Homeಮುಖಪುಟದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

ದಲಿತ ಸಮಾವೇಶಕ್ಕೆ ಕೆಸಿಆರ್‌ ಚಿಂತನೆ; ಪಕ್ಷದ ಹೆಸರು ಬದಲಾವಣೆ ಸಹಿತ ಹಲವು ತಂತ್ರಗಾರಿಕೆ

- Advertisement -
- Advertisement -

22 ವರ್ಷ ಪೂರೈಸಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ (ಟಿಆರ್‌ಎಸ್) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್‌) ಮರುನಾಮಕರಣ ಮಾಡಲಿದ್ದಾರೆ. ಇದರ ಜೊತೆಗೆ ರಾಜಕಾರಣದ ಮುಂದುವರಿದ ಭಾಗವಾಗಿ ಶೀಘ್ರದಲ್ಲೇ ಹೈದರಾಬಾದ್‌ನಲ್ಲಿ ದಲಿತ ಸಮಾವೇಶವನ್ನು ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ಮೂಲೆಗಳಿಂದ ದಲಿತ ಚಿಂತಕರು ಬರಲಿದ್ದಾರೆ ಎಂದು ಪಕ್ಷವು ತಿಳಿಸಿದೆ.

ಪಕ್ಷದ ಹೆಸರು ಬದಲಾವಣೆಗೆ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿರುವುದಾಗಿ ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್‌ನ 20 ಶಾಸಕರಲ್ಲದೆ, ತಮಿಳುನಾಡು ಸಂಸದ, ವಿಡುದಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮುಖ್ಯಸ್ಥ ತಿರುಮಾವಲವನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬುಧವಾರದ ಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಭಾಗವಹಿಸಲಿಲ್ಲ ಎಂದು ಕೆಸಿಆರ್‌ ತಿಳಿಸಿದ್ದಾರೆ.

ಕೆಸಿಆರ್ ಅವರ ಭಾಷಣದಲ್ಲಿ ‘ದಲಿತ ಬಂಧು’ ಯೋಜನೆ ಗಮನ ಸೆಳೆಯಿತು. ದಲಿತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ.

ವಿಸಿಕೆ ಮುಖ್ಯಸ್ಥರಾದ ತಿರುಮಾವಲವನ್ ಅವರು ಗುರುವಾರ ಮತ್ತೊಮ್ಮೆ ಕೆಸಿಆರ್ ಅವರನ್ನು ಭೇಟಿಯಾದರು. ಕೆಸಿಆರ್‌‌ ಅವರ ಅಧಿಕೃತ ನಿವಾಸವಾದ ಪ್ರಗತಿ ಭವನದಲ್ಲಿ ಮತ್ತೊಮ್ಮೆ ಭೇಟಿಯಾಗಿ ಮಾತನಾಡಿದರು. ದಲಿತ ಪರ ಯೋಜನೆಗಳನ್ನು ದೇಶಾದ್ಯಂತ ಜಾರಿಗೆ ತರುವುದಾಗಿ ಕೆಸಿಆರ್‌ ಹೇಳುತ್ತಿರುವ ಮಾತುಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತೆಲಂಗಾಣ ಸರ್ಕಾರ ದಲಿತರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಪರಿಚಯಿಸುತ್ತಿದೆ ಎಂದು ಸಂಸದರು ಶ್ಲಾಘಿಸಿದರು. ದೇಶದಲ್ಲಿ ಯಾವುದೇ ರಾಜ್ಯವು ಇಷ್ಟು ದೊಡ್ಡ ಸಂಖ್ಯೆಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ತಿಳಿಸಿದರು.

ಬುಧವಾರದ ಭಾಷಣದಲ್ಲಿ ಕೆಸಿಆರ್‌, “ಪಕ್ಷದ ಹೆಸರನ್ನು ಬದಲಾಯಿಸಲು ಇದು ಕೇವಲ ಆಂತರಿಕ ಸಭೆ” ಎಂದಿದ್ದರು.

“ಪಕ್ಷದ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು (ಅಖಿಲೇಶ್ ಮತ್ತು ತೇಜಸ್ವಿ) ಆಹ್ವಾನಿಸಲಾಗುವುದು. ದೇಶಾದ್ಯಂತ ಹಲವು ಪಕ್ಷಗಳ ನಾಯಕರು ನಮ್ಮೊಂದಿಗೆ ಸಾಗಲು ಮುಂದೆ ಬರುತ್ತಿದ್ದಾರೆ. ವಿವಿಧ ಕ್ಷೇತ್ರಗಳ ಅರ್ಥಶಾಸ್ತ್ರಜ್ಞರು ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದ್ದು, ಬಿಆರ್‌ಎಸ್ ಪಕ್ಷ ರಚಿಸುವಾಗ ಅವರ ಸಲಹೆಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

ತೆಲಂಗಾಣ ಸಿಎಂ ಆಗಿ ದೇಶಾದ್ಯಂತ ಪ್ರವಾಸ ಮಾಡುತ್ತೇನೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ. ಉಜ್ವಲ ಭಾರತ ನಿರ್ಮಾಣವಾಗಬೇಕಿದೆ. ದೇಶದಲ್ಲಿರುವ ಸಂಪನ್ಮೂಲಗಳನ್ನು ಗರಿಷ್ಠ ಮಟ್ಟದಲ್ಲಿ ಬಳಸಿದರೆ ಭಾರತವು ಅಮೆರಿಕಕ್ಕಿಂತ ಉತ್ತಮವಾಗಿ ಬೆಳೆಯುತ್ತದೆ. ನಮಗೆ ಇನ್ನೂ ಒಳ್ಳೆಯ ಸಮಯವಿದೆ. ನಾವು ದೇಶಾದ್ಯಂತ ವಿಸ್ತರಿಸುತ್ತೇವೆ ಎಂದು ತಿಳಿಸಿದ್ದಾರೆ.

ಬಿಆರ್‌ಎಸ್‌ ತನ್ನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲ ರಾಜ್ಯ ಮಹಾರಾಷ್ಟ್ರವಾಗಲಿದೆ. ರಾಷ್ಟ್ರೀಯ ಪಕ್ಷದೊಂದಿಗೆ ಸಂಯೋಜಿಸಲ್ಪಟ್ಟ ರೈತ ಸಂಘವನ್ನು ಮೊದಲು ಮಹಾರಾಷ್ಟ್ರದಿಂದ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

“ನಾವು ದಲಿತ ಚಳವಳಿ, ರೈತ ಚಳವಳಿ ಮತ್ತು ಬುಡಕಟ್ಟು ಚಳವಳಿಯ ಮೂಲಕ ಮುಂದುವರಿಯುತ್ತೇವೆ. ನಾವು ದೇಶದಲ್ಲಿನ ಅನೇಕ ಸಾಮಾಜಿಕ-ರಾಜಕೀಯ ಸಮಸ್ಯೆಗಳತ್ತ ಗಮನ ಹರಿಸಲಿದ್ದೇವೆ” ಎಂದು ತಮ್ಮ ಅಜೆಂಡಾಗಳ ಕುರಿತು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಾರ್ದಿಕ ಸ್ವಾಗತ ಗಳು.
    ಈ ತರಹದ ಲೋಕಲ್ ಪಾರ್ಟಿ ಗಳು ರಾಷ್ಟ್ರೀಯವಾಗಲು ತಯಾರಿ ನಡೆಸುವುದು ಬಿಜೆಪಿಗೆ ಲಾಭಕರವಾಗುತ್ತದೆ ಎನ್ನುವುದು ಬೇಸರದ ಸಂಗತಿ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...