Homeಕರ್ನಾಟಕತುಮಕೂರಿನಲ್ಲಿ 'ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ' ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

- Advertisement -
- Advertisement -
‘ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ರೈತರ ನೆರವಿಗೆ ಶಕ್ತಿ ಬರುತ್ತಿಲ್ಲ. ಹೀಗಾಗಿ ರೈತರು, ಅಲೆಮಾರಿಗಳು, ಬುಡಕಟ್ಟುಗಳು, ಮಹಿಳೆಯರು ಮತ್ತು ಇಡೀ ದಕ್ಷಿಣ ಭಾರತವೇ ಅಲ್ಪಸಂಖ್ಯಾತವಾಗಿದ್ದು ಇವರ ನೆರವಿಗೆ ಯಾರೂ ಬರುತ್ತಿಲ್ಲ’ ಎಂದು ಹಿರಿಯ ವಿಮರ್ಶಕ ಡಾ. ನಟರಾಜ್ ಬೂದಾಳ್ ವಿಷಾದ ವ್ಯಕ್ತಪಡಿಸಿದರು.
ಬುಡಕಟ್ಟು ಜನರ ದನಿಗೆ ದನಿಗೂಡುತ್ತಿಲ್ಲ. ಮಹಿಳೆಯರು ಅಲ್ಪಸಂಖ್ಯಾತರಾಗಿಯೇ ಉಳಿದಿದ್ದಾರೆ. ಹಾಗೆಯೇ ಅವರು ಮಾತನಾಡುವ ಭಾಷೆ, ಅಭಿವ್ಯಕ್ತಿ ಲೆಕ್ಕಕ್ಕೇ ಇಲ್ಲದಂತಹ ಪರಿಸ್ಥಿತಿ ಇದೆ. ಲೆಕ್ಕಕ್ಕೆ ಸಿಗದಂತೆ ನೋಡಿ ಕೊಳ್ಳುವ ಜಾಣ್ಮೆಯೂ ಮುಂದುವರಿದಿದೆ. ಅಲ್ಪಸಂಖ್ಯಾತ ದಕ್ಷಿಣ ಭಾರತ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಯಾರ ಗಮನವೂ ಇತ್ತ ಕಡೆ ಇಲ್ಲವಾಗಿದೆ ಎಂದು ಹೇಳಿದರು.
ತುಮಕೂರಿನ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ರವಿಕುಮಾರ್ ನೀಹ ಅವರು ಬರೆದಿರುವ ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ನಾವು ಓದುವ ಓದು ನಮ್ಮ ದಾಗಿಲ್ಲ. ನಾವು ಓದುತ್ತಿರುವುದು ನಮ್ಮದಲ್ಲದ ಬೇರೆ ಪಠ್ಯ. ಹಾಗಾಗಿ ಕಣ್ಣು ಧರಿಸಿಕೊಂಡು ಓದಬೇಕಾದ ಅನಿವಾರ್ಯತೆ ಇದೆ. ಮಂಟೇಸ್ವಾಮಿ, ಮಲೆ ಮಹಾದೇಶ್ವರ, ಜುಂಜಪ್ಪ ಕಾವ್ಯ ನಮ್ಮದಾದರೂ ಇವುಗಳನ್ನು ಓದುವ ಕ್ರಮ ನಮ್ಮದಾಗಿಲ್ಲ. ಇಂತಹ ಸಂದರ್ಭದಲ್ಲಿ  ನಮ್ಮದೇ ಕ್ರಮದಲ್ಲಿ ಓದಬೇಕು ಎಂದು ಸಲಹೆ ನೀಡಿದರು.
ಇಲ್ಲಿ ನಮ್ಮದೇ ಅಕ್ಷರ, ನಮ್ಮದೇ ಪಠ್ಯವನ್ನು ನಮ್ಮದೇ ರೀತಿಯಲ್ಲಿ ಓದುತ್ತಿಲ್ಲ. ಅಕ್ಷರ ಮತ್ತು ಪಠ್ಯ ಮತ್ತು ಓದನ್ನು ನಿಯಂತ್ರಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಹಾಗಾಗಿ ಓದು ನಮ್ಮದಾಗಬೇಕು. ಆಗ ಪಠ್ಯ ಮತ್ತು ಅಕ್ಷರ ನಮ್ಮದಾಗುತ್ತದೆ. ಮಂಟೇಸ್ವಾಮಿ, ಕಾವ್ಯದಲ್ಲಿ ಬರುವ ನಾಯಕ ತನ್ನದೇ ಲೋಕ ನಿರ್ಮಿಸಿ ದೇವರನ್ನು ಸೃಷ್ಟಿಸುತ್ತಾರೆ. ಅವರಿಗೆ ವಿವಾಹವನ್ನು ಮಾಡುತ್ತಾರೆ. ತಾನೇ ಧರಗೆ ದೊಡ್ಡವನಾಗಿ ಮೆರೆಯುತ್ತಾನೆ. ಇಂತಹ ಕ್ರಿಯೆಗಳು ನಡೆಯಬೇಕು. ಆಗ ಲೋಕ ನಮ್ಮದಾಗುತ್ತದೆ ಎಂದು ಹೇಳಿದರು.
ತುಮಕೂರು ಜಿಲ್ಲೆ ಅತ್ಯಂತ ಪ್ರಮುಖ ಲೇಖಕರು ಮತ್ತು ಗಟ್ಟಿ ಸಾಹಿತ್ಯವನ್ನು ನೀಡಿದೆ ಎಂದು ಬೇರೆ ಕಡೆ ಹೇಳುವುದು ರೂಢಿಯಲ್ಲಿದೆ. ಹಾಗೆಯೇ ಇಲ್ಲಿ ಅಷ್ಟೇ ಭಿನ್ನಧ್ವನಿಯೂ ಇದೆ. ಕೆ.ಬಿ.ಸಿದ್ದಯ್ಯ ಕಾವ್ಯ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಅದು ಕನ್ನಡ ಸಾಹಿತ್ಯ ಲೋಕದಲ್ಲಿ ಬಹುಮುಖ್ಯ ಕಾವ್ಯವಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಹಿರಿಯ ಜನಪರ ಚಿಂತಕ ಕೆ.ದೊರೈರಾಜ್, ಲೇಖಕ ಡಾ.ರಾಜಪ್ಪ ದಳವಾಯಿ, ಲೇಖಕಿ ಮಲ್ಲಿಕಾ ಬಸವರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಾ.ಹ.ರಮಾಕುಮಾರಿ, ಯುವ ಮುಖಂಡ ಡ್ಯಾಗೇರಹಳ್ಳಿ ವಿರೂಪಾಕ್ಷ, ಉಪನ್ಯಾಸಕ ಕೊಟ್ಟಶಂಕರ್, ಗುಬ್ಬಚ್ಚಿ ಸತೀಶ್, ಕೃತಿಕಾರ ಡಾ. ರವಿಕುಮಾರ್ ನೀಹ ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...