Homeಮುಖಪುಟರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

- Advertisement -
- Advertisement -

ಕೆಸಿಆರ್ ಎಂದೇ ಖ್ಯಾತರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಸೆಡ್ಡು ಹೊಡೆಯಲು ಯಾವುದೋ ಒಂದು ದೊಡ್ಡ ಪ್ರಯೋಗದಲ್ಲಿ ತೊಡಗಿದ್ದಾರೆ.

ಅಧಿಕೃತವಾಗಿ ಇನ್ನೂ ಘೋಷಿಸದಿದ್ದರೂ, ತೆಲಂಗಾಣ ರಾಷ್ಟ್ರ ಸಮಿತಿ (TRS) ಶೀಘ್ರದಲ್ಲೇ BRS (ಭಾರತೀಯ ರಾಷ್ಟ್ರ ಸಮಿತಿ) ಎಂದು ಮರುನಾಮಕರಣಗೊಂಡು ರಾಷ್ಟ್ರೀಯ ಪಕ್ಷವಾಗಿ ಹೊಮ್ಮಲಿದೆ. ಕೆಸಿಆರ್ ಅವರು ತಮ್ಮ ಕಾರ್ಯತಂತ್ರಗಳು ಮತ್ತು ಯೋಜನೆಗಳನ್ನು ರೂಪಿಸುವಲ್ಲಿ ನಿರತರಾಗಿದ್ದಾರೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿದ್ಯಮಾನದ ಹಿಂದೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೈವಾಡವಿದೆ ಎಂದು ಕೆಲವರು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದ ಆಕಾಂಕ್ಷೆಯನ್ನು ಹೊಂದಿದ್ದ ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌.ಟಿ.ರಾಮರಾವ್ (ಎನ್‌ಟಿಆರ್) ನಂತರದಲ್ಲಿ ಈ ಹೆಜ್ಜೆ ಇರಿಸುತ್ತಿರುವ ದಕ್ಷಿಣ ಭಾರತದ ಮೊದಲು ರಾಜಕಾರಣಿ ಎಂದು ಕೆಸಿಆರ್‌ ಅವರನ್ನು ಕೆಲವರು ಗುರುತಿಸುತ್ತಿದ್ದಾರೆ.

‘ನ್ಯೂಸ್‌ ಮಿನಿಟ್‌’ ಜೊತೆ ಮಾತನಾಡಿರುವ ರಾಜಕೀಯ ವಿಶ್ಲೇಷಕ ಪಿ.ಪವನ್, “ಎನ್‌ಟಿಆರ್ ರಾಷ್ಟ್ರೀಯ ಪಕ್ಷ (ಭಾರತ ದೇಶಂ ಪಕ್ಷ) ಪ್ರಾರಂಭಿಸಲು ಪ್ರಯತ್ನಿಸಿದರೂ ಯಶಸ್ಸಾಗಲಿಲ್ಲ. ನಂತರ, ಚಂದ್ರಬಾಬು ನಾಯ್ಡು ಅವರು ಟಿಡಿಪಿಯನ್ನು ರಾಷ್ಟ್ರೀಯ ಪಕ್ಷವಾಗಿ ನೋಂದಾಯಿಸಿಕೊಂಡರು. ಆದರೆ ಪ್ರಧಾನಿ ಸ್ಥಾನದ ಮೇಲೆ ಅವರ ಕಣ್ಣು ಎಂದಿಗೂ ಇರಲಿಲ್ಲ. ಅವರೇ ಈ ಪ್ರಸ್ತಾಪವನ್ನು ಒಮ್ಮೆ ಅಲ್ಲ ಎರಡು ಬಾರಿ ತಿರಸ್ಕರಿಸಿದ್ದಾರೆ” ಎಂದಿದ್ದಾರೆ.

“ಎನ್‌ಟಿಆರ್‌ ನಂತರದಲ್ಲಿ ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿರುವ ಮೊದಲ ಮುಖ್ಯಮಂತ್ರಿಯಾಗಿಯೂ ಕೆಸಿಆರ್‌ ಹೊಮ್ಮುತ್ತಾರೆ. ರಾಜಕೀಯ ಒತ್ತಡಗಳಿಂದಾಗಿ ದಕ್ಷಿಣ ಭಾರತದ ರಾಜಕಾರಣಿಗಳಾದ ಪಿ.ವಿ.ನರಸಿಂಹರಾವ್ ಮತ್ತು ಎಚ್‌.ಡಿ.ದೇವೇಗೌಡರು ರಾಷ್ಟ್ರಮಟ್ಟದಲ್ಲಿ ನಾಯಕರಾಗಿ ಹೊರಹೊಮ್ಮಲು ಸಾಧ್ಯವಾಯಿತು” ಎನ್ನುತ್ತಾರೆ ಪವನ್‌.

ಪಕ್ಷದ ಹೆಸರು ಇನ್ನೂ ಪರಿಗಣನೆಯಲ್ಲಿದೆ. ಇನ್ನೂ ಅಂತಿಮಗೊಂಡಿಲ್ಲ ಎಂದು ಟಿಆರ್‌ಎಸ್‌ನ ಉನ್ನತ ಮೂಲಗಳು ಹೇಳುತ್ತವೆ. ಜುಲೈ 2 ಮತ್ತು 3 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿ ಸಭೆಯ ಮೊದಲು ಅದನ್ನು ಅಧಿಕೃತಗೊಳಿಸಲು ಪಕ್ಷವು ಯೋಜಿಸಿದೆ ಎಂದು ಮೂಲವು ಬಹಿರಂಗಪಡಿಸಿದೆ.

‘ನವ ಭಾರತ್ ಪಕ್ಷ’, ‘ಜೈ ಭಾರತ್‌’ ಮತ್ತು ‘ಭಾರತ್ ರಾಷ್ಟ್ರ ಸಮಿತಿ’ ಎಂಬ ಹೆಸರುಗಳು ಪರಿಗಣನೆಯಲ್ಲಿವೆ ಎನ್ನಲಾಗುತ್ತಿದೆ. ಹೆಸರನ್ನು ಬದಲಾಯಿಸಬೇಕಾಗಿದ್ದರೂ, ಪಕ್ಷದ ಧ್ವಜ ಮತ್ತು ಅದರ ಟ್ರೇಡ್‌ಮಾರ್ಕ್ ಗುಲಾಬಿ ಬಣ್ಣವನ್ನು ಉಳಿಸಿಕೊಳ್ಳಲಾಗುತ್ತಿದೆ. ಪಕ್ಷದ ಧ್ವಜದಲ್ಲಿರುವ ತೆಲಂಗಾಣ ನಕ್ಷೆಯನ್ನು ಭಾರತೀಯ ಧ್ವಜ ಅಥವಾ ಭಾರತ ಮಾತೆಯ ಚಿತ್ರ ಅಥವಾ ಎರಡರ ಸಂಯೋಜನೆಯೊಂದಿಗೆ ಬದಲಾಯಿಸಬಹುದು ಎನ್ನಲಾಗುತ್ತಿದೆ.

ಕೆಸಿಆರ್ ರಾಷ್ಟ್ರೀಯ ರಾಜಕೀಯಕ್ಕೆ ಪ್ರವೇಶಿಸುವುದು ವಾಸ್ತವವಾಗಿ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದೆ ಎಂದು ಹೆಸರು ಹೇಳಲಿಚ್ಛಿಸದ ರಾಜಕೀಯ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ರಾಜ್ಯದ ನಾಯಕ ತನ್ನನ್ನು ತಾನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಂಡಾಗ, ಅದು ಮೂಲತಃ ರಾಜ್ಯದ ಹೆಮ್ಮೆಯನ್ನು ಇಮ್ಮಡಿಗೊಳಿಸುತ್ತದೆ. ಒಬ್ಬ ರಾಜ್ಯದ ನಾಯಕನಿಗೆ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳಿವೆ ಮತ್ತು ತೆಲಂಗಾಣ ಹೆಮ್ಮೆಯನ್ನು ಸ್ವಾಗತಿಸಿ ಎಂದು ಕೆಸಿಆರ್ ಅವರು ತೆಲಂಗಾಣ ಜನತೆಗೆ ಹೇಳಲು ಬಯಸುತ್ತಿದ್ದಾರೆ. ಇದು ರಾಜ್ಯದ ಚುನಾವಣೆಗೆ ಸಹಾಯ ಮಾಡುತ್ತದೆ ಎಂದು ಕೆಸಿಆರ್‌ ನಂಬಿದ್ದಾರೆ” ಎಂಬುದು ರಾಜಕೀಯ ವಿಶ್ಲೇಷಕರ ಮಾತು.

ಇದನ್ನೂ ಓದಿರಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಕೆಸಿಆರ್ ಅವರು ಬೇರೆ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ನೈಜ ಯೋಜನೆಯನ್ನು ಹೊಂದಿದ್ದಾರೆ ಎಂದು ತಂತ್ರಜ್ಞರು ನಂಬುವುದಿಲ್ಲ. 2014ರಲ್ಲಿ ಜಯಲಲಿತಾ ಅವರು ರಾಷ್ಟ್ರೀಯ ನಾಯಕಿಯಾಗಿ ತಮ್ಮನ್ನು ತಾವು ಬಿಂಬಿಸಿಕೊಂಡಿದ್ದರು ಎಂಬುದನ್ನು ನೆನಪಿಸಿಕೊಳ್ಳಬಹುದು. ಇದು ಅವರ ಇಮೇಜ್ ಅನ್ನು ಹೆಚ್ಚಿಸುವಲ್ಲಿ ಸಹಾಯ ಮಾಡಿತು.

ತನ್ನನ್ನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳುವ ಮೂಲಕ ಕೆಸಿಆರ್ ಬಿಜೆಪಿಯನ್ನು ತನ್ನ ಪರಮ ಶತ್ರುವೆಂಬಂತೆ ಬಿಂಬಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಕಳೆದೆರಡು ಅವಧಿಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಆದ್ದರಿಂದ ಕಾಂಗ್ರೆಸ್‌ನವರನ್ನು ಟೀಕಿಸಿದರೆ ಪ್ರಯೋಜನವಿಲ್ಲ. ತನ್ನನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಿಕೊಳ್ಳುವ ಮೂಲಕ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ಮೇಲಿನ ತಮ್ಮ ದಾಳಿಯನ್ನು ಕೆಸಿಆರ್‌ ಸಮರ್ಥಿಸಿಕೊಳ್ಳಬಹುದು. ಬಿಜೆಪಿಯವರನ್ನು ಪ್ರಾಥಮಿಕ ಶತ್ರುವಾಗಿ ಎದುರು ನಿಲ್ಲಿಸಬಹುದು ಎಂಬ ತಂತ್ರಗಾರಿಕೆ ಇಲ್ಲಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...