Homeಕರ್ನಾಟಕತುಮಕೂರಿನಲ್ಲಿ 'ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ' ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

- Advertisement -
- Advertisement -
‘ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ರೈತರ ನೆರವಿಗೆ ಶಕ್ತಿ ಬರುತ್ತಿಲ್ಲ. ಹೀಗಾಗಿ ರೈತರು, ಅಲೆಮಾರಿಗಳು, ಬುಡಕಟ್ಟುಗಳು, ಮಹಿಳೆಯರು ಮತ್ತು ಇಡೀ ದಕ್ಷಿಣ ಭಾರತವೇ ಅಲ್ಪಸಂಖ್ಯಾತವಾಗಿದ್ದು ಇವರ ನೆರವಿಗೆ ಯಾರೂ ಬರುತ್ತಿಲ್ಲ’ ಎಂದು ಹಿರಿಯ ವಿಮರ್ಶಕ ಡಾ. ನಟರಾಜ್ ಬೂದಾಳ್ ವಿಷಾದ ವ್ಯಕ್ತಪಡಿಸಿದರು.
ಬುಡಕಟ್ಟು ಜನರ ದನಿಗೆ ದನಿಗೂಡುತ್ತಿಲ್ಲ. ಮಹಿಳೆಯರು ಅಲ್ಪಸಂಖ್ಯಾತರಾಗಿಯೇ ಉಳಿದಿದ್ದಾರೆ. ಹಾಗೆಯೇ ಅವರು ಮಾತನಾಡುವ ಭಾಷೆ, ಅಭಿವ್ಯಕ್ತಿ ಲೆಕ್ಕಕ್ಕೇ ಇಲ್ಲದಂತಹ ಪರಿಸ್ಥಿತಿ ಇದೆ. ಲೆಕ್ಕಕ್ಕೆ ಸಿಗದಂತೆ ನೋಡಿ ಕೊಳ್ಳುವ ಜಾಣ್ಮೆಯೂ ಮುಂದುವರಿದಿದೆ. ಅಲ್ಪಸಂಖ್ಯಾತ ದಕ್ಷಿಣ ಭಾರತ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಯಾರ ಗಮನವೂ ಇತ್ತ ಕಡೆ ಇಲ್ಲವಾಗಿದೆ ಎಂದು ಹೇಳಿದರು.
ತುಮಕೂರಿನ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ರವಿಕುಮಾರ್ ನೀಹ ಅವರು ಬರೆದಿರುವ ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ನಾವು ಓದುವ ಓದು ನಮ್ಮ ದಾಗಿಲ್ಲ. ನಾವು ಓದುತ್ತಿರುವುದು ನಮ್ಮದಲ್ಲದ ಬೇರೆ ಪಠ್ಯ. ಹಾಗಾಗಿ ಕಣ್ಣು ಧರಿಸಿಕೊಂಡು ಓದಬೇಕಾದ ಅನಿವಾರ್ಯತೆ ಇದೆ. ಮಂಟೇಸ್ವಾಮಿ, ಮಲೆ ಮಹಾದೇಶ್ವರ, ಜುಂಜಪ್ಪ ಕಾವ್ಯ ನಮ್ಮದಾದರೂ ಇವುಗಳನ್ನು ಓದುವ ಕ್ರಮ ನಮ್ಮದಾಗಿಲ್ಲ. ಇಂತಹ ಸಂದರ್ಭದಲ್ಲಿ  ನಮ್ಮದೇ ಕ್ರಮದಲ್ಲಿ ಓದಬೇಕು ಎಂದು ಸಲಹೆ ನೀಡಿದರು.
ಇಲ್ಲಿ ನಮ್ಮದೇ ಅಕ್ಷರ, ನಮ್ಮದೇ ಪಠ್ಯವನ್ನು ನಮ್ಮದೇ ರೀತಿಯಲ್ಲಿ ಓದುತ್ತಿಲ್ಲ. ಅಕ್ಷರ ಮತ್ತು ಪಠ್ಯ ಮತ್ತು ಓದನ್ನು ನಿಯಂತ್ರಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಹಾಗಾಗಿ ಓದು ನಮ್ಮದಾಗಬೇಕು. ಆಗ ಪಠ್ಯ ಮತ್ತು ಅಕ್ಷರ ನಮ್ಮದಾಗುತ್ತದೆ. ಮಂಟೇಸ್ವಾಮಿ, ಕಾವ್ಯದಲ್ಲಿ ಬರುವ ನಾಯಕ ತನ್ನದೇ ಲೋಕ ನಿರ್ಮಿಸಿ ದೇವರನ್ನು ಸೃಷ್ಟಿಸುತ್ತಾರೆ. ಅವರಿಗೆ ವಿವಾಹವನ್ನು ಮಾಡುತ್ತಾರೆ. ತಾನೇ ಧರಗೆ ದೊಡ್ಡವನಾಗಿ ಮೆರೆಯುತ್ತಾನೆ. ಇಂತಹ ಕ್ರಿಯೆಗಳು ನಡೆಯಬೇಕು. ಆಗ ಲೋಕ ನಮ್ಮದಾಗುತ್ತದೆ ಎಂದು ಹೇಳಿದರು.
ತುಮಕೂರು ಜಿಲ್ಲೆ ಅತ್ಯಂತ ಪ್ರಮುಖ ಲೇಖಕರು ಮತ್ತು ಗಟ್ಟಿ ಸಾಹಿತ್ಯವನ್ನು ನೀಡಿದೆ ಎಂದು ಬೇರೆ ಕಡೆ ಹೇಳುವುದು ರೂಢಿಯಲ್ಲಿದೆ. ಹಾಗೆಯೇ ಇಲ್ಲಿ ಅಷ್ಟೇ ಭಿನ್ನಧ್ವನಿಯೂ ಇದೆ. ಕೆ.ಬಿ.ಸಿದ್ದಯ್ಯ ಕಾವ್ಯ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಅದು ಕನ್ನಡ ಸಾಹಿತ್ಯ ಲೋಕದಲ್ಲಿ ಬಹುಮುಖ್ಯ ಕಾವ್ಯವಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಹಿರಿಯ ಜನಪರ ಚಿಂತಕ ಕೆ.ದೊರೈರಾಜ್, ಲೇಖಕ ಡಾ.ರಾಜಪ್ಪ ದಳವಾಯಿ, ಲೇಖಕಿ ಮಲ್ಲಿಕಾ ಬಸವರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಾ.ಹ.ರಮಾಕುಮಾರಿ, ಯುವ ಮುಖಂಡ ಡ್ಯಾಗೇರಹಳ್ಳಿ ವಿರೂಪಾಕ್ಷ, ಉಪನ್ಯಾಸಕ ಕೊಟ್ಟಶಂಕರ್, ಗುಬ್ಬಚ್ಚಿ ಸತೀಶ್, ಕೃತಿಕಾರ ಡಾ. ರವಿಕುಮಾರ್ ನೀಹ ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...