Homeಮುಖಪುಟರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

ರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

- Advertisement -
- Advertisement -

ಕೊರೊನಾ ಸೋಂಕಿನಿಂದ ಆಗುತ್ತಿರುವ ಅನಾಹುತಗಳಿಂತ ಹೆಚ್ಚಾಗಿ ಕೊರೊನಾತಂಕ ಮತ್ತು ಉಲ್ಬಣವನ್ನು ತಡೆಯುವುದು ಮುಖ್ಯ. ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದನ್ನು ಗುರಿಯಾಗಿಸಿಕೊಂಡು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ಟೀಮ್‌) ರಚನೆಯಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಲೆಂಟಿಯರ್ಸ್ ಜೊತೆಗೆ ಕಾರ್ಯನಿರತವಾಗಿರುವ ಈ ತಂಡ ಮತ್ತೊಂದು ಹೆಜ್ಜೆ ಮುಂದಿಡುತ್ತಿದೆ. ಹಳ್ಳಿಗಳಲ್ಲಿ ಕೊರೊನಾ ಹಬ್ಬುತ್ತಿರುವುದು ಮತ್ತು ಜನರು ಟೆಸ್ಟ್‌ ಮಾಡಿಸಿಕೊಳ್ಳದೇ ಇರುವುದು, ಮಾಡಿಸಿಕೊಳ್ಳಲು ಬಯಸಿದರೂ ಟೆಸ್ಟ್‌ ಕಿಟ್‌ ಇಲ್ಲದಿರುವುದು ಇಂತಹ ತೊಂದರೆಯಿರುವ ಜನರ ಬಳಿಗೆ ಹೋಗುತ್ತಿದೆ.

ಪ್ರತಿ ಹಳ್ಳಿ, ಪಟ್ಟಣಗಳ ವಾರ್ಡ್‌‌ಗಳಲ್ಲಿಯೂ ಒಂದೊಂದು ಕೊರೊನಾ ವಾಲೆಂಟಿಯರ್‌ ಟೀಮ್ ತಯಾರಾಗುತ್ತಿದೆ. ರಾಜ್ಯದಲ್ಲಿ ಸಾವುಗಳ ಸಂಖ್ಯೆ ಹೆಚ್ಚಾಗಿರುವುದು ಇರುವುದರಿಂದ ಇದರ ಅಗತ್ಯತೆ ಹೆಚ್ಚಾಗಿದೆ ಎಂದು ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ ಹೇಳಿದೆ.

ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಈಗಾಗಲೇ ಈ ತಂಡ ರಾಜ್ಯದ 250ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕೋವಿಡ್‌ ವಾಲಂಟಿಯರ್‌ಗಳು ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಆದಷ್ಟು ಬೇಗ 5,000 ಹಳ್ಳಿಗಳಿಗೆ ವಿಸ್ತರಿಸುವ ಆಲೋಚನೆ ಹೊಂದಿದೆ. ತಮ್ಮ ಊರುಗಳಲ್ಲಿ ಕೊರೊನಾ ಬರದಂತೆ, ಕೊರೊನಾ ಬಂದ ನಂತರದ ಪರಿಸ್ಥಿತಿಯಿಂದ ರಕ್ಷಿಸಿಕೊಳ್ಳಲು ಸಮಯ ನೀಡುವ ವಾಲಂಟಿಯರ್‌ಗಳನ್ನು ಆಹ್ವಾನಿಸುತ್ತಿದೆ.

ವಾಲಂಟಿಯರ್‌ಗಳು ನೋಂದಣಿ ಆದ ನಂತರ, ಅವರಿಗೆ ಆನ್‌ಲೈನ್‌ ತರಬೇತಿ ನೀಡಲಾಗುತ್ತದೆ. ಈ ವಾಲಂಟಿಯರ್‌ಗಳು ಮನೆ ಮನೆಗೆ ಹೋಗಿ ಕೊರೊನಾ ರೋಗ ಲಕ್ಷಣಗಳನ್ನು ಗುರುತಿಸುತ್ತಾರೆ. ಸೋಂಕಿತರಿಗೆ ನೇರವಾಗಿ ವೈದ್ಯರ ಜೊತೆ ಫೋನಿನಲ್ಲಿ ಕನ್ಸಲ್ಟೇಷನ್‌ ಏರ್ಪಡಿಸುತ್ತಾರೆ. ಜೊತೆಗೆ ತಮ್ಮಲ್ಲಿ ಲಭ್ಯವಿರುವ ಮಾತ್ರೆಗಳನ್ನೂ ಕೊಡುತ್ತಾರೆ. ಈ ತಂಡದಲ್ಲಿ 105ಕ್ಕೂ ಹೆಚ್ಚು ವೈದ್ಯರಿದ್ದಾರೆ.

ಇನ್ನು ಸೋಂಕಿತರಿಗೆ ಅಗತ್ಯವಿದ್ದರೆ ಸ್ಥಳೀಯ ಕೋವಿಡ್‌ ಕೇರ್‌ ಸೆಂಟರ್‌ಗಳು ಅಥವಾ ಆಕ್ಸಿಜನ್‌ ಇರುವ ಆಸ್ಪತ್ರೆಗೆ ರವಾನಿಸುತ್ತಾರೆ. ಈ ರೀತಿ ಹೋದಾಗ, ಕೆಲವು ಕಡು ಬಡತನದಲ್ಲಿರುವ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ತಲುಪಿಸಲೇಬೇಕಾದ ಪರಿಸ್ಥಿತಿಯೂ ಎದುರಾಗುತ್ತದೆ ಎಂದು ಹೇಳಿರುವ ತಂಡ ಅದಕ್ಕೆ ಬೇಕಾದ ಸಂಪನ್ಮೂಲವನ್ನು ಸಂಗ್ರಹಿಸುತ್ತಿದೆ.

ಬೆಂಗಳೂರು ವೈದ್ಯಕೀಯ ಕಾಲೇಜಿನ 1992 ಬ್ಯಾಚ್‌ನ (ಬಿಎಂಸಿ- 92)ನ ಹಲವಾರು ವೈದ್ಯರು ಈಗ ಪ್ರಪಂಚದ ವಿವಿದೆಡೆ ಕೆಲಸ ಮಾಡುತ್ತಿದ್ದಾರೆ. ಆದರೆ ಕೋವಿಡ್‌ ಎರಡನೇ ಅಲೆ ಅವರನ್ನು ಮತ್ತೆ ಒಗ್ಗೂಡುವಂತೆ ಮಾಡಿದೆ. ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ “ವಿಜ್ಞಾನ ಮೊದಲು” ಎಂಬ ಘೋಷವಾಕ್ಯದೊಂದಿಗೆ ಈ ತಂಡದೊಂದಿಗೆ ಕೈ ಜೋಡಿಸಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸಾಥ್ ನೀಡಿದೆ.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...