Homeಮುಖಪುಟರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

ರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

- Advertisement -
- Advertisement -

ಕೊರೊನಾ ಸೋಂಕಿನಿಂದ ಆಗುತ್ತಿರುವ ಅನಾಹುತಗಳಿಂತ ಹೆಚ್ಚಾಗಿ ಕೊರೊನಾತಂಕ ಮತ್ತು ಉಲ್ಬಣವನ್ನು ತಡೆಯುವುದು ಮುಖ್ಯ. ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದನ್ನು ಗುರಿಯಾಗಿಸಿಕೊಂಡು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ಟೀಮ್‌) ರಚನೆಯಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಲೆಂಟಿಯರ್ಸ್ ಜೊತೆಗೆ ಕಾರ್ಯನಿರತವಾಗಿರುವ ಈ ತಂಡ ಮತ್ತೊಂದು ಹೆಜ್ಜೆ ಮುಂದಿಡುತ್ತಿದೆ. ಹಳ್ಳಿಗಳಲ್ಲಿ ಕೊರೊನಾ ಹಬ್ಬುತ್ತಿರುವುದು ಮತ್ತು ಜನರು ಟೆಸ್ಟ್‌ ಮಾಡಿಸಿಕೊಳ್ಳದೇ ಇರುವುದು, ಮಾಡಿಸಿಕೊಳ್ಳಲು ಬಯಸಿದರೂ ಟೆಸ್ಟ್‌ ಕಿಟ್‌ ಇಲ್ಲದಿರುವುದು ಇಂತಹ ತೊಂದರೆಯಿರುವ ಜನರ ಬಳಿಗೆ ಹೋಗುತ್ತಿದೆ.

ಪ್ರತಿ ಹಳ್ಳಿ, ಪಟ್ಟಣಗಳ ವಾರ್ಡ್‌‌ಗಳಲ್ಲಿಯೂ ಒಂದೊಂದು ಕೊರೊನಾ ವಾಲೆಂಟಿಯರ್‌ ಟೀಮ್ ತಯಾರಾಗುತ್ತಿದೆ. ರಾಜ್ಯದಲ್ಲಿ ಸಾವುಗಳ ಸಂಖ್ಯೆ ಹೆಚ್ಚಾಗಿರುವುದು ಇರುವುದರಿಂದ ಇದರ ಅಗತ್ಯತೆ ಹೆಚ್ಚಾಗಿದೆ ಎಂದು ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ ಹೇಳಿದೆ.

ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಈಗಾಗಲೇ ಈ ತಂಡ ರಾಜ್ಯದ 250ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕೋವಿಡ್‌ ವಾಲಂಟಿಯರ್‌ಗಳು ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಆದಷ್ಟು ಬೇಗ 5,000 ಹಳ್ಳಿಗಳಿಗೆ ವಿಸ್ತರಿಸುವ ಆಲೋಚನೆ ಹೊಂದಿದೆ. ತಮ್ಮ ಊರುಗಳಲ್ಲಿ ಕೊರೊನಾ ಬರದಂತೆ, ಕೊರೊನಾ ಬಂದ ನಂತರದ ಪರಿಸ್ಥಿತಿಯಿಂದ ರಕ್ಷಿಸಿಕೊಳ್ಳಲು ಸಮಯ ನೀಡುವ ವಾಲಂಟಿಯರ್‌ಗಳನ್ನು ಆಹ್ವಾನಿಸುತ್ತಿದೆ.

ವಾಲಂಟಿಯರ್‌ಗಳು ನೋಂದಣಿ ಆದ ನಂತರ, ಅವರಿಗೆ ಆನ್‌ಲೈನ್‌ ತರಬೇತಿ ನೀಡಲಾಗುತ್ತದೆ. ಈ ವಾಲಂಟಿಯರ್‌ಗಳು ಮನೆ ಮನೆಗೆ ಹೋಗಿ ಕೊರೊನಾ ರೋಗ ಲಕ್ಷಣಗಳನ್ನು ಗುರುತಿಸುತ್ತಾರೆ. ಸೋಂಕಿತರಿಗೆ ನೇರವಾಗಿ ವೈದ್ಯರ ಜೊತೆ ಫೋನಿನಲ್ಲಿ ಕನ್ಸಲ್ಟೇಷನ್‌ ಏರ್ಪಡಿಸುತ್ತಾರೆ. ಜೊತೆಗೆ ತಮ್ಮಲ್ಲಿ ಲಭ್ಯವಿರುವ ಮಾತ್ರೆಗಳನ್ನೂ ಕೊಡುತ್ತಾರೆ. ಈ ತಂಡದಲ್ಲಿ 105ಕ್ಕೂ ಹೆಚ್ಚು ವೈದ್ಯರಿದ್ದಾರೆ.

ಇನ್ನು ಸೋಂಕಿತರಿಗೆ ಅಗತ್ಯವಿದ್ದರೆ ಸ್ಥಳೀಯ ಕೋವಿಡ್‌ ಕೇರ್‌ ಸೆಂಟರ್‌ಗಳು ಅಥವಾ ಆಕ್ಸಿಜನ್‌ ಇರುವ ಆಸ್ಪತ್ರೆಗೆ ರವಾನಿಸುತ್ತಾರೆ. ಈ ರೀತಿ ಹೋದಾಗ, ಕೆಲವು ಕಡು ಬಡತನದಲ್ಲಿರುವ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ತಲುಪಿಸಲೇಬೇಕಾದ ಪರಿಸ್ಥಿತಿಯೂ ಎದುರಾಗುತ್ತದೆ ಎಂದು ಹೇಳಿರುವ ತಂಡ ಅದಕ್ಕೆ ಬೇಕಾದ ಸಂಪನ್ಮೂಲವನ್ನು ಸಂಗ್ರಹಿಸುತ್ತಿದೆ.

ಬೆಂಗಳೂರು ವೈದ್ಯಕೀಯ ಕಾಲೇಜಿನ 1992 ಬ್ಯಾಚ್‌ನ (ಬಿಎಂಸಿ- 92)ನ ಹಲವಾರು ವೈದ್ಯರು ಈಗ ಪ್ರಪಂಚದ ವಿವಿದೆಡೆ ಕೆಲಸ ಮಾಡುತ್ತಿದ್ದಾರೆ. ಆದರೆ ಕೋವಿಡ್‌ ಎರಡನೇ ಅಲೆ ಅವರನ್ನು ಮತ್ತೆ ಒಗ್ಗೂಡುವಂತೆ ಮಾಡಿದೆ. ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ “ವಿಜ್ಞಾನ ಮೊದಲು” ಎಂಬ ಘೋಷವಾಕ್ಯದೊಂದಿಗೆ ಈ ತಂಡದೊಂದಿಗೆ ಕೈ ಜೋಡಿಸಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸಾಥ್ ನೀಡಿದೆ.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...