Homeಮುಖಪುಟದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

ದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

- Advertisement -
- Advertisement -

22 ವರ್ಷ ಪೂರೈಸಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ (ಟಿಆರ್‌ಎಸ್) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್‌) ಮರುನಾಮಕರಣ ಮಾಡಲಿದ್ದಾರೆ. ಇದರ ಜೊತೆಗೆ ರಾಜಕಾರಣದ ಮುಂದುವರಿದ ಭಾಗವಾಗಿ ಶೀಘ್ರದಲ್ಲೇ ಹೈದರಾಬಾದ್‌ನಲ್ಲಿ ದಲಿತ ಸಮಾವೇಶವನ್ನು ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ಮೂಲೆಗಳಿಂದ ದಲಿತ ಚಿಂತಕರು ಬರಲಿದ್ದಾರೆ ಎಂದು ಪಕ್ಷವು ತಿಳಿಸಿದೆ.

ಪಕ್ಷದ ಹೆಸರು ಬದಲಾವಣೆಗೆ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿರುವುದಾಗಿ ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್‌ನ 20 ಶಾಸಕರಲ್ಲದೆ, ತಮಿಳುನಾಡು ಸಂಸದ, ವಿಡುದಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮುಖ್ಯಸ್ಥ ತಿರುಮಾವಲವನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬುಧವಾರದ ಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಭಾಗವಹಿಸಲಿಲ್ಲ ಎಂದು ಕೆಸಿಆರ್‌ ತಿಳಿಸಿದ್ದಾರೆ.

ಕೆಸಿಆರ್ ಅವರ ಭಾಷಣದಲ್ಲಿ ‘ದಲಿತ ಬಂಧು’ ಯೋಜನೆ ಗಮನ ಸೆಳೆಯಿತು. ದಲಿತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ.

ವಿಸಿಕೆ ಮುಖ್ಯಸ್ಥರಾದ ತಿರುಮಾವಲವನ್ ಅವರು ಗುರುವಾರ ಮತ್ತೊಮ್ಮೆ ಕೆಸಿಆರ್ ಅವರನ್ನು ಭೇಟಿಯಾದರು. ಕೆಸಿಆರ್‌‌ ಅವರ ಅಧಿಕೃತ ನಿವಾಸವಾದ ಪ್ರಗತಿ ಭವನದಲ್ಲಿ ಮತ್ತೊಮ್ಮೆ ಭೇಟಿಯಾಗಿ ಮಾತನಾಡಿದರು. ದಲಿತ ಪರ ಯೋಜನೆಗಳನ್ನು ದೇಶಾದ್ಯಂತ ಜಾರಿಗೆ ತರುವುದಾಗಿ ಕೆಸಿಆರ್‌ ಹೇಳುತ್ತಿರುವ ಮಾತುಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತೆಲಂಗಾಣ ಸರ್ಕಾರ ದಲಿತರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಪರಿಚಯಿಸುತ್ತಿದೆ ಎಂದು ಸಂಸದರು ಶ್ಲಾಘಿಸಿದರು. ದೇಶದಲ್ಲಿ ಯಾವುದೇ ರಾಜ್ಯವು ಇಷ್ಟು ದೊಡ್ಡ ಸಂಖ್ಯೆಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ತಿಳಿಸಿದರು.

ಬುಧವಾರದ ಭಾಷಣದಲ್ಲಿ ಕೆಸಿಆರ್‌, “ಪಕ್ಷದ ಹೆಸರನ್ನು ಬದಲಾಯಿಸಲು ಇದು ಕೇವಲ ಆಂತರಿಕ ಸಭೆ” ಎಂದಿದ್ದರು.

“ಪಕ್ಷದ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು (ಅಖಿಲೇಶ್ ಮತ್ತು ತೇಜಸ್ವಿ) ಆಹ್ವಾನಿಸಲಾಗುವುದು. ದೇಶಾದ್ಯಂತ ಹಲವು ಪಕ್ಷಗಳ ನಾಯಕರು ನಮ್ಮೊಂದಿಗೆ ಸಾಗಲು ಮುಂದೆ ಬರುತ್ತಿದ್ದಾರೆ. ವಿವಿಧ ಕ್ಷೇತ್ರಗಳ ಅರ್ಥಶಾಸ್ತ್ರಜ್ಞರು ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದ್ದು, ಬಿಆರ್‌ಎಸ್ ಪಕ್ಷ ರಚಿಸುವಾಗ ಅವರ ಸಲಹೆಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ತೆಲಂಗಾಣ ಸಿಎಂ ಆಗಿ ದೇಶಾದ್ಯಂತ ಪ್ರವಾಸ ಮಾಡುತ್ತೇನೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ. ಉಜ್ವಲ ಭಾರತ ನಿರ್ಮಾಣವಾಗಬೇಕಿದೆ. ದೇಶದಲ್ಲಿರುವ ಸಂಪನ್ಮೂಲಗಳನ್ನು ಗರಿಷ್ಠ ಮಟ್ಟದಲ್ಲಿ ಬಳಸಿದರೆ ಭಾರತವು ಅಮೆರಿಕಕ್ಕಿಂತ ಉತ್ತಮವಾಗಿ ಬೆಳೆಯುತ್ತದೆ. ನಮಗೆ ಇನ್ನೂ ಒಳ್ಳೆಯ ಸಮಯವಿದೆ. ನಾವು ದೇಶಾದ್ಯಂತ ವಿಸ್ತರಿಸುತ್ತೇವೆ ಎಂದು ತಿಳಿಸಿದ್ದಾರೆ.

ಬಿಆರ್‌ಎಸ್‌ ತನ್ನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲ ರಾಜ್ಯ ಮಹಾರಾಷ್ಟ್ರವಾಗಲಿದೆ. ರಾಷ್ಟ್ರೀಯ ಪಕ್ಷದೊಂದಿಗೆ ಸಂಯೋಜಿಸಲ್ಪಟ್ಟ ರೈತ ಸಂಘವನ್ನು ಮೊದಲು ಮಹಾರಾಷ್ಟ್ರದಿಂದ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

“ನಾವು ದಲಿತ ಚಳವಳಿ, ರೈತ ಚಳವಳಿ ಮತ್ತು ಬುಡಕಟ್ಟು ಚಳವಳಿಯ ಮೂಲಕ ಮುಂದುವರಿಯುತ್ತೇವೆ. ನಾವು ದೇಶದಲ್ಲಿನ ಅನೇಕ ಸಾಮಾಜಿಕ-ರಾಜಕೀಯ ಸಮಸ್ಯೆಗಳತ್ತ ಗಮನ ಹರಿಸಲಿದ್ದೇವೆ” ಎಂದು ತಮ್ಮ ಅಜೆಂಡಾಗಳ ಕುರಿತು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾರ್ದಿಕ ಸ್ವಾಗತ ಗಳು.
    ಈ ತರಹದ ಲೋಕಲ್ ಪಾರ್ಟಿ ಗಳು ರಾಷ್ಟ್ರೀಯವಾಗಲು ತಯಾರಿ ನಡೆಸುವುದು ಬಿಜೆಪಿಗೆ ಲಾಭಕರವಾಗುತ್ತದೆ ಎನ್ನುವುದು ಬೇಸರದ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...