Homeಮುಖಪುಟರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

- Advertisement -
- Advertisement -

ಕೆಸಿಆರ್ ಎಂದೇ ಖ್ಯಾತರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಸೆಡ್ಡು ಹೊಡೆಯಲು ಯಾವುದೋ ಒಂದು ದೊಡ್ಡ ಪ್ರಯೋಗದಲ್ಲಿ ತೊಡಗಿದ್ದಾರೆ.

ಅಧಿಕೃತವಾಗಿ ಇನ್ನೂ ಘೋಷಿಸದಿದ್ದರೂ, ತೆಲಂಗಾಣ ರಾಷ್ಟ್ರ ಸಮಿತಿ (TRS) ಶೀಘ್ರದಲ್ಲೇ BRS (ಭಾರತೀಯ ರಾಷ್ಟ್ರ ಸಮಿತಿ) ಎಂದು ಮರುನಾಮಕರಣಗೊಂಡು ರಾಷ್ಟ್ರೀಯ ಪಕ್ಷವಾಗಿ ಹೊಮ್ಮಲಿದೆ. ಕೆಸಿಆರ್ ಅವರು ತಮ್ಮ ಕಾರ್ಯತಂತ್ರಗಳು ಮತ್ತು ಯೋಜನೆಗಳನ್ನು ರೂಪಿಸುವಲ್ಲಿ ನಿರತರಾಗಿದ್ದಾರೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿದ್ಯಮಾನದ ಹಿಂದೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೈವಾಡವಿದೆ ಎಂದು ಕೆಲವರು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದ ಆಕಾಂಕ್ಷೆಯನ್ನು ಹೊಂದಿದ್ದ ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌.ಟಿ.ರಾಮರಾವ್ (ಎನ್‌ಟಿಆರ್) ನಂತರದಲ್ಲಿ ಈ ಹೆಜ್ಜೆ ಇರಿಸುತ್ತಿರುವ ದಕ್ಷಿಣ ಭಾರತದ ಮೊದಲು ರಾಜಕಾರಣಿ ಎಂದು ಕೆಸಿಆರ್‌ ಅವರನ್ನು ಕೆಲವರು ಗುರುತಿಸುತ್ತಿದ್ದಾರೆ.

‘ನ್ಯೂಸ್‌ ಮಿನಿಟ್‌’ ಜೊತೆ ಮಾತನಾಡಿರುವ ರಾಜಕೀಯ ವಿಶ್ಲೇಷಕ ಪಿ.ಪವನ್, “ಎನ್‌ಟಿಆರ್ ರಾಷ್ಟ್ರೀಯ ಪಕ್ಷ (ಭಾರತ ದೇಶಂ ಪಕ್ಷ) ಪ್ರಾರಂಭಿಸಲು ಪ್ರಯತ್ನಿಸಿದರೂ ಯಶಸ್ಸಾಗಲಿಲ್ಲ. ನಂತರ, ಚಂದ್ರಬಾಬು ನಾಯ್ಡು ಅವರು ಟಿಡಿಪಿಯನ್ನು ರಾಷ್ಟ್ರೀಯ ಪಕ್ಷವಾಗಿ ನೋಂದಾಯಿಸಿಕೊಂಡರು. ಆದರೆ ಪ್ರಧಾನಿ ಸ್ಥಾನದ ಮೇಲೆ ಅವರ ಕಣ್ಣು ಎಂದಿಗೂ ಇರಲಿಲ್ಲ. ಅವರೇ ಈ ಪ್ರಸ್ತಾಪವನ್ನು ಒಮ್ಮೆ ಅಲ್ಲ ಎರಡು ಬಾರಿ ತಿರಸ್ಕರಿಸಿದ್ದಾರೆ” ಎಂದಿದ್ದಾರೆ.

“ಎನ್‌ಟಿಆರ್‌ ನಂತರದಲ್ಲಿ ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿರುವ ಮೊದಲ ಮುಖ್ಯಮಂತ್ರಿಯಾಗಿಯೂ ಕೆಸಿಆರ್‌ ಹೊಮ್ಮುತ್ತಾರೆ. ರಾಜಕೀಯ ಒತ್ತಡಗಳಿಂದಾಗಿ ದಕ್ಷಿಣ ಭಾರತದ ರಾಜಕಾರಣಿಗಳಾದ ಪಿ.ವಿ.ನರಸಿಂಹರಾವ್ ಮತ್ತು ಎಚ್‌.ಡಿ.ದೇವೇಗೌಡರು ರಾಷ್ಟ್ರಮಟ್ಟದಲ್ಲಿ ನಾಯಕರಾಗಿ ಹೊರಹೊಮ್ಮಲು ಸಾಧ್ಯವಾಯಿತು” ಎನ್ನುತ್ತಾರೆ ಪವನ್‌.

ಪಕ್ಷದ ಹೆಸರು ಇನ್ನೂ ಪರಿಗಣನೆಯಲ್ಲಿದೆ. ಇನ್ನೂ ಅಂತಿಮಗೊಂಡಿಲ್ಲ ಎಂದು ಟಿಆರ್‌ಎಸ್‌ನ ಉನ್ನತ ಮೂಲಗಳು ಹೇಳುತ್ತವೆ. ಜುಲೈ 2 ಮತ್ತು 3 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿ ಸಭೆಯ ಮೊದಲು ಅದನ್ನು ಅಧಿಕೃತಗೊಳಿಸಲು ಪಕ್ಷವು ಯೋಜಿಸಿದೆ ಎಂದು ಮೂಲವು ಬಹಿರಂಗಪಡಿಸಿದೆ.

‘ನವ ಭಾರತ್ ಪಕ್ಷ’, ‘ಜೈ ಭಾರತ್‌’ ಮತ್ತು ‘ಭಾರತ್ ರಾಷ್ಟ್ರ ಸಮಿತಿ’ ಎಂಬ ಹೆಸರುಗಳು ಪರಿಗಣನೆಯಲ್ಲಿವೆ ಎನ್ನಲಾಗುತ್ತಿದೆ. ಹೆಸರನ್ನು ಬದಲಾಯಿಸಬೇಕಾಗಿದ್ದರೂ, ಪಕ್ಷದ ಧ್ವಜ ಮತ್ತು ಅದರ ಟ್ರೇಡ್‌ಮಾರ್ಕ್ ಗುಲಾಬಿ ಬಣ್ಣವನ್ನು ಉಳಿಸಿಕೊಳ್ಳಲಾಗುತ್ತಿದೆ. ಪಕ್ಷದ ಧ್ವಜದಲ್ಲಿರುವ ತೆಲಂಗಾಣ ನಕ್ಷೆಯನ್ನು ಭಾರತೀಯ ಧ್ವಜ ಅಥವಾ ಭಾರತ ಮಾತೆಯ ಚಿತ್ರ ಅಥವಾ ಎರಡರ ಸಂಯೋಜನೆಯೊಂದಿಗೆ ಬದಲಾಯಿಸಬಹುದು ಎನ್ನಲಾಗುತ್ತಿದೆ.

ಕೆಸಿಆರ್ ರಾಷ್ಟ್ರೀಯ ರಾಜಕೀಯಕ್ಕೆ ಪ್ರವೇಶಿಸುವುದು ವಾಸ್ತವವಾಗಿ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದೆ ಎಂದು ಹೆಸರು ಹೇಳಲಿಚ್ಛಿಸದ ರಾಜಕೀಯ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ರಾಜ್ಯದ ನಾಯಕ ತನ್ನನ್ನು ತಾನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಂಡಾಗ, ಅದು ಮೂಲತಃ ರಾಜ್ಯದ ಹೆಮ್ಮೆಯನ್ನು ಇಮ್ಮಡಿಗೊಳಿಸುತ್ತದೆ. ಒಬ್ಬ ರಾಜ್ಯದ ನಾಯಕನಿಗೆ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳಿವೆ ಮತ್ತು ತೆಲಂಗಾಣ ಹೆಮ್ಮೆಯನ್ನು ಸ್ವಾಗತಿಸಿ ಎಂದು ಕೆಸಿಆರ್ ಅವರು ತೆಲಂಗಾಣ ಜನತೆಗೆ ಹೇಳಲು ಬಯಸುತ್ತಿದ್ದಾರೆ. ಇದು ರಾಜ್ಯದ ಚುನಾವಣೆಗೆ ಸಹಾಯ ಮಾಡುತ್ತದೆ ಎಂದು ಕೆಸಿಆರ್‌ ನಂಬಿದ್ದಾರೆ” ಎಂಬುದು ರಾಜಕೀಯ ವಿಶ್ಲೇಷಕರ ಮಾತು.

ಇದನ್ನೂ ಓದಿರಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಕೆಸಿಆರ್ ಅವರು ಬೇರೆ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ನೈಜ ಯೋಜನೆಯನ್ನು ಹೊಂದಿದ್ದಾರೆ ಎಂದು ತಂತ್ರಜ್ಞರು ನಂಬುವುದಿಲ್ಲ. 2014ರಲ್ಲಿ ಜಯಲಲಿತಾ ಅವರು ರಾಷ್ಟ್ರೀಯ ನಾಯಕಿಯಾಗಿ ತಮ್ಮನ್ನು ತಾವು ಬಿಂಬಿಸಿಕೊಂಡಿದ್ದರು ಎಂಬುದನ್ನು ನೆನಪಿಸಿಕೊಳ್ಳಬಹುದು. ಇದು ಅವರ ಇಮೇಜ್ ಅನ್ನು ಹೆಚ್ಚಿಸುವಲ್ಲಿ ಸಹಾಯ ಮಾಡಿತು.

ತನ್ನನ್ನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳುವ ಮೂಲಕ ಕೆಸಿಆರ್ ಬಿಜೆಪಿಯನ್ನು ತನ್ನ ಪರಮ ಶತ್ರುವೆಂಬಂತೆ ಬಿಂಬಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಕಳೆದೆರಡು ಅವಧಿಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಆದ್ದರಿಂದ ಕಾಂಗ್ರೆಸ್‌ನವರನ್ನು ಟೀಕಿಸಿದರೆ ಪ್ರಯೋಜನವಿಲ್ಲ. ತನ್ನನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಿಕೊಳ್ಳುವ ಮೂಲಕ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ಮೇಲಿನ ತಮ್ಮ ದಾಳಿಯನ್ನು ಕೆಸಿಆರ್‌ ಸಮರ್ಥಿಸಿಕೊಳ್ಳಬಹುದು. ಬಿಜೆಪಿಯವರನ್ನು ಪ್ರಾಥಮಿಕ ಶತ್ರುವಾಗಿ ಎದುರು ನಿಲ್ಲಿಸಬಹುದು ಎಂಬ ತಂತ್ರಗಾರಿಕೆ ಇಲ್ಲಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...