Homeಮುಖಪುಟರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

- Advertisement -
- Advertisement -

ಕೆಸಿಆರ್ ಎಂದೇ ಖ್ಯಾತರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಸೆಡ್ಡು ಹೊಡೆಯಲು ಯಾವುದೋ ಒಂದು ದೊಡ್ಡ ಪ್ರಯೋಗದಲ್ಲಿ ತೊಡಗಿದ್ದಾರೆ.

ಅಧಿಕೃತವಾಗಿ ಇನ್ನೂ ಘೋಷಿಸದಿದ್ದರೂ, ತೆಲಂಗಾಣ ರಾಷ್ಟ್ರ ಸಮಿತಿ (TRS) ಶೀಘ್ರದಲ್ಲೇ BRS (ಭಾರತೀಯ ರಾಷ್ಟ್ರ ಸಮಿತಿ) ಎಂದು ಮರುನಾಮಕರಣಗೊಂಡು ರಾಷ್ಟ್ರೀಯ ಪಕ್ಷವಾಗಿ ಹೊಮ್ಮಲಿದೆ. ಕೆಸಿಆರ್ ಅವರು ತಮ್ಮ ಕಾರ್ಯತಂತ್ರಗಳು ಮತ್ತು ಯೋಜನೆಗಳನ್ನು ರೂಪಿಸುವಲ್ಲಿ ನಿರತರಾಗಿದ್ದಾರೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿದ್ಯಮಾನದ ಹಿಂದೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೈವಾಡವಿದೆ ಎಂದು ಕೆಲವರು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದ ಆಕಾಂಕ್ಷೆಯನ್ನು ಹೊಂದಿದ್ದ ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌.ಟಿ.ರಾಮರಾವ್ (ಎನ್‌ಟಿಆರ್) ನಂತರದಲ್ಲಿ ಈ ಹೆಜ್ಜೆ ಇರಿಸುತ್ತಿರುವ ದಕ್ಷಿಣ ಭಾರತದ ಮೊದಲು ರಾಜಕಾರಣಿ ಎಂದು ಕೆಸಿಆರ್‌ ಅವರನ್ನು ಕೆಲವರು ಗುರುತಿಸುತ್ತಿದ್ದಾರೆ.

‘ನ್ಯೂಸ್‌ ಮಿನಿಟ್‌’ ಜೊತೆ ಮಾತನಾಡಿರುವ ರಾಜಕೀಯ ವಿಶ್ಲೇಷಕ ಪಿ.ಪವನ್, “ಎನ್‌ಟಿಆರ್ ರಾಷ್ಟ್ರೀಯ ಪಕ್ಷ (ಭಾರತ ದೇಶಂ ಪಕ್ಷ) ಪ್ರಾರಂಭಿಸಲು ಪ್ರಯತ್ನಿಸಿದರೂ ಯಶಸ್ಸಾಗಲಿಲ್ಲ. ನಂತರ, ಚಂದ್ರಬಾಬು ನಾಯ್ಡು ಅವರು ಟಿಡಿಪಿಯನ್ನು ರಾಷ್ಟ್ರೀಯ ಪಕ್ಷವಾಗಿ ನೋಂದಾಯಿಸಿಕೊಂಡರು. ಆದರೆ ಪ್ರಧಾನಿ ಸ್ಥಾನದ ಮೇಲೆ ಅವರ ಕಣ್ಣು ಎಂದಿಗೂ ಇರಲಿಲ್ಲ. ಅವರೇ ಈ ಪ್ರಸ್ತಾಪವನ್ನು ಒಮ್ಮೆ ಅಲ್ಲ ಎರಡು ಬಾರಿ ತಿರಸ್ಕರಿಸಿದ್ದಾರೆ” ಎಂದಿದ್ದಾರೆ.

“ಎನ್‌ಟಿಆರ್‌ ನಂತರದಲ್ಲಿ ರಾಷ್ಟ್ರ ರಾಜಕಾರಣದ ಮೇಲೆ ಕಣ್ಣಿಟ್ಟಿರುವ ಮೊದಲ ಮುಖ್ಯಮಂತ್ರಿಯಾಗಿಯೂ ಕೆಸಿಆರ್‌ ಹೊಮ್ಮುತ್ತಾರೆ. ರಾಜಕೀಯ ಒತ್ತಡಗಳಿಂದಾಗಿ ದಕ್ಷಿಣ ಭಾರತದ ರಾಜಕಾರಣಿಗಳಾದ ಪಿ.ವಿ.ನರಸಿಂಹರಾವ್ ಮತ್ತು ಎಚ್‌.ಡಿ.ದೇವೇಗೌಡರು ರಾಷ್ಟ್ರಮಟ್ಟದಲ್ಲಿ ನಾಯಕರಾಗಿ ಹೊರಹೊಮ್ಮಲು ಸಾಧ್ಯವಾಯಿತು” ಎನ್ನುತ್ತಾರೆ ಪವನ್‌.

ಪಕ್ಷದ ಹೆಸರು ಇನ್ನೂ ಪರಿಗಣನೆಯಲ್ಲಿದೆ. ಇನ್ನೂ ಅಂತಿಮಗೊಂಡಿಲ್ಲ ಎಂದು ಟಿಆರ್‌ಎಸ್‌ನ ಉನ್ನತ ಮೂಲಗಳು ಹೇಳುತ್ತವೆ. ಜುಲೈ 2 ಮತ್ತು 3 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿ ಸಭೆಯ ಮೊದಲು ಅದನ್ನು ಅಧಿಕೃತಗೊಳಿಸಲು ಪಕ್ಷವು ಯೋಜಿಸಿದೆ ಎಂದು ಮೂಲವು ಬಹಿರಂಗಪಡಿಸಿದೆ.

‘ನವ ಭಾರತ್ ಪಕ್ಷ’, ‘ಜೈ ಭಾರತ್‌’ ಮತ್ತು ‘ಭಾರತ್ ರಾಷ್ಟ್ರ ಸಮಿತಿ’ ಎಂಬ ಹೆಸರುಗಳು ಪರಿಗಣನೆಯಲ್ಲಿವೆ ಎನ್ನಲಾಗುತ್ತಿದೆ. ಹೆಸರನ್ನು ಬದಲಾಯಿಸಬೇಕಾಗಿದ್ದರೂ, ಪಕ್ಷದ ಧ್ವಜ ಮತ್ತು ಅದರ ಟ್ರೇಡ್‌ಮಾರ್ಕ್ ಗುಲಾಬಿ ಬಣ್ಣವನ್ನು ಉಳಿಸಿಕೊಳ್ಳಲಾಗುತ್ತಿದೆ. ಪಕ್ಷದ ಧ್ವಜದಲ್ಲಿರುವ ತೆಲಂಗಾಣ ನಕ್ಷೆಯನ್ನು ಭಾರತೀಯ ಧ್ವಜ ಅಥವಾ ಭಾರತ ಮಾತೆಯ ಚಿತ್ರ ಅಥವಾ ಎರಡರ ಸಂಯೋಜನೆಯೊಂದಿಗೆ ಬದಲಾಯಿಸಬಹುದು ಎನ್ನಲಾಗುತ್ತಿದೆ.

ಕೆಸಿಆರ್ ರಾಷ್ಟ್ರೀಯ ರಾಜಕೀಯಕ್ಕೆ ಪ್ರವೇಶಿಸುವುದು ವಾಸ್ತವವಾಗಿ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದೆ ಎಂದು ಹೆಸರು ಹೇಳಲಿಚ್ಛಿಸದ ರಾಜಕೀಯ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ರಾಜ್ಯದ ನಾಯಕ ತನ್ನನ್ನು ತಾನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಂಡಾಗ, ಅದು ಮೂಲತಃ ರಾಜ್ಯದ ಹೆಮ್ಮೆಯನ್ನು ಇಮ್ಮಡಿಗೊಳಿಸುತ್ತದೆ. ಒಬ್ಬ ರಾಜ್ಯದ ನಾಯಕನಿಗೆ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳಿವೆ ಮತ್ತು ತೆಲಂಗಾಣ ಹೆಮ್ಮೆಯನ್ನು ಸ್ವಾಗತಿಸಿ ಎಂದು ಕೆಸಿಆರ್ ಅವರು ತೆಲಂಗಾಣ ಜನತೆಗೆ ಹೇಳಲು ಬಯಸುತ್ತಿದ್ದಾರೆ. ಇದು ರಾಜ್ಯದ ಚುನಾವಣೆಗೆ ಸಹಾಯ ಮಾಡುತ್ತದೆ ಎಂದು ಕೆಸಿಆರ್‌ ನಂಬಿದ್ದಾರೆ” ಎಂಬುದು ರಾಜಕೀಯ ವಿಶ್ಲೇಷಕರ ಮಾತು.

ಇದನ್ನೂ ಓದಿರಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಕೆಸಿಆರ್ ಅವರು ಬೇರೆ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ನೈಜ ಯೋಜನೆಯನ್ನು ಹೊಂದಿದ್ದಾರೆ ಎಂದು ತಂತ್ರಜ್ಞರು ನಂಬುವುದಿಲ್ಲ. 2014ರಲ್ಲಿ ಜಯಲಲಿತಾ ಅವರು ರಾಷ್ಟ್ರೀಯ ನಾಯಕಿಯಾಗಿ ತಮ್ಮನ್ನು ತಾವು ಬಿಂಬಿಸಿಕೊಂಡಿದ್ದರು ಎಂಬುದನ್ನು ನೆನಪಿಸಿಕೊಳ್ಳಬಹುದು. ಇದು ಅವರ ಇಮೇಜ್ ಅನ್ನು ಹೆಚ್ಚಿಸುವಲ್ಲಿ ಸಹಾಯ ಮಾಡಿತು.

ತನ್ನನ್ನು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳುವ ಮೂಲಕ ಕೆಸಿಆರ್ ಬಿಜೆಪಿಯನ್ನು ತನ್ನ ಪರಮ ಶತ್ರುವೆಂಬಂತೆ ಬಿಂಬಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಕಳೆದೆರಡು ಅವಧಿಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಆದ್ದರಿಂದ ಕಾಂಗ್ರೆಸ್‌ನವರನ್ನು ಟೀಕಿಸಿದರೆ ಪ್ರಯೋಜನವಿಲ್ಲ. ತನ್ನನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಿಕೊಳ್ಳುವ ಮೂಲಕ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ಮೇಲಿನ ತಮ್ಮ ದಾಳಿಯನ್ನು ಕೆಸಿಆರ್‌ ಸಮರ್ಥಿಸಿಕೊಳ್ಳಬಹುದು. ಬಿಜೆಪಿಯವರನ್ನು ಪ್ರಾಥಮಿಕ ಶತ್ರುವಾಗಿ ಎದುರು ನಿಲ್ಲಿಸಬಹುದು ಎಂಬ ತಂತ್ರಗಾರಿಕೆ ಇಲ್ಲಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....