Homeಮುಖಪುಟದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

ದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

- Advertisement -
- Advertisement -

22 ವರ್ಷ ಪೂರೈಸಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ (ಟಿಆರ್‌ಎಸ್) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್‌) ಮರುನಾಮಕರಣ ಮಾಡಲಿದ್ದಾರೆ. ಇದರ ಜೊತೆಗೆ ರಾಜಕಾರಣದ ಮುಂದುವರಿದ ಭಾಗವಾಗಿ ಶೀಘ್ರದಲ್ಲೇ ಹೈದರಾಬಾದ್‌ನಲ್ಲಿ ದಲಿತ ಸಮಾವೇಶವನ್ನು ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ಮೂಲೆಗಳಿಂದ ದಲಿತ ಚಿಂತಕರು ಬರಲಿದ್ದಾರೆ ಎಂದು ಪಕ್ಷವು ತಿಳಿಸಿದೆ.

ಪಕ್ಷದ ಹೆಸರು ಬದಲಾವಣೆಗೆ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿರುವುದಾಗಿ ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್‌ನ 20 ಶಾಸಕರಲ್ಲದೆ, ತಮಿಳುನಾಡು ಸಂಸದ, ವಿಡುದಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮುಖ್ಯಸ್ಥ ತಿರುಮಾವಲವನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬುಧವಾರದ ಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಭಾಗವಹಿಸಲಿಲ್ಲ ಎಂದು ಕೆಸಿಆರ್‌ ತಿಳಿಸಿದ್ದಾರೆ.

ಕೆಸಿಆರ್ ಅವರ ಭಾಷಣದಲ್ಲಿ ‘ದಲಿತ ಬಂಧು’ ಯೋಜನೆ ಗಮನ ಸೆಳೆಯಿತು. ದಲಿತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ.

ವಿಸಿಕೆ ಮುಖ್ಯಸ್ಥರಾದ ತಿರುಮಾವಲವನ್ ಅವರು ಗುರುವಾರ ಮತ್ತೊಮ್ಮೆ ಕೆಸಿಆರ್ ಅವರನ್ನು ಭೇಟಿಯಾದರು. ಕೆಸಿಆರ್‌‌ ಅವರ ಅಧಿಕೃತ ನಿವಾಸವಾದ ಪ್ರಗತಿ ಭವನದಲ್ಲಿ ಮತ್ತೊಮ್ಮೆ ಭೇಟಿಯಾಗಿ ಮಾತನಾಡಿದರು. ದಲಿತ ಪರ ಯೋಜನೆಗಳನ್ನು ದೇಶಾದ್ಯಂತ ಜಾರಿಗೆ ತರುವುದಾಗಿ ಕೆಸಿಆರ್‌ ಹೇಳುತ್ತಿರುವ ಮಾತುಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತೆಲಂಗಾಣ ಸರ್ಕಾರ ದಲಿತರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಪರಿಚಯಿಸುತ್ತಿದೆ ಎಂದು ಸಂಸದರು ಶ್ಲಾಘಿಸಿದರು. ದೇಶದಲ್ಲಿ ಯಾವುದೇ ರಾಜ್ಯವು ಇಷ್ಟು ದೊಡ್ಡ ಸಂಖ್ಯೆಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ತಿಳಿಸಿದರು.

ಬುಧವಾರದ ಭಾಷಣದಲ್ಲಿ ಕೆಸಿಆರ್‌, “ಪಕ್ಷದ ಹೆಸರನ್ನು ಬದಲಾಯಿಸಲು ಇದು ಕೇವಲ ಆಂತರಿಕ ಸಭೆ” ಎಂದಿದ್ದರು.

“ಪಕ್ಷದ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು (ಅಖಿಲೇಶ್ ಮತ್ತು ತೇಜಸ್ವಿ) ಆಹ್ವಾನಿಸಲಾಗುವುದು. ದೇಶಾದ್ಯಂತ ಹಲವು ಪಕ್ಷಗಳ ನಾಯಕರು ನಮ್ಮೊಂದಿಗೆ ಸಾಗಲು ಮುಂದೆ ಬರುತ್ತಿದ್ದಾರೆ. ವಿವಿಧ ಕ್ಷೇತ್ರಗಳ ಅರ್ಥಶಾಸ್ತ್ರಜ್ಞರು ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದ್ದು, ಬಿಆರ್‌ಎಸ್ ಪಕ್ಷ ರಚಿಸುವಾಗ ಅವರ ಸಲಹೆಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ತೆಲಂಗಾಣ ಸಿಎಂ ಆಗಿ ದೇಶಾದ್ಯಂತ ಪ್ರವಾಸ ಮಾಡುತ್ತೇನೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ. ಉಜ್ವಲ ಭಾರತ ನಿರ್ಮಾಣವಾಗಬೇಕಿದೆ. ದೇಶದಲ್ಲಿರುವ ಸಂಪನ್ಮೂಲಗಳನ್ನು ಗರಿಷ್ಠ ಮಟ್ಟದಲ್ಲಿ ಬಳಸಿದರೆ ಭಾರತವು ಅಮೆರಿಕಕ್ಕಿಂತ ಉತ್ತಮವಾಗಿ ಬೆಳೆಯುತ್ತದೆ. ನಮಗೆ ಇನ್ನೂ ಒಳ್ಳೆಯ ಸಮಯವಿದೆ. ನಾವು ದೇಶಾದ್ಯಂತ ವಿಸ್ತರಿಸುತ್ತೇವೆ ಎಂದು ತಿಳಿಸಿದ್ದಾರೆ.

ಬಿಆರ್‌ಎಸ್‌ ತನ್ನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲ ರಾಜ್ಯ ಮಹಾರಾಷ್ಟ್ರವಾಗಲಿದೆ. ರಾಷ್ಟ್ರೀಯ ಪಕ್ಷದೊಂದಿಗೆ ಸಂಯೋಜಿಸಲ್ಪಟ್ಟ ರೈತ ಸಂಘವನ್ನು ಮೊದಲು ಮಹಾರಾಷ್ಟ್ರದಿಂದ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

“ನಾವು ದಲಿತ ಚಳವಳಿ, ರೈತ ಚಳವಳಿ ಮತ್ತು ಬುಡಕಟ್ಟು ಚಳವಳಿಯ ಮೂಲಕ ಮುಂದುವರಿಯುತ್ತೇವೆ. ನಾವು ದೇಶದಲ್ಲಿನ ಅನೇಕ ಸಾಮಾಜಿಕ-ರಾಜಕೀಯ ಸಮಸ್ಯೆಗಳತ್ತ ಗಮನ ಹರಿಸಲಿದ್ದೇವೆ” ಎಂದು ತಮ್ಮ ಅಜೆಂಡಾಗಳ ಕುರಿತು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾರ್ದಿಕ ಸ್ವಾಗತ ಗಳು.
    ಈ ತರಹದ ಲೋಕಲ್ ಪಾರ್ಟಿ ಗಳು ರಾಷ್ಟ್ರೀಯವಾಗಲು ತಯಾರಿ ನಡೆಸುವುದು ಬಿಜೆಪಿಗೆ ಲಾಭಕರವಾಗುತ್ತದೆ ಎನ್ನುವುದು ಬೇಸರದ ಸಂಗತಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...