Homeಮುಖಪುಟರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

ರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

- Advertisement -
- Advertisement -

ಕೊರೊನಾ ಸೋಂಕಿನಿಂದ ಆಗುತ್ತಿರುವ ಅನಾಹುತಗಳಿಂತ ಹೆಚ್ಚಾಗಿ ಕೊರೊನಾತಂಕ ಮತ್ತು ಉಲ್ಬಣವನ್ನು ತಡೆಯುವುದು ಮುಖ್ಯ. ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದನ್ನು ಗುರಿಯಾಗಿಸಿಕೊಂಡು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ಟೀಮ್‌) ರಚನೆಯಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಲೆಂಟಿಯರ್ಸ್ ಜೊತೆಗೆ ಕಾರ್ಯನಿರತವಾಗಿರುವ ಈ ತಂಡ ಮತ್ತೊಂದು ಹೆಜ್ಜೆ ಮುಂದಿಡುತ್ತಿದೆ. ಹಳ್ಳಿಗಳಲ್ಲಿ ಕೊರೊನಾ ಹಬ್ಬುತ್ತಿರುವುದು ಮತ್ತು ಜನರು ಟೆಸ್ಟ್‌ ಮಾಡಿಸಿಕೊಳ್ಳದೇ ಇರುವುದು, ಮಾಡಿಸಿಕೊಳ್ಳಲು ಬಯಸಿದರೂ ಟೆಸ್ಟ್‌ ಕಿಟ್‌ ಇಲ್ಲದಿರುವುದು ಇಂತಹ ತೊಂದರೆಯಿರುವ ಜನರ ಬಳಿಗೆ ಹೋಗುತ್ತಿದೆ.

ಪ್ರತಿ ಹಳ್ಳಿ, ಪಟ್ಟಣಗಳ ವಾರ್ಡ್‌‌ಗಳಲ್ಲಿಯೂ ಒಂದೊಂದು ಕೊರೊನಾ ವಾಲೆಂಟಿಯರ್‌ ಟೀಮ್ ತಯಾರಾಗುತ್ತಿದೆ. ರಾಜ್ಯದಲ್ಲಿ ಸಾವುಗಳ ಸಂಖ್ಯೆ ಹೆಚ್ಚಾಗಿರುವುದು ಇರುವುದರಿಂದ ಇದರ ಅಗತ್ಯತೆ ಹೆಚ್ಚಾಗಿದೆ ಎಂದು ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ ಹೇಳಿದೆ.

ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಈಗಾಗಲೇ ಈ ತಂಡ ರಾಜ್ಯದ 250ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕೋವಿಡ್‌ ವಾಲಂಟಿಯರ್‌ಗಳು ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಆದಷ್ಟು ಬೇಗ 5,000 ಹಳ್ಳಿಗಳಿಗೆ ವಿಸ್ತರಿಸುವ ಆಲೋಚನೆ ಹೊಂದಿದೆ. ತಮ್ಮ ಊರುಗಳಲ್ಲಿ ಕೊರೊನಾ ಬರದಂತೆ, ಕೊರೊನಾ ಬಂದ ನಂತರದ ಪರಿಸ್ಥಿತಿಯಿಂದ ರಕ್ಷಿಸಿಕೊಳ್ಳಲು ಸಮಯ ನೀಡುವ ವಾಲಂಟಿಯರ್‌ಗಳನ್ನು ಆಹ್ವಾನಿಸುತ್ತಿದೆ.

ವಾಲಂಟಿಯರ್‌ಗಳು ನೋಂದಣಿ ಆದ ನಂತರ, ಅವರಿಗೆ ಆನ್‌ಲೈನ್‌ ತರಬೇತಿ ನೀಡಲಾಗುತ್ತದೆ. ಈ ವಾಲಂಟಿಯರ್‌ಗಳು ಮನೆ ಮನೆಗೆ ಹೋಗಿ ಕೊರೊನಾ ರೋಗ ಲಕ್ಷಣಗಳನ್ನು ಗುರುತಿಸುತ್ತಾರೆ. ಸೋಂಕಿತರಿಗೆ ನೇರವಾಗಿ ವೈದ್ಯರ ಜೊತೆ ಫೋನಿನಲ್ಲಿ ಕನ್ಸಲ್ಟೇಷನ್‌ ಏರ್ಪಡಿಸುತ್ತಾರೆ. ಜೊತೆಗೆ ತಮ್ಮಲ್ಲಿ ಲಭ್ಯವಿರುವ ಮಾತ್ರೆಗಳನ್ನೂ ಕೊಡುತ್ತಾರೆ. ಈ ತಂಡದಲ್ಲಿ 105ಕ್ಕೂ ಹೆಚ್ಚು ವೈದ್ಯರಿದ್ದಾರೆ.

ಇನ್ನು ಸೋಂಕಿತರಿಗೆ ಅಗತ್ಯವಿದ್ದರೆ ಸ್ಥಳೀಯ ಕೋವಿಡ್‌ ಕೇರ್‌ ಸೆಂಟರ್‌ಗಳು ಅಥವಾ ಆಕ್ಸಿಜನ್‌ ಇರುವ ಆಸ್ಪತ್ರೆಗೆ ರವಾನಿಸುತ್ತಾರೆ. ಈ ರೀತಿ ಹೋದಾಗ, ಕೆಲವು ಕಡು ಬಡತನದಲ್ಲಿರುವ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ತಲುಪಿಸಲೇಬೇಕಾದ ಪರಿಸ್ಥಿತಿಯೂ ಎದುರಾಗುತ್ತದೆ ಎಂದು ಹೇಳಿರುವ ತಂಡ ಅದಕ್ಕೆ ಬೇಕಾದ ಸಂಪನ್ಮೂಲವನ್ನು ಸಂಗ್ರಹಿಸುತ್ತಿದೆ.

ಬೆಂಗಳೂರು ವೈದ್ಯಕೀಯ ಕಾಲೇಜಿನ 1992 ಬ್ಯಾಚ್‌ನ (ಬಿಎಂಸಿ- 92)ನ ಹಲವಾರು ವೈದ್ಯರು ಈಗ ಪ್ರಪಂಚದ ವಿವಿದೆಡೆ ಕೆಲಸ ಮಾಡುತ್ತಿದ್ದಾರೆ. ಆದರೆ ಕೋವಿಡ್‌ ಎರಡನೇ ಅಲೆ ಅವರನ್ನು ಮತ್ತೆ ಒಗ್ಗೂಡುವಂತೆ ಮಾಡಿದೆ. ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ “ವಿಜ್ಞಾನ ಮೊದಲು” ಎಂಬ ಘೋಷವಾಕ್ಯದೊಂದಿಗೆ ಈ ತಂಡದೊಂದಿಗೆ ಕೈ ಜೋಡಿಸಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸಾಥ್ ನೀಡಿದೆ.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...