Homeಅಂತರಾಷ್ಟ್ರೀಯಕಝಾಕಿಸ್ತಾನ್‌ನಲ್ಲಿ ಭುಗಿಲೆದ್ದ ಇಂಧನ ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ದಾಳಿ

ಕಝಾಕಿಸ್ತಾನ್‌ನಲ್ಲಿ ಭುಗಿಲೆದ್ದ ಇಂಧನ ಬೆಲೆ ಏರಿಕೆ ವಿರೋಧಿ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ದಾಳಿ

12 ಹೆಚ್ಚು ಪ್ರತಿಭಟನಾಕಾರರು ಹಾಗೂ 18 ಪೊಲೀಸರು ಮೃತಪಟ್ಟಿದ್ದು, ಗಲಭೆ ನಿಯಂತ್ರಿಸಲು ರಷ್ಯಾ ಸೇನೆ ಪ್ರವೇಶಿಸಿದೆ

- Advertisement -
- Advertisement -

ಕಝಾಕಿಸ್ತಾನ್‌ ನಲ್ಲಿ ಇಂಧನ ಬೆಲೆಗಳ ಹೆಚ್ಚಳವನ್ನು ವಿರೋಧಿಸಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಬೆಲೆ ಏರಿಕೆ ವಿರುದ್ದ ಪ್ರಾರಂಭವಾಗಿದ್ದ ಪ್ರತಿಭಟನೆಯು ಇದೀಗ ಸರ್ಕಾರಿ ವಿರೋಧಿ ಗಲಭೆಯಾಗಿ ಮಾರ್ಪಟ್ಟಿದ್ದು, 12 ಹೆಚ್ಚು ಪ್ರತಿಭಟನಾಕಾರರು ಹಾಗೂ 18 ಪೊಲೀಸರು ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬ ಪೊಲೀಸ್ ಅಧಿಕಾರಿಯ ಶಿರಚ್ಛೇದ ಮಾಡಿರುವುದಾಗಿ ವರದಿಯಾಗಿದೆ.

ಬುಧವಾರದಂದು ದೇಶದ ಅತಿದೊಡ್ಡ ನಗರವಾದ ನೂರ್‌ ಸುಲ್ತಾನ್‌ನಲ್ಲಿರುವ ಅಧ್ಯಕ್ಷರ ನಿವಾಸ ಮತ್ತು ಅಲ್ಮಾಟಿಯ ಮೇಯರ್ ಕಚೇರಿಗೆ ನುಗ್ಗಿದ ಪ್ರತಿಭಟನಾಕಾರರು ರಾತ್ರಿಯಿಡೀ ಹಲವು ಕಟ್ಟಡಗಳಿಗೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ಹಲವು ಸರ್ಕಾರಿ ಕಚೇರಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ:ಗಾಲ್ವಾನ್ ಕಣಿವೆಯಲ್ಲಿ ಚೀನಿ ಧ್ವಜಾರೋಹಣ: ಮೋದಿ ಮೌನ ಪ್ರಶ್ನಿಸಿದ ಖರ್ಗೆ

“ಡಜನ್‌ಗಟ್ಟಲೆ ದಾಳಿಕೋರರನ್ನು ಹತ್ಯೆ(liquidated) ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರ ಸಲ್ತಾನಾತ್ ಅಜಿರ್ಬೆಕ್ ರಾಜ್ಯ ಸುದ್ದಿ ವಾಹಿನಿ ಖಬರ್ -24 ಗೆ ತಿಳಿಸಿದ್ದಾರೆ. ಉಗ್ರಗಾಮಿಗಳೆಂದು ಭಾವಿಸಲಾದ ಜನರನ್ನು ಕೊಲ್ಲುವುದನ್ನು ವಿವರಿಸಲು ಬಳಸುವ ಸಾಮಾನ್ಯ ಪದವನ್ನು ಅವರು ಬಳಸಿದ್ದಾರೆ.

ಕಝಾಕಿಸ್ತಾನ್‌ ಅಧ್ಯಕ್ಷರಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಆರಂಭದಲ್ಲಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸುವುದಕ್ಕೆ ಪ್ರಯತ್ನಿಸುತ್ತಿರುವಂತೆ ತೋರುತ್ತಿದ್ದರೂ, ನಂತರ ಅವರು ಅಶಾಂತಿಯನ್ನು ನಿಗ್ರಹಿಸಲು ಕಠಿಣಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಮತ್ತು ಇಡೀ ದೇಶದಲ್ಲಿ ಎರಡು ವಾರಗಳ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಅಶಾಂತಿಯನ್ನು ಅವರು “ಭಯೋತ್ಪಾದಕ ಬ್ಯಾಂಡ್” ಎಂದು ದೂಷಿಸಿದ್ದು, ಸಹಾಯಕ್ಕಾಗಿ ರಷ್ಯಾ ನೇತೃತ್ವದ ಮಿಲಿಟರಿ ಒಕ್ಕೂಟವನ್ನು ಕರೆದ್ದಾರೆ.

ಇದನ್ನೂ ಓದಿ:ಧರ್ಮ ಸಂಸದ್‌ನಲ್ಲಿ ದ್ವೇ‍ಷ ಭಾಷಣ: ಭಾರತದ ಉನ್ನತ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದ ಪಾಕಿಸ್ತಾನ

ಈಗಾಗಲೆ, ಪ್ರತಿಭಟನೆಗಳನ್ನು ಹತ್ತಿಕ್ಕಲು ರಷ್ಯಾ ಮತ್ತು ಅದರ ಮಿತ್ರರಾಷ್ಟ್ರಗಳು ಪಡೆಗಳನ್ನು ಕಳುಹಿಸಿದೆ. ಆದರೆ ಇದನ್ನು ಅಮೇರಿಕಾ ವಿರೋಧಿಸಿದ್ದು, ‘ವಿಶ್ವವೂ ಗಮನಿಸುತ್ತಿದೆ’ ಎಂದು ಎಚ್ಚರಿಸಿದೆ.

ಪೆಟ್ರೋಲಿಯಂ ಅನಿಲ ಇಂಧನದ ಬೆಲೆಯಲ್ಲಿ ತೀವ್ರ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಕಝಾಕಿಸ್ತಾನದಲ್ಲಿ ಭಾನುವಾರ ಪ್ರಾರಂಭವಾದ ಪ್ರತಿಭಟನೆಗಳು ತೀವ್ರಗೊಂಡಿದ್ದು ನಂತರದಲ್ಲಿ ದೇಶದ ಪಶ್ಚಿಮ ಅಲ್ಮಾಟಿ ಮತ್ತು ರಾಜಧಾನಿ ನೂರ್-ಸುಲ್ತಾನ್‌ಗೆ ಹಬ್ಬಿಕೊಂಡಿದೆ. ಮೂರು ದಶಕಗಳ ಹಿಂದೆ ಸ್ವಾತಂತ್ರ್ಯ ಗಳಿಸಿದ ಕಝಾಕಿಸ್ತಾನ್‌ನಲ್ಲಿ, ಪ್ರತಿಭಟನೆಯ ವೇಳೆ ನಡೆದ ಅತ್ಯಂತ ಭೀಕರ ಘಟನೆ ಇದು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಕಝಕಿಸ್ತಾನದಲ್ಲಿ ಬೆಲೆ ಏರಿಕೆಯ ಬಿಸಿ ತೀವ್ರವಾಗಿದ್ದು ಬೆಲೆ ಏರಿಕೆಯಿಂದಾಗಿ ಅಲ್ಲಿಯ ಜನರು ಬೇಸತ್ತಿದ್ದು, ಇದರ ಜೊತೆಗೆ ಹಣದುಬ್ಬರವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. 2019ರಲ್ಲಿ ಅಧ್ಯಕ್ಷನಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಜನರ ತೀವ್ರ ವಿರೋಧಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ:ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...