪೊಲೀಸರು ಮೃತಪಟ್ಟಿದ್ದು, ಗಲಭೆ ನಿಯಂತ್ರಿಸಲು ರಷ್ಯಾ ಸೇನೆ ಪ್ರವೇಶಿಸಿದೆ

- Advertisement -
- Advertisement -

ಕಝಾಕಿಸ್ತಾನ್‌ ನಲ್ಲಿ ಇಂಧನ ಬೆಲೆಗಳ ಹೆಚ್ಚಳವನ್ನು ವಿರೋಧಿಸಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಬೆಲೆ ಏರಿಕೆ ವಿರುದ್ದ ಪ್ರಾರಂಭವಾಗಿದ್ದ ಪ್ರತಿಭಟನೆಯು ಇದೀಗ ಸರ್ಕಾರಿ ವಿರೋಧಿ ಗಲಭೆಯಾಗಿ ಮಾರ್ಪಟ್ಟಿದ್ದು, 12 ಹೆಚ್ಚು ಪ್ರತಿಭಟನಾಕಾರರು ಹಾಗೂ 18 ಪೊಲೀಸರು ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬ ಪೊಲೀಸ್ ಅಧಿಕಾರಿಯ ಶಿರಚ್ಛೇದ ಮಾಡಿರುವುದಾಗಿ ವರದಿಯಾಗಿದೆ.

ಬುಧವಾರದಂದು ದೇಶದ ಅತಿದೊಡ್ಡ ನಗರವಾದ ನೂರ್‌ ಸುಲ್ತಾನ್‌ನಲ್ಲಿರುವ ಅಧ್ಯಕ್ಷರ ನಿವಾಸ ಮತ್ತು ಅಲ್ಮಾಟಿಯ ಮೇಯರ್ ಕಚೇರಿಗೆ ನುಗ್ಗಿದ ಪ್ರತಿಭಟನಾಕಾರರು ರಾತ್ರಿಯಿಡೀ ಹಲವು ಕಟ್ಟಡಗಳಿಗೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ಹಲವು ಸರ್ಕಾರಿ ಕಚೇರಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ:ಗಾಲ್ವಾನ್ ಕಣಿವೆಯಲ್ಲಿ ಚೀನಿ ಧ್ವಜಾರೋಹಣ: ಮೋದಿ ಮೌನ ಪ್ರಶ್ನಿಸಿದ ಖರ್ಗೆ

“ಡಜನ್‌ಗಟ್ಟಲೆ ದಾಳಿಕೋರರನ್ನು ಹತ್ಯೆ(liquidated) ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರ ಸಲ್ತಾನಾತ್ ಅಜಿರ್ಬೆಕ್ ರಾಜ್ಯ ಸುದ್ದಿ ವಾಹಿನಿ ಖಬರ್ -24 ಗೆ ತಿಳಿಸಿದ್ದಾರೆ. ಉಗ್ರಗಾಮಿಗಳೆಂದು ಭಾವಿಸಲಾದ ಜನರನ್ನು ಕೊಲ್ಲುವುದನ್ನು ವಿವರಿಸಲು ಬಳಸುವ ಸಾಮಾನ್ಯ ಪದವನ್ನು ಅವರು ಬಳಸಿದ್ದಾರೆ.

ಕಝಾಕಿಸ್ತಾನ್‌ ಅಧ್ಯಕ್ಷರಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಆರಂಭದಲ್ಲಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸುವುದಕ್ಕೆ ಪ್ರಯತ್ನಿಸುತ್ತಿರುವಂತೆ ತೋರುತ್ತಿದ್ದರೂ, ನಂತರ ಅವರು ಅಶಾಂತಿಯನ್ನು ನಿಗ್ರಹಿಸಲು ಕಠಿಣಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಮತ್ತು ಇಡೀ ದೇಶದಲ್ಲಿ ಎರಡು ವಾರಗಳ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಅಶಾಂತಿಯನ್ನು ಅವರು “ಭಯೋತ್ಪಾದಕ ಬ್ಯಾಂಡ್” ಎಂದು ದೂಷಿಸಿದ್ದು, ಸಹಾಯಕ್ಕಾಗಿ ರಷ್ಯಾ ನೇತೃತ್ವದ ಮಿಲಿಟರಿ ಒಕ್ಕೂಟವನ್ನು ಕರೆದ್ದಾರೆ.

ಇದನ್ನೂ ಓದಿ:ಧರ್ಮ ಸಂಸದ್‌ನಲ್ಲಿ ದ್ವೇ‍ಷ ಭಾಷಣ: ಭಾರತದ ಉನ್ನತ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದ ಪಾಕಿಸ್ತಾನ

ಈಗಾಗಲೆ, ಪ್ರತಿಭಟನೆಗಳನ್ನು ಹತ್ತಿಕ್ಕಲು ರಷ್ಯಾ ಮತ್ತು ಅದರ ಮಿತ್ರರಾಷ್ಟ್ರಗಳು ಪಡೆಗಳನ್ನು ಕಳುಹಿಸಿದೆ. ಆದರೆ ಇದನ್ನು ಅಮೇರಿಕಾ ವಿರೋಧಿಸಿದ್ದು, ‘ವಿಶ್ವವೂ ಗಮನಿಸುತ್ತಿದೆ’ ಎಂದು ಎಚ್ಚರಿಸಿದೆ.

ಪೆಟ್ರೋಲಿಯಂ ಅನಿಲ ಇಂಧನದ ಬೆಲೆಯಲ್ಲಿ ತೀವ್ರ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಕಝಾಕಿಸ್ತಾನದಲ್ಲಿ ಭಾನುವಾರ ಪ್ರಾರಂಭವಾದ ಪ್ರತಿಭಟನೆಗಳು ತೀವ್ರಗೊಂಡಿದ್ದು ನಂತರದಲ್ಲಿ ದೇಶದ ಪಶ್ಚಿಮ ಅಲ್ಮಾಟಿ ಮತ್ತು ರಾಜಧಾನಿ ನೂರ್-ಸುಲ್ತಾನ್‌ಗೆ ಹಬ್ಬಿಕೊಂಡಿದೆ. ಮೂರು ದಶಕಗಳ ಹಿಂದೆ ಸ್ವಾತಂತ್ರ್ಯ ಗಳಿಸಿದ ಕಝಾಕಿಸ್ತಾನ್‌ನಲ್ಲಿ, ಪ್ರತಿಭಟನೆಯ ವೇಳೆ ನಡೆದ ಅತ್ಯಂತ ಭೀಕರ ಘಟನೆ ಇದು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಕಝಕಿಸ್ತಾನದಲ್ಲಿ ಬೆಲೆ ಏರಿಕೆಯ ಬಿಸಿ ತೀವ್ರವಾಗಿದ್ದು ಬೆಲೆ ಏರಿಕೆಯಿಂದಾಗಿ ಅಲ್ಲಿಯ ಜನರು ಬೇಸತ್ತಿದ್ದು, ಇದರ ಜೊತೆಗೆ ಹಣದುಬ್ಬರವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. 2019ರಲ್ಲಿ ಅಧ್ಯಕ್ಷನಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಜನರ ತೀವ್ರ ವಿರೋಧಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ:ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...