Homeಮುಖಪುಟದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

ದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

- Advertisement -
- Advertisement -

22 ವರ್ಷ ಪೂರೈಸಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ (ಟಿಆರ್‌ಎಸ್) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್‌) ಮರುನಾಮಕರಣ ಮಾಡಲಿದ್ದಾರೆ. ಇದರ ಜೊತೆಗೆ ರಾಜಕಾರಣದ ಮುಂದುವರಿದ ಭಾಗವಾಗಿ ಶೀಘ್ರದಲ್ಲೇ ಹೈದರಾಬಾದ್‌ನಲ್ಲಿ ದಲಿತ ಸಮಾವೇಶವನ್ನು ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ಮೂಲೆಗಳಿಂದ ದಲಿತ ಚಿಂತಕರು ಬರಲಿದ್ದಾರೆ ಎಂದು ಪಕ್ಷವು ತಿಳಿಸಿದೆ.

ಪಕ್ಷದ ಹೆಸರು ಬದಲಾವಣೆಗೆ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿರುವುದಾಗಿ ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್‌ನ 20 ಶಾಸಕರಲ್ಲದೆ, ತಮಿಳುನಾಡು ಸಂಸದ, ವಿಡುದಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮುಖ್ಯಸ್ಥ ತಿರುಮಾವಲವನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬುಧವಾರದ ಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಭಾಗವಹಿಸಲಿಲ್ಲ ಎಂದು ಕೆಸಿಆರ್‌ ತಿಳಿಸಿದ್ದಾರೆ.

ಕೆಸಿಆರ್ ಅವರ ಭಾಷಣದಲ್ಲಿ ‘ದಲಿತ ಬಂಧು’ ಯೋಜನೆ ಗಮನ ಸೆಳೆಯಿತು. ದಲಿತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ.

ವಿಸಿಕೆ ಮುಖ್ಯಸ್ಥರಾದ ತಿರುಮಾವಲವನ್ ಅವರು ಗುರುವಾರ ಮತ್ತೊಮ್ಮೆ ಕೆಸಿಆರ್ ಅವರನ್ನು ಭೇಟಿಯಾದರು. ಕೆಸಿಆರ್‌‌ ಅವರ ಅಧಿಕೃತ ನಿವಾಸವಾದ ಪ್ರಗತಿ ಭವನದಲ್ಲಿ ಮತ್ತೊಮ್ಮೆ ಭೇಟಿಯಾಗಿ ಮಾತನಾಡಿದರು. ದಲಿತ ಪರ ಯೋಜನೆಗಳನ್ನು ದೇಶಾದ್ಯಂತ ಜಾರಿಗೆ ತರುವುದಾಗಿ ಕೆಸಿಆರ್‌ ಹೇಳುತ್ತಿರುವ ಮಾತುಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತೆಲಂಗಾಣ ಸರ್ಕಾರ ದಲಿತರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಪರಿಚಯಿಸುತ್ತಿದೆ ಎಂದು ಸಂಸದರು ಶ್ಲಾಘಿಸಿದರು. ದೇಶದಲ್ಲಿ ಯಾವುದೇ ರಾಜ್ಯವು ಇಷ್ಟು ದೊಡ್ಡ ಸಂಖ್ಯೆಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ತಿಳಿಸಿದರು.

ಬುಧವಾರದ ಭಾಷಣದಲ್ಲಿ ಕೆಸಿಆರ್‌, “ಪಕ್ಷದ ಹೆಸರನ್ನು ಬದಲಾಯಿಸಲು ಇದು ಕೇವಲ ಆಂತರಿಕ ಸಭೆ” ಎಂದಿದ್ದರು.

“ಪಕ್ಷದ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು (ಅಖಿಲೇಶ್ ಮತ್ತು ತೇಜಸ್ವಿ) ಆಹ್ವಾನಿಸಲಾಗುವುದು. ದೇಶಾದ್ಯಂತ ಹಲವು ಪಕ್ಷಗಳ ನಾಯಕರು ನಮ್ಮೊಂದಿಗೆ ಸಾಗಲು ಮುಂದೆ ಬರುತ್ತಿದ್ದಾರೆ. ವಿವಿಧ ಕ್ಷೇತ್ರಗಳ ಅರ್ಥಶಾಸ್ತ್ರಜ್ಞರು ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದ್ದು, ಬಿಆರ್‌ಎಸ್ ಪಕ್ಷ ರಚಿಸುವಾಗ ಅವರ ಸಲಹೆಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ತೆಲಂಗಾಣ ಸಿಎಂ ಆಗಿ ದೇಶಾದ್ಯಂತ ಪ್ರವಾಸ ಮಾಡುತ್ತೇನೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ. ಉಜ್ವಲ ಭಾರತ ನಿರ್ಮಾಣವಾಗಬೇಕಿದೆ. ದೇಶದಲ್ಲಿರುವ ಸಂಪನ್ಮೂಲಗಳನ್ನು ಗರಿಷ್ಠ ಮಟ್ಟದಲ್ಲಿ ಬಳಸಿದರೆ ಭಾರತವು ಅಮೆರಿಕಕ್ಕಿಂತ ಉತ್ತಮವಾಗಿ ಬೆಳೆಯುತ್ತದೆ. ನಮಗೆ ಇನ್ನೂ ಒಳ್ಳೆಯ ಸಮಯವಿದೆ. ನಾವು ದೇಶಾದ್ಯಂತ ವಿಸ್ತರಿಸುತ್ತೇವೆ ಎಂದು ತಿಳಿಸಿದ್ದಾರೆ.

ಬಿಆರ್‌ಎಸ್‌ ತನ್ನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲ ರಾಜ್ಯ ಮಹಾರಾಷ್ಟ್ರವಾಗಲಿದೆ. ರಾಷ್ಟ್ರೀಯ ಪಕ್ಷದೊಂದಿಗೆ ಸಂಯೋಜಿಸಲ್ಪಟ್ಟ ರೈತ ಸಂಘವನ್ನು ಮೊದಲು ಮಹಾರಾಷ್ಟ್ರದಿಂದ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

“ನಾವು ದಲಿತ ಚಳವಳಿ, ರೈತ ಚಳವಳಿ ಮತ್ತು ಬುಡಕಟ್ಟು ಚಳವಳಿಯ ಮೂಲಕ ಮುಂದುವರಿಯುತ್ತೇವೆ. ನಾವು ದೇಶದಲ್ಲಿನ ಅನೇಕ ಸಾಮಾಜಿಕ-ರಾಜಕೀಯ ಸಮಸ್ಯೆಗಳತ್ತ ಗಮನ ಹರಿಸಲಿದ್ದೇವೆ” ಎಂದು ತಮ್ಮ ಅಜೆಂಡಾಗಳ ಕುರಿತು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾರ್ದಿಕ ಸ್ವಾಗತ ಗಳು.
    ಈ ತರಹದ ಲೋಕಲ್ ಪಾರ್ಟಿ ಗಳು ರಾಷ್ಟ್ರೀಯವಾಗಲು ತಯಾರಿ ನಡೆಸುವುದು ಬಿಜೆಪಿಗೆ ಲಾಭಕರವಾಗುತ್ತದೆ ಎನ್ನುವುದು ಬೇಸರದ ಸಂಗತಿ.

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...