Homeಮುಖಪುಟದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

ದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

- Advertisement -
- Advertisement -

22 ವರ್ಷ ಪೂರೈಸಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ (ಟಿಆರ್‌ಎಸ್) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್‌) ಮರುನಾಮಕರಣ ಮಾಡಲಿದ್ದಾರೆ. ಇದರ ಜೊತೆಗೆ ರಾಜಕಾರಣದ ಮುಂದುವರಿದ ಭಾಗವಾಗಿ ಶೀಘ್ರದಲ್ಲೇ ಹೈದರಾಬಾದ್‌ನಲ್ಲಿ ದಲಿತ ಸಮಾವೇಶವನ್ನು ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ಮೂಲೆಗಳಿಂದ ದಲಿತ ಚಿಂತಕರು ಬರಲಿದ್ದಾರೆ ಎಂದು ಪಕ್ಷವು ತಿಳಿಸಿದೆ.

ಪಕ್ಷದ ಹೆಸರು ಬದಲಾವಣೆಗೆ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿರುವುದಾಗಿ ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್‌ನ 20 ಶಾಸಕರಲ್ಲದೆ, ತಮಿಳುನಾಡು ಸಂಸದ, ವಿಡುದಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮುಖ್ಯಸ್ಥ ತಿರುಮಾವಲವನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬುಧವಾರದ ಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಭಾಗವಹಿಸಲಿಲ್ಲ ಎಂದು ಕೆಸಿಆರ್‌ ತಿಳಿಸಿದ್ದಾರೆ.

ಕೆಸಿಆರ್ ಅವರ ಭಾಷಣದಲ್ಲಿ ‘ದಲಿತ ಬಂಧು’ ಯೋಜನೆ ಗಮನ ಸೆಳೆಯಿತು. ದಲಿತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ.

ವಿಸಿಕೆ ಮುಖ್ಯಸ್ಥರಾದ ತಿರುಮಾವಲವನ್ ಅವರು ಗುರುವಾರ ಮತ್ತೊಮ್ಮೆ ಕೆಸಿಆರ್ ಅವರನ್ನು ಭೇಟಿಯಾದರು. ಕೆಸಿಆರ್‌‌ ಅವರ ಅಧಿಕೃತ ನಿವಾಸವಾದ ಪ್ರಗತಿ ಭವನದಲ್ಲಿ ಮತ್ತೊಮ್ಮೆ ಭೇಟಿಯಾಗಿ ಮಾತನಾಡಿದರು. ದಲಿತ ಪರ ಯೋಜನೆಗಳನ್ನು ದೇಶಾದ್ಯಂತ ಜಾರಿಗೆ ತರುವುದಾಗಿ ಕೆಸಿಆರ್‌ ಹೇಳುತ್ತಿರುವ ಮಾತುಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತೆಲಂಗಾಣ ಸರ್ಕಾರ ದಲಿತರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಪರಿಚಯಿಸುತ್ತಿದೆ ಎಂದು ಸಂಸದರು ಶ್ಲಾಘಿಸಿದರು. ದೇಶದಲ್ಲಿ ಯಾವುದೇ ರಾಜ್ಯವು ಇಷ್ಟು ದೊಡ್ಡ ಸಂಖ್ಯೆಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ತಿಳಿಸಿದರು.

ಬುಧವಾರದ ಭಾಷಣದಲ್ಲಿ ಕೆಸಿಆರ್‌, “ಪಕ್ಷದ ಹೆಸರನ್ನು ಬದಲಾಯಿಸಲು ಇದು ಕೇವಲ ಆಂತರಿಕ ಸಭೆ” ಎಂದಿದ್ದರು.

“ಪಕ್ಷದ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು (ಅಖಿಲೇಶ್ ಮತ್ತು ತೇಜಸ್ವಿ) ಆಹ್ವಾನಿಸಲಾಗುವುದು. ದೇಶಾದ್ಯಂತ ಹಲವು ಪಕ್ಷಗಳ ನಾಯಕರು ನಮ್ಮೊಂದಿಗೆ ಸಾಗಲು ಮುಂದೆ ಬರುತ್ತಿದ್ದಾರೆ. ವಿವಿಧ ಕ್ಷೇತ್ರಗಳ ಅರ್ಥಶಾಸ್ತ್ರಜ್ಞರು ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದ್ದು, ಬಿಆರ್‌ಎಸ್ ಪಕ್ಷ ರಚಿಸುವಾಗ ಅವರ ಸಲಹೆಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ತೆಲಂಗಾಣ ಸಿಎಂ ಆಗಿ ದೇಶಾದ್ಯಂತ ಪ್ರವಾಸ ಮಾಡುತ್ತೇನೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ. ಉಜ್ವಲ ಭಾರತ ನಿರ್ಮಾಣವಾಗಬೇಕಿದೆ. ದೇಶದಲ್ಲಿರುವ ಸಂಪನ್ಮೂಲಗಳನ್ನು ಗರಿಷ್ಠ ಮಟ್ಟದಲ್ಲಿ ಬಳಸಿದರೆ ಭಾರತವು ಅಮೆರಿಕಕ್ಕಿಂತ ಉತ್ತಮವಾಗಿ ಬೆಳೆಯುತ್ತದೆ. ನಮಗೆ ಇನ್ನೂ ಒಳ್ಳೆಯ ಸಮಯವಿದೆ. ನಾವು ದೇಶಾದ್ಯಂತ ವಿಸ್ತರಿಸುತ್ತೇವೆ ಎಂದು ತಿಳಿಸಿದ್ದಾರೆ.

ಬಿಆರ್‌ಎಸ್‌ ತನ್ನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲ ರಾಜ್ಯ ಮಹಾರಾಷ್ಟ್ರವಾಗಲಿದೆ. ರಾಷ್ಟ್ರೀಯ ಪಕ್ಷದೊಂದಿಗೆ ಸಂಯೋಜಿಸಲ್ಪಟ್ಟ ರೈತ ಸಂಘವನ್ನು ಮೊದಲು ಮಹಾರಾಷ್ಟ್ರದಿಂದ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

“ನಾವು ದಲಿತ ಚಳವಳಿ, ರೈತ ಚಳವಳಿ ಮತ್ತು ಬುಡಕಟ್ಟು ಚಳವಳಿಯ ಮೂಲಕ ಮುಂದುವರಿಯುತ್ತೇವೆ. ನಾವು ದೇಶದಲ್ಲಿನ ಅನೇಕ ಸಾಮಾಜಿಕ-ರಾಜಕೀಯ ಸಮಸ್ಯೆಗಳತ್ತ ಗಮನ ಹರಿಸಲಿದ್ದೇವೆ” ಎಂದು ತಮ್ಮ ಅಜೆಂಡಾಗಳ ಕುರಿತು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾರ್ದಿಕ ಸ್ವಾಗತ ಗಳು.
    ಈ ತರಹದ ಲೋಕಲ್ ಪಾರ್ಟಿ ಗಳು ರಾಷ್ಟ್ರೀಯವಾಗಲು ತಯಾರಿ ನಡೆಸುವುದು ಬಿಜೆಪಿಗೆ ಲಾಭಕರವಾಗುತ್ತದೆ ಎನ್ನುವುದು ಬೇಸರದ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...