Homeಮುಖಪುಟರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

- Advertisement -
- Advertisement -

ಕೆಸಿಆರ್ ಎಂದೇ ಖ್ಯಾತರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಸೆಡ್ಡು ಹೊಡೆಯಲು ಯಾವುದೋ ಒಂದು ದೊಡ್ಡ ಪ್ರಯೋಗದಲ್ಲಿ ತೊಡಗಿದ್ದಾರೆ.

ಅಧಿಕೃತವಾಗಿ ಇನ್ನೂ ಘೋಷಿಸದಿದ್ದರೂ, ತೆಲಂಗಾಣ ರಾಷ್ಟ್ರ ಸಮಿತಿ (TRS) ಶೀಘ್ರದಲ್ಲೇ BRS (ಭಾರತೀಯ ರಾಷ್ಟ್ರ ಸಮಿತಿ) ಎಂದು ಮರುನಾಮಕರಣಗೊಂಡು ರಾಷ್ಟ್ರೀಯ ಪಕ್ಷವಾಗಿ ಹೊಮ್ಮಲಿದೆ. ಕೆಸಿಆರ್ ಅವರು ತಮ್ಮ ಕಾರ್ಯತಂತ್ರಗಳು ಮತ್ತು ಯೋಜನೆಗಳನ್ನು ರೂಪಿಸುವಲ್ಲಿ ನಿರತರಾಗಿದ್ದಾರೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿದ್ಯಮಾನದ ಹಿಂದೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೈವಾಡವಿದೆ ಎಂದು ಕೆಲವರು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದ ಆಕಾಂಕ್ಷೆಯನ್ನು ಹೊಂದಿದ್ದ ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌.ಟಿ.ರಾಮರಾವ್ (ಎನ್‌ಟಿಆರ್) ನಂತರದಲ್ಲಿ ಈ ಹೆಜ್ಜೆ ಇರಿಸುತ್ತಿರುವ ದಕ್ಷಿಣ ಭಾರತದ ಮೊದಲು ರಾಜಕಾರಣಿ ಎಂದು ಕೆಸಿಆರ್‌ ಅವರನ್ನು ಕೆಲವರು ಗುರುತಿಸುತ್ತಿದ್ದಾರೆ.

‘ನ್ಯೂಸ್‌ ಮಿನಿಟ್‌’ ಜೊತೆ ಮಾತನಾಡಿರುವ ರಾಜಕೀಯ ವಿಶ್ಲೇಷಕ ಪಿ.ಪವನ್, “ಎನ್‌ಟಿಆರ್ ರಾಷ್ಟ್ರೀಯ ಪಕ್ಷ (ಭಾರತ ದೇಶಂ ಪಕ್ಷ) ಪ್ರಾರಂಭಿಸಲು ಪ್ರಯತ್ನಿಸಿದರೂ ಯಶಸ್ಸಾಗಲಿಲ್ಲ. ನಂತರ, ಚಂದ್ರಬಾಬು ನಾಯ್ಡು ಅವರು ಟಿಡಿಪಿಯನ್ನು ರಾಷ್ಟ್ರೀಯ ಪಕ್ಷವಾಗಿ ನೋಂದಾಯಿಸಿಕೊಂಡರು. ಆದರೆ ಪ್ರಧಾನಿ ಸ್ಥಾನದ ಮೇಲೆ ಅವರ ಕಣ್ಣು ಎಂದಿಗೂ ಇರಲಿಲ್ಲ. ಅವರೇ ಈ ಪ್ರಸ್ತಾಪವನ್ನು ಒಮ್ಮೆ ಅಲ್ಲ ಎರಡು ಬಾರಿ ತಿರಸ್ಕರಿಸಿದ್ದಾರೆ” ಎಂದಿದ್ದಾರೆ.

“ಎನ್‌ಟಿಆರ್‌ ನಂತರದಲ್ಲಿ ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿರುವ ಮೊದಲ ಮುಖ್ಯಮಂತ್ರಿಯಾಗಿಯೂ ಕೆಸಿಆರ್‌ ಹೊಮ್ಮುತ್ತಾರೆ. ರಾಜಕೀಯ ಒತ್ತಡಗಳಿಂದಾಗಿ ದಕ್ಷಿಣ ಭಾರತದ ರಾಜಕಾರಣಿಗಳಾದ ಪಿ.ವಿ.ನರಸಿಂಹರಾವ್ ಮತ್ತು ಎಚ್‌.ಡಿ.ದೇವೇಗೌಡರು ರಾಷ್ಟ್ರಮಟ್ಟದಲ್ಲಿ ನಾಯಕರಾಗಿ ಹೊರಹೊಮ್ಮಲು ಸಾಧ್ಯವಾಯಿತು” ಎನ್ನುತ್ತಾರೆ ಪವನ್‌.

ಪಕ್ಷದ ಹೆಸರು ಇನ್ನೂ ಪರಿಗಣನೆಯಲ್ಲಿದೆ. ಇನ್ನೂ ಅಂತಿಮಗೊಂಡಿಲ್ಲ ಎಂದು ಟಿಆರ್‌ಎಸ್‌ನ ಉನ್ನತ ಮೂಲಗಳು ಹೇಳುತ್ತವೆ. ಜುಲೈ 2 ಮತ್ತು 3 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿ ಸಭೆಯ ಮೊದಲು ಅದನ್ನು ಅಧಿಕೃತಗೊಳಿಸಲು ಪಕ್ಷವು ಯೋಜಿಸಿದೆ ಎಂದು ಮೂಲವು ಬಹಿರಂಗಪಡಿಸಿದೆ.

‘ನವ ಭಾರತ್ ಪಕ್ಷ’, ‘ಜೈ ಭಾರತ್‌’ ಮತ್ತು ‘ಭಾರತ್ ರಾಷ್ಟ್ರ ಸಮಿತಿ’ ಎಂಬ ಹೆಸರುಗಳು ಪರಿಗಣನೆಯಲ್ಲಿವೆ ಎನ್ನಲಾಗುತ್ತಿದೆ. ಹೆಸರನ್ನು ಬದಲಾಯಿಸಬೇಕಾಗಿದ್ದರೂ, ಪಕ್ಷದ ಧ್ವಜ ಮತ್ತು ಅದರ ಟ್ರೇಡ್‌ಮಾರ್ಕ್ ಗುಲಾಬಿ ಬಣ್ಣವನ್ನು ಉಳಿಸಿಕೊಳ್ಳಲಾಗುತ್ತಿದೆ. ಪಕ್ಷದ ಧ್ವಜದಲ್ಲಿರುವ ತೆಲಂಗಾಣ ನಕ್ಷೆಯನ್ನು ಭಾರತೀಯ ಧ್ವಜ ಅಥವಾ ಭಾರತ ಮಾತೆಯ ಚಿತ್ರ ಅಥವಾ ಎರಡರ ಸಂಯೋಜನೆಯೊಂದಿಗೆ ಬದಲಾಯಿಸಬಹುದು ಎನ್ನಲಾಗುತ್ತಿದೆ.

ಕೆಸಿಆರ್ ರಾಷ್ಟ್ರೀಯ ರಾಜಕೀಯಕ್ಕೆ ಪ್ರವೇಶಿಸುವುದು ವಾಸ್ತವವಾಗಿ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದೆ ಎಂದು ಹೆಸರು ಹೇಳಲಿಚ್ಛಿಸದ ರಾಜಕೀಯ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ರಾಜ್ಯದ ನಾಯಕ ತನ್ನನ್ನು ತಾನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಂಡಾಗ, ಅದು ಮೂಲತಃ ರಾಜ್ಯದ ಹೆಮ್ಮೆಯನ್ನು ಇಮ್ಮಡಿಗೊಳಿಸುತ್ತದೆ. ಒಬ್ಬ ರಾಜ್ಯದ ನಾಯಕನಿಗೆ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳಿವೆ ಮತ್ತು ತೆಲಂಗಾಣ ಹೆಮ್ಮೆಯನ್ನು ಸ್ವಾಗತಿಸಿ ಎಂದು ಕೆಸಿಆರ್ ಅವರು ತೆಲಂಗಾಣ ಜನತೆಗೆ ಹೇಳಲು ಬಯಸುತ್ತಿದ್ದಾರೆ. ಇದು ರಾಜ್ಯದ ಚುನಾವಣೆಗೆ ಸಹಾಯ ಮಾಡುತ್ತದೆ ಎಂದು ಕೆಸಿಆರ್‌ ನಂಬಿದ್ದಾರೆ” ಎಂಬುದು ರಾಜಕೀಯ ವಿಶ್ಲೇಷಕರ ಮಾತು.

ಇದನ್ನೂ ಓದಿರಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಕೆಸಿಆರ್ ಅವರು ಬೇರೆ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ನೈಜ ಯೋಜನೆಯನ್ನು ಹೊಂದಿದ್ದಾರೆ ಎಂದು ತಂತ್ರಜ್ಞರು ನಂಬುವುದಿಲ್ಲ. 2014ರಲ್ಲಿ ಜಯಲಲಿತಾ ಅವರು ರಾಷ್ಟ್ರೀಯ ನಾಯಕಿಯಾಗಿ ತಮ್ಮನ್ನು ತಾವು ಬಿಂಬಿಸಿಕೊಂಡಿದ್ದರು ಎಂಬುದನ್ನು ನೆನಪಿಸಿಕೊಳ್ಳಬಹುದು. ಇದು ಅವರ ಇಮೇಜ್ ಅನ್ನು ಹೆಚ್ಚಿಸುವಲ್ಲಿ ಸಹಾಯ ಮಾಡಿತು.

ತನ್ನನ್ನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳುವ ಮೂಲಕ ಕೆಸಿಆರ್ ಬಿಜೆಪಿಯನ್ನು ತನ್ನ ಪರಮ ಶತ್ರುವೆಂಬಂತೆ ಬಿಂಬಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಕಳೆದೆರಡು ಅವಧಿಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಆದ್ದರಿಂದ ಕಾಂಗ್ರೆಸ್‌ನವರನ್ನು ಟೀಕಿಸಿದರೆ ಪ್ರಯೋಜನವಿಲ್ಲ. ತನ್ನನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಿಕೊಳ್ಳುವ ಮೂಲಕ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ಮೇಲಿನ ತಮ್ಮ ದಾಳಿಯನ್ನು ಕೆಸಿಆರ್‌ ಸಮರ್ಥಿಸಿಕೊಳ್ಳಬಹುದು. ಬಿಜೆಪಿಯವರನ್ನು ಪ್ರಾಥಮಿಕ ಶತ್ರುವಾಗಿ ಎದುರು ನಿಲ್ಲಿಸಬಹುದು ಎಂಬ ತಂತ್ರಗಾರಿಕೆ ಇಲ್ಲಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...