Homeಮುಖಪುಟದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

ದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

- Advertisement -
- Advertisement -

22 ವರ್ಷ ಪೂರೈಸಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ (ಟಿಆರ್‌ಎಸ್) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್‌) ಮರುನಾಮಕರಣ ಮಾಡಲಿದ್ದಾರೆ. ಇದರ ಜೊತೆಗೆ ರಾಜಕಾರಣದ ಮುಂದುವರಿದ ಭಾಗವಾಗಿ ಶೀಘ್ರದಲ್ಲೇ ಹೈದರಾಬಾದ್‌ನಲ್ಲಿ ದಲಿತ ಸಮಾವೇಶವನ್ನು ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ಮೂಲೆಗಳಿಂದ ದಲಿತ ಚಿಂತಕರು ಬರಲಿದ್ದಾರೆ ಎಂದು ಪಕ್ಷವು ತಿಳಿಸಿದೆ.

ಪಕ್ಷದ ಹೆಸರು ಬದಲಾವಣೆಗೆ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿರುವುದಾಗಿ ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್‌ನ 20 ಶಾಸಕರಲ್ಲದೆ, ತಮಿಳುನಾಡು ಸಂಸದ, ವಿಡುದಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮುಖ್ಯಸ್ಥ ತಿರುಮಾವಲವನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬುಧವಾರದ ಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಭಾಗವಹಿಸಲಿಲ್ಲ ಎಂದು ಕೆಸಿಆರ್‌ ತಿಳಿಸಿದ್ದಾರೆ.

ಕೆಸಿಆರ್ ಅವರ ಭಾಷಣದಲ್ಲಿ ‘ದಲಿತ ಬಂಧು’ ಯೋಜನೆ ಗಮನ ಸೆಳೆಯಿತು. ದಲಿತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ.

ವಿಸಿಕೆ ಮುಖ್ಯಸ್ಥರಾದ ತಿರುಮಾವಲವನ್ ಅವರು ಗುರುವಾರ ಮತ್ತೊಮ್ಮೆ ಕೆಸಿಆರ್ ಅವರನ್ನು ಭೇಟಿಯಾದರು. ಕೆಸಿಆರ್‌‌ ಅವರ ಅಧಿಕೃತ ನಿವಾಸವಾದ ಪ್ರಗತಿ ಭವನದಲ್ಲಿ ಮತ್ತೊಮ್ಮೆ ಭೇಟಿಯಾಗಿ ಮಾತನಾಡಿದರು. ದಲಿತ ಪರ ಯೋಜನೆಗಳನ್ನು ದೇಶಾದ್ಯಂತ ಜಾರಿಗೆ ತರುವುದಾಗಿ ಕೆಸಿಆರ್‌ ಹೇಳುತ್ತಿರುವ ಮಾತುಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತೆಲಂಗಾಣ ಸರ್ಕಾರ ದಲಿತರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಪರಿಚಯಿಸುತ್ತಿದೆ ಎಂದು ಸಂಸದರು ಶ್ಲಾಘಿಸಿದರು. ದೇಶದಲ್ಲಿ ಯಾವುದೇ ರಾಜ್ಯವು ಇಷ್ಟು ದೊಡ್ಡ ಸಂಖ್ಯೆಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ತಿಳಿಸಿದರು.

ಬುಧವಾರದ ಭಾಷಣದಲ್ಲಿ ಕೆಸಿಆರ್‌, “ಪಕ್ಷದ ಹೆಸರನ್ನು ಬದಲಾಯಿಸಲು ಇದು ಕೇವಲ ಆಂತರಿಕ ಸಭೆ” ಎಂದಿದ್ದರು.

“ಪಕ್ಷದ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು (ಅಖಿಲೇಶ್ ಮತ್ತು ತೇಜಸ್ವಿ) ಆಹ್ವಾನಿಸಲಾಗುವುದು. ದೇಶಾದ್ಯಂತ ಹಲವು ಪಕ್ಷಗಳ ನಾಯಕರು ನಮ್ಮೊಂದಿಗೆ ಸಾಗಲು ಮುಂದೆ ಬರುತ್ತಿದ್ದಾರೆ. ವಿವಿಧ ಕ್ಷೇತ್ರಗಳ ಅರ್ಥಶಾಸ್ತ್ರಜ್ಞರು ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದ್ದು, ಬಿಆರ್‌ಎಸ್ ಪಕ್ಷ ರಚಿಸುವಾಗ ಅವರ ಸಲಹೆಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ತೆಲಂಗಾಣ ಸಿಎಂ ಆಗಿ ದೇಶಾದ್ಯಂತ ಪ್ರವಾಸ ಮಾಡುತ್ತೇನೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ. ಉಜ್ವಲ ಭಾರತ ನಿರ್ಮಾಣವಾಗಬೇಕಿದೆ. ದೇಶದಲ್ಲಿರುವ ಸಂಪನ್ಮೂಲಗಳನ್ನು ಗರಿಷ್ಠ ಮಟ್ಟದಲ್ಲಿ ಬಳಸಿದರೆ ಭಾರತವು ಅಮೆರಿಕಕ್ಕಿಂತ ಉತ್ತಮವಾಗಿ ಬೆಳೆಯುತ್ತದೆ. ನಮಗೆ ಇನ್ನೂ ಒಳ್ಳೆಯ ಸಮಯವಿದೆ. ನಾವು ದೇಶಾದ್ಯಂತ ವಿಸ್ತರಿಸುತ್ತೇವೆ ಎಂದು ತಿಳಿಸಿದ್ದಾರೆ.

ಬಿಆರ್‌ಎಸ್‌ ತನ್ನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲ ರಾಜ್ಯ ಮಹಾರಾಷ್ಟ್ರವಾಗಲಿದೆ. ರಾಷ್ಟ್ರೀಯ ಪಕ್ಷದೊಂದಿಗೆ ಸಂಯೋಜಿಸಲ್ಪಟ್ಟ ರೈತ ಸಂಘವನ್ನು ಮೊದಲು ಮಹಾರಾಷ್ಟ್ರದಿಂದ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

“ನಾವು ದಲಿತ ಚಳವಳಿ, ರೈತ ಚಳವಳಿ ಮತ್ತು ಬುಡಕಟ್ಟು ಚಳವಳಿಯ ಮೂಲಕ ಮುಂದುವರಿಯುತ್ತೇವೆ. ನಾವು ದೇಶದಲ್ಲಿನ ಅನೇಕ ಸಾಮಾಜಿಕ-ರಾಜಕೀಯ ಸಮಸ್ಯೆಗಳತ್ತ ಗಮನ ಹರಿಸಲಿದ್ದೇವೆ” ಎಂದು ತಮ್ಮ ಅಜೆಂಡಾಗಳ ಕುರಿತು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾರ್ದಿಕ ಸ್ವಾಗತ ಗಳು.
    ಈ ತರಹದ ಲೋಕಲ್ ಪಾರ್ಟಿ ಗಳು ರಾಷ್ಟ್ರೀಯವಾಗಲು ತಯಾರಿ ನಡೆಸುವುದು ಬಿಜೆಪಿಗೆ ಲಾಭಕರವಾಗುತ್ತದೆ ಎನ್ನುವುದು ಬೇಸರದ ಸಂಗತಿ.

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....