Homeಕರ್ನಾಟಕತುಮಕೂರಿನಲ್ಲಿ 'ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ' ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

- Advertisement -
- Advertisement -
‘ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ರೈತರ ನೆರವಿಗೆ ಶಕ್ತಿ ಬರುತ್ತಿಲ್ಲ. ಹೀಗಾಗಿ ರೈತರು, ಅಲೆಮಾರಿಗಳು, ಬುಡಕಟ್ಟುಗಳು, ಮಹಿಳೆಯರು ಮತ್ತು ಇಡೀ ದಕ್ಷಿಣ ಭಾರತವೇ ಅಲ್ಪಸಂಖ್ಯಾತವಾಗಿದ್ದು ಇವರ ನೆರವಿಗೆ ಯಾರೂ ಬರುತ್ತಿಲ್ಲ’ ಎಂದು ಹಿರಿಯ ವಿಮರ್ಶಕ ಡಾ. ನಟರಾಜ್ ಬೂದಾಳ್ ವಿಷಾದ ವ್ಯಕ್ತಪಡಿಸಿದರು.
ಬುಡಕಟ್ಟು ಜನರ ದನಿಗೆ ದನಿಗೂಡುತ್ತಿಲ್ಲ. ಮಹಿಳೆಯರು ಅಲ್ಪಸಂಖ್ಯಾತರಾಗಿಯೇ ಉಳಿದಿದ್ದಾರೆ. ಹಾಗೆಯೇ ಅವರು ಮಾತನಾಡುವ ಭಾಷೆ, ಅಭಿವ್ಯಕ್ತಿ ಲೆಕ್ಕಕ್ಕೇ ಇಲ್ಲದಂತಹ ಪರಿಸ್ಥಿತಿ ಇದೆ. ಲೆಕ್ಕಕ್ಕೆ ಸಿಗದಂತೆ ನೋಡಿ ಕೊಳ್ಳುವ ಜಾಣ್ಮೆಯೂ ಮುಂದುವರಿದಿದೆ. ಅಲ್ಪಸಂಖ್ಯಾತ ದಕ್ಷಿಣ ಭಾರತ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಯಾರ ಗಮನವೂ ಇತ್ತ ಕಡೆ ಇಲ್ಲವಾಗಿದೆ ಎಂದು ಹೇಳಿದರು.
ತುಮಕೂರಿನ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ರವಿಕುಮಾರ್ ನೀಹ ಅವರು ಬರೆದಿರುವ ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ನಾವು ಓದುವ ಓದು ನಮ್ಮ ದಾಗಿಲ್ಲ. ನಾವು ಓದುತ್ತಿರುವುದು ನಮ್ಮದಲ್ಲದ ಬೇರೆ ಪಠ್ಯ. ಹಾಗಾಗಿ ಕಣ್ಣು ಧರಿಸಿಕೊಂಡು ಓದಬೇಕಾದ ಅನಿವಾರ್ಯತೆ ಇದೆ. ಮಂಟೇಸ್ವಾಮಿ, ಮಲೆ ಮಹಾದೇಶ್ವರ, ಜುಂಜಪ್ಪ ಕಾವ್ಯ ನಮ್ಮದಾದರೂ ಇವುಗಳನ್ನು ಓದುವ ಕ್ರಮ ನಮ್ಮದಾಗಿಲ್ಲ. ಇಂತಹ ಸಂದರ್ಭದಲ್ಲಿ  ನಮ್ಮದೇ ಕ್ರಮದಲ್ಲಿ ಓದಬೇಕು ಎಂದು ಸಲಹೆ ನೀಡಿದರು.
ಇಲ್ಲಿ ನಮ್ಮದೇ ಅಕ್ಷರ, ನಮ್ಮದೇ ಪಠ್ಯವನ್ನು ನಮ್ಮದೇ ರೀತಿಯಲ್ಲಿ ಓದುತ್ತಿಲ್ಲ. ಅಕ್ಷರ ಮತ್ತು ಪಠ್ಯ ಮತ್ತು ಓದನ್ನು ನಿಯಂತ್ರಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಹಾಗಾಗಿ ಓದು ನಮ್ಮದಾಗಬೇಕು. ಆಗ ಪಠ್ಯ ಮತ್ತು ಅಕ್ಷರ ನಮ್ಮದಾಗುತ್ತದೆ. ಮಂಟೇಸ್ವಾಮಿ, ಕಾವ್ಯದಲ್ಲಿ ಬರುವ ನಾಯಕ ತನ್ನದೇ ಲೋಕ ನಿರ್ಮಿಸಿ ದೇವರನ್ನು ಸೃಷ್ಟಿಸುತ್ತಾರೆ. ಅವರಿಗೆ ವಿವಾಹವನ್ನು ಮಾಡುತ್ತಾರೆ. ತಾನೇ ಧರಗೆ ದೊಡ್ಡವನಾಗಿ ಮೆರೆಯುತ್ತಾನೆ. ಇಂತಹ ಕ್ರಿಯೆಗಳು ನಡೆಯಬೇಕು. ಆಗ ಲೋಕ ನಮ್ಮದಾಗುತ್ತದೆ ಎಂದು ಹೇಳಿದರು.
ತುಮಕೂರು ಜಿಲ್ಲೆ ಅತ್ಯಂತ ಪ್ರಮುಖ ಲೇಖಕರು ಮತ್ತು ಗಟ್ಟಿ ಸಾಹಿತ್ಯವನ್ನು ನೀಡಿದೆ ಎಂದು ಬೇರೆ ಕಡೆ ಹೇಳುವುದು ರೂಢಿಯಲ್ಲಿದೆ. ಹಾಗೆಯೇ ಇಲ್ಲಿ ಅಷ್ಟೇ ಭಿನ್ನಧ್ವನಿಯೂ ಇದೆ. ಕೆ.ಬಿ.ಸಿದ್ದಯ್ಯ ಕಾವ್ಯ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಅದು ಕನ್ನಡ ಸಾಹಿತ್ಯ ಲೋಕದಲ್ಲಿ ಬಹುಮುಖ್ಯ ಕಾವ್ಯವಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಹಿರಿಯ ಜನಪರ ಚಿಂತಕ ಕೆ.ದೊರೈರಾಜ್, ಲೇಖಕ ಡಾ.ರಾಜಪ್ಪ ದಳವಾಯಿ, ಲೇಖಕಿ ಮಲ್ಲಿಕಾ ಬಸವರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಾ.ಹ.ರಮಾಕುಮಾರಿ, ಯುವ ಮುಖಂಡ ಡ್ಯಾಗೇರಹಳ್ಳಿ ವಿರೂಪಾಕ್ಷ, ಉಪನ್ಯಾಸಕ ಕೊಟ್ಟಶಂಕರ್, ಗುಬ್ಬಚ್ಚಿ ಸತೀಶ್, ಕೃತಿಕಾರ ಡಾ. ರವಿಕುಮಾರ್ ನೀಹ ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...